Homeಕರ್ನಾಟಕಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

ಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

- Advertisement -
- Advertisement -

ಮಸ್ಕಿ ತಾಲ್ಲೂಕಿನ 58 ಬರಪೀಡಿತ ಹಳ್ಳಿಗಳಿಗೆ NRBC_5A ಕಾಲುವೆ ಮೂಲಕ ನೀರಾವರಿ ಯೋಜನೆ ಬೇಕೆಂದು ಹೋರಾಡುವವರಿಗೆ ನೀವೇನು ವಿಶ್ವೇಶ್ವರಯ್ಯನವರ ಥರ ವಿಜ್ಞಾನಿಗಳ ಎಂದು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಕೇಳಿದ್ದಾರೆ. ಇಲ್ಲಿಗೆ ನೀರು ಬರುವುದಿಲ್ಲ ಎಂದು ಹೇಳಲು ಅವರೇನು ವಿಶ್ವೇಶ್ವರಯ್ಯನವರೇ ಎಂದು ಹೋರಾಟ ಸಮಿತಿ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ ತರಾಟೆಗೆ ತಗೆದುಕೊಂಡಿದ್ದಾರೆ.

NRBC_5A ನೀರಾವರಿ ಯೋಜನೆಗಾಗಿ ನಡೆಯುತ್ತಿರುವ ಹೋರಾಟ ಇಂದಿಗೆ 136ನೇ ದಿನಕ್ಕೆ ಕಾಲಿಟ್ಟಿದೆ. ಪಾಮನಕಲ್ಲೂರಿನ ರೈತರ ಧರಣಿ ಸ್ಥಳದ ಮುಂದೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ, ಸಚಿವ ಬಿ. ಶ್ರೀರಾಮುಲು, ಸಂಸದ ಸಂಗಣ್ಣ ಕರಡಿ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ, ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಶಿವನಗೌಡ ಗೊರಬಾಳರವರು ಬಿಜೆಪಿ ಪರವಾಗಿ ಮತ ಕೇಳಲು ಆಗಮಿಸಿದಾಗ ಅವರನ್ನು ಹೋರಾಟಗಾರರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಹೋರಾಟ ಸಮಿತಿ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ ಮಾತನಾಡಿ, “ಇಷ್ಟು ದಿನ ನಾವು ಹೋರಾಟ ಮಾಡುತ್ತಿದ್ದೇವೆ, ನೀವೇಕೆ ತಿರುಗಿ ನೋಡಲಿಲ್ಲ? ಇಲ್ಲಿ ವಾಲ್ಮೀಕಿ ಭವನದ ಉದ್ಘಾಟನೆಗೆ ಶ್ರೀರಾಮುಲುರವರು ಬರಬೇಕಿತ್ತು, ಏಕೆ ಬರಲಿಲ್ಲ? ನಾವು ನೀರು ಬೇಕು ಎಂದು ಎಷ್ಟು ಸಲ ಕೇಳಿದ್ದೇವೆ ಗೊತ್ತೆ? ಸಂಗಣ್ಣ ಕರಡಿಯವರಿಗೆ ಗೊತ್ತಿದೆ, ಅವರು ಹೇಳಬೇಕು” ಎಂದು ಒತ್ತಾಯಿಸಿದರು.

ಮಸ್ಕಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ನೀರಾವರಿ ಹೋರಾಟಗಾರರು ತರಾಟೆಗೆ ತೆಗೆದುಕೊಂಡ ವಿಡಿಯೋ ನೋಡಿ..

ನೀವು ನೀರು ಕೊಡಲು ಆಗುವುದಿಲ್ಲ ಎನ್ನಲು ಕಾರಣವೇನು? ಇಂಜಿನಿಯರ್‌ಗಳು ನೀರು ಕೊಡಲು ಸಾಧ್ಯ ಎಂದು ವರದಿ ಕೊಟ್ಟಿದ್ದಾರೆ. ಎಂಡಿಆರ್‌ಎಫ್‌ ನವರನ್ನು ಕೇಳಿದರೆ ಸರ್ಕಾರ ಆದೇಶ ಮಾಡಿದರೆ ನಾವು ನೀರಾವರಿ ಮಾಡುತ್ತೇವೆ ಎನ್ನುತ್ತಾರೆ. ಸರ್ಕಾರ ಎಂದರೆ ನೀವೇ ತಾನೇ? ಏಕೆ ನೀವು ಮಾಡುತ್ತಿಲ್ಲ? ನೀರು ಇಲ್ಲವೇ? ಹಾಗಾದರೆ ಬಸವೇಶ್ವರ ಏತ ನೀರಾವರಿಗೆ ನೀರು ಎಲ್ಲಿಂದ ಬರುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ರೈತರಿಗೆ ಒಳ್ಳೆಯದಾಗುವುದನ್ನು ಮಾಡಿದರೆ ರೈತರು ನಿಮ್ಮನ್ನ ಮರೆಯುವುದಿಲ್ಲ. ದೇವದುರ್ಗದಲ್ಲಿ ದೇವೇಗೌಡರು ಕಾಲುವೆ ಮಾಡಿಸಿದ್ದಕ್ಕೆ ಎಲ್ಲರ ಮನೆಯಲ್ಲಿ ಅವರ ಫೋಟೊ ಇದೆ ಗೊತ್ತೆ? ನಿಮಗ್ಯಾಕೆ ಇದು ಸಾಧ್ಯವಿಲ್ಲ? ರಂಗರಾಮ್‌ ವರದಿಯ ಪ್ರಕಾರ ಈ ಪ್ರದೇಶಕ್ಕೆ NRBC_5A ಮೂಲಕ ಮಾತ್ರ ನೀರು ಕೊಡಲು ಸಾಧ್ಯ ಎನ್ನಲಾಗಿದೆ. ಹಾಗಿದ್ದರೂ ಪ್ರತಾಪಗೌಡ ಪಾಟೀಲರು ನೀರು ಕೊಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಹಾಗಾಗಿಯೇ ನಾವು ಅವರನ್ನು ವ್ಯಕ್ತಿಯಾಗಿ ವಿರೋಧಿಸುತ್ತಿದ್ದೇವೆಯೇ ಹೊರತು ಪಕ್ಷವನ್ನಲ್ಲ ಎಂದಿದ್ದಾರೆ.

13 ವರ್ಷದಲ್ಲಿ ಈ ಯೋಜನೆ ಮಾಡಿ ಎಂದು ಪ್ರತಾಪಗೌಡಪಾಟೀಲರು ಎಷ್ಟು ಅರ್ಜಿ ಕೊಟ್ಟಿದ್ದಾರೆ ಲೆಕ್ಕ ಕೊಡಲಿ? NRBC_5A ಯೋಜನೆ ಜಾರಿ ಮಾಡದೇ ರಾಯಚೂರು ಜಿಲ್ಲೆಗೆ ಕಾಲಿಡುವುದಿಲ್ಲ ಎಂದು ಯಡಿಯೂರಪ್ಪನವರು ಹೇಳಿದ್ದರು. ಆದರೂ ಏಕೆ ಯೋಜನೆ ಜಾರಿಯಾಗಲಿಲ್ಲ ಎಂದು ತಿಮ್ಮನಗೌಡ ಚಿಲ್ಕರಾಗಿ ಕಿಡಿಕಾರಿದರು.

ಶಾಸಕರು NRBC_5A ಯೋಜನೆ ಜಾರಿ ಮಾಡಬೇಕೆಂದು ಪ್ರತಾಪಗೌಡರು ಹೇಳಿದರೆ ನಾವು ಮಾಡುತ್ತೇವೆ ಎಂದು ಮೈತ್ರಿ ಸರ್ಕಾರದ ಸಚಿವರು ಹೇಳಿದ್ದರು. ಆದರೆ ಇವರು ಒಮ್ಮೆಯೂ ಹೇಳಲಿಲ್ಲ. ಹಾಗಾಗಿ ನಾವು ಬಿಜೆಪಿ ಆಗಿದ್ದರೂ ಪ್ರತಾಪಗೌಡರನ್ನು ವಿರೋಧಿಸುತ್ತೇವೆ ಎಂದರು.

ಮಸ್ಕಿಯ ಸಾವಿರಾರು ಯುವಕರು ದುಡಿಯಲು ಬೆಂಗಳೂರಿಗೆ ವಲಸೆ ಹೋಗುತ್ತಿದ್ದಾರೆ. ಇಲ್ಲಿ ವಯಸ್ಸಾದವರು ಮಾತ್ರ ಇದ್ದೇವೆ. ಅನಾವೃಷ್ಟಿಯಿಂದ ನರಳುತ್ತಿದ್ದೇವೆ. ನಮಗೆ ಬೆಳೆಯೇ ಬರುತ್ತಿಲ್ಲ. ಈ ಕಷ್ಟ ಬಿಜೆಪಿಯವರಿಗೆ ಗೊತ್ತಾಗುವುದಿಲ್ಲವೇ? ಎಂದು ಕಿಡಿಕಾರಿದರು.

ನಾವು ರೈತರೇನು ಭಯೋತ್ಪಾದಕರೇ? ನಮ್ಮ ಸರ್ಕಾರದ ಪ್ರತಿನಿಧಿಗಳಾಗಿ ನಿಮ್ಮನ್ನು ನಾವು ಎಂದಾದರೂ ಅವಮಾನ ಮಾಡಿದ್ದೇವೆಯೇ? ನೀವು ಅಷ್ಟೇ ರೈತರಿಗೆ ಅವಮಾನ ಮಾಡಬೇಡಿ. ನಾವು ಯಾರು ನಮಗೆ ಮನೆ ಕೊಡಿ ಎಂದು ಕೇಳುತ್ತಿಲ್ಲ. ಈ ಪ್ರದೇಶಕ್ಕೆ ಒಂದು ನೀರಾವರಿ ಯೋಜನೆ ಕೊಡಿ ಎಂದಷ್ಟೇ ಕೇಳುತ್ತಿದ್ದೇವೆ. ರೈತರಿಲ್ಲದಿದ್ದರೆ ದೇಶ ಉಳಿಯುವುದಿಲ್ಲ. ಇದನ್ನು ಅರಿಯದ ಸರ್ಕಾರ ನಮಗೆ ಏಕೆ ಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...