Homeಕರ್ನಾಟಕಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

ಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

- Advertisement -
- Advertisement -

ಮಸ್ಕಿ ತಾಲ್ಲೂಕಿನ 58 ಬರಪೀಡಿತ ಹಳ್ಳಿಗಳಿಗೆ NRBC_5A ಕಾಲುವೆ ಮೂಲಕ ನೀರಾವರಿ ಯೋಜನೆ ಬೇಕೆಂದು ಹೋರಾಡುವವರಿಗೆ ನೀವೇನು ವಿಶ್ವೇಶ್ವರಯ್ಯನವರ ಥರ ವಿಜ್ಞಾನಿಗಳ ಎಂದು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಕೇಳಿದ್ದಾರೆ. ಇಲ್ಲಿಗೆ ನೀರು ಬರುವುದಿಲ್ಲ ಎಂದು ಹೇಳಲು ಅವರೇನು ವಿಶ್ವೇಶ್ವರಯ್ಯನವರೇ ಎಂದು ಹೋರಾಟ ಸಮಿತಿ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ ತರಾಟೆಗೆ ತಗೆದುಕೊಂಡಿದ್ದಾರೆ.

NRBC_5A ನೀರಾವರಿ ಯೋಜನೆಗಾಗಿ ನಡೆಯುತ್ತಿರುವ ಹೋರಾಟ ಇಂದಿಗೆ 136ನೇ ದಿನಕ್ಕೆ ಕಾಲಿಟ್ಟಿದೆ. ಪಾಮನಕಲ್ಲೂರಿನ ರೈತರ ಧರಣಿ ಸ್ಥಳದ ಮುಂದೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ, ಸಚಿವ ಬಿ. ಶ್ರೀರಾಮುಲು, ಸಂಸದ ಸಂಗಣ್ಣ ಕರಡಿ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ, ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಶಿವನಗೌಡ ಗೊರಬಾಳರವರು ಬಿಜೆಪಿ ಪರವಾಗಿ ಮತ ಕೇಳಲು ಆಗಮಿಸಿದಾಗ ಅವರನ್ನು ಹೋರಾಟಗಾರರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಹೋರಾಟ ಸಮಿತಿ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ ಮಾತನಾಡಿ, “ಇಷ್ಟು ದಿನ ನಾವು ಹೋರಾಟ ಮಾಡುತ್ತಿದ್ದೇವೆ, ನೀವೇಕೆ ತಿರುಗಿ ನೋಡಲಿಲ್ಲ? ಇಲ್ಲಿ ವಾಲ್ಮೀಕಿ ಭವನದ ಉದ್ಘಾಟನೆಗೆ ಶ್ರೀರಾಮುಲುರವರು ಬರಬೇಕಿತ್ತು, ಏಕೆ ಬರಲಿಲ್ಲ? ನಾವು ನೀರು ಬೇಕು ಎಂದು ಎಷ್ಟು ಸಲ ಕೇಳಿದ್ದೇವೆ ಗೊತ್ತೆ? ಸಂಗಣ್ಣ ಕರಡಿಯವರಿಗೆ ಗೊತ್ತಿದೆ, ಅವರು ಹೇಳಬೇಕು” ಎಂದು ಒತ್ತಾಯಿಸಿದರು.

ಮಸ್ಕಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ನೀರಾವರಿ ಹೋರಾಟಗಾರರು ತರಾಟೆಗೆ ತೆಗೆದುಕೊಂಡ ವಿಡಿಯೋ ನೋಡಿ..

ನೀವು ನೀರು ಕೊಡಲು ಆಗುವುದಿಲ್ಲ ಎನ್ನಲು ಕಾರಣವೇನು? ಇಂಜಿನಿಯರ್‌ಗಳು ನೀರು ಕೊಡಲು ಸಾಧ್ಯ ಎಂದು ವರದಿ ಕೊಟ್ಟಿದ್ದಾರೆ. ಎಂಡಿಆರ್‌ಎಫ್‌ ನವರನ್ನು ಕೇಳಿದರೆ ಸರ್ಕಾರ ಆದೇಶ ಮಾಡಿದರೆ ನಾವು ನೀರಾವರಿ ಮಾಡುತ್ತೇವೆ ಎನ್ನುತ್ತಾರೆ. ಸರ್ಕಾರ ಎಂದರೆ ನೀವೇ ತಾನೇ? ಏಕೆ ನೀವು ಮಾಡುತ್ತಿಲ್ಲ? ನೀರು ಇಲ್ಲವೇ? ಹಾಗಾದರೆ ಬಸವೇಶ್ವರ ಏತ ನೀರಾವರಿಗೆ ನೀರು ಎಲ್ಲಿಂದ ಬರುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ರೈತರಿಗೆ ಒಳ್ಳೆಯದಾಗುವುದನ್ನು ಮಾಡಿದರೆ ರೈತರು ನಿಮ್ಮನ್ನ ಮರೆಯುವುದಿಲ್ಲ. ದೇವದುರ್ಗದಲ್ಲಿ ದೇವೇಗೌಡರು ಕಾಲುವೆ ಮಾಡಿಸಿದ್ದಕ್ಕೆ ಎಲ್ಲರ ಮನೆಯಲ್ಲಿ ಅವರ ಫೋಟೊ ಇದೆ ಗೊತ್ತೆ? ನಿಮಗ್ಯಾಕೆ ಇದು ಸಾಧ್ಯವಿಲ್ಲ? ರಂಗರಾಮ್‌ ವರದಿಯ ಪ್ರಕಾರ ಈ ಪ್ರದೇಶಕ್ಕೆ NRBC_5A ಮೂಲಕ ಮಾತ್ರ ನೀರು ಕೊಡಲು ಸಾಧ್ಯ ಎನ್ನಲಾಗಿದೆ. ಹಾಗಿದ್ದರೂ ಪ್ರತಾಪಗೌಡ ಪಾಟೀಲರು ನೀರು ಕೊಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಹಾಗಾಗಿಯೇ ನಾವು ಅವರನ್ನು ವ್ಯಕ್ತಿಯಾಗಿ ವಿರೋಧಿಸುತ್ತಿದ್ದೇವೆಯೇ ಹೊರತು ಪಕ್ಷವನ್ನಲ್ಲ ಎಂದಿದ್ದಾರೆ.

13 ವರ್ಷದಲ್ಲಿ ಈ ಯೋಜನೆ ಮಾಡಿ ಎಂದು ಪ್ರತಾಪಗೌಡಪಾಟೀಲರು ಎಷ್ಟು ಅರ್ಜಿ ಕೊಟ್ಟಿದ್ದಾರೆ ಲೆಕ್ಕ ಕೊಡಲಿ? NRBC_5A ಯೋಜನೆ ಜಾರಿ ಮಾಡದೇ ರಾಯಚೂರು ಜಿಲ್ಲೆಗೆ ಕಾಲಿಡುವುದಿಲ್ಲ ಎಂದು ಯಡಿಯೂರಪ್ಪನವರು ಹೇಳಿದ್ದರು. ಆದರೂ ಏಕೆ ಯೋಜನೆ ಜಾರಿಯಾಗಲಿಲ್ಲ ಎಂದು ತಿಮ್ಮನಗೌಡ ಚಿಲ್ಕರಾಗಿ ಕಿಡಿಕಾರಿದರು.

ಶಾಸಕರು NRBC_5A ಯೋಜನೆ ಜಾರಿ ಮಾಡಬೇಕೆಂದು ಪ್ರತಾಪಗೌಡರು ಹೇಳಿದರೆ ನಾವು ಮಾಡುತ್ತೇವೆ ಎಂದು ಮೈತ್ರಿ ಸರ್ಕಾರದ ಸಚಿವರು ಹೇಳಿದ್ದರು. ಆದರೆ ಇವರು ಒಮ್ಮೆಯೂ ಹೇಳಲಿಲ್ಲ. ಹಾಗಾಗಿ ನಾವು ಬಿಜೆಪಿ ಆಗಿದ್ದರೂ ಪ್ರತಾಪಗೌಡರನ್ನು ವಿರೋಧಿಸುತ್ತೇವೆ ಎಂದರು.

ಮಸ್ಕಿಯ ಸಾವಿರಾರು ಯುವಕರು ದುಡಿಯಲು ಬೆಂಗಳೂರಿಗೆ ವಲಸೆ ಹೋಗುತ್ತಿದ್ದಾರೆ. ಇಲ್ಲಿ ವಯಸ್ಸಾದವರು ಮಾತ್ರ ಇದ್ದೇವೆ. ಅನಾವೃಷ್ಟಿಯಿಂದ ನರಳುತ್ತಿದ್ದೇವೆ. ನಮಗೆ ಬೆಳೆಯೇ ಬರುತ್ತಿಲ್ಲ. ಈ ಕಷ್ಟ ಬಿಜೆಪಿಯವರಿಗೆ ಗೊತ್ತಾಗುವುದಿಲ್ಲವೇ? ಎಂದು ಕಿಡಿಕಾರಿದರು.

ನಾವು ರೈತರೇನು ಭಯೋತ್ಪಾದಕರೇ? ನಮ್ಮ ಸರ್ಕಾರದ ಪ್ರತಿನಿಧಿಗಳಾಗಿ ನಿಮ್ಮನ್ನು ನಾವು ಎಂದಾದರೂ ಅವಮಾನ ಮಾಡಿದ್ದೇವೆಯೇ? ನೀವು ಅಷ್ಟೇ ರೈತರಿಗೆ ಅವಮಾನ ಮಾಡಬೇಡಿ. ನಾವು ಯಾರು ನಮಗೆ ಮನೆ ಕೊಡಿ ಎಂದು ಕೇಳುತ್ತಿಲ್ಲ. ಈ ಪ್ರದೇಶಕ್ಕೆ ಒಂದು ನೀರಾವರಿ ಯೋಜನೆ ಕೊಡಿ ಎಂದಷ್ಟೇ ಕೇಳುತ್ತಿದ್ದೇವೆ. ರೈತರಿಲ್ಲದಿದ್ದರೆ ದೇಶ ಉಳಿಯುವುದಿಲ್ಲ. ಇದನ್ನು ಅರಿಯದ ಸರ್ಕಾರ ನಮಗೆ ಏಕೆ ಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...