Homeಕರ್ನಾಟಕಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

ಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

- Advertisement -
- Advertisement -

ಮಸ್ಕಿ ತಾಲ್ಲೂಕಿನ 58 ಬರಪೀಡಿತ ಹಳ್ಳಿಗಳಿಗೆ NRBC_5A ಕಾಲುವೆ ಮೂಲಕ ನೀರಾವರಿ ಯೋಜನೆ ಬೇಕೆಂದು ಹೋರಾಡುವವರಿಗೆ ನೀವೇನು ವಿಶ್ವೇಶ್ವರಯ್ಯನವರ ಥರ ವಿಜ್ಞಾನಿಗಳ ಎಂದು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಕೇಳಿದ್ದಾರೆ. ಇಲ್ಲಿಗೆ ನೀರು ಬರುವುದಿಲ್ಲ ಎಂದು ಹೇಳಲು ಅವರೇನು ವಿಶ್ವೇಶ್ವರಯ್ಯನವರೇ ಎಂದು ಹೋರಾಟ ಸಮಿತಿ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ ತರಾಟೆಗೆ ತಗೆದುಕೊಂಡಿದ್ದಾರೆ.

NRBC_5A ನೀರಾವರಿ ಯೋಜನೆಗಾಗಿ ನಡೆಯುತ್ತಿರುವ ಹೋರಾಟ ಇಂದಿಗೆ 136ನೇ ದಿನಕ್ಕೆ ಕಾಲಿಟ್ಟಿದೆ. ಪಾಮನಕಲ್ಲೂರಿನ ರೈತರ ಧರಣಿ ಸ್ಥಳದ ಮುಂದೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ, ಸಚಿವ ಬಿ. ಶ್ರೀರಾಮುಲು, ಸಂಸದ ಸಂಗಣ್ಣ ಕರಡಿ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ, ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಶಿವನಗೌಡ ಗೊರಬಾಳರವರು ಬಿಜೆಪಿ ಪರವಾಗಿ ಮತ ಕೇಳಲು ಆಗಮಿಸಿದಾಗ ಅವರನ್ನು ಹೋರಾಟಗಾರರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಹೋರಾಟ ಸಮಿತಿ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ ಮಾತನಾಡಿ, “ಇಷ್ಟು ದಿನ ನಾವು ಹೋರಾಟ ಮಾಡುತ್ತಿದ್ದೇವೆ, ನೀವೇಕೆ ತಿರುಗಿ ನೋಡಲಿಲ್ಲ? ಇಲ್ಲಿ ವಾಲ್ಮೀಕಿ ಭವನದ ಉದ್ಘಾಟನೆಗೆ ಶ್ರೀರಾಮುಲುರವರು ಬರಬೇಕಿತ್ತು, ಏಕೆ ಬರಲಿಲ್ಲ? ನಾವು ನೀರು ಬೇಕು ಎಂದು ಎಷ್ಟು ಸಲ ಕೇಳಿದ್ದೇವೆ ಗೊತ್ತೆ? ಸಂಗಣ್ಣ ಕರಡಿಯವರಿಗೆ ಗೊತ್ತಿದೆ, ಅವರು ಹೇಳಬೇಕು” ಎಂದು ಒತ್ತಾಯಿಸಿದರು.

ಮಸ್ಕಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ನೀರಾವರಿ ಹೋರಾಟಗಾರರು ತರಾಟೆಗೆ ತೆಗೆದುಕೊಂಡ ವಿಡಿಯೋ ನೋಡಿ..

ನೀವು ನೀರು ಕೊಡಲು ಆಗುವುದಿಲ್ಲ ಎನ್ನಲು ಕಾರಣವೇನು? ಇಂಜಿನಿಯರ್‌ಗಳು ನೀರು ಕೊಡಲು ಸಾಧ್ಯ ಎಂದು ವರದಿ ಕೊಟ್ಟಿದ್ದಾರೆ. ಎಂಡಿಆರ್‌ಎಫ್‌ ನವರನ್ನು ಕೇಳಿದರೆ ಸರ್ಕಾರ ಆದೇಶ ಮಾಡಿದರೆ ನಾವು ನೀರಾವರಿ ಮಾಡುತ್ತೇವೆ ಎನ್ನುತ್ತಾರೆ. ಸರ್ಕಾರ ಎಂದರೆ ನೀವೇ ತಾನೇ? ಏಕೆ ನೀವು ಮಾಡುತ್ತಿಲ್ಲ? ನೀರು ಇಲ್ಲವೇ? ಹಾಗಾದರೆ ಬಸವೇಶ್ವರ ಏತ ನೀರಾವರಿಗೆ ನೀರು ಎಲ್ಲಿಂದ ಬರುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ರೈತರಿಗೆ ಒಳ್ಳೆಯದಾಗುವುದನ್ನು ಮಾಡಿದರೆ ರೈತರು ನಿಮ್ಮನ್ನ ಮರೆಯುವುದಿಲ್ಲ. ದೇವದುರ್ಗದಲ್ಲಿ ದೇವೇಗೌಡರು ಕಾಲುವೆ ಮಾಡಿಸಿದ್ದಕ್ಕೆ ಎಲ್ಲರ ಮನೆಯಲ್ಲಿ ಅವರ ಫೋಟೊ ಇದೆ ಗೊತ್ತೆ? ನಿಮಗ್ಯಾಕೆ ಇದು ಸಾಧ್ಯವಿಲ್ಲ? ರಂಗರಾಮ್‌ ವರದಿಯ ಪ್ರಕಾರ ಈ ಪ್ರದೇಶಕ್ಕೆ NRBC_5A ಮೂಲಕ ಮಾತ್ರ ನೀರು ಕೊಡಲು ಸಾಧ್ಯ ಎನ್ನಲಾಗಿದೆ. ಹಾಗಿದ್ದರೂ ಪ್ರತಾಪಗೌಡ ಪಾಟೀಲರು ನೀರು ಕೊಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಹಾಗಾಗಿಯೇ ನಾವು ಅವರನ್ನು ವ್ಯಕ್ತಿಯಾಗಿ ವಿರೋಧಿಸುತ್ತಿದ್ದೇವೆಯೇ ಹೊರತು ಪಕ್ಷವನ್ನಲ್ಲ ಎಂದಿದ್ದಾರೆ.

13 ವರ್ಷದಲ್ಲಿ ಈ ಯೋಜನೆ ಮಾಡಿ ಎಂದು ಪ್ರತಾಪಗೌಡಪಾಟೀಲರು ಎಷ್ಟು ಅರ್ಜಿ ಕೊಟ್ಟಿದ್ದಾರೆ ಲೆಕ್ಕ ಕೊಡಲಿ? NRBC_5A ಯೋಜನೆ ಜಾರಿ ಮಾಡದೇ ರಾಯಚೂರು ಜಿಲ್ಲೆಗೆ ಕಾಲಿಡುವುದಿಲ್ಲ ಎಂದು ಯಡಿಯೂರಪ್ಪನವರು ಹೇಳಿದ್ದರು. ಆದರೂ ಏಕೆ ಯೋಜನೆ ಜಾರಿಯಾಗಲಿಲ್ಲ ಎಂದು ತಿಮ್ಮನಗೌಡ ಚಿಲ್ಕರಾಗಿ ಕಿಡಿಕಾರಿದರು.

ಶಾಸಕರು NRBC_5A ಯೋಜನೆ ಜಾರಿ ಮಾಡಬೇಕೆಂದು ಪ್ರತಾಪಗೌಡರು ಹೇಳಿದರೆ ನಾವು ಮಾಡುತ್ತೇವೆ ಎಂದು ಮೈತ್ರಿ ಸರ್ಕಾರದ ಸಚಿವರು ಹೇಳಿದ್ದರು. ಆದರೆ ಇವರು ಒಮ್ಮೆಯೂ ಹೇಳಲಿಲ್ಲ. ಹಾಗಾಗಿ ನಾವು ಬಿಜೆಪಿ ಆಗಿದ್ದರೂ ಪ್ರತಾಪಗೌಡರನ್ನು ವಿರೋಧಿಸುತ್ತೇವೆ ಎಂದರು.

ಮಸ್ಕಿಯ ಸಾವಿರಾರು ಯುವಕರು ದುಡಿಯಲು ಬೆಂಗಳೂರಿಗೆ ವಲಸೆ ಹೋಗುತ್ತಿದ್ದಾರೆ. ಇಲ್ಲಿ ವಯಸ್ಸಾದವರು ಮಾತ್ರ ಇದ್ದೇವೆ. ಅನಾವೃಷ್ಟಿಯಿಂದ ನರಳುತ್ತಿದ್ದೇವೆ. ನಮಗೆ ಬೆಳೆಯೇ ಬರುತ್ತಿಲ್ಲ. ಈ ಕಷ್ಟ ಬಿಜೆಪಿಯವರಿಗೆ ಗೊತ್ತಾಗುವುದಿಲ್ಲವೇ? ಎಂದು ಕಿಡಿಕಾರಿದರು.

ನಾವು ರೈತರೇನು ಭಯೋತ್ಪಾದಕರೇ? ನಮ್ಮ ಸರ್ಕಾರದ ಪ್ರತಿನಿಧಿಗಳಾಗಿ ನಿಮ್ಮನ್ನು ನಾವು ಎಂದಾದರೂ ಅವಮಾನ ಮಾಡಿದ್ದೇವೆಯೇ? ನೀವು ಅಷ್ಟೇ ರೈತರಿಗೆ ಅವಮಾನ ಮಾಡಬೇಡಿ. ನಾವು ಯಾರು ನಮಗೆ ಮನೆ ಕೊಡಿ ಎಂದು ಕೇಳುತ್ತಿಲ್ಲ. ಈ ಪ್ರದೇಶಕ್ಕೆ ಒಂದು ನೀರಾವರಿ ಯೋಜನೆ ಕೊಡಿ ಎಂದಷ್ಟೇ ಕೇಳುತ್ತಿದ್ದೇವೆ. ರೈತರಿಲ್ಲದಿದ್ದರೆ ದೇಶ ಉಳಿಯುವುದಿಲ್ಲ. ಇದನ್ನು ಅರಿಯದ ಸರ್ಕಾರ ನಮಗೆ ಏಕೆ ಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...