Homeಚಳವಳಿರೈತ ಹೋರಾಟ: ಸುಗ್ಗಿಗೆ ಹೊರಟ ಟ್ಯ್ರಾಲಿಗಳು, ನಿರ್ಮಾಣಗೊಂಡ ಹುಲ್ಲಿನ ಗುಡಿಸಲುಗಳು

ರೈತ ಹೋರಾಟ: ಸುಗ್ಗಿಗೆ ಹೊರಟ ಟ್ಯ್ರಾಲಿಗಳು, ನಿರ್ಮಾಣಗೊಂಡ ಹುಲ್ಲಿನ ಗುಡಿಸಲುಗಳು

ಬೇಸಿಗೆ ಕಾಲಕ್ಕೆ ಟ್ಯ್ರಾಲಿಗಳಿಗಿಂತ ಈ ಶೆಡ್‌ಗಳೇ ಹೆಚ್ಚು ತಂಪಾಗಿದ್ದು, ಈಗಾಗಲೇ ನಿರ್ಮಾಣಗೊಂಡಿರುವ ಹಲವು ಶೆಡ್‌ಗಳಲ್ಲಿ, ಎಸಿ, ಕೂಲರ್‌ಗಳನ್ನು ಅಳವಡಿಸಲಾಗಿದೆ.

- Advertisement -
- Advertisement -

ರೈತ ವಿರೋಧಿ, ವಿವಾದಿತ ಮೂರು ಕೃಷಿ ಕಾಯ್ದೆಗಳು ರದ್ದಾಗಬೇಕು. ಕನಿಷ್ಠ ಬೆಂಬಲ ಬೆಲೆ ಕಾನೂನುಬದ್ಧಗೊಳಿಸಬೇಕು ಎಂದು ದೆಹಲಿಯ ನಾಲ್ಕು ಗಡಿಗಳಲ್ಲಿ ಪಂಜಾಬ್‌, ಹರಿಯಾಣ, ಉತ್ತರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ರೈತರು ನಡೆಸುತ್ತಿರುವ ಐತಿಹಾಸಿಕ ರೈತ ಹೋರಾಟಕ್ಕೆ 130 ದಿನಗಳಾಗಿದೆ.

ವಿಶ್ವದ ಗಮನ ಸೆಳೆದಿರುವ ರೈತ ಹೋರಾಟದ ವಿಶೇಷತೆಗಳಲ್ಲಿ ಟ್ರ್ಯಾಲಿಗಳು ಕೂಡ ಒಂದು. ತಣ್ಣಗೆ ಕೊರೆಯುವ ದೆಹಲಿಯ ಚಳಿಯಿಂದ ರಕ್ಷಣೆ ಪಡೆಯಲು ರೈತರು ಟ್ಯ್ರಾಲಿಗಳನ್ನು ಆಶ್ರಯಿಸಿದ್ದರು. ಆದರೆ ಈಗ ಬಿರು ಬೇಸಿಗೆಯಿದೆ. ಟ್ಯ್ರಾಲಿಗಳಲ್ಲಿ ಇರುವುದು ನಿಜಕ್ಕೂ ಕಷ್ಟ. ಜೊತೆಗೆ ವರ್ಷವಿಡೀ ಬೆಳೆ ಬೆಳೆಯುವ ಪಂಜಾಬ್, ಹರಿಯಾಣದಲ್ಲಿ ಈಗ ಗೋದಿ ಕೊಯ್ಲಿನ ಸಮಯ. ಬಿತ್ತನೆ ಮುಗಿಸಿ ಟ್ರ್ಯಾಲಿಗಳೊಂದಿಗೆ ಬಂದಿದ್ದ ರೈತರು ಈಗ ಸುಗ್ಗಿ ಮಾಡಲು ಟ್ರ್ಯಾಲಿಗಳನ್ನು ತಮ್ಮ ಹಳ್ಳಿಗೆ ವಾಪಸ್ಸು ಕಳುಹಿಸುತ್ತಿದ್ದಾರೆ.

ನವೆಂಬರ್‌ನಿಂದ ಜೊತೆಗಿದ್ದು ಮನೆಗಳಾಂತಾಗಿದ್ದ ಟ್ಯ್ರಾಲಿಗಳ ಜಾಗದಲ್ಲಿ ರೈತರು ಈಗ ಬಿದಿರಿನ, ಹುಲ್ಲಿನ ಶೆಡ್‌ಗಳನ್ನು ನಿರ್ಮಿಸುತ್ತಿದ್ದಾರೆ. ಸುಡುವ ಬಿಸಿಲಿನಿಂದ ಕಾಪಾಡಲು ಈ ಶೆಡ್‌ಗಳು ಸಹಕಾರಿಯಾಗಿವೆ. ಈ ಬೇಸಿಗೆ ಕಾಲಕ್ಕೆ ಟ್ಯ್ರಾಲಿಗಳಿಗಿಂತ ಈ ಶೆಡ್‌ಗಳೇ ಹೆಚ್ಚು ತಂಪಾಗಿರುತ್ತವೆ. ಜೊತೆಗೆ ಈಗಾಗಲೇ ನಿರ್ಮಾಣಗೊಂಡಿರುವ ಹಲವು ಶೆಡ್‌ಗಳಲ್ಲಿ, ಎಸಿ, ಕೂಲರ್‌ಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ: ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ಪಂಜಾಬ್‌ನ ರೂಪರ್‌ ಜಿಲ್ಲೆಯ ಬೆಹ್ರಾಂಪುರ ಗ್ರಾಮದ ರೈತರು ಸಿಂಘು ಗಡಿಯಲ್ಲಿ ಎರಡು ವಾರದ ಹಿಂದೆಯೇ ಒಣಹುಲ್ಲಿನ ಚಾವಣಿ, ಹೂಕುಂಡಗಳು, ಕರ್ಟನ್‌ಗಳು ಹಾಗೂ ಭಗತ್‌ಸಿಂಗ್‌ನ ಫೋಟೊ ಇರುವ ಗುಡಿಸಲನ್ನು ನಿರ್ಮಿಸಿದ್ದಾರೆ. ಈ ಕುರಿತು ಮಾತನಾಡಿದ ಅದೇ ಗ್ರಾಮದ ಗುರ್ಮೀತ್‌ ಸಿಂಗ್‌, ‘ನಾವು ತಂದಿದ್ದರಲ್ಲಿ ಎರಡು ಟ್ರ್ಯಾಲಿಗಳನ್ನು ಸುಗ್ಗಿಗಾಗಿ ಹಳ್ಳಿಗೆ ಕಳಿಸಿದ್ದೇವೆ. ಈಗ ನಿರ್ಮಿಸಿರುವ ಗುಡಿಸಲು ತಣ್ಣಗಿದ್ದು, ಕಬ್ಬಿಣ ಮತ್ತು ಟಾರ್ಪಲಿನ್‌ನಿಂದ ಉಂಟಾಗುತ್ತಿದ್ದ ಹಬೆ ಈಗಿಲ್ಲ ಎಂದಿದ್ದಾರೆ.

‘ಗೋದಿ ಕೊಯ್ಲಿನ ಕಾರಣಕ್ಕೆ ಪ್ರತಿಭಟನಾ ಗಡಿಗಳಲ್ಲಿರುವವರ ಸಂಖ್ಯೆ ಕಡಿಮೆಯಿದ್ದು, ಸುಗ್ಗಿಯ ನಂತರ ರೈತರೆಲ್ಲರೂ ಮತ್ತೆ ಸೇರಲಿದ್ದಾರೆ. ಪ್ರಸ್ತುತ ಪಂಜಾಬಿನ ಪ್ರತಿ ಗ್ರಾಮದಿಂದ 10 ಜನ ರೈತರು ಪ್ರತಿಭಟನೆಯಲ್ಲಿದ್ದಾರೆ’ ಎಂದು ಲೂಧಿಯಾನ ಜಿಲ್ಲೆ ಜತನ ಗ್ರಾಮದ ರಾಜ್ವಿಂದರ್‌ ಸಿಂಗ್‌ ತಿಳಿಸಿದರು.

ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

‘ಪ್ರತಿಭಟನೆ ಆರಂಭದಿಂದಲೂ ಹಳ್ಳಿಗೆ 20-30 ಜನ ರೈತರು ಈ ಹೋರಾಟಕ್ಕೆ ಬಂದು ಒಂದು ವಾರದಿಂದ ಹತ್ತು ದಿನಗಳವರೆಗೆ ಇಲ್ಲಿಗೆ ಬಂದಿರುತ್ತಿದ್ದರು. ನಾವು ಇದೇ ನೀತಿಯನ್ನು ಅನುಸರಿಸಿಕೊಂಡು ಬಂದಿದ್ದೇವೆ. ಈಗ ಸುಗ್ಗಿಯ ಕಾರಣದಿಂದ ಜನರ ಸಂಖ್ಯೆ ಕಡಿಮೆ ಇದೆ ಅಷ್ಟೆ. ಕೃಷಿ ಕಾಯ್ದೆಗಳು ರದ್ದಾಗುವವರೆಗೂ ಈ ಹೋರಾಟ ನಿಲ್ಲಿಸುವ ಮಾತೇ ಇಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ವಿಂದರ್‌ ಸೇರಿದಂತೆ ಮೂರು ಜನರು ರೈತ ಹೋರಾಟ ಶುರುವಾದಂದಿನಿಂದ ಗಡಿಗಳಲ್ಲಿಯೇ ಇದ್ದು ಹೋರಾಟದ ಆಗು-ಹೋಗುಗಳನ್ನು ನೋಡಿಕೊಳ್ಳುತ್ತಿರುವುದರಿಂದ ಅವರ ಹೊಲದ ಸುಗ್ಗಿಯನ್ನು ಗ್ರಾಮದ ರೈತರೇ ನೋಡಿಕೊಳ್ಳುವುದಾಗಿ ಗ್ರಾಮದ ಸರ್‌ಪಂಚ್‌ ತಿಳಿಸಿದ್ದಾರೆ ಎಂದರು.


ಇದನ್ನೂ ಓದಿ: ಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...