Homeಕರ್ನಾಟಕಸಿಡಿ ಪ್ರಕರಣ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದ ಸಂತ್ರಸ್ತೆ

ಸಿಡಿ ಪ್ರಕರಣ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದ ಸಂತ್ರಸ್ತೆ

’ಮಾನ್ಯ ಮುಖ್ಯಮಂತ್ರಿಗಳು ರಮೇಶ್ ಜಾರಕಿಹೊಳಿ ಆರೋಪಮುಕ್ತರಾಗಿ ಹೊರಗೆ ಬರುತ್ತಾರೆ ಎಂದು ಹೇಳಿರುವುದು ನನಗೆ ತೀವ್ರ ಆತಂಕ ಉಂಟು ಮಾಡಿದೆ’

- Advertisement -
- Advertisement -

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಯುವತಿ, ಸಿಡಿ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ ಅಧಿಕಾರಿಗಳ ಮೇಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಭಾವ ಬೀರುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಅವರನ್ನು ರಕ್ಷಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿ, ಸ್ವತಃ ಸಂತ್ರಸ್ತ ಯುವತಿಯೇ  ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದಿದ್ದಾರೆ.

’ನಾನು ದೂರು ನೀಡಿರುವ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ರಕ್ಷಿಸುವ ಸಲುವಾಗಿ, ನನ್ನ ವಿರುದ್ಧ ಷಡ್ಯಂತ್ರ ಮಾಡಿ, ತನಿಖಾಧಿಕಾರಿಗಳ ಮೇಲೆ ರಾಜಕೀಯ ಪ್ರಭಣಾವ ಬೀರುತ್ತಿದ್ದಾರೆ’ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಅತ್ಯಾಚಾರ ಪ್ರಕರಣವನ್ನು ಎಸ್ಐಟಿ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ತನಿಖೆ ಮಾಡುತ್ತಿಲ್ಲ. ನನಗೆ ಪ್ರತಿಬಾರಿ ನೋಟಿಸ್ ನೀಡಿ ವಿಚಾರಣೆಗೆ ಕರೆಸಲಾಗುತ್ತಿದೆ. ಆರೋಪಿ ಸ್ಥಾನದಲ್ಲಿ ಇರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರನ್ನು ವಿಚಾರಣೆ ಮಾಡುತ್ತಿಲ್ಲ. ಅವರನ್ನು ರಾಜಾರೋಷವಾಗಿ ಓಡಾಡಿಕೊಂಡಿರಲು ಬಿಟ್ಟಿದ್ದಾರೆ. ಒಟ್ಟಾರೆ ಪ್ರಕ್ರಿಯೆಗಳನ್ನು ನೋಡುತ್ತಿದ್ದರೇ, ಈ ಪ್ರಕರಣದಲ್ಲಿ ನಾನು ಸಂತ್ರಸ್ತೆಯೋ ಆರೋಪಿಯೋ ಎಂಬ ಅನುಮಾನ ಮೂಡಿದೆ ಎಂದಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ಸಂತ್ರಸ್ತೆ ಪರ ವಕೀಲ ಜಗದೀಶ್ ವಿರುದ್ಧವೇ ದೂರು ನೀಡಿದ ಎಸ್‌ಐಟಿ!

ಸಂತ್ರಸ್ತ ಯುವತಿ ಬರೆದಿರುವ ಪತ್ರದ ಯಥಾವತ್ತು ಇಲ್ಲಿದೆ.

ವಿಷಯ: ನಾನು ನೀಡಿದ ಅತ್ಯಾಚಾರ ಪ್ರಕರಣದ ದೂರಿನ ವಿಚಾರಣೆಯಲ್ಲಿ ಆರೋಪಿ ರಕ್ಷಿಸುವ ಸಲುವಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಿ ತನಿಖಾಧಿಕಾರಿಗಳ ಮೇಲೆ ರಾಜಕೀಯ ಪ್ರಭಾವ ಬೀರುತ್ತಿರುವ ಬಗ್ಗೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ: 16-03-2021ರಂದು ನನ್ನ ವಕೀಲರಾದ ಶ್ರೀ ಜಗದೀಶ್ ಕೆ ಎನ್ ಅವರ ಮುಖಾಂತರ ತಮಗೆ ಮಾಜಿ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ, ಲೈಂಗಿಕ ಸಂಪರ್ಕ ಮಾಡಿ ಅತ್ಯಾಚಾರ ನಡೆಸಿ ಜೀವ ಬೆದರಿಕೆ ಹಾಕಿದ ಸಂಬಂಧ ದೂರನ್ನು ಸಲ್ಲಿಸಿರುತ್ತೇನೆ.

ಈ ದೂರನ್ನು ತಾವೇ ಸ್ವೀಕರಿಸಿ ನನಗೆ ನ್ಯಾಯ ಕೊಡಿಸುವ ಸಲುವಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿ ಮೊಕದ್ದಮೆ ಸಂಖ್ಯೆ 30/2021ರಲ್ಲಿ ಐಪಿಸಿ 354(A), 506, 504, 376(C), 417 ಹಾಗೂ IT Act 67(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ. ನಂತರ ಪೊಲೀಸರು ವಿಚಾರಣೆಗೆ ಹಾಜರಾಗಿ ಮಾಹಿತಿ ನೀಡುವಂತೆ ಮತ್ತು ಭದ್ರತೆ ಕಲ್ಪಿಸುವಂತೆ ಮಾಹಿತಿ ಒದಗಿಸುವಂತೆ ಪೊಲೀಸ್ ನೋಟಿಸ್ ನೀಡಲಾಗಿರುತ್ತದೆ.

ನಂತರ ನಾನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಮಾಡಲಾಗಿ ನನ್ನ 164 ಹೇಳಿಕೆ ದಾಖಲಿಸಲು ಸೂಕ್ತ ಭದ್ರತೆಯೊಂದಿಗೆ ನ್ಯಾಯಾಲಯದಲ್ಲಿ ಅವಕಾಶ ಮಾಡಿಕೊಟ್ಟ ಕಾರಣ 30-03-2021ರಂದು ನಾನು ನನ್ನ ವಕೀಲರ ಮೂಲಕ ನ್ಯಾಯಾಲಯಕ್ಕೆ ಹಾಜರಾದೆನು. ಹಾಜರಾದ ದಿನ ಎಸ್ಐಟಿ ಮುಖ್ಯಸ್ಥರಾದ ಶ್ರೀ ಸೌಮೇಂದು ಮುಖರ್ಜಿ ಅವರು ನನ್ನನ್ನು ವಿಚಾರಣೆಗಾಗಿ ಆಡುಗೋಡಿ ಟೆಕ್ನಿಕಲ್ ವಿಭಾಗಕ್ಕೆ ಭದ್ರತೆಯೊಂದಿಗೆ ಕರೆದೊಯ್ದರು.

ಅಲ್ಲಿ ಅವರೊಂದಿಗೆ ಎಸ್ಐಟಿ ತಂಡದ ತನಿಖಾಧಿಕಾರಿಗಳಾದ ಶ್ರೀ ಸಂದೀಪ್ ಪಾಟೀಲ್(ಐಪಿಎಸ್), ಹಾಗೂ ಶ್ರೀಮತಿ ಕವಿತಾ (ಎಸಿಪಿ) ಇವರು ನನಗೆ ಪ್ರಕರಣ ಸಂಬಂಧವಾಗಿ ಪ್ರಶ್ನೆಗಳನ್ನು ಕೇಳಿದರು. ನಾನು ಸಂಪೂರ್ಣವಾಗಿ ಎಲ್ಲ ವಿಚಾರಗಳನ್ನು ಅವರಿಗೆ ವಿವರಿಸಿದೆನು. ನಂತರ ದಿನಾಂಕ 31-03-2021ರಂದು ನನಗೆ ವೈದ್ಯಕೀಯ ಪರೀಕ್ಷೆ ನಡೆಸಿ ಅಲ್ಲಿಂದ ಆಡುಗೋಡಿ ಟೆಕ್ನಿಕಲ್ ವಿಭಾಗಕ್ಕೆ ಕರೆದೊಯ್ದು 161 ಹೇಳಿಕೆ ಪಡೆದಿರುವ ಪ್ರಕ್ರಿಯೆ ಪ್ರಾರಂಭಿಸಿದರು.

ನಂತರ ಸಮಯವಾದ ಕಾರಣ 01-04-2021ರಂದು ಬೆಳಗ್ಗೆ ಸ್ಥಲ ಹಾಗೂ ಪಂಚನಾಮೆ ಪ್ರಕ್ರಿಯೆಗೆ ನನ್ನ ಆರ್‌ಟಿ ನಗರ ಪಿಜಿ ಹಾಗೂ ಕೃತ್ಯ ನಡೆದ ರಮೇಶ್ ಜಾರಕಿಹೊಳಿ ಅವರ ಮಂತ್ರಿ ಗ್ರೀನ್ಸ್ ಅಪಾರ್ಟ್ಮೆಂಟ್‌ಗೆ ಕರೆದೊಯ್ಯಲಾಯಿತು.

ಇದೆಲ್ಲಾ ಆದ ನಂತರ 02-04-2021 ರಂದು ನನ್ನ 161 ಹೇಳಿಕೆಯ ಮುಂದುವರಿದ ವಿಚಾರಗಳನ್ನು ದಾಖಲಿಸಿಕೊಳ್ಳಲಾಯಿತು.

ನನಗೆ ಒಟ್ಟಾರೆ ಪ್ರಕ್ರಿಯೆಗಳನ್ನು ನೋಡುತ್ತಿದ್ದರೆ ನಾನು ಸಂತ್ರಸ್ತೆಯೋ ಇಲ್ಲವೋ ಪ್ರಕರಣದ ಆರೋಪಿಯೋ ಎಂದು ಅನುಮಾನ ಮೂಡಿದೆ. ಪ್ರಕರಣದ ಆರೋಪಿಗೆ ಕೇವಲ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿ ಅವರ ವಕೀಲರೊಂದಿಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ಅನುಮತಿ ನೀಡಿದ್ದು ಅವರನ್ನು ಮುಕ್ತವಾಗಿ ಓಡಾಡಿಕೊಂಡು ಇರಲು ಎಸ್ಐಟಿ ತಂಡ ಅವಕಾಶ ಮಾಡಿಕೊಟ್ಟು ನನ್ನನ್ನು ನಿರಂತರವಾಗಿ ಒಂದು ದಿನವೂ ಬಿಡುವು ನೀಡದಂತೆ ಹೇಳಿಕೆಗಳನ್ನು ಪಡೆಯಲಾಗುತ್ತಿದೆ. ನನ್ನ ಹೆಸರು ರಮೇಶ್ ಜಾರಕಿಹೊಳಿ ಅವರು ನೀಡಿದ ದೂರಿನಲ್ಲಿ ಉಲ್ಲೇಖವಾಗದಿದ್ದರೂ ನನ್ನ ಪಿಜಿ ಮೇಲೆ ದಾಳಿ ಮಾಡಿ ಅಲ್ಲಿ ಇರುವ ಸಾಕ್ಷ್ಯಗಳನ್ನು ನಾಶಮಾಡಿ ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಸರ್ಕಾರದ ಒತ್ತಡಕ್ಕೆ ಮಣಿದಿರುತ್ತಾರೆ.

ಈ ಕ್ಷಣದವರೆಗೂ ನನ್ನ ತೇಜೋವಧೆ ಮಾಡುವಂತಾ ಅಸಂಬದ್ಧ ಕಪೋಲ ಕಲ್ಪಿತ ವಿಚಾರಗಳನ್ನು ಮಾಧ್ಯಮಗಳಲ್ಲಿ ವರದಿಯಾಗುವಂತೆ ಮಾಡುವ ಮೂಲಕ ಆರೋಪಿಯ ರಕ್ಷಣೆಗೆ ಮುಂದಾಗಿರುವುದು ಎದ್ದು ಕಾಣುತ್ತಿದೆ.

ನಾನು ಪ್ರಕರಣದ ದೂರುದಾರಳಾಗಿದ್ದು ನನ್ನನ್ನು ಚಾರಿತ್ರ್ಯ ವಧೆ ಮಾಡುವಂತಹ ಷಡ್ಯಂತ್ರವನ್ನು ರಮೇಶ್ ಜಾರಕಿಹೊಳಿ ಮಾಡುತ್ತಿದ್ದು, ಎಸ್ಐಟಿ ಅಧಿಕಾರಿಗಳ ಮೇಲೆ ತೀವ್ರವಾದ ಒತ್ತಡವನ್ನು ಸರ್ಕಾರದಿಂದ ಹಾಕಿಸುತ್ತಿದ್ದಾರೆ. ಪ್ರತಿನಿತ್ಯ ಮಾಧ್ಯಮಗಳಲ್ಲಿ ನಾನು ಅತ್ಯಾಚಾರದ ಸಂತ್ರಸ್ತೆ ಎಂಬುದನ್ನು ಮರೆಮಾಡಲು ಅನೇಕ ಸೃಷ್ಟಿತ ಸುದ್ದಿಗಳನ್ನು ಅವಹೇಳನಕಾರಿಯಾಗಿ ಪ್ರಸಾರ ಮಾಡಲಾಗುತ್ತಿದೆ.

ಈ ಕ್ಷಣದವರೆಗೂ ನನಗೆ ನಾನು ನೀಡಿದ ದೂರಿನ ವಿಚಾರವಾಗಿ ಆರೋಪಿ ವಿರುದ್ಧ ಯಾವುದೇ ಗಂಭೀರ ವಿಚಾರಣೆ ನಡೆಸುತ್ತಿರುವ ಬಗ್ಗೆ ನನಗೆ ವಿಶ್ವಾಸ ಬಂದಿಲ್ಲ. ಇದರ ಜೊತೆಗೆ ಮಾನ್ಯ ಮುಖ್ಯಮಂತ್ರಿಗಳು ರಮೇಶ್ ಜಾರಕಿಹೊಳಿ ಆರೋಪಮುಕ್ತರಾಗಿ ಹೊರಗೆ ಬರುತ್ತಾರೆ ಎಂದು ಹೇಳಿರುವುದು ನನಗೆ ತೀವ್ರ ಆತಂಕ ಉಂಟು ಮಾಡಿದೆ.

ನನ್ನ ಸಹಮತ ಪಡೆಯದೇ ಈ ಪ್ರಕರಣಕ್ಕೆ ಗೃಹ ಇಲಾಖೆ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಿರುವುದಕ್ಕೆ ನನ್ನ ಆಕ್ಷೇಪವಿದೆ. ಇಡೀ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸುತ್ತಿರುವ ಬಗ್ಗೆ ನನಗೆ ನಂಬಿಕೆ ವಿಶ್ವಾಸ ಇಲ್ಲದಂತಾಗಿದೆ. ದಯಮಾಡಿ ತಾವು ನನ್ನ ದೂರನ್ನು ಒಬ್ಬ ಸಂತ್ರಸ್ತ, ಅಸಹಾಯಕ, ಯುವತಿಯ ದೃಷ್ಟಿಯಿಂದ ನೋಡುವ ಮೂಲಕ ಸರ್ಕಾರದ ಒತ್ತಡಗಳಿಗೆ ಮಣಿಯದೇ ಆರೋಪಿಗೆ ಯಾವುದೇ ರಿಯಾಯತಿ ನೀಡದೇ ನ್ಯಾಯ ಸಮ್ಮತವಾಗಿ ವಿಚಾರಣೆ ನಡೆಸಬೇಕೆಂದು ಕಳಕಳಿಯಿಂದ ಪ್ರಾರ್ಥಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ.


ಇದನ್ನೂ ಓದಿ: ಸಿಡಿ ಪ್ರಕರಣ: ರಕ್ಷಣೆ ಕೊಡಿ ಎಂದು ಹೈಕೋರ್ಟ್ ಸಿಜೆಐಗೆ ಪತ್ರ ಬರೆದ ಸಂತ್ರಸ್ತ ಯುವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...