Homeಕರ್ನಾಟಕಸಿಡಿ ಪ್ರಕರಣ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದ ಸಂತ್ರಸ್ತೆ

ಸಿಡಿ ಪ್ರಕರಣ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದ ಸಂತ್ರಸ್ತೆ

’ಮಾನ್ಯ ಮುಖ್ಯಮಂತ್ರಿಗಳು ರಮೇಶ್ ಜಾರಕಿಹೊಳಿ ಆರೋಪಮುಕ್ತರಾಗಿ ಹೊರಗೆ ಬರುತ್ತಾರೆ ಎಂದು ಹೇಳಿರುವುದು ನನಗೆ ತೀವ್ರ ಆತಂಕ ಉಂಟು ಮಾಡಿದೆ’

- Advertisement -
- Advertisement -

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಯುವತಿ, ಸಿಡಿ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ ಅಧಿಕಾರಿಗಳ ಮೇಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಭಾವ ಬೀರುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಅವರನ್ನು ರಕ್ಷಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿ, ಸ್ವತಃ ಸಂತ್ರಸ್ತ ಯುವತಿಯೇ  ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದಿದ್ದಾರೆ.

’ನಾನು ದೂರು ನೀಡಿರುವ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ರಕ್ಷಿಸುವ ಸಲುವಾಗಿ, ನನ್ನ ವಿರುದ್ಧ ಷಡ್ಯಂತ್ರ ಮಾಡಿ, ತನಿಖಾಧಿಕಾರಿಗಳ ಮೇಲೆ ರಾಜಕೀಯ ಪ್ರಭಣಾವ ಬೀರುತ್ತಿದ್ದಾರೆ’ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಅತ್ಯಾಚಾರ ಪ್ರಕರಣವನ್ನು ಎಸ್ಐಟಿ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ತನಿಖೆ ಮಾಡುತ್ತಿಲ್ಲ. ನನಗೆ ಪ್ರತಿಬಾರಿ ನೋಟಿಸ್ ನೀಡಿ ವಿಚಾರಣೆಗೆ ಕರೆಸಲಾಗುತ್ತಿದೆ. ಆರೋಪಿ ಸ್ಥಾನದಲ್ಲಿ ಇರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರನ್ನು ವಿಚಾರಣೆ ಮಾಡುತ್ತಿಲ್ಲ. ಅವರನ್ನು ರಾಜಾರೋಷವಾಗಿ ಓಡಾಡಿಕೊಂಡಿರಲು ಬಿಟ್ಟಿದ್ದಾರೆ. ಒಟ್ಟಾರೆ ಪ್ರಕ್ರಿಯೆಗಳನ್ನು ನೋಡುತ್ತಿದ್ದರೇ, ಈ ಪ್ರಕರಣದಲ್ಲಿ ನಾನು ಸಂತ್ರಸ್ತೆಯೋ ಆರೋಪಿಯೋ ಎಂಬ ಅನುಮಾನ ಮೂಡಿದೆ ಎಂದಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ಸಂತ್ರಸ್ತೆ ಪರ ವಕೀಲ ಜಗದೀಶ್ ವಿರುದ್ಧವೇ ದೂರು ನೀಡಿದ ಎಸ್‌ಐಟಿ!

ಸಂತ್ರಸ್ತ ಯುವತಿ ಬರೆದಿರುವ ಪತ್ರದ ಯಥಾವತ್ತು ಇಲ್ಲಿದೆ.

ವಿಷಯ: ನಾನು ನೀಡಿದ ಅತ್ಯಾಚಾರ ಪ್ರಕರಣದ ದೂರಿನ ವಿಚಾರಣೆಯಲ್ಲಿ ಆರೋಪಿ ರಕ್ಷಿಸುವ ಸಲುವಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಿ ತನಿಖಾಧಿಕಾರಿಗಳ ಮೇಲೆ ರಾಜಕೀಯ ಪ್ರಭಾವ ಬೀರುತ್ತಿರುವ ಬಗ್ಗೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ: 16-03-2021ರಂದು ನನ್ನ ವಕೀಲರಾದ ಶ್ರೀ ಜಗದೀಶ್ ಕೆ ಎನ್ ಅವರ ಮುಖಾಂತರ ತಮಗೆ ಮಾಜಿ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ, ಲೈಂಗಿಕ ಸಂಪರ್ಕ ಮಾಡಿ ಅತ್ಯಾಚಾರ ನಡೆಸಿ ಜೀವ ಬೆದರಿಕೆ ಹಾಕಿದ ಸಂಬಂಧ ದೂರನ್ನು ಸಲ್ಲಿಸಿರುತ್ತೇನೆ.

ಈ ದೂರನ್ನು ತಾವೇ ಸ್ವೀಕರಿಸಿ ನನಗೆ ನ್ಯಾಯ ಕೊಡಿಸುವ ಸಲುವಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿ ಮೊಕದ್ದಮೆ ಸಂಖ್ಯೆ 30/2021ರಲ್ಲಿ ಐಪಿಸಿ 354(A), 506, 504, 376(C), 417 ಹಾಗೂ IT Act 67(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ. ನಂತರ ಪೊಲೀಸರು ವಿಚಾರಣೆಗೆ ಹಾಜರಾಗಿ ಮಾಹಿತಿ ನೀಡುವಂತೆ ಮತ್ತು ಭದ್ರತೆ ಕಲ್ಪಿಸುವಂತೆ ಮಾಹಿತಿ ಒದಗಿಸುವಂತೆ ಪೊಲೀಸ್ ನೋಟಿಸ್ ನೀಡಲಾಗಿರುತ್ತದೆ.

ನಂತರ ನಾನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಮಾಡಲಾಗಿ ನನ್ನ 164 ಹೇಳಿಕೆ ದಾಖಲಿಸಲು ಸೂಕ್ತ ಭದ್ರತೆಯೊಂದಿಗೆ ನ್ಯಾಯಾಲಯದಲ್ಲಿ ಅವಕಾಶ ಮಾಡಿಕೊಟ್ಟ ಕಾರಣ 30-03-2021ರಂದು ನಾನು ನನ್ನ ವಕೀಲರ ಮೂಲಕ ನ್ಯಾಯಾಲಯಕ್ಕೆ ಹಾಜರಾದೆನು. ಹಾಜರಾದ ದಿನ ಎಸ್ಐಟಿ ಮುಖ್ಯಸ್ಥರಾದ ಶ್ರೀ ಸೌಮೇಂದು ಮುಖರ್ಜಿ ಅವರು ನನ್ನನ್ನು ವಿಚಾರಣೆಗಾಗಿ ಆಡುಗೋಡಿ ಟೆಕ್ನಿಕಲ್ ವಿಭಾಗಕ್ಕೆ ಭದ್ರತೆಯೊಂದಿಗೆ ಕರೆದೊಯ್ದರು.

ಅಲ್ಲಿ ಅವರೊಂದಿಗೆ ಎಸ್ಐಟಿ ತಂಡದ ತನಿಖಾಧಿಕಾರಿಗಳಾದ ಶ್ರೀ ಸಂದೀಪ್ ಪಾಟೀಲ್(ಐಪಿಎಸ್), ಹಾಗೂ ಶ್ರೀಮತಿ ಕವಿತಾ (ಎಸಿಪಿ) ಇವರು ನನಗೆ ಪ್ರಕರಣ ಸಂಬಂಧವಾಗಿ ಪ್ರಶ್ನೆಗಳನ್ನು ಕೇಳಿದರು. ನಾನು ಸಂಪೂರ್ಣವಾಗಿ ಎಲ್ಲ ವಿಚಾರಗಳನ್ನು ಅವರಿಗೆ ವಿವರಿಸಿದೆನು. ನಂತರ ದಿನಾಂಕ 31-03-2021ರಂದು ನನಗೆ ವೈದ್ಯಕೀಯ ಪರೀಕ್ಷೆ ನಡೆಸಿ ಅಲ್ಲಿಂದ ಆಡುಗೋಡಿ ಟೆಕ್ನಿಕಲ್ ವಿಭಾಗಕ್ಕೆ ಕರೆದೊಯ್ದು 161 ಹೇಳಿಕೆ ಪಡೆದಿರುವ ಪ್ರಕ್ರಿಯೆ ಪ್ರಾರಂಭಿಸಿದರು.

ನಂತರ ಸಮಯವಾದ ಕಾರಣ 01-04-2021ರಂದು ಬೆಳಗ್ಗೆ ಸ್ಥಲ ಹಾಗೂ ಪಂಚನಾಮೆ ಪ್ರಕ್ರಿಯೆಗೆ ನನ್ನ ಆರ್‌ಟಿ ನಗರ ಪಿಜಿ ಹಾಗೂ ಕೃತ್ಯ ನಡೆದ ರಮೇಶ್ ಜಾರಕಿಹೊಳಿ ಅವರ ಮಂತ್ರಿ ಗ್ರೀನ್ಸ್ ಅಪಾರ್ಟ್ಮೆಂಟ್‌ಗೆ ಕರೆದೊಯ್ಯಲಾಯಿತು.

ಇದೆಲ್ಲಾ ಆದ ನಂತರ 02-04-2021 ರಂದು ನನ್ನ 161 ಹೇಳಿಕೆಯ ಮುಂದುವರಿದ ವಿಚಾರಗಳನ್ನು ದಾಖಲಿಸಿಕೊಳ್ಳಲಾಯಿತು.

ನನಗೆ ಒಟ್ಟಾರೆ ಪ್ರಕ್ರಿಯೆಗಳನ್ನು ನೋಡುತ್ತಿದ್ದರೆ ನಾನು ಸಂತ್ರಸ್ತೆಯೋ ಇಲ್ಲವೋ ಪ್ರಕರಣದ ಆರೋಪಿಯೋ ಎಂದು ಅನುಮಾನ ಮೂಡಿದೆ. ಪ್ರಕರಣದ ಆರೋಪಿಗೆ ಕೇವಲ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿ ಅವರ ವಕೀಲರೊಂದಿಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ಅನುಮತಿ ನೀಡಿದ್ದು ಅವರನ್ನು ಮುಕ್ತವಾಗಿ ಓಡಾಡಿಕೊಂಡು ಇರಲು ಎಸ್ಐಟಿ ತಂಡ ಅವಕಾಶ ಮಾಡಿಕೊಟ್ಟು ನನ್ನನ್ನು ನಿರಂತರವಾಗಿ ಒಂದು ದಿನವೂ ಬಿಡುವು ನೀಡದಂತೆ ಹೇಳಿಕೆಗಳನ್ನು ಪಡೆಯಲಾಗುತ್ತಿದೆ. ನನ್ನ ಹೆಸರು ರಮೇಶ್ ಜಾರಕಿಹೊಳಿ ಅವರು ನೀಡಿದ ದೂರಿನಲ್ಲಿ ಉಲ್ಲೇಖವಾಗದಿದ್ದರೂ ನನ್ನ ಪಿಜಿ ಮೇಲೆ ದಾಳಿ ಮಾಡಿ ಅಲ್ಲಿ ಇರುವ ಸಾಕ್ಷ್ಯಗಳನ್ನು ನಾಶಮಾಡಿ ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಸರ್ಕಾರದ ಒತ್ತಡಕ್ಕೆ ಮಣಿದಿರುತ್ತಾರೆ.

ಈ ಕ್ಷಣದವರೆಗೂ ನನ್ನ ತೇಜೋವಧೆ ಮಾಡುವಂತಾ ಅಸಂಬದ್ಧ ಕಪೋಲ ಕಲ್ಪಿತ ವಿಚಾರಗಳನ್ನು ಮಾಧ್ಯಮಗಳಲ್ಲಿ ವರದಿಯಾಗುವಂತೆ ಮಾಡುವ ಮೂಲಕ ಆರೋಪಿಯ ರಕ್ಷಣೆಗೆ ಮುಂದಾಗಿರುವುದು ಎದ್ದು ಕಾಣುತ್ತಿದೆ.

ನಾನು ಪ್ರಕರಣದ ದೂರುದಾರಳಾಗಿದ್ದು ನನ್ನನ್ನು ಚಾರಿತ್ರ್ಯ ವಧೆ ಮಾಡುವಂತಹ ಷಡ್ಯಂತ್ರವನ್ನು ರಮೇಶ್ ಜಾರಕಿಹೊಳಿ ಮಾಡುತ್ತಿದ್ದು, ಎಸ್ಐಟಿ ಅಧಿಕಾರಿಗಳ ಮೇಲೆ ತೀವ್ರವಾದ ಒತ್ತಡವನ್ನು ಸರ್ಕಾರದಿಂದ ಹಾಕಿಸುತ್ತಿದ್ದಾರೆ. ಪ್ರತಿನಿತ್ಯ ಮಾಧ್ಯಮಗಳಲ್ಲಿ ನಾನು ಅತ್ಯಾಚಾರದ ಸಂತ್ರಸ್ತೆ ಎಂಬುದನ್ನು ಮರೆಮಾಡಲು ಅನೇಕ ಸೃಷ್ಟಿತ ಸುದ್ದಿಗಳನ್ನು ಅವಹೇಳನಕಾರಿಯಾಗಿ ಪ್ರಸಾರ ಮಾಡಲಾಗುತ್ತಿದೆ.

ಈ ಕ್ಷಣದವರೆಗೂ ನನಗೆ ನಾನು ನೀಡಿದ ದೂರಿನ ವಿಚಾರವಾಗಿ ಆರೋಪಿ ವಿರುದ್ಧ ಯಾವುದೇ ಗಂಭೀರ ವಿಚಾರಣೆ ನಡೆಸುತ್ತಿರುವ ಬಗ್ಗೆ ನನಗೆ ವಿಶ್ವಾಸ ಬಂದಿಲ್ಲ. ಇದರ ಜೊತೆಗೆ ಮಾನ್ಯ ಮುಖ್ಯಮಂತ್ರಿಗಳು ರಮೇಶ್ ಜಾರಕಿಹೊಳಿ ಆರೋಪಮುಕ್ತರಾಗಿ ಹೊರಗೆ ಬರುತ್ತಾರೆ ಎಂದು ಹೇಳಿರುವುದು ನನಗೆ ತೀವ್ರ ಆತಂಕ ಉಂಟು ಮಾಡಿದೆ.

ನನ್ನ ಸಹಮತ ಪಡೆಯದೇ ಈ ಪ್ರಕರಣಕ್ಕೆ ಗೃಹ ಇಲಾಖೆ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಿರುವುದಕ್ಕೆ ನನ್ನ ಆಕ್ಷೇಪವಿದೆ. ಇಡೀ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸುತ್ತಿರುವ ಬಗ್ಗೆ ನನಗೆ ನಂಬಿಕೆ ವಿಶ್ವಾಸ ಇಲ್ಲದಂತಾಗಿದೆ. ದಯಮಾಡಿ ತಾವು ನನ್ನ ದೂರನ್ನು ಒಬ್ಬ ಸಂತ್ರಸ್ತ, ಅಸಹಾಯಕ, ಯುವತಿಯ ದೃಷ್ಟಿಯಿಂದ ನೋಡುವ ಮೂಲಕ ಸರ್ಕಾರದ ಒತ್ತಡಗಳಿಗೆ ಮಣಿಯದೇ ಆರೋಪಿಗೆ ಯಾವುದೇ ರಿಯಾಯತಿ ನೀಡದೇ ನ್ಯಾಯ ಸಮ್ಮತವಾಗಿ ವಿಚಾರಣೆ ನಡೆಸಬೇಕೆಂದು ಕಳಕಳಿಯಿಂದ ಪ್ರಾರ್ಥಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ.


ಇದನ್ನೂ ಓದಿ: ಸಿಡಿ ಪ್ರಕರಣ: ರಕ್ಷಣೆ ಕೊಡಿ ಎಂದು ಹೈಕೋರ್ಟ್ ಸಿಜೆಐಗೆ ಪತ್ರ ಬರೆದ ಸಂತ್ರಸ್ತ ಯುವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...