Homeಚಳವಳಿಪ್ರಚಾರಕ್ಕಾಗಿ ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಿದ್ದೆವು: ತಪ್ಪೊಪ್ಪಿಕೊಂಡ ಎಬಿವಿಪಿ ಮುಖಂಡ

ಪ್ರಚಾರಕ್ಕಾಗಿ ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಿದ್ದೆವು: ತಪ್ಪೊಪ್ಪಿಕೊಂಡ ಎಬಿವಿಪಿ ಮುಖಂಡ

ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಲು ಯುವಕರನ್ನು ಒಟ್ಟುಗೂಡಿಸಲು ಕುಲದೀಪ್ ಯಾದವ್ ಸುಮಾರು 50,000 ರೂಪಾಯಿಗಳನ್ನು ಖರ್ಚು ಮಾಡಿದ್ದಾನೆ.

- Advertisement -
- Advertisement -

ರಾಜಸ್ಥಾನದ ಅಲ್ವಾರ್‌ನಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಅವರ ಮೇಲೆ ಶುಕ್ರವಾರ (ಏಪ್ರಿಲ್ 02) ನಡೆದ ದಾಳಿಯನ್ನು ಬಿಟ್ಟಿ ಪ್ರಚಾರ ಪಡೆಯಲು ನಡೆಸಿದ್ದಾಗಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವಿದ್ಯಾರ್ಥಿ ಮುಖಂಡ ಕುಲದೀಪ್ ಯಾದವ್ ತಪ್ಪೊಪ್ಪಿಕೊಂಡಿದ್ದಾನೆ.

ರಾಕೇಶ್ ಟಿಕಾಯತ್ ಬೆಂಗಾವಲು ವಾಹನದ ಮೇಲಿನ ದಾಳಿಗೆ ಸಂಬಂಧಿಸಿದಂತೆ ಅಲ್ವಾರ್ ಪೊಲೀಸರ ಬಂಧನದಲ್ಲಿರುವ ಎಬಿವಿಪಿ ವಿದ್ಯಾರ್ಥಿ ಮುಖಂಡ ಕುಲದೀಪ್ ಯಾದವ್, ವಿಚಾರಣೆ ವೇಳೆ ಈ ತಪ್ಪೊಪ್ಪಿಗೆಯನ್ನು ನೀಡಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೇಸ್ ವರದಿ ಮಾಡಿದೆ.

ಕುಲದೀಪ್ ಯಾದವ್ ಸ್ವತಂತ್ರ ಅಭ್ಯರ್ಥಿಯಾಗಿ 2019 ರಲ್ಲಿ ಅಲ್ವಾರ್ ಮೂಲದ ಮತ್ಸ್ಯ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಾಯಕರಾಗಿದ್ದರು. ನಂತರ ಎಬಿವಿಪಿಗೆ ಸೇರಿದ್ದಾರೆ. ಆದರೆ, ಆತನ ಬಿಎ ಪದವಿ ನಕಲಿ ಎಂಬುದು ತಿಳಿದ ನಂತರ, ಆಯ್ಕೆಯಾದ ಕೆಲವೇ ದಿನಗಳಲ್ಲಿ ಆತ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಆತ ಆಯೋಜಿಸುತ್ತಿದ್ದ ಹಲವು ಕಾರ್ಯಕ್ರಮಗಳಲ್ಲಿ ಬಿಜೆಪಿಯ ಹಿರಿಯ ಮುಖಂಡರು ಹಾಜರಾಗುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಬಿಜೆಪಿ ಬೆಂಬಲಿಗರ ಹಲ್ಲೆ- ಆರೋಪ

ಬಂಧಿತ ಆರೋಪಿಗಳು (PC: EPS)

ಕಳೆದ ಶುಕ್ರವಾರ ರಾಕೇಶ್ ಟಿಕಾಯತ್ ಅವರ ಬೆಂಗಾವಲು ವಾಹನ ಹರ್ಸೋರಾ ಗ್ರಾಮದಿಂದ ಬನ್ಸೂರ್‌ಗೆ ತೆರಳುತ್ತಿದ್ದಾಗ, ತತಾರ್ಪುರ್ ಗ್ರಾಮದಲ್ಲಿ ಎಬಿವಿಪಿ ಮುಖಂಡ ಕುಲದೀಪ್ ಯಾದವ್ ತನ್ನ ಬೆಂಬಲಿಗರೊಂದಿಗೆ ಕಪ್ಪು ಧ್ವಜಗಳನ್ನು ತೋರಿಸಿದ್ದರು.

ರೈತ ನಾಯಕರನ್ನು ಸ್ವಾಗತಿಸುವ ನೆಪದಲ್ಲಿ ಅವರ ಕಾರುಗಳನ್ನು ತಡೆದು ಕಲ್ಲುತೂರಾಟ ನಡೆಸಿದ್ದರು. ಟಿಕಾಯತ್ ಅವರ ಕಾರಿನ ಕಿಟಕಿಗೆ ಹಾನಿಯಾಗಿತ್ತು ಜೊತೆಗೆ ಕಪ್ಪು ಮಸಿ ಬಳಿಯಲಾಗಿತ್ತು ಎಂದು 33 ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ದಾಳಿ ಆರೋಪದ ಮೇಲೆ ಈವರೆಗೆ 16 ಜನರನ್ನು ಬಂಧಿಸಲಾಗಿದೆ. ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಲು ಯುವಕರನ್ನು ಒಟ್ಟುಗೂಡಿಸಲು ಕುಲದೀಪ್ ಯಾದವ್ ಸುಮಾರು 50,000 ರೂಪಾಯಿಗಳನ್ನು ಖರ್ಚು ಮಾಡಿದ್ದಾನೆ ಎಂದು ಪೊಲೀಸರ ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ: ದಾಳಿ ಕುರಿತು ರಾಕೇಶ್ ಟಿಕಾಯತ್ ಪ್ರತಿಕ್ರಿಯೆ

ಬಂಧಿತ ವಿದ್ಯಾರ್ಥಿ ನಾಯಕನೊಂದಿಗಿನ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ನಿರಾಕರಿಸಿದ್ದರೂ, ಕುಲದೀಪ್ ಯಾದವ್ ಜೊತೆಗೆ ಇರುವ ಹಿರಿಯ ಬಿಜೆಪಿ ನಾಯಕರ ಚಿತ್ರಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಆರೋಪಿ ಕುಲದೀಪ್ ಯಾದವ್ ಅವರೊಂದಿಗೆ ಕಾಣಿಸಿಕೊಂಡವರಲ್ಲಿ ರಾಜಸ್ಥಾನ ರಾಜ್ಯ ಬಿಜೆಪಿ ಮುಖ್ಯಸ್ಥ ಸತೀಶ್ ಪೂನಿಯಾ, ಅಲ್ವಾರ್ ಸಂಸದ ಬಾಬಾ ಬಾಲಕನಾಥ್ ಮತ್ತು ಎಬಿವಿಪಿ ರಾಜ್ಯ ಕಾರ್ಯದರ್ಶಿ ಹೋಶಿಯಾರ್ ಮೀನಾ ಸೇರಿದ್ದಾರೆ.

ರಾಕೇಶ್ ಟಿಕಾಯತ್ ಬೆಂಗಾವಲು ವಾಹನದ ಮೇಲಿನ ದಾಳಿಯನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಖಂಡಿಸಿದ್ದರು. ಎಬಿವಿಪಿ ನಾಯಕ ಕುಲದೀಪ್ ಯಾದವ್ ಆರೋಪಿ ಎಂಬುದನ್ನು ಖಚಿತಪಡಿಸಿದವರಲ್ಲಿ ಪತ್ರಕರ್ತ ಮಂದೀಪ್ ಪುನೀಯಾ ಮೊದಲಿಗರಾಗಿದ್ದರು.

ಹಲ್ಲೆ ನಡೆದ ದಿನವೇ ಕುಲ್‌ದೀಪ್ ಯಾದವ್, ಎಬಿವಿಪಿ ಸದಸ್ಯನಾಗಿದ್ದು, ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದಾನೆ. ಇವನ ಕಾರನ್ನು ರಾಕೇಶ್ ಟಿಕಾಯತ್ ಮೇಲೆ ನಡೆದ ಹಲ್ಲೆಯಲ್ಲಿ ಬಳಸಲಾಗಿದೆ ಎಂಬುದನ್ನು ಪತ್ರಕರ್ತ ಮಂದೀಪ್ ಪುನಿಯಾ ಸಾಕ್ಷಿಗಳ ಸಮೇತ ವಿವರಿಸಿದ್ದರು.


ಇದನ್ನೂ ಓದಿ: ಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...