Homeಮುಖಪುಟಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

ಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

- Advertisement -
- Advertisement -

“ಈತ ದೇವರಲ್ಲ, ಈತ 1918ರಲ್ಲಿಯೇ ಮರಣ ಹೊಂದಿದ್ದಾನೆ. ಈತ ಮುಸ್ಲಿಂ ಆಗಿದ್ದು, ಮುಲ್ಲಾ ಇವನು” ಎಂದು ಹೇಳುತ್ತಾ ದೇವಸ್ಥಾನವೊಂದರಲ್ಲಿನ ಶಿರಡಿ ಸಾಯಿಬಾಬಾರ ಮೂರ್ತಿಯನ್ನು ಹಾರೆ ಮತ್ತು ಸುತ್ತಿಗೆಗಳಿಂದ ಧ್ವಂಸಗೈಯುವ ವಿಡಿಯೋವೊಂದು ಕಳೆದ ಹಲವು ದಿನಗಳಿಂದ ವೈರಲ್ ಆಗುತ್ತಿದೆ.

ದಕ್ಷಿಣ ದೆಹಲಿಯ ಶಾಹ್‌ಪುರ ಜಾತ್‌ನಲ್ಲಿ ಪುರಾನ ಶಿವ ಮಂದಿರ್‌ ದೇವಾಲಯದಲ್ಲಿನ ಶಿರಡಿ ಸಾಯಿಬಾಬಾ ಮೂರ್ತಿಯನ್ನು ಮಾರ್ಚ್ 25 ರಂದು ಧ್ವಂಸಗೊಳಿಸಿ ಅದೇ ಸ್ಥಳದಲ್ಲಿ ಗಣಪತಿ ವಿಗ್ರಹ ಸ್ಥಾಪಿಸಲಾಗಿದೆ ಎನ್ನಲಾಗಿದ್ದು, ಈ ಕುರಿತು ಅಲ್ಲಿನ ಭಕ್ತರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಈ ಪ್ರಕರಣದಿಂದ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಶಾಹ್‌ಪುರ ಜಾತ್‌ನ ಹಲವಾರು ಭಕ್ತರು ದೂರು ನೀಡಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ದೆಹಲಿ ದಕ್ಷಿಣ ಡಿಸಿಪಿ ಅತುಲ್ ಕುಮಾರ್ ಠಾಕೂರ್ ತಿಳಿಸಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಿಂದೂಗಳ ಆಧ್ಯಾತ್ಮಿಕ ದೇವರಾದ ಶಿರಡಿ ಸಾಯಿಬಾಬಾ ವಿಗ್ರಹವನ್ನು ನಿಕೃಷ್ಟವಾಗಿ ಧ್ವಂಸ ಮಾಡುತ್ತಿರುವ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಲ್ಪಡುತ್ತಿವೆ. ಘಟನೆಯಲ್ಲಿ ಭಾಗಿಯಾದ ಆರೋಪಿಗಳು ಪ್ರಚೋದನಾಕಾರಿ ಭಾಷಣಕ್ಕೆ ಕುಖ್ಯಾತಿಯಾದ ಮತ್ತು ದೆಹಲಿ ಗಲಭೆಯ ಪಿತೂರಿಗಾರ ಎಂದು ಆರೋಪಿಸಲ್ಪಟ್ಟಿರುವ ಯತಿ ನರಸಿಂಗಾನಂದರ ಜೊತೆ ಇರುವ ಫೋಟೊಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಅಲ್ಲದೇ ವಿಗ್ರಹ ಧ್ವಂಸಗೈದವರನ್ನು ಅಭಿನಂದಿಸಿರುವ ಯತಿ ನರಸಿಂಗಾನಂದ್, “ಪಾಖಂಡಿ ಸಾಯಿಯಂತಹ ಜಿಹಾದಿಗಳನ್ನು ದೇವಾಲಯದೊಳಕ್ಕೆ ಬಿಟ್ಟುಕೊಳ್ಳಬಾರದು” ಎಂದು ಹೇಳುತ್ತಿರುವ ವಿಡಿಯೋ ಸಹ ಹೊರಬಂದಿದೆ. ನಂತರ ಸ್ಕ್ರೋಲ್.ಇನ್ ಜೊತೆ ಮಾತನಾಡಿದ ಅವರು, “ಸಾಯಿಬಾಬಾ ಒರ್ವ ಪಿಂಡಾರಿ ಲೂಟೇರಾ, ಆತನ ಹೆಸರು ಚಾಂದ್ ಖಾನ್ ಎಂಬುದಾಗಿತ್ತು. ಆತ ಜಿಹಾದಿ, ಆತನ ವಿಗ್ರಹ ದೇವಾಲಯದೊಳಗೆ ಇಟ್ಟಿರುವವರಿಗೆ ಹುಚ್ಚು ಹಿಡಿದಿದೆ” ಎಂದು ಹೇಳಿದ್ದಾರೆ.

ವಿಗ್ರಹ ಧ್ವಂಸಗೊಳಿಸುವ ನೇತೃತ್ವ ವಹಿಸಿದ್ದ ವ್ಯಕ್ತಿಯನ್ನು ದೇವಾಲಯ ಸಮಿತಿಯ ಸದಸ್ಯ ಪದಮ್ ಪನ್ವಾರ್ ಎಂದು ಸ್ಥಳೀಯರು ಗುರುತಿಸಿದ್ದಾರೆ. ಅವರು “ವಿಗ್ರಹವು ಹಳೆಯದಾಗಿದ್ದರಿಂದ ಅದನ್ನು ತೆಗೆಯಲಾಯಿತು. ಹಳೆಯ ವಿಗ್ರಹಗಳನ್ನು ತೆಗೆಯುವುದು ಹಿಂದೂ ಧರ್ಮದಲ್ಲಿ ಒಂದು ಸಂಪ್ರದಾಯವಾಗಿದೆ. ದೇವಾಲಯವನ್ನು ಪುನರ್ನಿರ್ಮಾಣ ಮಾಡಲಾಗುತ್ತಿದೆ. ಹೊಸ ದೇವಾಲಯ ಸಿದ್ಧವಾದ ನಂತರ, ನಾವು ಸಭೆ ನಡೆಸಿ ಹೊಸ ಸಾಯಿಬಾಬಾ ವಿಗ್ರಹವನ್ನು ಸ್ಥಾಪಿಸಲಾಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದಿದ್ದಾರೆ.

ವಿಡಿಯೋದಲ್ಲಿ ತಮ್ಮ ಅವಾಚ್ಯ ಬೈಗಳಗಳ ಬಗ್ಗೆ ಪ್ರಶ್ನಿಸಿದಾಗ “ನಾನು ಆ ರೀತಿಯ ಏನನ್ನೂ ಹೇಳಲಿಲ್ಲ. ಆ ರೀತಿಯ ಯಾವುದೇ ವಿಡಿಯೋ ಇದ್ದರೆ ಅದು ನಕಲಿ” ಎಂದು ಅವರು ಜಾರಿಕೊಂಡಿದ್ದಾರೆ.

ಆದರೆ ಸ್ಥಳೀಯ ಕೆಲವು ಭಕ್ತರು ಮಾರ್ಚ್ 31 ರಂದು ಸಲ್ಲಿಸಿದ ದೂರಿನಲ್ಲಿ “ಕೆಲವು ಜನರು ಬಂದು ಶ್ರೀ ಸಾಯಿಬಾಬಾರವರ ವಿಗ್ರಹವನ್ನು ಮುರಿದು ಹಾಕಿದರು. ಸಾಯಿಬಾಬಾ ಹಿಂದೂ ದೇವರಲ್ಲ, ಅವರು ಮುಸ್ಲಿಮರಿಗೆ ಸೇರಿದವರಾಗಿರುವುದರಿಂದ ವಿಗ್ರಹವನ್ನು ತೆಗೆಯಬೇಕು ಎಂದು ಹೇಳಿದರು. ಇದು ಸಾಯಿಬಾಬಾ ಅವರನ್ನು ನಂಬುವ ಜನರ ಭಾವನೆಗಳಿಗೆ ನೋವುಂಟು ಮಾಡುವ ಕಾರಣ ಈ ಘೋರ ಅಪರಾಧ ನಡೆಸಿದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ವಿನಂತಿಸುತ್ತೇವೆ. ಸಾಯಿಬಾಬಾ ವಿಗ್ರಹವನ್ನು ಅದೇ ದೇವಾಲಯದ ಆವರಣದಲ್ಲಿ ಸಾಧ್ಯವಾದಷ್ಟು ಬೇಗ ಪುನಃಸ್ಥಾಪಿಸಲು ನಾವು ವಿನಂತಿಸುತ್ತೇವೆ” ಎಂದು ಬರೆಯಲಾಗಿದೆ.


ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...