Homeಮುಖಪುಟಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

ಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

- Advertisement -
- Advertisement -

“ಈತ ದೇವರಲ್ಲ, ಈತ 1918ರಲ್ಲಿಯೇ ಮರಣ ಹೊಂದಿದ್ದಾನೆ. ಈತ ಮುಸ್ಲಿಂ ಆಗಿದ್ದು, ಮುಲ್ಲಾ ಇವನು” ಎಂದು ಹೇಳುತ್ತಾ ದೇವಸ್ಥಾನವೊಂದರಲ್ಲಿನ ಶಿರಡಿ ಸಾಯಿಬಾಬಾರ ಮೂರ್ತಿಯನ್ನು ಹಾರೆ ಮತ್ತು ಸುತ್ತಿಗೆಗಳಿಂದ ಧ್ವಂಸಗೈಯುವ ವಿಡಿಯೋವೊಂದು ಕಳೆದ ಹಲವು ದಿನಗಳಿಂದ ವೈರಲ್ ಆಗುತ್ತಿದೆ.

ದಕ್ಷಿಣ ದೆಹಲಿಯ ಶಾಹ್‌ಪುರ ಜಾತ್‌ನಲ್ಲಿ ಪುರಾನ ಶಿವ ಮಂದಿರ್‌ ದೇವಾಲಯದಲ್ಲಿನ ಶಿರಡಿ ಸಾಯಿಬಾಬಾ ಮೂರ್ತಿಯನ್ನು ಮಾರ್ಚ್ 25 ರಂದು ಧ್ವಂಸಗೊಳಿಸಿ ಅದೇ ಸ್ಥಳದಲ್ಲಿ ಗಣಪತಿ ವಿಗ್ರಹ ಸ್ಥಾಪಿಸಲಾಗಿದೆ ಎನ್ನಲಾಗಿದ್ದು, ಈ ಕುರಿತು ಅಲ್ಲಿನ ಭಕ್ತರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಈ ಪ್ರಕರಣದಿಂದ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಶಾಹ್‌ಪುರ ಜಾತ್‌ನ ಹಲವಾರು ಭಕ್ತರು ದೂರು ನೀಡಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ದೆಹಲಿ ದಕ್ಷಿಣ ಡಿಸಿಪಿ ಅತುಲ್ ಕುಮಾರ್ ಠಾಕೂರ್ ತಿಳಿಸಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಿಂದೂಗಳ ಆಧ್ಯಾತ್ಮಿಕ ದೇವರಾದ ಶಿರಡಿ ಸಾಯಿಬಾಬಾ ವಿಗ್ರಹವನ್ನು ನಿಕೃಷ್ಟವಾಗಿ ಧ್ವಂಸ ಮಾಡುತ್ತಿರುವ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಲ್ಪಡುತ್ತಿವೆ. ಘಟನೆಯಲ್ಲಿ ಭಾಗಿಯಾದ ಆರೋಪಿಗಳು ಪ್ರಚೋದನಾಕಾರಿ ಭಾಷಣಕ್ಕೆ ಕುಖ್ಯಾತಿಯಾದ ಮತ್ತು ದೆಹಲಿ ಗಲಭೆಯ ಪಿತೂರಿಗಾರ ಎಂದು ಆರೋಪಿಸಲ್ಪಟ್ಟಿರುವ ಯತಿ ನರಸಿಂಗಾನಂದರ ಜೊತೆ ಇರುವ ಫೋಟೊಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಅಲ್ಲದೇ ವಿಗ್ರಹ ಧ್ವಂಸಗೈದವರನ್ನು ಅಭಿನಂದಿಸಿರುವ ಯತಿ ನರಸಿಂಗಾನಂದ್, “ಪಾಖಂಡಿ ಸಾಯಿಯಂತಹ ಜಿಹಾದಿಗಳನ್ನು ದೇವಾಲಯದೊಳಕ್ಕೆ ಬಿಟ್ಟುಕೊಳ್ಳಬಾರದು” ಎಂದು ಹೇಳುತ್ತಿರುವ ವಿಡಿಯೋ ಸಹ ಹೊರಬಂದಿದೆ. ನಂತರ ಸ್ಕ್ರೋಲ್.ಇನ್ ಜೊತೆ ಮಾತನಾಡಿದ ಅವರು, “ಸಾಯಿಬಾಬಾ ಒರ್ವ ಪಿಂಡಾರಿ ಲೂಟೇರಾ, ಆತನ ಹೆಸರು ಚಾಂದ್ ಖಾನ್ ಎಂಬುದಾಗಿತ್ತು. ಆತ ಜಿಹಾದಿ, ಆತನ ವಿಗ್ರಹ ದೇವಾಲಯದೊಳಗೆ ಇಟ್ಟಿರುವವರಿಗೆ ಹುಚ್ಚು ಹಿಡಿದಿದೆ” ಎಂದು ಹೇಳಿದ್ದಾರೆ.

ವಿಗ್ರಹ ಧ್ವಂಸಗೊಳಿಸುವ ನೇತೃತ್ವ ವಹಿಸಿದ್ದ ವ್ಯಕ್ತಿಯನ್ನು ದೇವಾಲಯ ಸಮಿತಿಯ ಸದಸ್ಯ ಪದಮ್ ಪನ್ವಾರ್ ಎಂದು ಸ್ಥಳೀಯರು ಗುರುತಿಸಿದ್ದಾರೆ. ಅವರು “ವಿಗ್ರಹವು ಹಳೆಯದಾಗಿದ್ದರಿಂದ ಅದನ್ನು ತೆಗೆಯಲಾಯಿತು. ಹಳೆಯ ವಿಗ್ರಹಗಳನ್ನು ತೆಗೆಯುವುದು ಹಿಂದೂ ಧರ್ಮದಲ್ಲಿ ಒಂದು ಸಂಪ್ರದಾಯವಾಗಿದೆ. ದೇವಾಲಯವನ್ನು ಪುನರ್ನಿರ್ಮಾಣ ಮಾಡಲಾಗುತ್ತಿದೆ. ಹೊಸ ದೇವಾಲಯ ಸಿದ್ಧವಾದ ನಂತರ, ನಾವು ಸಭೆ ನಡೆಸಿ ಹೊಸ ಸಾಯಿಬಾಬಾ ವಿಗ್ರಹವನ್ನು ಸ್ಥಾಪಿಸಲಾಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದಿದ್ದಾರೆ.

ವಿಡಿಯೋದಲ್ಲಿ ತಮ್ಮ ಅವಾಚ್ಯ ಬೈಗಳಗಳ ಬಗ್ಗೆ ಪ್ರಶ್ನಿಸಿದಾಗ “ನಾನು ಆ ರೀತಿಯ ಏನನ್ನೂ ಹೇಳಲಿಲ್ಲ. ಆ ರೀತಿಯ ಯಾವುದೇ ವಿಡಿಯೋ ಇದ್ದರೆ ಅದು ನಕಲಿ” ಎಂದು ಅವರು ಜಾರಿಕೊಂಡಿದ್ದಾರೆ.

ಆದರೆ ಸ್ಥಳೀಯ ಕೆಲವು ಭಕ್ತರು ಮಾರ್ಚ್ 31 ರಂದು ಸಲ್ಲಿಸಿದ ದೂರಿನಲ್ಲಿ “ಕೆಲವು ಜನರು ಬಂದು ಶ್ರೀ ಸಾಯಿಬಾಬಾರವರ ವಿಗ್ರಹವನ್ನು ಮುರಿದು ಹಾಕಿದರು. ಸಾಯಿಬಾಬಾ ಹಿಂದೂ ದೇವರಲ್ಲ, ಅವರು ಮುಸ್ಲಿಮರಿಗೆ ಸೇರಿದವರಾಗಿರುವುದರಿಂದ ವಿಗ್ರಹವನ್ನು ತೆಗೆಯಬೇಕು ಎಂದು ಹೇಳಿದರು. ಇದು ಸಾಯಿಬಾಬಾ ಅವರನ್ನು ನಂಬುವ ಜನರ ಭಾವನೆಗಳಿಗೆ ನೋವುಂಟು ಮಾಡುವ ಕಾರಣ ಈ ಘೋರ ಅಪರಾಧ ನಡೆಸಿದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ವಿನಂತಿಸುತ್ತೇವೆ. ಸಾಯಿಬಾಬಾ ವಿಗ್ರಹವನ್ನು ಅದೇ ದೇವಾಲಯದ ಆವರಣದಲ್ಲಿ ಸಾಧ್ಯವಾದಷ್ಟು ಬೇಗ ಪುನಃಸ್ಥಾಪಿಸಲು ನಾವು ವಿನಂತಿಸುತ್ತೇವೆ” ಎಂದು ಬರೆಯಲಾಗಿದೆ.


ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...