Homeಮುಖಪುಟಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

ಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

- Advertisement -
- Advertisement -

“ಈತ ದೇವರಲ್ಲ, ಈತ 1918ರಲ್ಲಿಯೇ ಮರಣ ಹೊಂದಿದ್ದಾನೆ. ಈತ ಮುಸ್ಲಿಂ ಆಗಿದ್ದು, ಮುಲ್ಲಾ ಇವನು” ಎಂದು ಹೇಳುತ್ತಾ ದೇವಸ್ಥಾನವೊಂದರಲ್ಲಿನ ಶಿರಡಿ ಸಾಯಿಬಾಬಾರ ಮೂರ್ತಿಯನ್ನು ಹಾರೆ ಮತ್ತು ಸುತ್ತಿಗೆಗಳಿಂದ ಧ್ವಂಸಗೈಯುವ ವಿಡಿಯೋವೊಂದು ಕಳೆದ ಹಲವು ದಿನಗಳಿಂದ ವೈರಲ್ ಆಗುತ್ತಿದೆ.

ದಕ್ಷಿಣ ದೆಹಲಿಯ ಶಾಹ್‌ಪುರ ಜಾತ್‌ನಲ್ಲಿ ಪುರಾನ ಶಿವ ಮಂದಿರ್‌ ದೇವಾಲಯದಲ್ಲಿನ ಶಿರಡಿ ಸಾಯಿಬಾಬಾ ಮೂರ್ತಿಯನ್ನು ಮಾರ್ಚ್ 25 ರಂದು ಧ್ವಂಸಗೊಳಿಸಿ ಅದೇ ಸ್ಥಳದಲ್ಲಿ ಗಣಪತಿ ವಿಗ್ರಹ ಸ್ಥಾಪಿಸಲಾಗಿದೆ ಎನ್ನಲಾಗಿದ್ದು, ಈ ಕುರಿತು ಅಲ್ಲಿನ ಭಕ್ತರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಈ ಪ್ರಕರಣದಿಂದ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಶಾಹ್‌ಪುರ ಜಾತ್‌ನ ಹಲವಾರು ಭಕ್ತರು ದೂರು ನೀಡಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ದೆಹಲಿ ದಕ್ಷಿಣ ಡಿಸಿಪಿ ಅತುಲ್ ಕುಮಾರ್ ಠಾಕೂರ್ ತಿಳಿಸಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಿಂದೂಗಳ ಆಧ್ಯಾತ್ಮಿಕ ದೇವರಾದ ಶಿರಡಿ ಸಾಯಿಬಾಬಾ ವಿಗ್ರಹವನ್ನು ನಿಕೃಷ್ಟವಾಗಿ ಧ್ವಂಸ ಮಾಡುತ್ತಿರುವ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಲ್ಪಡುತ್ತಿವೆ. ಘಟನೆಯಲ್ಲಿ ಭಾಗಿಯಾದ ಆರೋಪಿಗಳು ಪ್ರಚೋದನಾಕಾರಿ ಭಾಷಣಕ್ಕೆ ಕುಖ್ಯಾತಿಯಾದ ಮತ್ತು ದೆಹಲಿ ಗಲಭೆಯ ಪಿತೂರಿಗಾರ ಎಂದು ಆರೋಪಿಸಲ್ಪಟ್ಟಿರುವ ಯತಿ ನರಸಿಂಗಾನಂದರ ಜೊತೆ ಇರುವ ಫೋಟೊಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಅಲ್ಲದೇ ವಿಗ್ರಹ ಧ್ವಂಸಗೈದವರನ್ನು ಅಭಿನಂದಿಸಿರುವ ಯತಿ ನರಸಿಂಗಾನಂದ್, “ಪಾಖಂಡಿ ಸಾಯಿಯಂತಹ ಜಿಹಾದಿಗಳನ್ನು ದೇವಾಲಯದೊಳಕ್ಕೆ ಬಿಟ್ಟುಕೊಳ್ಳಬಾರದು” ಎಂದು ಹೇಳುತ್ತಿರುವ ವಿಡಿಯೋ ಸಹ ಹೊರಬಂದಿದೆ. ನಂತರ ಸ್ಕ್ರೋಲ್.ಇನ್ ಜೊತೆ ಮಾತನಾಡಿದ ಅವರು, “ಸಾಯಿಬಾಬಾ ಒರ್ವ ಪಿಂಡಾರಿ ಲೂಟೇರಾ, ಆತನ ಹೆಸರು ಚಾಂದ್ ಖಾನ್ ಎಂಬುದಾಗಿತ್ತು. ಆತ ಜಿಹಾದಿ, ಆತನ ವಿಗ್ರಹ ದೇವಾಲಯದೊಳಗೆ ಇಟ್ಟಿರುವವರಿಗೆ ಹುಚ್ಚು ಹಿಡಿದಿದೆ” ಎಂದು ಹೇಳಿದ್ದಾರೆ.

ವಿಗ್ರಹ ಧ್ವಂಸಗೊಳಿಸುವ ನೇತೃತ್ವ ವಹಿಸಿದ್ದ ವ್ಯಕ್ತಿಯನ್ನು ದೇವಾಲಯ ಸಮಿತಿಯ ಸದಸ್ಯ ಪದಮ್ ಪನ್ವಾರ್ ಎಂದು ಸ್ಥಳೀಯರು ಗುರುತಿಸಿದ್ದಾರೆ. ಅವರು “ವಿಗ್ರಹವು ಹಳೆಯದಾಗಿದ್ದರಿಂದ ಅದನ್ನು ತೆಗೆಯಲಾಯಿತು. ಹಳೆಯ ವಿಗ್ರಹಗಳನ್ನು ತೆಗೆಯುವುದು ಹಿಂದೂ ಧರ್ಮದಲ್ಲಿ ಒಂದು ಸಂಪ್ರದಾಯವಾಗಿದೆ. ದೇವಾಲಯವನ್ನು ಪುನರ್ನಿರ್ಮಾಣ ಮಾಡಲಾಗುತ್ತಿದೆ. ಹೊಸ ದೇವಾಲಯ ಸಿದ್ಧವಾದ ನಂತರ, ನಾವು ಸಭೆ ನಡೆಸಿ ಹೊಸ ಸಾಯಿಬಾಬಾ ವಿಗ್ರಹವನ್ನು ಸ್ಥಾಪಿಸಲಾಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದಿದ್ದಾರೆ.

ವಿಡಿಯೋದಲ್ಲಿ ತಮ್ಮ ಅವಾಚ್ಯ ಬೈಗಳಗಳ ಬಗ್ಗೆ ಪ್ರಶ್ನಿಸಿದಾಗ “ನಾನು ಆ ರೀತಿಯ ಏನನ್ನೂ ಹೇಳಲಿಲ್ಲ. ಆ ರೀತಿಯ ಯಾವುದೇ ವಿಡಿಯೋ ಇದ್ದರೆ ಅದು ನಕಲಿ” ಎಂದು ಅವರು ಜಾರಿಕೊಂಡಿದ್ದಾರೆ.

ಆದರೆ ಸ್ಥಳೀಯ ಕೆಲವು ಭಕ್ತರು ಮಾರ್ಚ್ 31 ರಂದು ಸಲ್ಲಿಸಿದ ದೂರಿನಲ್ಲಿ “ಕೆಲವು ಜನರು ಬಂದು ಶ್ರೀ ಸಾಯಿಬಾಬಾರವರ ವಿಗ್ರಹವನ್ನು ಮುರಿದು ಹಾಕಿದರು. ಸಾಯಿಬಾಬಾ ಹಿಂದೂ ದೇವರಲ್ಲ, ಅವರು ಮುಸ್ಲಿಮರಿಗೆ ಸೇರಿದವರಾಗಿರುವುದರಿಂದ ವಿಗ್ರಹವನ್ನು ತೆಗೆಯಬೇಕು ಎಂದು ಹೇಳಿದರು. ಇದು ಸಾಯಿಬಾಬಾ ಅವರನ್ನು ನಂಬುವ ಜನರ ಭಾವನೆಗಳಿಗೆ ನೋವುಂಟು ಮಾಡುವ ಕಾರಣ ಈ ಘೋರ ಅಪರಾಧ ನಡೆಸಿದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ವಿನಂತಿಸುತ್ತೇವೆ. ಸಾಯಿಬಾಬಾ ವಿಗ್ರಹವನ್ನು ಅದೇ ದೇವಾಲಯದ ಆವರಣದಲ್ಲಿ ಸಾಧ್ಯವಾದಷ್ಟು ಬೇಗ ಪುನಃಸ್ಥಾಪಿಸಲು ನಾವು ವಿನಂತಿಸುತ್ತೇವೆ” ಎಂದು ಬರೆಯಲಾಗಿದೆ.


ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...