Homeಕರ್ನಾಟಕಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

ಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

'ಒಟ್ಟಿನಲ್ಲಿ ಕ್ರಾಂತಿಯಾಗಬೇಕು' ಎಂಬ ಟ್ಯಾಗ್‌ಲೈನ್‌ನೊಂದಿಗೆ ಗುರುತಿಸಿಕೊಂಡಿರುವ, ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಕರ್ನಾಟಕ ಕ್ರಾಂತಿಕಾರಿ ಪಡೆಯ ಕಿರುಪರಿಚಯ..

- Advertisement -
- Advertisement -

ಇವತ್ತು ‘ಹೆಂಗ್ ಪುಂಗ್‌ ಲೀ’ ಅನ್ನೋದು ಚಕ್ರವರ್ತಿ ಸೂಲಿಬೆಲೆಯವರ ಹೆಸರಿಗೆ ಸಮನಾರ್ಥಕನಾಮವಾಗಿ ಬಳಸುವಷ್ಟು ಪ್ರಸಿದ್ದವಾಗಿದೆ. ಕರ್ನಾಟಕದಲ್ಲಿ ಸುಳ್ಳು ಹೇಳುವವರಿಗೆ ಅನ್ವರ್ಥನಾಮವಾಗಿ ಈ ಪದವನ್ನು ಬಳಸಲಾಗುತ್ತಿದೆ. ಇಷ್ಟು ಸಹಜವಾಗಿ ಬಳಕೆಯಾಗುತ್ತಿರುವ ಈ ಪದದ ಸೃಷ್ಟಿಕರ್ತರು ಮತ್ತು ಮೊದಲು ಬಳಸಿದ್ದು ಕರ್ನಾಟಕ ಕ್ರಾಂತಿಕಾರಿ ಪಡೆ.

ಹೌದು, ‘ಒಟ್ಟಿನಲ್ಲಿ ಕ್ರಾಂತಿಯಾಗಬೇಕು’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಗುರುತಿಸಿಕೊಂಡಿರುವ, ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಕರ್ನಾಟಕ ಕ್ರಾಂತಿಕಾರಿ ಪಡೆ ವಿದ್ಯಾವಂತ, ಉತ್ಸಾಹಿ ಯುವಜನರ ಒಂದು ತಂಡ. ಎಂಜಿನಿಯರ್‌ಗಳು, ಡಾಕ್ಟರ್‌ಗಳು, ವಕೀಲರು ಸೇರಿದಂತೆ ಐಟಿ ವಲಯದಲ್ಲಿ ಕೆಲಸ ಮಾಡುವವರು ಈ ಪಡೆಯ ಸಕ್ರಿಯ ಕಾರ್ಯಕರ್ತರು. ಅಧಿಕೃತವಾಗಿ‌ 50 ಜನರಿರುವ ಈ ತಂಡದಲ್ಲಿ ತಮ್ಮ ಹೆಸರು ಗುರುತಿಸಿಕೊಳ್ಳಲು ಇಚ್ಛಿಸದೇ ಪಡೆಗಾಗಿ ಕೆಲಸ ಮಾಡುವವರು 2000 ಕ್ಕೂ ಹೆಚ್ಚು ಜನರಿದ್ದಾರೆ.

2014 ರ ಬಳಿಕ ದೇಶದಲ್ಲಿ ನಡೆಯುತ್ತಿರುವ ಘಟನೆಗಳು ನಮ್ಮನ್ನು ಚಿಂತೆಗೀಡುಮಾಡಿವೆ. ಸಾಮಾಜಿಕ ಜಾಲತಾಣಗಳಲ್ಲಿ ಅತಿಯಾಗಿ ತೊಡಗಿಸಿಕೊಂಡಿರುವ ಯುವ ಜನತೆಯನ್ನು ಸುಳ್ಳುಗಳು, ಕಟ್ಟುಕಥೆಗಳ ಮೂಲಕ ದಾರಿ ತಪ್ಪಿಸಲಾಗುತ್ತಿದೆ. ಹಾಗಾಗಿ ಅದೇ ಸಾಮಾಜಿಕ ಜಾಲತಾಣದ ಮೂಲಕ ಅವರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು, ಸಮಾಜಕ್ಕೆ ಏನಾದರೂ ಕೊಡಗು ನೀಡಬೇಕು ಎಂದು ಈ ತಂಡ ಕಟ್ಟಿದ್ದೇವೆ ಎನ್ನುತ್ತಾರೆ ಕರ್ನಾಟಕ ಕ್ರಾಂತಿಕಾರಿ ಪಡೆ ಸದಸ್ಯರು.

ಟ್ವಿಟ್ಟರ್‌ ಮೂಲಕ ಜನಾಭಿಪ್ರಾಯ ಮೂಡಿಸುವಲ್ಲಿ ಈ ಪಡೆ ಕಾರ್ಯನಿರತವಾಗಿದೆ. ಸಾಮಾಜಿಕ ಕಳಕಳಿಯ ವಿಷಯಗಳನ್ನು ಟ್ರೆಂಡ್ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯುವುದು, ಸಾರ್ವಜನಿಕರಿಗೆ ವಿಷಯ ಮುಟ್ಟಿಸುವುದು ಇವರ ಆದ್ಯತೆ. ಹಾಗಂತ ಅವರು ಟ್ವಿಟರ್‌ಗೆ ಮಾತ್ರ ಸೀಮಿತವಾಗದೆ ಲಾಕ್‌ಡೌನ್‌ ಸಮಯದಲ್ಲಿ ಬಡವರಿಗೆ ಆಹಾರ ಧಾನ್ಯಗಳ ವಿತರಣೆ, ಅಗತ್ಯವಿದ್ದವರಿಗೆ ತಕ್ಷಣ ರಕ್ತದಾನ ಮಾಡುವುದು, ಬೀದಿ ಬದಿಯಲ್ಲಿ ಮಲಗುವವರಿಗೆ ಊಟ, ಹೊದಿಕೆ ನೀಡುವ ಕಾಯಕದಲ್ಲಿಯೂ ತೊಡಗಿಸಿಕೊಂಡು ಅಭಿನಂದನೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣೆ ಪ್ರಚಾರ: ಮಮತಾ ಬ್ಯಾನರ್ಜಿಗೆ ಸಾಥ್ ನೀಡಲಿರುವ ಹಿರಿಯ ನಟಿ ಜಯಾ ಬಚ್ಚನ್

 

‘ಹೆಂಗ್‌ ಪುಂಗ್ಲಿ’ಯಿಂದ ಶುರುವಾದ ಇವರ ಟ್ವಿಟರ್‌ ಅಭಿಯಾನ, ಸುದ್ದಿ ಮಾಧ್ಯಮದಲ್ಲಿ ಒಂದು ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದವರನ್ನು ವಿರೋಧಿಸಿ ಏಜೆಂಟ್ ಅಜಿತ್ ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡುವವರೆಗೂ ಹೇಗಿದೆ. ಹಿಂದಿ ಹೇರಿಕೆಯನ್ನು ವಿರೋಧಿಸಿದ ತಂಡ ರಾಜ್ಯ ಸರ್ಕಾರ ಜಾತಿ ಆಧಾರದ ಮೇಲೆ ಪ್ರಾಧಿಕಾರಗಳಿಗೆ ಅನುದಾನ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ  #CasteMinisterBSY #ಜಾತಿಗಿಷ್ಟುಸವಲತ್ತು_ಒಡೆದುಆಳುವದೌಲತ್ತು ಎನ್ನುವ ಹ್ಯಾಷ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಿತ್ತು. ಕರ್ನಾಟಕದಲ್ಲಿ ಹೊಸ ಭೂಸುಧಾರಣೆ ಕಾಯ್ದೆ ಪುನಃ ಜಮೀನ್ದಾರಿ ಪದ್ಧತಿ ತರಲು ಹೊರಟಿದೆ ಎಂದು ವಿರೋಧಿಸಿ ರಾಜ್ಯಪಾಲರನ್ನು ಗುರಿಯಾಗಿಸಿಕೊಂಡು #GovernorDontSignKLRA2020 #ರಾಜ್ಯಪಾಲರೇಮಾತುಉಳಿಸಿಕೊಳ್ಳಿ ಹ್ಯಾಷ್‌ಟ್ಯಾಗ್ ಮೂಲಕ ಆಗ್ರಹಿಸಿದೆ.

ಸದ್ಯ ಖಾಸಗೀಕರಣವನ್ನು ವಿರೋಧಿಸಿ ಏಪ್ರೀಲ್ 2 ರಂದು ನಡೆಸಿರುವ ಟ್ವಿಟರ್‌ ಅಭಿಯಾನ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದ್ದು, ಅಂದು ಹಲವು ಗಂಟೆಗಳ ಕಾಲ #ಕಾಸಿಗಾಗಿ_ಖಾಸಗೀಕರಣ #GOI_PVT_LTD ರಾಜ್ಯದಲ್ಲಿ ಟಾಪ್ ಟ್ರೆಂಡಿಂಗ್‌ನಲ್ಲಿ ಇದ್ದ ಹ್ಯಾಶ್‌ಟ್ಯಾಗ್ ಆಗಿದೆ.

ನಾನುಗೌರಿ.ಕಾಂ ಜೊತೆ ತಮ್ಮ ತಂಡದ ಕೆಲಸಗಳ ಬಗ್ಗೆ ಮಾತನಾಡಿರುವ ರವಿ ಕಿರಣ್, “ಇಂದಿನ ಯುವ ಜನತೆ ಹೆಚ್ಚು ಸೋಶಿಯಲ್ ಮೀಡಿಯಾವನ್ನು ಬಳಸುತ್ತಿದ್ದಾರೆ. ಅದರಲ್ಲಿ ಬರುವ ಸುದ್ದಿಯನ್ನು ನಿಜ ಎಂದು ತಿಳಿಯುತ್ತಾರೆ. ಇದನ್ನೇ ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವ ಚಕ್ರವರ್ತಿ ಸೂಲಿಬೆಲೆಯಂತಹ ವ್ಯಕ್ತಿಗಳು ಸುಳ್ಳುಗಳನ್ನು ತುಂಬಲು, ಧರ್ಮದ ಅಫೀಮು ತುಂಬಲು ಬಳಸುತ್ತಿದ್ದಾರೆ. ದೇಶ, ಸೈನಿಕರು ಎಂಬಂತಹ ವಿಚಾರಗಳ ಮೂಲಕ ಯುವಜನರನ್ನು ಭಾವನಾತ್ಮಕವಾಗಿ ಹಿಡಿದಿಟ್ಟು ನಂತರ ತಮ್ಮ ಆರ್‌ಎಸ್‌ಎಸ್‌ ಸಿದ್ಧಾಂತಗಳನ್ನು ತುಂಬುತ್ತಾರೆ. ಇದನ್ನು ನಂಬಿದ ಯುವಕರು ಏನ್ ಏನೋ ಮಾಡಲು ಹೊರಡುತ್ತಾರೆ. ಇದರ ವಿರುದ್ಧ ನಾವು ಸಾಮಾಜಿಕ ಜಾಲತಾಣಗಳನ್ನೇ ಬಳಸಿಕೊಂಡು ಅವರ ಮುಖವಾಡಗಳನ್ನು ಕಳಚುವ ಕೆಲಸ ಮಾಡುತ್ತೇವೆ” ಎನ್ನುತ್ತಾರೆ.

’ಹೆಂಗ್ ಪುಂಗ್‌ ಲೀ ಎಂಬುದನ್ನು ಆರಂಭಿಸುವ ಮುನ್ನ ಜನ ಅವರು ಹೇಳುವುದನ್ನೇ ನಂಬುತ್ತಿದ್ದರು. ಅವರು ಹೇಳಿದನ್ನು ಸತ್ಯ ಎನ್ನುತ್ತಿದ್ದರು. ಈಗ ನೋಡಿ ಜನ ಅವರ ಮಾತನ್ನು ಕೇಳಿ ನಗುತ್ತಾರೆ. ಅವರು ಹೇಳುವುದು ಸುಳ್ಳು ಎಂಬುದು ಜನರಿಗೆ ತಿಳಿಯಿತು. ನೂರು ಜನರನ್ನು ಬದಲಿಸುತ್ತೇವೆ ಎಂಬ ಭ್ರಮೆ ನಮಗಿಲ್ಲ. ಆದರೆ ಹತ್ತು ಜನರಾದರೂ ಬದಲಾಗಬೇಕು ಎಂಬುದು ನಮ್ಮ ಆಶಯ” ಎನ್ನುತ್ತಾರೆ ರವಿಕಿರಣ್.

ಇದನ್ನೂ ಓದಿ: ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

“ಎಷ್ಟೋ ಜನರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಚಳವಳಿ, ಹೋರಾಟವನ್ನು ಮುನ್ನಡೆಸುತ್ತಿರುತ್ತಾರೆ. ಆದರೆ ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ತಲುಪಲು ಅವರಿಗೆ ಸಾಧ್ಯವಾಗುವುದಿಲ್ಲ. ಅಂತಹವರಿಗೆ ನಾವು ಬೆಂಬಲ ನೀಡುತ್ತೇವೆ. ರೈತ ಹೋರಾಟಗಳಲ್ಲಿ ನಾವು ತೊಡಗಿಸಿಕೊಂಡಿದ್ದೇವೆ. ರೈತ ಪ್ರತಿಭಟನೆಗೆ ಬೆಂಬಲ ನೀಡಿದ್ದೇವೆ. ಕರ್ನಾಟಕದಲ್ಲಿ ನಡೆಯುತ್ತಿರುವ ಐಕ್ಯ ಹೋರಾಟದಲ್ಲಿ ನಾವು ಭಾಗವಾಗಿದ್ದೇವೆ” ಎನ್ನುತ್ತಾರೆ.


ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...