Homeಕರ್ನಾಟಕಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

ಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

'ಒಟ್ಟಿನಲ್ಲಿ ಕ್ರಾಂತಿಯಾಗಬೇಕು' ಎಂಬ ಟ್ಯಾಗ್‌ಲೈನ್‌ನೊಂದಿಗೆ ಗುರುತಿಸಿಕೊಂಡಿರುವ, ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಕರ್ನಾಟಕ ಕ್ರಾಂತಿಕಾರಿ ಪಡೆಯ ಕಿರುಪರಿಚಯ..

- Advertisement -
- Advertisement -

ಇವತ್ತು ‘ಹೆಂಗ್ ಪುಂಗ್‌ ಲೀ’ ಅನ್ನೋದು ಚಕ್ರವರ್ತಿ ಸೂಲಿಬೆಲೆಯವರ ಹೆಸರಿಗೆ ಸಮನಾರ್ಥಕನಾಮವಾಗಿ ಬಳಸುವಷ್ಟು ಪ್ರಸಿದ್ದವಾಗಿದೆ. ಕರ್ನಾಟಕದಲ್ಲಿ ಸುಳ್ಳು ಹೇಳುವವರಿಗೆ ಅನ್ವರ್ಥನಾಮವಾಗಿ ಈ ಪದವನ್ನು ಬಳಸಲಾಗುತ್ತಿದೆ. ಇಷ್ಟು ಸಹಜವಾಗಿ ಬಳಕೆಯಾಗುತ್ತಿರುವ ಈ ಪದದ ಸೃಷ್ಟಿಕರ್ತರು ಮತ್ತು ಮೊದಲು ಬಳಸಿದ್ದು ಕರ್ನಾಟಕ ಕ್ರಾಂತಿಕಾರಿ ಪಡೆ.

ಹೌದು, ‘ಒಟ್ಟಿನಲ್ಲಿ ಕ್ರಾಂತಿಯಾಗಬೇಕು’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಗುರುತಿಸಿಕೊಂಡಿರುವ, ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಕರ್ನಾಟಕ ಕ್ರಾಂತಿಕಾರಿ ಪಡೆ ವಿದ್ಯಾವಂತ, ಉತ್ಸಾಹಿ ಯುವಜನರ ಒಂದು ತಂಡ. ಎಂಜಿನಿಯರ್‌ಗಳು, ಡಾಕ್ಟರ್‌ಗಳು, ವಕೀಲರು ಸೇರಿದಂತೆ ಐಟಿ ವಲಯದಲ್ಲಿ ಕೆಲಸ ಮಾಡುವವರು ಈ ಪಡೆಯ ಸಕ್ರಿಯ ಕಾರ್ಯಕರ್ತರು. ಅಧಿಕೃತವಾಗಿ‌ 50 ಜನರಿರುವ ಈ ತಂಡದಲ್ಲಿ ತಮ್ಮ ಹೆಸರು ಗುರುತಿಸಿಕೊಳ್ಳಲು ಇಚ್ಛಿಸದೇ ಪಡೆಗಾಗಿ ಕೆಲಸ ಮಾಡುವವರು 2000 ಕ್ಕೂ ಹೆಚ್ಚು ಜನರಿದ್ದಾರೆ.

2014 ರ ಬಳಿಕ ದೇಶದಲ್ಲಿ ನಡೆಯುತ್ತಿರುವ ಘಟನೆಗಳು ನಮ್ಮನ್ನು ಚಿಂತೆಗೀಡುಮಾಡಿವೆ. ಸಾಮಾಜಿಕ ಜಾಲತಾಣಗಳಲ್ಲಿ ಅತಿಯಾಗಿ ತೊಡಗಿಸಿಕೊಂಡಿರುವ ಯುವ ಜನತೆಯನ್ನು ಸುಳ್ಳುಗಳು, ಕಟ್ಟುಕಥೆಗಳ ಮೂಲಕ ದಾರಿ ತಪ್ಪಿಸಲಾಗುತ್ತಿದೆ. ಹಾಗಾಗಿ ಅದೇ ಸಾಮಾಜಿಕ ಜಾಲತಾಣದ ಮೂಲಕ ಅವರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು, ಸಮಾಜಕ್ಕೆ ಏನಾದರೂ ಕೊಡಗು ನೀಡಬೇಕು ಎಂದು ಈ ತಂಡ ಕಟ್ಟಿದ್ದೇವೆ ಎನ್ನುತ್ತಾರೆ ಕರ್ನಾಟಕ ಕ್ರಾಂತಿಕಾರಿ ಪಡೆ ಸದಸ್ಯರು.

ಟ್ವಿಟ್ಟರ್‌ ಮೂಲಕ ಜನಾಭಿಪ್ರಾಯ ಮೂಡಿಸುವಲ್ಲಿ ಈ ಪಡೆ ಕಾರ್ಯನಿರತವಾಗಿದೆ. ಸಾಮಾಜಿಕ ಕಳಕಳಿಯ ವಿಷಯಗಳನ್ನು ಟ್ರೆಂಡ್ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯುವುದು, ಸಾರ್ವಜನಿಕರಿಗೆ ವಿಷಯ ಮುಟ್ಟಿಸುವುದು ಇವರ ಆದ್ಯತೆ. ಹಾಗಂತ ಅವರು ಟ್ವಿಟರ್‌ಗೆ ಮಾತ್ರ ಸೀಮಿತವಾಗದೆ ಲಾಕ್‌ಡೌನ್‌ ಸಮಯದಲ್ಲಿ ಬಡವರಿಗೆ ಆಹಾರ ಧಾನ್ಯಗಳ ವಿತರಣೆ, ಅಗತ್ಯವಿದ್ದವರಿಗೆ ತಕ್ಷಣ ರಕ್ತದಾನ ಮಾಡುವುದು, ಬೀದಿ ಬದಿಯಲ್ಲಿ ಮಲಗುವವರಿಗೆ ಊಟ, ಹೊದಿಕೆ ನೀಡುವ ಕಾಯಕದಲ್ಲಿಯೂ ತೊಡಗಿಸಿಕೊಂಡು ಅಭಿನಂದನೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣೆ ಪ್ರಚಾರ: ಮಮತಾ ಬ್ಯಾನರ್ಜಿಗೆ ಸಾಥ್ ನೀಡಲಿರುವ ಹಿರಿಯ ನಟಿ ಜಯಾ ಬಚ್ಚನ್

 

‘ಹೆಂಗ್‌ ಪುಂಗ್ಲಿ’ಯಿಂದ ಶುರುವಾದ ಇವರ ಟ್ವಿಟರ್‌ ಅಭಿಯಾನ, ಸುದ್ದಿ ಮಾಧ್ಯಮದಲ್ಲಿ ಒಂದು ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದವರನ್ನು ವಿರೋಧಿಸಿ ಏಜೆಂಟ್ ಅಜಿತ್ ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡುವವರೆಗೂ ಹೇಗಿದೆ. ಹಿಂದಿ ಹೇರಿಕೆಯನ್ನು ವಿರೋಧಿಸಿದ ತಂಡ ರಾಜ್ಯ ಸರ್ಕಾರ ಜಾತಿ ಆಧಾರದ ಮೇಲೆ ಪ್ರಾಧಿಕಾರಗಳಿಗೆ ಅನುದಾನ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ  #CasteMinisterBSY #ಜಾತಿಗಿಷ್ಟುಸವಲತ್ತು_ಒಡೆದುಆಳುವದೌಲತ್ತು ಎನ್ನುವ ಹ್ಯಾಷ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಿತ್ತು. ಕರ್ನಾಟಕದಲ್ಲಿ ಹೊಸ ಭೂಸುಧಾರಣೆ ಕಾಯ್ದೆ ಪುನಃ ಜಮೀನ್ದಾರಿ ಪದ್ಧತಿ ತರಲು ಹೊರಟಿದೆ ಎಂದು ವಿರೋಧಿಸಿ ರಾಜ್ಯಪಾಲರನ್ನು ಗುರಿಯಾಗಿಸಿಕೊಂಡು #GovernorDontSignKLRA2020 #ರಾಜ್ಯಪಾಲರೇಮಾತುಉಳಿಸಿಕೊಳ್ಳಿ ಹ್ಯಾಷ್‌ಟ್ಯಾಗ್ ಮೂಲಕ ಆಗ್ರಹಿಸಿದೆ.

ಸದ್ಯ ಖಾಸಗೀಕರಣವನ್ನು ವಿರೋಧಿಸಿ ಏಪ್ರೀಲ್ 2 ರಂದು ನಡೆಸಿರುವ ಟ್ವಿಟರ್‌ ಅಭಿಯಾನ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದ್ದು, ಅಂದು ಹಲವು ಗಂಟೆಗಳ ಕಾಲ #ಕಾಸಿಗಾಗಿ_ಖಾಸಗೀಕರಣ #GOI_PVT_LTD ರಾಜ್ಯದಲ್ಲಿ ಟಾಪ್ ಟ್ರೆಂಡಿಂಗ್‌ನಲ್ಲಿ ಇದ್ದ ಹ್ಯಾಶ್‌ಟ್ಯಾಗ್ ಆಗಿದೆ.

ನಾನುಗೌರಿ.ಕಾಂ ಜೊತೆ ತಮ್ಮ ತಂಡದ ಕೆಲಸಗಳ ಬಗ್ಗೆ ಮಾತನಾಡಿರುವ ರವಿ ಕಿರಣ್, “ಇಂದಿನ ಯುವ ಜನತೆ ಹೆಚ್ಚು ಸೋಶಿಯಲ್ ಮೀಡಿಯಾವನ್ನು ಬಳಸುತ್ತಿದ್ದಾರೆ. ಅದರಲ್ಲಿ ಬರುವ ಸುದ್ದಿಯನ್ನು ನಿಜ ಎಂದು ತಿಳಿಯುತ್ತಾರೆ. ಇದನ್ನೇ ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವ ಚಕ್ರವರ್ತಿ ಸೂಲಿಬೆಲೆಯಂತಹ ವ್ಯಕ್ತಿಗಳು ಸುಳ್ಳುಗಳನ್ನು ತುಂಬಲು, ಧರ್ಮದ ಅಫೀಮು ತುಂಬಲು ಬಳಸುತ್ತಿದ್ದಾರೆ. ದೇಶ, ಸೈನಿಕರು ಎಂಬಂತಹ ವಿಚಾರಗಳ ಮೂಲಕ ಯುವಜನರನ್ನು ಭಾವನಾತ್ಮಕವಾಗಿ ಹಿಡಿದಿಟ್ಟು ನಂತರ ತಮ್ಮ ಆರ್‌ಎಸ್‌ಎಸ್‌ ಸಿದ್ಧಾಂತಗಳನ್ನು ತುಂಬುತ್ತಾರೆ. ಇದನ್ನು ನಂಬಿದ ಯುವಕರು ಏನ್ ಏನೋ ಮಾಡಲು ಹೊರಡುತ್ತಾರೆ. ಇದರ ವಿರುದ್ಧ ನಾವು ಸಾಮಾಜಿಕ ಜಾಲತಾಣಗಳನ್ನೇ ಬಳಸಿಕೊಂಡು ಅವರ ಮುಖವಾಡಗಳನ್ನು ಕಳಚುವ ಕೆಲಸ ಮಾಡುತ್ತೇವೆ” ಎನ್ನುತ್ತಾರೆ.

’ಹೆಂಗ್ ಪುಂಗ್‌ ಲೀ ಎಂಬುದನ್ನು ಆರಂಭಿಸುವ ಮುನ್ನ ಜನ ಅವರು ಹೇಳುವುದನ್ನೇ ನಂಬುತ್ತಿದ್ದರು. ಅವರು ಹೇಳಿದನ್ನು ಸತ್ಯ ಎನ್ನುತ್ತಿದ್ದರು. ಈಗ ನೋಡಿ ಜನ ಅವರ ಮಾತನ್ನು ಕೇಳಿ ನಗುತ್ತಾರೆ. ಅವರು ಹೇಳುವುದು ಸುಳ್ಳು ಎಂಬುದು ಜನರಿಗೆ ತಿಳಿಯಿತು. ನೂರು ಜನರನ್ನು ಬದಲಿಸುತ್ತೇವೆ ಎಂಬ ಭ್ರಮೆ ನಮಗಿಲ್ಲ. ಆದರೆ ಹತ್ತು ಜನರಾದರೂ ಬದಲಾಗಬೇಕು ಎಂಬುದು ನಮ್ಮ ಆಶಯ” ಎನ್ನುತ್ತಾರೆ ರವಿಕಿರಣ್.

ಇದನ್ನೂ ಓದಿ: ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

“ಎಷ್ಟೋ ಜನರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಚಳವಳಿ, ಹೋರಾಟವನ್ನು ಮುನ್ನಡೆಸುತ್ತಿರುತ್ತಾರೆ. ಆದರೆ ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ತಲುಪಲು ಅವರಿಗೆ ಸಾಧ್ಯವಾಗುವುದಿಲ್ಲ. ಅಂತಹವರಿಗೆ ನಾವು ಬೆಂಬಲ ನೀಡುತ್ತೇವೆ. ರೈತ ಹೋರಾಟಗಳಲ್ಲಿ ನಾವು ತೊಡಗಿಸಿಕೊಂಡಿದ್ದೇವೆ. ರೈತ ಪ್ರತಿಭಟನೆಗೆ ಬೆಂಬಲ ನೀಡಿದ್ದೇವೆ. ಕರ್ನಾಟಕದಲ್ಲಿ ನಡೆಯುತ್ತಿರುವ ಐಕ್ಯ ಹೋರಾಟದಲ್ಲಿ ನಾವು ಭಾಗವಾಗಿದ್ದೇವೆ” ಎನ್ನುತ್ತಾರೆ.


ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...