Homeಕರ್ನಾಟಕಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

ಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

'ಒಟ್ಟಿನಲ್ಲಿ ಕ್ರಾಂತಿಯಾಗಬೇಕು' ಎಂಬ ಟ್ಯಾಗ್‌ಲೈನ್‌ನೊಂದಿಗೆ ಗುರುತಿಸಿಕೊಂಡಿರುವ, ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಕರ್ನಾಟಕ ಕ್ರಾಂತಿಕಾರಿ ಪಡೆಯ ಕಿರುಪರಿಚಯ..

- Advertisement -
- Advertisement -

ಇವತ್ತು ‘ಹೆಂಗ್ ಪುಂಗ್‌ ಲೀ’ ಅನ್ನೋದು ಚಕ್ರವರ್ತಿ ಸೂಲಿಬೆಲೆಯವರ ಹೆಸರಿಗೆ ಸಮನಾರ್ಥಕನಾಮವಾಗಿ ಬಳಸುವಷ್ಟು ಪ್ರಸಿದ್ದವಾಗಿದೆ. ಕರ್ನಾಟಕದಲ್ಲಿ ಸುಳ್ಳು ಹೇಳುವವರಿಗೆ ಅನ್ವರ್ಥನಾಮವಾಗಿ ಈ ಪದವನ್ನು ಬಳಸಲಾಗುತ್ತಿದೆ. ಇಷ್ಟು ಸಹಜವಾಗಿ ಬಳಕೆಯಾಗುತ್ತಿರುವ ಈ ಪದದ ಸೃಷ್ಟಿಕರ್ತರು ಮತ್ತು ಮೊದಲು ಬಳಸಿದ್ದು ಕರ್ನಾಟಕ ಕ್ರಾಂತಿಕಾರಿ ಪಡೆ.

ಹೌದು, ‘ಒಟ್ಟಿನಲ್ಲಿ ಕ್ರಾಂತಿಯಾಗಬೇಕು’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಗುರುತಿಸಿಕೊಂಡಿರುವ, ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಕರ್ನಾಟಕ ಕ್ರಾಂತಿಕಾರಿ ಪಡೆ ವಿದ್ಯಾವಂತ, ಉತ್ಸಾಹಿ ಯುವಜನರ ಒಂದು ತಂಡ. ಎಂಜಿನಿಯರ್‌ಗಳು, ಡಾಕ್ಟರ್‌ಗಳು, ವಕೀಲರು ಸೇರಿದಂತೆ ಐಟಿ ವಲಯದಲ್ಲಿ ಕೆಲಸ ಮಾಡುವವರು ಈ ಪಡೆಯ ಸಕ್ರಿಯ ಕಾರ್ಯಕರ್ತರು. ಅಧಿಕೃತವಾಗಿ‌ 50 ಜನರಿರುವ ಈ ತಂಡದಲ್ಲಿ ತಮ್ಮ ಹೆಸರು ಗುರುತಿಸಿಕೊಳ್ಳಲು ಇಚ್ಛಿಸದೇ ಪಡೆಗಾಗಿ ಕೆಲಸ ಮಾಡುವವರು 2000 ಕ್ಕೂ ಹೆಚ್ಚು ಜನರಿದ್ದಾರೆ.

2014 ರ ಬಳಿಕ ದೇಶದಲ್ಲಿ ನಡೆಯುತ್ತಿರುವ ಘಟನೆಗಳು ನಮ್ಮನ್ನು ಚಿಂತೆಗೀಡುಮಾಡಿವೆ. ಸಾಮಾಜಿಕ ಜಾಲತಾಣಗಳಲ್ಲಿ ಅತಿಯಾಗಿ ತೊಡಗಿಸಿಕೊಂಡಿರುವ ಯುವ ಜನತೆಯನ್ನು ಸುಳ್ಳುಗಳು, ಕಟ್ಟುಕಥೆಗಳ ಮೂಲಕ ದಾರಿ ತಪ್ಪಿಸಲಾಗುತ್ತಿದೆ. ಹಾಗಾಗಿ ಅದೇ ಸಾಮಾಜಿಕ ಜಾಲತಾಣದ ಮೂಲಕ ಅವರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು, ಸಮಾಜಕ್ಕೆ ಏನಾದರೂ ಕೊಡಗು ನೀಡಬೇಕು ಎಂದು ಈ ತಂಡ ಕಟ್ಟಿದ್ದೇವೆ ಎನ್ನುತ್ತಾರೆ ಕರ್ನಾಟಕ ಕ್ರಾಂತಿಕಾರಿ ಪಡೆ ಸದಸ್ಯರು.

ಟ್ವಿಟ್ಟರ್‌ ಮೂಲಕ ಜನಾಭಿಪ್ರಾಯ ಮೂಡಿಸುವಲ್ಲಿ ಈ ಪಡೆ ಕಾರ್ಯನಿರತವಾಗಿದೆ. ಸಾಮಾಜಿಕ ಕಳಕಳಿಯ ವಿಷಯಗಳನ್ನು ಟ್ರೆಂಡ್ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯುವುದು, ಸಾರ್ವಜನಿಕರಿಗೆ ವಿಷಯ ಮುಟ್ಟಿಸುವುದು ಇವರ ಆದ್ಯತೆ. ಹಾಗಂತ ಅವರು ಟ್ವಿಟರ್‌ಗೆ ಮಾತ್ರ ಸೀಮಿತವಾಗದೆ ಲಾಕ್‌ಡೌನ್‌ ಸಮಯದಲ್ಲಿ ಬಡವರಿಗೆ ಆಹಾರ ಧಾನ್ಯಗಳ ವಿತರಣೆ, ಅಗತ್ಯವಿದ್ದವರಿಗೆ ತಕ್ಷಣ ರಕ್ತದಾನ ಮಾಡುವುದು, ಬೀದಿ ಬದಿಯಲ್ಲಿ ಮಲಗುವವರಿಗೆ ಊಟ, ಹೊದಿಕೆ ನೀಡುವ ಕಾಯಕದಲ್ಲಿಯೂ ತೊಡಗಿಸಿಕೊಂಡು ಅಭಿನಂದನೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣೆ ಪ್ರಚಾರ: ಮಮತಾ ಬ್ಯಾನರ್ಜಿಗೆ ಸಾಥ್ ನೀಡಲಿರುವ ಹಿರಿಯ ನಟಿ ಜಯಾ ಬಚ್ಚನ್

 

‘ಹೆಂಗ್‌ ಪುಂಗ್ಲಿ’ಯಿಂದ ಶುರುವಾದ ಇವರ ಟ್ವಿಟರ್‌ ಅಭಿಯಾನ, ಸುದ್ದಿ ಮಾಧ್ಯಮದಲ್ಲಿ ಒಂದು ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದವರನ್ನು ವಿರೋಧಿಸಿ ಏಜೆಂಟ್ ಅಜಿತ್ ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡುವವರೆಗೂ ಹೇಗಿದೆ. ಹಿಂದಿ ಹೇರಿಕೆಯನ್ನು ವಿರೋಧಿಸಿದ ತಂಡ ರಾಜ್ಯ ಸರ್ಕಾರ ಜಾತಿ ಆಧಾರದ ಮೇಲೆ ಪ್ರಾಧಿಕಾರಗಳಿಗೆ ಅನುದಾನ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ  #CasteMinisterBSY #ಜಾತಿಗಿಷ್ಟುಸವಲತ್ತು_ಒಡೆದುಆಳುವದೌಲತ್ತು ಎನ್ನುವ ಹ್ಯಾಷ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಿತ್ತು. ಕರ್ನಾಟಕದಲ್ಲಿ ಹೊಸ ಭೂಸುಧಾರಣೆ ಕಾಯ್ದೆ ಪುನಃ ಜಮೀನ್ದಾರಿ ಪದ್ಧತಿ ತರಲು ಹೊರಟಿದೆ ಎಂದು ವಿರೋಧಿಸಿ ರಾಜ್ಯಪಾಲರನ್ನು ಗುರಿಯಾಗಿಸಿಕೊಂಡು #GovernorDontSignKLRA2020 #ರಾಜ್ಯಪಾಲರೇಮಾತುಉಳಿಸಿಕೊಳ್ಳಿ ಹ್ಯಾಷ್‌ಟ್ಯಾಗ್ ಮೂಲಕ ಆಗ್ರಹಿಸಿದೆ.

ಸದ್ಯ ಖಾಸಗೀಕರಣವನ್ನು ವಿರೋಧಿಸಿ ಏಪ್ರೀಲ್ 2 ರಂದು ನಡೆಸಿರುವ ಟ್ವಿಟರ್‌ ಅಭಿಯಾನ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದ್ದು, ಅಂದು ಹಲವು ಗಂಟೆಗಳ ಕಾಲ #ಕಾಸಿಗಾಗಿ_ಖಾಸಗೀಕರಣ #GOI_PVT_LTD ರಾಜ್ಯದಲ್ಲಿ ಟಾಪ್ ಟ್ರೆಂಡಿಂಗ್‌ನಲ್ಲಿ ಇದ್ದ ಹ್ಯಾಶ್‌ಟ್ಯಾಗ್ ಆಗಿದೆ.

ನಾನುಗೌರಿ.ಕಾಂ ಜೊತೆ ತಮ್ಮ ತಂಡದ ಕೆಲಸಗಳ ಬಗ್ಗೆ ಮಾತನಾಡಿರುವ ರವಿ ಕಿರಣ್, “ಇಂದಿನ ಯುವ ಜನತೆ ಹೆಚ್ಚು ಸೋಶಿಯಲ್ ಮೀಡಿಯಾವನ್ನು ಬಳಸುತ್ತಿದ್ದಾರೆ. ಅದರಲ್ಲಿ ಬರುವ ಸುದ್ದಿಯನ್ನು ನಿಜ ಎಂದು ತಿಳಿಯುತ್ತಾರೆ. ಇದನ್ನೇ ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವ ಚಕ್ರವರ್ತಿ ಸೂಲಿಬೆಲೆಯಂತಹ ವ್ಯಕ್ತಿಗಳು ಸುಳ್ಳುಗಳನ್ನು ತುಂಬಲು, ಧರ್ಮದ ಅಫೀಮು ತುಂಬಲು ಬಳಸುತ್ತಿದ್ದಾರೆ. ದೇಶ, ಸೈನಿಕರು ಎಂಬಂತಹ ವಿಚಾರಗಳ ಮೂಲಕ ಯುವಜನರನ್ನು ಭಾವನಾತ್ಮಕವಾಗಿ ಹಿಡಿದಿಟ್ಟು ನಂತರ ತಮ್ಮ ಆರ್‌ಎಸ್‌ಎಸ್‌ ಸಿದ್ಧಾಂತಗಳನ್ನು ತುಂಬುತ್ತಾರೆ. ಇದನ್ನು ನಂಬಿದ ಯುವಕರು ಏನ್ ಏನೋ ಮಾಡಲು ಹೊರಡುತ್ತಾರೆ. ಇದರ ವಿರುದ್ಧ ನಾವು ಸಾಮಾಜಿಕ ಜಾಲತಾಣಗಳನ್ನೇ ಬಳಸಿಕೊಂಡು ಅವರ ಮುಖವಾಡಗಳನ್ನು ಕಳಚುವ ಕೆಲಸ ಮಾಡುತ್ತೇವೆ” ಎನ್ನುತ್ತಾರೆ.

’ಹೆಂಗ್ ಪುಂಗ್‌ ಲೀ ಎಂಬುದನ್ನು ಆರಂಭಿಸುವ ಮುನ್ನ ಜನ ಅವರು ಹೇಳುವುದನ್ನೇ ನಂಬುತ್ತಿದ್ದರು. ಅವರು ಹೇಳಿದನ್ನು ಸತ್ಯ ಎನ್ನುತ್ತಿದ್ದರು. ಈಗ ನೋಡಿ ಜನ ಅವರ ಮಾತನ್ನು ಕೇಳಿ ನಗುತ್ತಾರೆ. ಅವರು ಹೇಳುವುದು ಸುಳ್ಳು ಎಂಬುದು ಜನರಿಗೆ ತಿಳಿಯಿತು. ನೂರು ಜನರನ್ನು ಬದಲಿಸುತ್ತೇವೆ ಎಂಬ ಭ್ರಮೆ ನಮಗಿಲ್ಲ. ಆದರೆ ಹತ್ತು ಜನರಾದರೂ ಬದಲಾಗಬೇಕು ಎಂಬುದು ನಮ್ಮ ಆಶಯ” ಎನ್ನುತ್ತಾರೆ ರವಿಕಿರಣ್.

ಇದನ್ನೂ ಓದಿ: ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

“ಎಷ್ಟೋ ಜನರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಚಳವಳಿ, ಹೋರಾಟವನ್ನು ಮುನ್ನಡೆಸುತ್ತಿರುತ್ತಾರೆ. ಆದರೆ ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ತಲುಪಲು ಅವರಿಗೆ ಸಾಧ್ಯವಾಗುವುದಿಲ್ಲ. ಅಂತಹವರಿಗೆ ನಾವು ಬೆಂಬಲ ನೀಡುತ್ತೇವೆ. ರೈತ ಹೋರಾಟಗಳಲ್ಲಿ ನಾವು ತೊಡಗಿಸಿಕೊಂಡಿದ್ದೇವೆ. ರೈತ ಪ್ರತಿಭಟನೆಗೆ ಬೆಂಬಲ ನೀಡಿದ್ದೇವೆ. ಕರ್ನಾಟಕದಲ್ಲಿ ನಡೆಯುತ್ತಿರುವ ಐಕ್ಯ ಹೋರಾಟದಲ್ಲಿ ನಾವು ಭಾಗವಾಗಿದ್ದೇವೆ” ಎನ್ನುತ್ತಾರೆ.


ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...