Homeಕರ್ನಾಟಕಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

ಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

'ಒಟ್ಟಿನಲ್ಲಿ ಕ್ರಾಂತಿಯಾಗಬೇಕು' ಎಂಬ ಟ್ಯಾಗ್‌ಲೈನ್‌ನೊಂದಿಗೆ ಗುರುತಿಸಿಕೊಂಡಿರುವ, ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಕರ್ನಾಟಕ ಕ್ರಾಂತಿಕಾರಿ ಪಡೆಯ ಕಿರುಪರಿಚಯ..

- Advertisement -
- Advertisement -

ಇವತ್ತು ‘ಹೆಂಗ್ ಪುಂಗ್‌ ಲೀ’ ಅನ್ನೋದು ಚಕ್ರವರ್ತಿ ಸೂಲಿಬೆಲೆಯವರ ಹೆಸರಿಗೆ ಸಮನಾರ್ಥಕನಾಮವಾಗಿ ಬಳಸುವಷ್ಟು ಪ್ರಸಿದ್ದವಾಗಿದೆ. ಕರ್ನಾಟಕದಲ್ಲಿ ಸುಳ್ಳು ಹೇಳುವವರಿಗೆ ಅನ್ವರ್ಥನಾಮವಾಗಿ ಈ ಪದವನ್ನು ಬಳಸಲಾಗುತ್ತಿದೆ. ಇಷ್ಟು ಸಹಜವಾಗಿ ಬಳಕೆಯಾಗುತ್ತಿರುವ ಈ ಪದದ ಸೃಷ್ಟಿಕರ್ತರು ಮತ್ತು ಮೊದಲು ಬಳಸಿದ್ದು ಕರ್ನಾಟಕ ಕ್ರಾಂತಿಕಾರಿ ಪಡೆ.

ಹೌದು, ‘ಒಟ್ಟಿನಲ್ಲಿ ಕ್ರಾಂತಿಯಾಗಬೇಕು’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಗುರುತಿಸಿಕೊಂಡಿರುವ, ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಕರ್ನಾಟಕ ಕ್ರಾಂತಿಕಾರಿ ಪಡೆ ವಿದ್ಯಾವಂತ, ಉತ್ಸಾಹಿ ಯುವಜನರ ಒಂದು ತಂಡ. ಎಂಜಿನಿಯರ್‌ಗಳು, ಡಾಕ್ಟರ್‌ಗಳು, ವಕೀಲರು ಸೇರಿದಂತೆ ಐಟಿ ವಲಯದಲ್ಲಿ ಕೆಲಸ ಮಾಡುವವರು ಈ ಪಡೆಯ ಸಕ್ರಿಯ ಕಾರ್ಯಕರ್ತರು. ಅಧಿಕೃತವಾಗಿ‌ 50 ಜನರಿರುವ ಈ ತಂಡದಲ್ಲಿ ತಮ್ಮ ಹೆಸರು ಗುರುತಿಸಿಕೊಳ್ಳಲು ಇಚ್ಛಿಸದೇ ಪಡೆಗಾಗಿ ಕೆಲಸ ಮಾಡುವವರು 2000 ಕ್ಕೂ ಹೆಚ್ಚು ಜನರಿದ್ದಾರೆ.

2014 ರ ಬಳಿಕ ದೇಶದಲ್ಲಿ ನಡೆಯುತ್ತಿರುವ ಘಟನೆಗಳು ನಮ್ಮನ್ನು ಚಿಂತೆಗೀಡುಮಾಡಿವೆ. ಸಾಮಾಜಿಕ ಜಾಲತಾಣಗಳಲ್ಲಿ ಅತಿಯಾಗಿ ತೊಡಗಿಸಿಕೊಂಡಿರುವ ಯುವ ಜನತೆಯನ್ನು ಸುಳ್ಳುಗಳು, ಕಟ್ಟುಕಥೆಗಳ ಮೂಲಕ ದಾರಿ ತಪ್ಪಿಸಲಾಗುತ್ತಿದೆ. ಹಾಗಾಗಿ ಅದೇ ಸಾಮಾಜಿಕ ಜಾಲತಾಣದ ಮೂಲಕ ಅವರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು, ಸಮಾಜಕ್ಕೆ ಏನಾದರೂ ಕೊಡಗು ನೀಡಬೇಕು ಎಂದು ಈ ತಂಡ ಕಟ್ಟಿದ್ದೇವೆ ಎನ್ನುತ್ತಾರೆ ಕರ್ನಾಟಕ ಕ್ರಾಂತಿಕಾರಿ ಪಡೆ ಸದಸ್ಯರು.

ಟ್ವಿಟ್ಟರ್‌ ಮೂಲಕ ಜನಾಭಿಪ್ರಾಯ ಮೂಡಿಸುವಲ್ಲಿ ಈ ಪಡೆ ಕಾರ್ಯನಿರತವಾಗಿದೆ. ಸಾಮಾಜಿಕ ಕಳಕಳಿಯ ವಿಷಯಗಳನ್ನು ಟ್ರೆಂಡ್ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯುವುದು, ಸಾರ್ವಜನಿಕರಿಗೆ ವಿಷಯ ಮುಟ್ಟಿಸುವುದು ಇವರ ಆದ್ಯತೆ. ಹಾಗಂತ ಅವರು ಟ್ವಿಟರ್‌ಗೆ ಮಾತ್ರ ಸೀಮಿತವಾಗದೆ ಲಾಕ್‌ಡೌನ್‌ ಸಮಯದಲ್ಲಿ ಬಡವರಿಗೆ ಆಹಾರ ಧಾನ್ಯಗಳ ವಿತರಣೆ, ಅಗತ್ಯವಿದ್ದವರಿಗೆ ತಕ್ಷಣ ರಕ್ತದಾನ ಮಾಡುವುದು, ಬೀದಿ ಬದಿಯಲ್ಲಿ ಮಲಗುವವರಿಗೆ ಊಟ, ಹೊದಿಕೆ ನೀಡುವ ಕಾಯಕದಲ್ಲಿಯೂ ತೊಡಗಿಸಿಕೊಂಡು ಅಭಿನಂದನೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣೆ ಪ್ರಚಾರ: ಮಮತಾ ಬ್ಯಾನರ್ಜಿಗೆ ಸಾಥ್ ನೀಡಲಿರುವ ಹಿರಿಯ ನಟಿ ಜಯಾ ಬಚ್ಚನ್

 

‘ಹೆಂಗ್‌ ಪುಂಗ್ಲಿ’ಯಿಂದ ಶುರುವಾದ ಇವರ ಟ್ವಿಟರ್‌ ಅಭಿಯಾನ, ಸುದ್ದಿ ಮಾಧ್ಯಮದಲ್ಲಿ ಒಂದು ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದವರನ್ನು ವಿರೋಧಿಸಿ ಏಜೆಂಟ್ ಅಜಿತ್ ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡುವವರೆಗೂ ಹೇಗಿದೆ. ಹಿಂದಿ ಹೇರಿಕೆಯನ್ನು ವಿರೋಧಿಸಿದ ತಂಡ ರಾಜ್ಯ ಸರ್ಕಾರ ಜಾತಿ ಆಧಾರದ ಮೇಲೆ ಪ್ರಾಧಿಕಾರಗಳಿಗೆ ಅನುದಾನ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ  #CasteMinisterBSY #ಜಾತಿಗಿಷ್ಟುಸವಲತ್ತು_ಒಡೆದುಆಳುವದೌಲತ್ತು ಎನ್ನುವ ಹ್ಯಾಷ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಿತ್ತು. ಕರ್ನಾಟಕದಲ್ಲಿ ಹೊಸ ಭೂಸುಧಾರಣೆ ಕಾಯ್ದೆ ಪುನಃ ಜಮೀನ್ದಾರಿ ಪದ್ಧತಿ ತರಲು ಹೊರಟಿದೆ ಎಂದು ವಿರೋಧಿಸಿ ರಾಜ್ಯಪಾಲರನ್ನು ಗುರಿಯಾಗಿಸಿಕೊಂಡು #GovernorDontSignKLRA2020 #ರಾಜ್ಯಪಾಲರೇಮಾತುಉಳಿಸಿಕೊಳ್ಳಿ ಹ್ಯಾಷ್‌ಟ್ಯಾಗ್ ಮೂಲಕ ಆಗ್ರಹಿಸಿದೆ.

ಸದ್ಯ ಖಾಸಗೀಕರಣವನ್ನು ವಿರೋಧಿಸಿ ಏಪ್ರೀಲ್ 2 ರಂದು ನಡೆಸಿರುವ ಟ್ವಿಟರ್‌ ಅಭಿಯಾನ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದ್ದು, ಅಂದು ಹಲವು ಗಂಟೆಗಳ ಕಾಲ #ಕಾಸಿಗಾಗಿ_ಖಾಸಗೀಕರಣ #GOI_PVT_LTD ರಾಜ್ಯದಲ್ಲಿ ಟಾಪ್ ಟ್ರೆಂಡಿಂಗ್‌ನಲ್ಲಿ ಇದ್ದ ಹ್ಯಾಶ್‌ಟ್ಯಾಗ್ ಆಗಿದೆ.

ನಾನುಗೌರಿ.ಕಾಂ ಜೊತೆ ತಮ್ಮ ತಂಡದ ಕೆಲಸಗಳ ಬಗ್ಗೆ ಮಾತನಾಡಿರುವ ರವಿ ಕಿರಣ್, “ಇಂದಿನ ಯುವ ಜನತೆ ಹೆಚ್ಚು ಸೋಶಿಯಲ್ ಮೀಡಿಯಾವನ್ನು ಬಳಸುತ್ತಿದ್ದಾರೆ. ಅದರಲ್ಲಿ ಬರುವ ಸುದ್ದಿಯನ್ನು ನಿಜ ಎಂದು ತಿಳಿಯುತ್ತಾರೆ. ಇದನ್ನೇ ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವ ಚಕ್ರವರ್ತಿ ಸೂಲಿಬೆಲೆಯಂತಹ ವ್ಯಕ್ತಿಗಳು ಸುಳ್ಳುಗಳನ್ನು ತುಂಬಲು, ಧರ್ಮದ ಅಫೀಮು ತುಂಬಲು ಬಳಸುತ್ತಿದ್ದಾರೆ. ದೇಶ, ಸೈನಿಕರು ಎಂಬಂತಹ ವಿಚಾರಗಳ ಮೂಲಕ ಯುವಜನರನ್ನು ಭಾವನಾತ್ಮಕವಾಗಿ ಹಿಡಿದಿಟ್ಟು ನಂತರ ತಮ್ಮ ಆರ್‌ಎಸ್‌ಎಸ್‌ ಸಿದ್ಧಾಂತಗಳನ್ನು ತುಂಬುತ್ತಾರೆ. ಇದನ್ನು ನಂಬಿದ ಯುವಕರು ಏನ್ ಏನೋ ಮಾಡಲು ಹೊರಡುತ್ತಾರೆ. ಇದರ ವಿರುದ್ಧ ನಾವು ಸಾಮಾಜಿಕ ಜಾಲತಾಣಗಳನ್ನೇ ಬಳಸಿಕೊಂಡು ಅವರ ಮುಖವಾಡಗಳನ್ನು ಕಳಚುವ ಕೆಲಸ ಮಾಡುತ್ತೇವೆ” ಎನ್ನುತ್ತಾರೆ.

’ಹೆಂಗ್ ಪುಂಗ್‌ ಲೀ ಎಂಬುದನ್ನು ಆರಂಭಿಸುವ ಮುನ್ನ ಜನ ಅವರು ಹೇಳುವುದನ್ನೇ ನಂಬುತ್ತಿದ್ದರು. ಅವರು ಹೇಳಿದನ್ನು ಸತ್ಯ ಎನ್ನುತ್ತಿದ್ದರು. ಈಗ ನೋಡಿ ಜನ ಅವರ ಮಾತನ್ನು ಕೇಳಿ ನಗುತ್ತಾರೆ. ಅವರು ಹೇಳುವುದು ಸುಳ್ಳು ಎಂಬುದು ಜನರಿಗೆ ತಿಳಿಯಿತು. ನೂರು ಜನರನ್ನು ಬದಲಿಸುತ್ತೇವೆ ಎಂಬ ಭ್ರಮೆ ನಮಗಿಲ್ಲ. ಆದರೆ ಹತ್ತು ಜನರಾದರೂ ಬದಲಾಗಬೇಕು ಎಂಬುದು ನಮ್ಮ ಆಶಯ” ಎನ್ನುತ್ತಾರೆ ರವಿಕಿರಣ್.

ಇದನ್ನೂ ಓದಿ: ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

“ಎಷ್ಟೋ ಜನರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಚಳವಳಿ, ಹೋರಾಟವನ್ನು ಮುನ್ನಡೆಸುತ್ತಿರುತ್ತಾರೆ. ಆದರೆ ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ತಲುಪಲು ಅವರಿಗೆ ಸಾಧ್ಯವಾಗುವುದಿಲ್ಲ. ಅಂತಹವರಿಗೆ ನಾವು ಬೆಂಬಲ ನೀಡುತ್ತೇವೆ. ರೈತ ಹೋರಾಟಗಳಲ್ಲಿ ನಾವು ತೊಡಗಿಸಿಕೊಂಡಿದ್ದೇವೆ. ರೈತ ಪ್ರತಿಭಟನೆಗೆ ಬೆಂಬಲ ನೀಡಿದ್ದೇವೆ. ಕರ್ನಾಟಕದಲ್ಲಿ ನಡೆಯುತ್ತಿರುವ ಐಕ್ಯ ಹೋರಾಟದಲ್ಲಿ ನಾವು ಭಾಗವಾಗಿದ್ದೇವೆ” ಎನ್ನುತ್ತಾರೆ.


ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...