Homeಕರ್ನಾಟಕಬಸವಕಲ್ಯಾಣ: ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಪಡೆಯುವ ಮತಗಳ ಮೇಲೆ ಇತರರ ಗೆಲುವು ನಿರ್ಧಾರ!

ಬಸವಕಲ್ಯಾಣ: ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಪಡೆಯುವ ಮತಗಳ ಮೇಲೆ ಇತರರ ಗೆಲುವು ನಿರ್ಧಾರ!

- Advertisement -
- Advertisement -

ಮೂರು ಉಪಚುನಾವಣೆಗಳ ಪೈಕಿ ಮುಖ್ಯ ಮಾಧ್ಯಮ ವಾಹಿನಿಗಳು ಅಷ್ಟಾಗಿ ತಲೆ ಕೆಡಿಸಿಕೊಳ್ಳದ ಕ್ಷೇತ್ರ ಬಸವಕಲ್ಯಾಣ. ಇಲ್ಲಿ ಮೇಲುಸ್ಥರದಲ್ಲಿ ಜಿದ್ದಾಜಿದ್ದಿ ಜೋರಾಗಿಯೇ ಇದೆ. ಶಿರಾ ಮತ್ತು ಇತರ ಉಪ ಚುನಾವಣೆಗಳನ್ನು ‘ಗೆಲ್ಲಿಸಿಕೊಂಡು’ ಬಂದ ವಿಜಯೇಂದ್ರ ಇಲ್ಲಿ ಸಾಕಷ್ಟು ಬೆವರು ಹರಿಸುತ್ತಿದ್ದಾರೆ. ಎಸಿ ರೂಮುಗಳಲ್ಲೇ ಕುಳಿತು ಅವರು ಕೆಲವು ಸಮುದಾಯಗಳನ್ನು ಸೆಳೆಯುವ, ಎದುರಾಳಿ ಪಕ್ಷಗಳಿಂದಲೂ ಸಹಾಯ ಪಡೆಯುವ ಕೆಲಸವನ್ನು ಸಮರ್ಥವಾಗಿಯೇ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ.

ಅನುದಾನ, ಘೋಷಣೆ ವರ್ಸಸ್ ಸೊಷಿಯಲ್ ಇಂಜಿನಿಯರಿಂಗ್

ಇದನ್ನು ಅರಿಯುವ ಮೊದಲು ಇಲ್ಲಿನ ಈಗಿನ ಚುನಾವಣಾ ಪರಿಸ್ಥಿತಿಯ ಬಗ್ಗೆ ಇನ್ನೊಮ್ಮೆ ಅವಲೋಕಿಸೋಣ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಲಾ (ಮಲ್ಲಮ್ಮ) ನಾರಾಯಣರಾವ್ ಅವರು ದಿವಂಗತ ಶಾಸಕ ನಾರಾಯಣರಾವ್ ಪತ್ನಿ. ಬಿಜೆಪಿಯಿಂದ ಸ್ಪರ್ಧಿಸಿರುವ ಶರಣು ಸಲಗಾರ ಕಾಂಗ್ರೆಸ್‌ನಿಂದ ಬಂದಿರುವವರು ಮತ್ತು ಕಲಬುರಗಿ ಜಿಲ್ಲೆಯವರು (ಬಸವಕಲ್ಯಾಣ ಬೀದರ್ ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ). ಬಿಜೆಪಿ ಸರ್ಕಾರ ಇಲ್ಲಿ ಅನುದಾನದ ಹೊಳೆ ಹರಿಸುವ ಭರವಸೆ ನೀಡಿದೆ.

ಇಷ್ಟಕ್ಕೆ ಕತೆ ನಿಲ್ಲಲ್ಲ. ಇಲ್ಲಿ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಎಂಬ ಗಟ್ಟಿ ಕುಳ ಕಣದಲ್ಲಿದೆ. ಇವರು 2013ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆದ್ದು ಶಾಸಕ ಆಗಿದ್ದರು. ಆದರೆ ಈ ಸಿಟ್ಟಿಂಗ್ ಎಂಎಲ್‌ಎಗೆ 2018ರ ಅಸೆಂಬ್ಲಿ ಚುನಾವಣೆಯಲ್ಲಿ ಸೀಟು ನಿರಾಕರಿಸಿದ ಜೆಡಿಎಸ್, ‘ರಾಜ್ಯ ನಾಯಕ’ ಪಿಜಿಆರ್ ಸಿಂಧ್ಯಾರಿಗೆ ಟಿಕೇಟ್ ಕೊಟ್ಟಿತ್ತು. ಆಗ ಶಾಸಕನಾಗಿದ್ದ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿ ಎತ್ತಿಕೊಂಡು ಟಿಕೆಟ್ ಕೊಟ್ಟಿತ್ತು. ಈ ಎಲ್ಲ ರಾಜಕೀಯ ಅಂಧಾದುಂಧಿಯ ಮಧ್ಯೆ ಸಿದ್ದರಾಮಯ್ಯ ನಾರಾಯಣರಾವ್ ಅವರಿಗೆ ಟಿಕೆಟ್ ಕೊಟ್ಟರು. ಲಿಂಗಾಯತರು, ಮುಸ್ಲಿಮರು ಮತ್ತು ಮರಾಠಿಗರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕ್ಷೇತ್ರದಲ್ಲಿ ಒಂದು ಸಣ್ಣ ಸಮುದಾಯದ ವ್ಯಕ್ತಿಯೊಬ್ಬರಿಗೆ ಅವರು ಕಾಂಗ್ರೆಸ್ ಟಿಕೆಟ್ ಕೊಟ್ಟರು.

ಪುಟ್ಟ ಅಂಬಿಗ (ಕೋಲಿ ಅಥವಾ ಕಬ್ಬಿಗ) ಸಮುದಾಯಕ್ಕೆ ಸೇರಿದ ನಾರಾಯಣರಾವ್ ಗೆದ್ದಿದ್ದು ಅವರ ಹತ್ತಾರು ವರ್ಷಗಳ ಹೋರಾಟದಿಂದ. ಅವರು ತಮ್ಮ ಅಂಬಿಗ ಸಮುದಾಯದಂತೆ ಜನಸಂಖ್ಯೆಯಲ್ಲಿ ಕಡಿಮೆ ಇರುವ (ಕ್ಷೇತ್ರದಲ್ಲಿ 5-6 ಸಾವಿರ ಅಷ್ಟೇ) ಜನಸಮುದಾಯಗಳನ್ನು ಬೆಸಿದಿದ್ದರು. ಕ್ಷೇತ್ರದಲ್ಲಿ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿ ಇರುವ ಮುಸ್ಲಿಂ ಸಮುದಾಯದ ಒಲವು ಗಳಿಸಿದ್ದರು. ಸದಾ ಬಸವಣ್ಣನ ಆಶಯಗಳನ್ನು ಪ್ರತಿಪಾದಿಸುತ್ತಿದ್ದ ಅವರು, ಬಹುಪಾಲು ಲಿಂಗಾಯತರ ಒಲವನ್ನು ಗಳಿಸಿದ್ದರು. ಎಲ್ಲಕ್ಕೂ ಮುಖ್ಯವಾಗಿ ಅವರು ಸೀದಾಸಾದಾ ಆಗಿದ್ದರು. ಇದು ರಾಜಕಾರಣಿಗಳಲ್ಲಿ ಕಾಣುವ ಅಪರೂಪದ ಗುಣ. ಇಂಥದ್ದನ್ನು ಜನ ಸುಲಭಕ್ಕೆ ತಿರಸ್ಕರಿಸುವುದಿಲ್ಲ. ಹಾಗಾಗಿಯೇ ಅವರು ಗೆದ್ದಿದ್ದರು. ಈ ಸಲ ನಾರಾಯಣರಾವ್ ಪತ್ನಿ ಅವರಿಗೆ ಆ ಅನುಕಂಪದ ಅಲೆ ಮತಗಳಾಗಿ ಪರಿವರ್ತನೆ ಆಗುತ್ತದೆಯೆ? ಕಾದು ನೋಡಬೇಕಿದೆ.

ಬಿಜೆಪಿ ನೆರವಿಗೆ ಜೆಡಿಎಸ್?

‘ಸಂಪನ್ಮೂಲ’ದ ಕೊರತೆಯ ಕಾರಣಕ್ಕೆ ಇತರ ಉಪ ಚುನಾವಣೆಗಳಲ್ಲಿ ಕ್ಯಾಂಡಿಡೇಟ್ ಹಾಕುವುದಿಲ್ಲ ಎಂದಿದ್ದ ಜೆಡಿಎಸ್ ಇಲ್ಲಿ ಯಸ್ರಬ್ ಅಲಿ ಖಾದ್ರಿ ಎಂಬ ಕ್ಯಾಂಡಿಡೇಟನ್ನು ಹಾಕಿದೆ. ಮತದಾರರ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿರುವ ಮುಸ್ಲಿಂರ ಓಟು ಬಾಚಿ ಬಿಜೆಪಿಗೆ ನೆರವು ನೀಡುವ ಉದ್ದೇಶ ಇದರಿಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಯಸ್ರಬ್ ಅಲಿ ಮೂಲ ಕಾಂಗ್ರೆಸ್ ಪಕ್ಷವೇ ಎಂಬುದನ್ನು ಮರೆಯಬಾರದು.

ಖೂಬಾ ಕೊಡಲಿರುವ ಏಟು!

2013ರ ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆಲವು ಸಾಧಿಸಿದ್ದ, ಅದರ ಹಿಂದಿನ ಚುನಾವಣೆಯಲ್ಲೂ ಜೆಡಿಎಸ್‌ನಿಂದಲೇ ಗೆದ್ದಿದ್ದ ಮಲ್ಲಿಕಾರ್ಜುನ ಖೂಬಾ ಈಗ ಬಿಜೆಪಿ ಬಂಡಾಯ ಅಭ್ಯರ್ಥಿ. ಕಳೆದ ಸಲ 2018ರಲ್ಲಿ ಜೆಡಿಎಸ್ ಟಿಕೆಟ್ ಕೊಡದ ಪರಿಣಾಮ ಮಲ್ಲಿಕಾರ್ಜುನ್ ಖೂಬಾ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಈ ಸಲ ಅವರು ಎಷ್ಟು ಬಿಜೆಪಿ ಓಟ್ ಕೀಳುತ್ತಾರೆ ಎಂಬುದು ಕೂಡ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ. ಅಲ್ಲದೇ ಬಿಜೆಪಿ ವರಿಷ್ಠರಿಗೆ ಯಾರಿಗೂ ನಮ್ಮ ಮನೆಗೆ ಪ್ರವೇಶವಿಲ್ಲ ಎಂಬ ಬೋರ್ಡ್ ಹಾಕುವ ಮೂಲಕ ಅವರು ತಮ್ಮ ಕೋಪ ಪ್ರದರ್ಶಿಸಿದ್ದಾರೆ.

ಮರಾಠಿ ಭಾಷಿಕರ ವೋಟು

ಲಿಂಗಾಯತರ ವೋಟುಗಳ ಜೊತೆಗೆ ಮರಾಠಿ ಭಾಷಿಕರ ಓಟುಗಳನ್ನು ಬಿಜೆಪಿ ನೆಚ್ಚಿದೆ. ಇಲ್ಲಿ ಲಿಂಗಾಯತರ ಮತಗಳು ಸುಮಾರು 60 ಸಾವಿರದಷ್ಟಿದ್ದರೆ, ಮರಾಠಿ ಭಾಷಿಕರ ಮತಗಳ ಸಂಖ್ಯೆ 25-30 ಸಾವಿರ. ಮುಸ್ಲಿಮರ ಮತಗಳ ಸಂಖ್ಯೆ 35 ಸಾವಿರದಷ್ಟು ಇದೆ.
ಮರಾಠ ಮತಗಳ ಮೇಲೆ ಕಣ್ಣಿಟ್ಟು ಎನ್‌ಸಿಪಿಯಿಂದ ಎಂ.ಜಿ ಮೂಳೆ ಇಲ್ಲಿ ನಾಮಪತ್ರ ಹಾಕಿ ಕೊನೆ ಕ್ಷಣದಲ್ಲಿ ಬಿಜೆಪಿಗೆ ಬೆಂಬಲ ಘೋಷಿಸಿ ಕಣದಿಂದ ಹೊರ ನಡೆದಿದ್ದಾರೆ. ಇದೇನೂ ಚುನಾವಣೆಯ ಮೇಲೆ ಗಾಢ ಪರಿಣಾಮ ಬೀರದು ಎನ್ನಲಾಗುತ್ತಿದೆ.

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...