HomeಮುಖಪುಟANI ಪತ್ರಕರ್ತನನ್ನು ಕೆಟ್ಟ ಪದ ಬಳಸಿ ನಿಂದಿಸಿದ ಯುಪಿ ಸಿಎಂ ಯೋಗಿ: ವಿಡಿಯೋ ನಿಜವೆಂದ ಆಲ್ಟ್‌ನ್ಯೂಸ್‌

ANI ಪತ್ರಕರ್ತನನ್ನು ಕೆಟ್ಟ ಪದ ಬಳಸಿ ನಿಂದಿಸಿದ ಯುಪಿ ಸಿಎಂ ಯೋಗಿ: ವಿಡಿಯೋ ನಿಜವೆಂದ ಆಲ್ಟ್‌ನ್ಯೂಸ್‌

- Advertisement -
- Advertisement -

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ANI ಪತ್ರಕರ್ತನ ಮೇಲೆ ಅಶ್ಲೀಲ ಬೈಗುಳಗಳ ದಾಳಿ ನಡೆಸಿದ ವಿಡಿಯೊ ಒಂದು ಈಗ ವೈರಲ್ ಆಗಿದೆ. ಅವರ ಮಾಧ್ಯಮ ಸಲಹೆಗಾರ ಫ್ಯಾಕ್ಟ್‌ಚೆಕ್‌ ಒಂದನ್ನು ಹಂಚಿಕೊಂಡಿದ್ದು, ವಿಡಿಯೋದ ಕೊನೆಯ ಭಾಗವನ್ನು ತಿರುಚಿ ಎಡಿಟ್‌ ಮಾಡಲಾಗಿದೆ ಎಂದು ಸಮಜಾಯಿಷಿ ನೀಡಿದ್ದಾರೆ.

 

ಟ್ವಿಟ್ಟರ್ ಬಳಕೆದಾರರು ಹಂಚಿಕೊಂಡಿರುವ ಈ ವಿಡಿಯೋದಲ್ಲಿ, ಯೋಗಿ ಆದಿತ್ಯನಾಥ್ ಅವರು ಸುದ್ದಿ ಸಂಸ್ಥೆ ಎಎನ್‌ಐನ ಕ್ಯಾಮೆರಾಮನ್ ಕುರಿತು ಅಸಭ್ಯವಾಗಿ ಮಾತಾಡುವ ಹೊತ್ತಿನಲ್ಲಿ ಕಟ್ ಆಗುತ್ತದೆ. ಇಂದು ಬೆಳಿಗ್ಗೆ ಕೋವಿಡ್ ಲಸಿಕೆಯ ಮೊದಲ ಶಾಟ್ ತೆಗೆದುಕೊಂಡು ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ದೇಶದ ವಿಜ್ಞಾನಿಗಳಿಗೆ ಧನ್ಯವಾದ ಹೇಳಿದ ನಂತರ ಮುಖ್ಯಮಂತ್ರಿ ಮಾತನಾಡುತ್ತಿದ್ದರು.

ವೀಡಿಯೊವನ್ನು ಹೆಚ್ಚು ಹೆಚ್ಚು ಆನ್‌ಲೈನ್‌ನಲ್ಲಿ ಜನರು ವೀಕ್ಷಿಸುತ್ತಿದ್ದಂತೆ, ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಶಲಾಭ್ ಮಣಿ ತ್ರಿಪಾಠಿ ಅವರು “ಬ್ರೇಕಿಂಗ್ ಟ್ಯೂಬ್” ಎಂಬ ವೆಬ್‌ಸೈಟ್‌ನ ‘ಫ್ಯಾಕ್ಟ್ ಚೆಕ್’ ವರದಿಯನ್ನು ರಿಟ್ವೀಟ್ ಮಾಡಿದ್ದಾರೆ. ಈ ವರದಿಯ ಪ್ರಕಾರ ವಿಡಿಯೋ ಕ್ಲಿಪ್‌ನ ಕೊನೆಯ ಮೂರು ಸೆಕೆಂಡುಗಳನ್ನು (ಯೋಗಿಯ ಬೈಗುಳ ಇರುವ ಕ್ಷಣಗಳು) ತಿರುಚಲಾಗಿದೆ ಎಂದು ಆರೋಪಿಸಿದ್ದಾರೆ.

ಸಿಎಂ ಸಲಹೆಗಾರರು ನೀಡಿದ ಫ್ಯಾಕ್ಟ್‌ಚೆಕ್ ವರದಿಯಲ್ಲಿ ಫ್ಯಾಕ್ಟ್ ಚೆಕ್ ಬಗ್ಗೆ ಯಾವುದೇ ವಿವರಗಳಿಲ್ಲ, ಅವರ “ನಕಲಿ” ವಿಡಿಯೋವನ್ನು ಪ್ರಸಾರ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಲು ಮುಖ್ಯಮಂತ್ರಿ ಆದೇಶಿಸಿದ್ದಾರೆ ಎಂದು ಮಾತ್ರ ಅದು ಹೇಳುತ್ತದೆ.

ಟ್ವಿಟ್ಟರ್‌ನಲ್ಲಿ ಯೋಗಿ ಅವರನ್ನು ತರಾಟೆಗೆ ತೆಗೆದುಕೊಂಡ ಹಲವರಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಪ್ರಮುಖರು. “ದಯವಿಟ್ಟು ಈ ’ಗಣ್ಯವ್ಯಕ್ತಿ’ಯಿಂದ ಪತ್ರಕರ್ತರಿಗೆ ಸಲ್ಲಿಕೆಯಾದ ಸಿಹಿ ಪದಗಳನ್ನು ಕೇಳಿ. ಆದರೆ ಹೆಡ್‌ಫೋನ್‌ಗಳನ್ನು ಬಳಸಿ ಮತ್ತು ಮಕ್ಕಳಿಂದ ದೂರವಿರಿ; ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ವೀಡಿಯೊವನ್ನು ಹಂಚಿಕೊಂಡಿಲ್ಲ.

ಎಎನ್‌ಐ ಹೊಸ ಐದು ನಿಮಿಷಗಳ ಯೋಗಿ ಆದಿತ್ಯನಾಥ್ ಅವರ ವಿಡಿಯೋ ಅನ್ನು ಟ್ವೀಟ್ ಮಾಡಿದೆ. ಮತ್ತು ಟ್ವೀಟ್‌ನಲ್ಲಿ ಹೀಗೆ ಹೇಳಿದೆ – “ಸಂಪಾದಕರ ಟಿಪ್ಪಣಿ: ಈ ಹಿಂದೆ ನೀಡಲಾದ ಲೈವ್ ಸೌಂಡ್ ಬೈಟ್ ಅನ್ನು ಹಿಂತೆಗೆದುಕೊಳ್ಳಲಾಗಿದೆ” ಎಂದು ಬರೆಯಲಾಗಿದೆ.

ನಿವೃತ್ತ ಐಎಎಸ್ ಅಧಿಕಾರಿ ಸೂರ್ಯ ಪ್ರತಾಪ್ ಸಿಂಗ್ ಅವರ ಟ್ವೀಟ್‌ನಲ್ಲಿ ಈ ವಿಡಿಯೋ ಮೊದಲು ಹೊರಬಿದ್ದಿದೆ. “ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿಜವಾದ ಮುಖ. ಸಂತನ ಭಾಷೆಯನ್ನು ಆಲಿಸಿ” ಎಂದು ಹಿಂದಿಯಲ್ಲಿ ಅವರು ಟ್ವೀಟ್ ಮಾಡಿದ್ದರು.
ಇತ್ತ ಉತ್ತರಪ್ರದೇಶದಲ್ಲಿ ಕನಿಷ್ಠ ಎರಡು ಪ್ರಾದೇಶಿಕ ಚಾನೆಲ್‌ಗಳ ಬೆಳಗಿನ ಪ್ರಸಾರದ ನಂತರ ವೀಡಿಯೊಗಳು ಸಾರ್ವತ್ರಿಕವಾದವು.

ವಿಡಿಯೋ ಎಡಿಟ್ ಮಾಡಿಲ್ಲ: ಆಲ್ಟ್‌ನ್ಯೂಸ್‌ ವರದಿ

ಇನ್ನು ಯುಪಿ ಸಿಎಂ ಅಶ್ಲೀಲವಾಗಿ ಬೈದಿರುವ ವಿಡಿಯೋವನ್ನು ಕೊನೆಯ ಮೂರು ಸೆಕೆಂಡ್‌ಗಳು ಎಡಿಟ್ ಮಾಡಿಲ್ಲ ಎಂದು ಆಲ್ಟ್‌ನ್ಯೂಸ್ ವರದಿ ಮಾಡಿದೆ.

ಆಲ್ಟ್ ನ್ಯೂಸ್ ಎಎನ್‌ಐ ಪ್ರಧಾನ ಸಂಪಾದಕಿ ಸ್ಮಿತಾ ಪ್ರಕಾಶ್ ಅವರನ್ನು ಸಂಪರ್ಕಿಸಿದಾಗ “ನಾನು ನಿಮ್ಮೊಂದಿಗೆ ಮಾತನಾಡಲು ಆಸಕ್ತಿ ಹೊಂದಿಲ್ಲ” ಎಂದು ಅವರು ಫೋನ್ ಕಟ್ ಮಾಡುವ ಮೊದಲು ಹೇಳಿದರು. ಎಎನ್‌ಐ ಯುಪಿ ಬ್ಯೂರೋ ಮುಖ್ಯಸ್ಥ ಕಮ್ನಾ ಹಜೇಲಾ ಅವರು ವಿಡಿಯೋ ಬಗ್ಗೆ ಕೇಳಿದಾಗ ಕರೆ ಸಂಪರ್ಕ ಕಡಿತಗೊಳಿಸಿದ್ದಾರೆ” ಎಂದು ಅದು ವರದಿಯಲ್ಲಿ ತಿಳಿಸಿದೆ.

ಎಎನ್‌ಐ ಆ ಅಶ್ಲೀಲ ಬೈಗುಳದ ವೀಡಿಯೊವನ್ನು ಹಿಂತೆಗೆದುಕೊಂಡರೂ, ಅದು ಇತರ ಚಾನೆಲ್‌ಗಳ ಪ್ರಸಾರಗಳಲ್ಲಿ ಇನ್ನೂ ಲಭ್ಯವಿದೆ. ಎಬಿಪಿ ಗಂಗಾ, ನ್ಯೂಸ್‌18 ಉತ್ತರ ಪ್ರದೇಶ, ಫಸ್ಟ್‌ ನ್ಯೂಸ್‌ ರಾಜಸ್ಥಾನ್ ಚಾನೆಲ್‌ಗಳು ಅದನ್ನು ಪ್ರಸಾರ ಮಾಡಿವೆ.

ದೀಪಕ್ ಚೌರಾಸಿಯ, ಒಪಿಇಂಡಿಯಾ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳ ಮೂಲಕ ಆದಿತ್ಯನಾಥ್ ಅವರ ರಕ್ಷಣೆಗೆ ಬಿಜೆಪಿ ಪರ ಟ್ವಿಟರ್ ಹ್ಯಾಂಡಲ್‌ಗಳು ಬಂದಿವೆ. ವೈರಲ್ ಕ್ಲಿಪ್ ಅನ್ನು ಎಡಿಟ್ ಮಾಡಲಾಗಿದೆ ಎಂದು ಸಾಬೀತುಪಡಿಸುವ ಪ್ರಯತ್ನದಲ್ಲಿ ಆ ಮೂರು ಸೆಕೆಂಡುಗಳ ಹೊರತಾಗಿ, ಹೊಸದಾಗಿ ಎಎನ್‌ಐ ಟ್ವೀಟ್ ಮಾಡಿದ ಎರಡನೇ ವಿಡಿಯೋದಲ್ಲಿ ಅದೇ ಪದಗಳನ್ನು ಬಳಸಿ ಯೋಗಿ ಆದಿತ್ಯನಾಥ್ ಮಾತನಾಡಿದ್ದಾರೆ ಎಂದು ಸಮರ್ಥಿಸಿಕೊಳ್ಳಲಾಗಿದೆ. ಆದರೆ ಆ ಮಾತುಗಳಲ್ಲಿ ಹಲವು ಬದಲಾವಣೆಗಳನ್ನು ಕಾಣಬಹುದಾಗಿದೆ.

ಮೊದಲ ವಿಡಿಯೋದಲ್ಲಿ ಯುಪಿ ಸಿಎಂ ಹೀಗೆ ಹೇಳುತ್ತಾರೆ. “ಕೋವಿಡ್ ಲಸಿಕೆ ಉಚಿತವಾಗಿ ನೀಡಿದ್ದಕ್ಕಾಗಿ ಗೌರವಾನ್ವಿತ ಪ್ರಧಾನ ಮಂತ್ರಿ, ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ನನ್ನ ಹೃದಯಪೂರ್ವಕ ಧನ್ಯವಾದಗಳು. ನಾನು ದೇಶದ ವಿಜ್ಞಾನಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನೀವು ಏನು ಮಾಡುತ್ತಿದ್ದೀರಿ,  ******”… ಇದರಲ್ಲಿ ಆರೋಗ್ಯ ಸಚಿವಾಲಯದ ಉಲ್ಲೇಖವನ್ನು ಎಎನ್‌ಐ ಕೂಡ ಟ್ವೀಟ್ ಮಾಡಿದೆ.

ಆದರೆ ನಂತರ ಚಿತ್ರೀಕರಿಸಿರುವ 5 ನಿಮಿಷಗಳ ವಿಡಿಯೋದಲ್ಲಿ “ಕೇಂದ್ರ ಆರೋಗ್ಯ ಸಚಿವಾಲಯದ ಬಗ್ಗೆ ಸಿಎಂ ಉಲ್ಲೇಖಿಸಿಲ್ಲ. “ದೇಶದ ನಾಗರಿಕರಿಗೆ COVID ಲಸಿಕೆ ಉಚಿತವಾಗಿ ನೀಡಿದ ಗೌರವಾನ್ವಿತ ಪ್ರಧಾನಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಭಾರತದಲ್ಲಿ ಈ ಸಮಯಕ್ಕೆ ಎರಡು ಲಸಿಕೆಗಳನ್ನು ಬಿಡುಗಡೆ ಮಾಡಿದ ಎಲ್ಲ ವಿಜ್ಞಾನಿಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ… ” ಎಂದಷ್ಟೇ ಅವರು ಹೇಳಿದ್ದಾರೆ.

ಹಾಗಾಗಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿಜಕ್ಕೂ ಎಎನ್‌ಐ ಸಿಬ್ಬಂದಿಯ ಸಮ್ಮುಖದಲ್ಲಿ ನಿಂದನೀಯ ಪದವನ್ನು ಬಳಸಿದ್ದಾರೆ. ವೀಡಿಯೊವನ್ನು ಎಡಿಟ್ ಮಾಡಲಾಗಿದೆ ಎಂಬ ಪ್ರತಿಪಾದನೆ ಸುಳ್ಳಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ವಿವಾದದ ಕೇಂದ್ರದಲ್ಲಿರುವ ಎಎನ್‌ಐ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸದಿರಲು ನಿರ್ಧರಿಸಿದೆ.


ಇದನ್ನೂ ಓದಿ: ತನ್ನ ವಿರುದ್ಧದ ಮಾನಹಾನಿ ಪ್ರಕರಣ ರದ್ದತಿ ಕೋರಿ ಕಂಗನಾ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...