Homeಅಂಕಣಗಳುಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

ಫೇಕು ಪತ್ರ: ಪೋಸ್ಟ್ಕಾರ್ಡಿನ ಮಹೇಶ ಹೆಗೆಡೆ ವಿಚಾರಣೆ ಬಾಯಿಬಡುಕಿ ಶೃತಿ ಬೆಳ್ಳಕ್ಕಿ ಬಂಧನ

- Advertisement -
- Advertisement -

 

ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕ್‌ನ್ಯೂಸ್ ಪೋರ್ಟಲ್‌ನ ಸಂಸ್ಥಾಪಕ ಮಹೇಶ ವಿಕ್ರಮ ಹೆಗಡೆಯನ್ನು ಸಿಐಡಿ ಪೊಲೀಸರು ಫೇಕ್ ಪತ್ರದ ಸೃಷ್ಟಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದಾರೆ. ಈ ಸುದ್ದಿ ರಾಜ್ಯಾದ್ಯಂತ ತಲುಪುವ ಮೊದಲೇ ಬಿಜೆಪಿಯ ಒಂದಿಬ್ಬರು ನಾಯಕರು ಟ್ವೀಟ್ ಮಾಡಿ, ಮಹೇಶ ಬಂಧನ ಖಂಡನೀಯ ಎಂದಿದ್ದರು!! ಪೋಸ್ಟ್ಕಾರ್ಡ್ ಎನ್ನುವುದು ಬಿಜೆಪಿ ಪ್ರಾಯೋಜಿತ ಪೋರ್ಟಲ್ ಎಂಬುದಂತೂ ಹೊಸ ವಿಷಯವೇನಲ್ಲ ಬಿಡಿ…

ಸಚಿವ ಎಂಬಿ, .ಪಾಟೀಲರ ಹೆಸರಿನಲ್ಲಿ ಫೋರ್ಜರಿ ಪತ್ರವನ್ನು ಸೃಷ್ಟಿಸಿದ ಪ್ರಕರಣದ ವಿಚಾರಣೆ ತೀವ್ರಗೊಂಡಿದ್ದು, ಅದರ ಭಾಗವಾಗಿ ನಿನ್ನೆ ಏಪ್ರಿಲ್ 24ರಂದು ಧಾರವಾಡ ಪೊಲೀಸರು ಶೃತಿ ಬೆಳ್ಳಕ್ಕಿ ಎಂಬ ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಶೃತಿ ಧಾರವಾಡ ಬಿಜೆಪಿ ಗ್ರಾಮೀಣ ವಿಭಾಗದ ಅಧ್ಯಕ್ಷ ಪರಮೇಶ ಉಳವಣ್ಣವರ್ ಪತ್ನಿಯಾಗಿದ್ದು, ಸೋನಿಯಾರಿಗೆ ಎಂ. ಬಿ. ಪಾಟೀಲರು ಬರೆದಿದ್ದ ‘ಫೇಕ್’ ಪತ್ರವನ್ನು ಉಲ್ಲೇಖಿಸಿ, ಕಾಂಗ್ರೆಸ್ ವಿರುದ್ಧ ಚುನಾವಣಾ ಭಾಷಣ ಮಾಡುವ ಸಂದರ್ಭದಲ್ಲಿ ಸಮುದಾಯಗಳಿಗೆ ಅವಮಾನವಾಗುವಂತೆ ಮಾತಾಡಿದ್ದರು. ತಮ್ಮ ಆ ಭಾಷಣವನ್ನು ಫೇಸ್‌ಬುಕ್‌ನಲ್ಲಿ ಹರಿಬಿಟ್ಟಿದ್ದರು. ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ವಿರುದ್ಧ ಪುತೂರಿ ನಡೆಸಲು ಬಿಜೆಪಿ ನಾಯಕರು ಈ ಕಾರ್ಯಕರ್ತೆಯನ್ನು ಬಳಸಿಕೊಂಡು, ವಿಜಯವಾಣಿಯಲ್ಲಿ ಬಂದಿದ್ದ ಫೇಕ್ ಪತ್ರದ ಕುರಿತು ಸುದ್ದಿ ಹರಡಲು ಯತ್ನಿಸಿದ್ದರು.

ಹಾಗೆಯೇ ನಿನ್ನೆ ‘ಫೇಕ್’ ಪತ್ರದ ರೂವಾರಿ ಎನ್ನಲಾದ ಪೋಸ್ಟ್ಕಾರ್ಡ್ನ ಮಹೇಶ ಹೆಗಡೆಯ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.

ಹಿನ್ನೆಲೆ ಕೆದಕುತ್ತ….

ಈ ಫೇಕ್ ಪತ್ರ ಮೊದಲ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಲಿತಕ್ಕೆ ಬಂದಿದ್ದು 2017ರಲ್ಲಿ ರಾಜ್ಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ
ಚಳವಳಿ ಜೋರಾಗಿದ್ದ ಸಂದರ್ಭದಲ್ಲಿ. ನಂತರ ಕಳೆದ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ. ಕಾಂಗ್ರೆಸ್ ಅಧ್ಯಕ್ಷೆಗೆ ಅಂದಿನ ಜಲ ಸಂಪನ್ಮೂಲ ಸಚಿವ (ಈಗಿನ ಗೃಹ ಸಚಿವ) ಬರೆದ ಪತ್ರ ಇದೆಂದು ಸೃಷ್ಟಿಸಲಾಗಿತ್ತು. ಜಾಗತಿಕ ಕ್ಯಾಥೋಲಿಕ್ ಸಂಘಟನೆಗಳ ಆಶಯದಂತೆ ಲಿಂಗಾಯತರನ್ನು ಹಿಂದೂ ಧರ್ಮದಿಂದ ಬೇರ್ಪಡಿಸುವ ಉದ್ದೇಶಕ್ಕಾಗಿ ಎಂ.ಬಿ. ಪಾಟೀಲರು ಸೋನಿಯಾ ಗಾಂಧಿಯವರಿಗೆ ಭಿನ್ನವಿಸುವ
ರೀತಿಯಲ್ಲಿ ಪತ್ರವನ್ನು ಸೃಷ್ಟಿಸಲಾಗಿತ್ತು. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಹಿಂದೆ ಸೋನಿಯಾ ಗಾಂಧಿ ಮತ್ತು ಕ್ಯಾಥೊಲಿಕ್ ಸಂಘಟನೆಗಳ ಕೈವಾಡ ಇದೆ ಎಂದೂ, ಹಿಂದೂ ಧರ್ಮಕ್ಕೆ ಅಪಾಯ ಕಾದಿದೆ ಎಂದೂ ಸುಳ್ಳು ಹರಡಲಾಗಿತ್ತು. ಇದನ್ನು ಮುಂಚೂಣಿಗೆ ತಂದಿದ್ದು ಪೋಸ್ಟ್ಕಾರ್ಡ್ ನ್ಯೂಸ್ ಎಂಬ ಫೇಕು ಖ್ಯಾತಿಯ ಪೋರ್ಟಲ್.

ಆಗಲೇ ಅನೇಕ ಫ್ಯಾಕ್ಟ್ ಚೆಕಿಂಗ್ ಪೋರ್ಟಲ್‌ಗಳು ಈ ಪತ್ರ ನಕಲಿ ಎಂದು ಪ್ರೂವ್ ಮಾಡಿದ್ದವು. ಬಿಎಲ್‌ಡಿಇಎ ಸಂಸ್ಥೆಯ ಲೆಟರ್‌ಹೆಡ್‌ನ ಫೋರ್ಜರಿ ಮಾಡಲಾಗಿತ್ತಲ್ಲದೇ, ಎಂ.ಬಿ. ಪಾಟೀಲರ ಸಹಿಯನ್ನೂ ಫೋರ್ಜರಿ ಮಾಡಲಾಗಿತ್ತು. ಆಗ ಚುನಾವಣೆ ಗದ್ದಲದಲ್ಲಿ ಪೊಲೀಸರೂ ಬಹಳ ತಲೆ ಕೆಡಿಸಿಕೊಂಡಿರಲಿಲ್ಲ. ರಾಜ್ಯ ಬಿಜೆಪಿ ಘಟಕವೂ ಅದೇ ಪತ್ರ ಬಳಸಿ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿತ್ತು.

ಈಗ ಅದೇ ಪತ್ರವನ್ನು ಕಳೆದ ವಾರ ಏಪ್ರಿಲ್ 16ರಂದು ಮತ್ತೆ ವಿಜಯವಾಣಿ ಪ್ರಕಟಿಸಿ ಎಂ.ಬಿ. ಪಾಟೀಲರ ಆಕ್ರೋಶಕ್ಕೆ ಗುರಿಯಾಗಿತ್ತು. ಇದನ್ನು ನಾನುಗೌರಿ.ಕಾಮ್ ಸವಿವರವಾಗಿ ವರದಿ ಮಾಡಿ, ಫೇಕ್‌ನ್ಯೂಸ್ ಎಂಬುದನ್ನು ಜನರ ಗಮನಕ್ಕೆ ತಂದಿತ್ತು.

ಈಗ ಎಂ.ಬಿ. ಪಾಟೀಲರೇ ಗೃಹ ಸಚಿವರಾಗಿರುವುದರಿಂದ ಪೊಲೀಸರು ತನಿಖೆಯನ್ನು ಕ್ಷಿಪ್ರವಾಗಿ ನಡೆಸುತ್ತಿರುವಂತೆ ಕಾಣುತ್ತಿದೆ. ತನಿಖೆ ಫೇಕುವೀರರ ಬುಡಕ್ಕೆ ತಲುಪಿದರಷ್ಟೇ ಹಿಂದಿರುವ ‘ನಾಯಕರ’ ಬಣ್ಣ ಬಯಲಾದೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...