Homeಮುಖಪುಟಪಶ್ಚಿಮ ಬಂಗಾಳ: ಇವಿಎಂ ಜೊತೆಗೆ ಟಿಎಂಸಿ ಮುಖಂಡನ ಮನೆಯಲ್ಲಿ ತಂಗಿದ್ದ ಅಧಿಕಾರಿ ಅಮಾನತು

ಪಶ್ಚಿಮ ಬಂಗಾಳ: ಇವಿಎಂ ಜೊತೆಗೆ ಟಿಎಂಸಿ ಮುಖಂಡನ ಮನೆಯಲ್ಲಿ ತಂಗಿದ್ದ ಅಧಿಕಾರಿ ಅಮಾನತು

- Advertisement -
- Advertisement -

ಇವಿಎಂ ಜೊತೆಗೆ ತೃಣಮೂಲ ಕಾಂಗ್ರೆಸ್ ಮುಖಂಡನಾದ ತನ್ನ ಸಂಬಂಧಿಕರ ಮನೆಯಲ್ಲಿ ತಂಗಿದ್ದೆ ಎಂದು ಹೇಳಿರುವ ಪಶ್ಚಿಮ ಬಂಗಾಳ ಚುನಾವಣಾ ಅಧಿಕಾರಿಯನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ. ಮತದಾನದಲ್ಲಿ ಅವರು ತೆಗೆದುಕೊಂಡು ಹೋಗಿದ್ದ ಮೀಸಲು ಇವಿಎಂ ಮತ್ತು ವಿವಿಪ್ಯಾಟ್‌ ಮತದಾನದಲ್ಲಿ ಬಳಸುವುದಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.

ಉತ್ತರ ಉಲುಬೇರಿಯಾದಲ್ಲಿ ಹೌರಾದ ಸೆಕ್ಟರ್ 17 ರ ನಿಯೋಜಿತ ಅಧಿಕಾರಿ ತಪನ್ ಸರ್ಕಾರ್ ಅವರು ತಮ್ಮ ಸಂಬಂಧಿಕರಾಗಿರುವ ಟಿಎಂಸಿ ನಾಯಕರ ಮನೆಗೆ ರಾತ್ರಿ ಮಲಗಲು ಹೋಗುವಾಗ ಜೊತೆಯಲ್ಲಿ ಮೀಸಲು ಇವಿಎಂ ಮತ್ತು ವಿವಿಪ್ಯಾಟ್‌ಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಚುನಾವಣಾ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚುನಾವಣಾ ಆಯೋಗದ ಸೂಚನೆಗಳನ್ನು ಉಲ್ಲಂಘಿಸಿರುವುದರಿಂದ ಅವರೊಂದಿಗೆ ಇದ್ದ ಪೊಲೀಸ್ ಅಧಿಕಾರಿಗಳು ಸಹ ಕ್ರಮ ಎದುರಿಸಬೇಕಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

“ಇದು ಭಾರತದ ಚುನಾವಣಾ ಆಯೋಗದ ಸೂಚನೆಗಳ ಸಂಪೂರ್ಣ ಉಲ್ಲಂಘನೆಯಾಗಿದ್ದು, ಇದಕ್ಕಾಗಿ ವಲಯ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಸೆಕ್ಟರ್ ಅಧಿಕಾರಿ ಜತೆ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯ ಅಮಾನತಿಗೂ ನಿರ್ದೇಶಿಸಲಾಗಿದೆ” ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ: ಮರುಮತದಾನಕ್ಕೆ ಆದೇಶ, 4 ಅಧಿಕಾರಿಗಳ ಅಮಾನತು!

ಅಧಿಕಾರಿ ತಪನ್ ಸರ್ಕಾರ್ ಬಳಿಯಿದ್ದ ಮತಯಂತ್ರಗಳನ್ನು ಮತ್ತು ವಿವಿಪ್ಯಾಟ್‌ಗಳನ್ನು ವಾಪಸ್ ಪಡೆದು ಪರಿಶೀಲಿಸಲಾಗಿದೆ. ಇವುಗಳನ್ನು ಪ್ರತ್ಯೇಕ ಕೋಣೆಯಲ್ಲಿ ಸಂಗ್ರಹಿಸಲಾಗಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಬಳಸುವುದಿಲ್ಲ ಎಂದು ಆಯೋಗ ಹೇಳಿದೆ.

ಇತ್ತಿಚೆಗೆ ಅಸ್ಸಾಂನ ಬರಾಕ್ ಕಣಿವೆ ಪ್ರದೇಶದ ಕರೀಂಗಂಜ್ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗೆ ಸೇರಿದ ಕಾರಿನಲ್ಲಿ ಚುನಾವಣಾ ಅಧಿಕಾರಿಗಳು ಇವಿಎಂ ಜೊತೆ ಪ್ರಯಾಣಿಸಿದ ಘಟನೆ ದೊಡ್ಡ ಕೋಲಾಹಲಕ್ಕೆ ಕಾರಣವಾಗಿತ್ತು. ಆ ನಾಲ್ವರು ಅಧಿಕಾರಿಗಳನ್ನು ಕರ್ತವ್ಯಲೋಪದ ಆರೋಪದ ಮೇಲೆ ಅಮಾನತು ಮಾಡಿ, ಆ ಕ್ಷೇತ್ರದಲ್ಲಿ ಮರುಮತದಾನ ನಡೆಸುವಂತೆ ಚುನಾವಣಾ ಆಯೋಗ ಆದೇಶ ನೀಡಿದೆ.

ಪಶ್ಚಿಮ ಬಂಗಾಳದ ಎಂಟು ಹಂತದ ವಿಧಾನಸಭಾ ಚುನಾವಣೆಯಲ್ಲಿ ಮಂಗಳವಾರ ಮೂರನೇ ಹಂತದ ಮತದಾನ ನಡೆಯುತ್ತಿದೆ ಸ್ಥಾನದಲ್ಲಿದೆ.


ಇದನ್ನೂ ಓದಿ: ಇವಿಎಂ ವಿರೋಧಿಸಿ 100 ದಿನದಲ್ಲಿ 3000 ಕಿ.ಮೀ ನಡೆದ ಓಂಕಾರ್ ಸಿಂಗ್ ಬೆಂಗಳೂರಿಗೆ ಆಗಮನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...