Homeಕರ್ನಾಟಕಸಿಡಿ ಕೇಸ್: FIR ದಾಖಲಿಸದ ಕಮಲ್ ಪಂತ್ ವಿರುದ್ಧ ಖಾಸಗಿ ದೂರು ನೀಡಿದ ಜನಾಧಿಕಾರ ಸಂಘರ್ಷ...

ಸಿಡಿ ಕೇಸ್: FIR ದಾಖಲಿಸದ ಕಮಲ್ ಪಂತ್ ವಿರುದ್ಧ ಖಾಸಗಿ ದೂರು ನೀಡಿದ ಜನಾಧಿಕಾರ ಸಂಘರ್ಷ ಪರಿಷತ್

ಈಗಾಗಲೇ ಕಳೆದ ಮಾರ್ಚ್ 17 ರಂದು ಕಬ್ಬನ್ ಪಾರ್ಕ್ ಠಾಣೆಯಲ್ಲಿ ಒಮ್ಮೆ ದೂರು ದಾಖಲಿಸಿದ್ದರು. ಆದರೆ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ.

- Advertisement -
- Advertisement -

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರನ್ನು ಆಧರಿಸಿ FIR  ದಾಖಲಿಸಲು ವಿಫಲರಾಗಿದ್ದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಅನುಚೇತನ್ ಮತ್ತು ಕಬ್ಬನ್ ಪಾರ್ಕ್‌ ಪೊಲೀಸ್ ಠಾಣೆ ಅಧಿಕಾರಿ ಮಾರುತಿ.ಬಿ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್ ಮತ್ತೆ ಖಾಸಗಿ ದೂರು (ಪಿಸಿಆರ್‌) ನೀಡಿದೆ.

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಕೆಲಸ ಕೇಳಿಕೊಂಡು ಬಂದಿದ್ದ ಯುವತಿಯ ಮೇಲೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಕಬ್ಬನ್ ಪಾಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಸಂತ್ರಸ್ತೆ ಪರ ವಕೀಲ ಜಗದೀಶ್ ದೂರು ನೀಡಿದ ನಂತರ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಈಗ ದಿನೇಶ್ ಕಲ್ಲಹಳ್ಳಿ ದೂರನ್ನು ಆಧರಿಸಿಕೊಂಡು ಜನಾಧಿಕಾರ ಸಂಘರ್ಷ ಪರಿಷತ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಅನುಚೇತನ್ ಮತ್ತು ಕಬ್ಬನ್ ಪಾರ್ಕ್‌ ಪೊಲೀಸ್ ಠಾಣೆ ಅಧಿಕಾರಿ ಮಾರುತಿ.ಬಿ ವಿರುದ್ಧ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ದೂರು ದಾಖಲಿಸಿದೆ. ಈಗಾಗಲೇ ಕಳೆದ ಮಾರ್ಚ್ 17 ರಂದು ಕಬ್ಬನ್ ಪಾರ್ಕ್ ಠಾಣೆಯಲ್ಲಿ ಒಮ್ಮೆ ದೂರು ದಾಖಲಿಸಿದ್ದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿಗೆ ಕೊರೊನಾ ಎಂದ ಭೈರತಿ ಬಸವರಾಜ್, ಎಸ್‌ಐಟಿ ವಿಚಾರಣೆಗೆ ಗೈರು ಸಾಧ್ಯತೆ

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಜನಾಧಿಕಾರ ಸಂಘರ್ಷ ಪರಿಷತ್ ಸಹ ಅಧ್ಯಕ್ಷ  ಆದರ್ಶ ಐಯರ್, “ದಿನೇಶ್ ಕಲ್ಲಹಳ್ಳಿ ಅವರು ದೂರು ನೀಡಿದ ಕೂಡಲೇ ನಿರ್ಭಯಾ ಆಕ್ಟ್ ಪ್ರಕಾರ ತಕ್ಷಣ ಎಫ್‌ಐಆರ್‌ ದಾಖಲಿಸಬೇಕಿತ್ತು. ಆದರೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಅನುಚೇತನ್ ಮತ್ತು ಕಬ್ಬನ್ ಪಾರ್ಕ್‌ ಪೊಲೀಸ್ ಠಾಣೆ ಅಧಿಕಾರಿ ಮಾರುತಿ.ಬಿ ಅವರು ಈ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ಸಿಆರ್‌ಪಿಸಿ ಸೆಕ್ಷನ್ 36  ಪ್ರಕಾರ ಆಯುಕ್ತರಿರಲಿ, ಡಿಸಿಪಿ ಇರಲಿ ಅವರಿಗೆ FIR ದಾಖಲಿಸುವ ಭಾದ್ಯತೆ ಇದೆ. ಆದರೆ ಇವರು ಈ ಸೆಕ್ಷನ್ ಅನ್ನು ಉಲ್ಲಂಘಿಸಿದ್ದಾರೆ” ಎಂದರು.

ಮುಂದುವರೆದು “ಪ್ರಕರಣದ ಕತೆ ಏನೇ ಇರಲಿ. ಆದರೆ ದೂರು ನೀಡಿದ ತಕ್ಷಣ ಎಫ್‌ಐಆರ್‌ ದಾಖಲಿಸುವುದು ಅವರ ಭಾದ್ಯತೆ. ಅದಲ್ಲಿ ವಿಫಲರಾದರೆ ಸೆಕ್ಷನ್ 166 (ಎ) ಪ್ರಕಾರ ಕ್ರಿಮಿನಲ್ ಆಕ್ಷನ್ ತೆಗೆದುಕೊಳ್ಳಬಹುದು. ಹಾಗಾಗಿ ನಾವು ಇದರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದೇವೆ” ಎಂದಿದ್ದಾರೆ.

“ದಿನೇಶ್ ಕಲ್ಲಹಳ್ಳಿ  ದೂರು ನೀಡಿ 25 ದಿನಗಳಾಗಿದ್ದೂ ಅವರು FIR ದಾಖಲಿಸಿರಲಿಲ್ಲ. ಹೀಗಾಗಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಮಾರ್ಚ್ 17 ರಂದು ದೂರು ದಾಖಲಿಸಿದ್ದೇವು. ಅವರು ಅದನ್ನು ತೆಗೆದುಕೊಂಡಿರಲಿಲ್ಲ. ನಂತರ ಪೋಸ್ಟ್, ಈ-ಮೇಲ್ ಮೂಲಕ ಕ‌ಳಿಸಿದ್ದೆವು.  ಕಳೆದ ತಿಂಗಳು ಈ ದೂರು ಸರಿಯಿಲ್ಲ ಎಂದು ಹೇಳಿ ತಮ್ಮ ಮೇಲಿನ ಪ್ರಕರಣವನ್ನು ಅವರೇ ಮುಕ್ತಾಯಗೊಳಿಸಿದ್ದಾರೆ. ಹೀಗಾಗಿ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ (ನೃಪತುಂಗಾ ರಸ್ತೆಯ 8 ನೇ ಎಸಿಎಂಎಂ) ಮತ್ತೆ ದೂರು ದಾಖಲಿಸಿದೆ. ಮುಂದಿನ ವಿಚಾರಣೆ ಏಪ್ರಿಲ್ 16 ರಂದು ನಡೆಯಲಿದೆ” ಎಂದು ಪರಿಷತ್ ಸಹ ಅಧ್ಯಕ್ಷ ಆದರ್ಶ ಐಯರ್ ತಿಳಿಸಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದ ಸಂತ್ರಸ್ತೆ

ಪ್ರಕರಣದ ತನಿಖೆಗೆ ವಿಷೇಶ ತನಿಖಾ ತಂಡ ರಚಿಸಲಾಗಿದ್ದು, ಸಂತ್ರಸ್ತೆ ಕೂಡ ಬಹಿರಂಗವಾಗಿ ಕಾಣಿಸಿಕೊಂಡು ತನಿಖೆಗೆ ಸಹಕರಿಸುತ್ತಿದ್ದಾರೆ. ಆದರೆ ಪ್ರಕರಣದಲ್ಲಿ ಅತ್ಯಾಚಾರ ಆರೋಪಿಯಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೊರೊನಾ ಸೋಂಕಿಗೆ ಒಳಗಾಗಿದ್ದೇನೆ ಎಂದು ತಿಳಿಸಿ ವಿಚಾರಣೆಗೆ ಗೈರಾಗಿದ್ದಾರೆ. ಈ ನಡುವೆ ಪೊಲೀಸ್ ಅಧಿಕಾರಿಗಳ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ದೂರು ದಾಖಲಿಸಲು ಹೊರಟಿರುವುದು ಸಿಡಿ ಪ್ರಕರಣಕ್ಕೆ ಮತ್ತೊಂದು ಸ್ವರೂಪ ನೀಡಿದೆ.

ಜನಾಧಿಕಾರ ಸಂಘರ್ಷ ಪರಿಷತ್ ನೀಡಿರುವ ದೂರಿನ ಪ್ರತಿ ಓದಲು ಇಲ್ಲಿ ಕ್ಲಿಕ್ ಮಾಡಿ.

PCR CoP DCP PI 166AIPC Annexures PresentationIndex by naanugauri on Scribd


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...