Homeಕರ್ನಾಟಕಸಾರಿಗೆ ನೌಕರರ ಮುಷ್ಕರಕ್ಕೆ ಬೆದರಿದ ಬಿಎಸ್‌ವೈ ಸರ್ಕಾರ; ಎಸ್ಮಾ ಜಾರಿ ಎಚ್ಚರಿಕೆ

ಸಾರಿಗೆ ನೌಕರರ ಮುಷ್ಕರಕ್ಕೆ ಬೆದರಿದ ಬಿಎಸ್‌ವೈ ಸರ್ಕಾರ; ಎಸ್ಮಾ ಜಾರಿ ಎಚ್ಚರಿಕೆ

- Advertisement -
- Advertisement -

ಬುಧವಾರ (ಏಪ್ರಿಲ್ 07) ಸಾರಿಗೆ ನೌಕರರು ಮುಷ್ಕರ ಹೂಡಲು ಸಜ್ಜಾಗಿದ್ದು, ರಾಜ್ಯ ಸರ್ಕಾರದ ವಿರುದ್ದ ಸಂಘರ್ಷಕ್ಕೆ ಮುಂದಾಗಿದ್ದಾರೆ. ಆದರೆ ಸರ್ಕಾರ ಮಾತ್ರ ನೌಕರರ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಇದರ ಹೊರತಾಗಿಯೂ ನೌಕರರು ಮುಷ್ಕರ ನಡೆಸಿದರೆ ಸರ್ಕಾರ ‘ಎಸ್ಮಾ’ ಜಾರಿಗೆ ಮುಂದಾಗಿದೆ ಎಂದು ಹೇಳಲಾಗಿದೆ.

ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರು ಪ್ರಮುಖವಾಗಿ, ‘ಆರನೇ ವೇತನ ಆಯೋಗದ ವರದಿ’ ಜಾರಿಯಾಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಸರ್ಕಾರವು ಆರನೇ ವೇತನ ಜಾರಿ ಬದಲು ಸಾರಿಗೆ ನೌಕರರಿಗೆ 8% ರಷ್ಟು ಸಂಬಳ ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಆದರೆ ಇದನ್ನು ನೌಕರರು ನಿರಾಕರಿಸಿದ್ದು, “ತಮಗೆ ವೇತನ ಹೆಚ್ಚಳ ಬೇಕಾಗಿಲ್ಲ. ಆರನೇ ವೇತನ ಆಯೋಗ ಜಾರಿಯೇ ಆಗಬೇಕು. ಅದಕ್ಕಾಗಿ ಬುಧವಾರ ಮುಷ್ಕರ ನಡೆಸಿಯೇ ತೀರುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿಗೆ ಕೊರೊನಾ ಎಂದ ಭೈರತಿ ಬಸವರಾಜ್, ಎಸ್‌ಐಟಿ ವಿಚಾರಣೆಗೆ ಗೈರು ಸಾಧ್ಯತೆ

ನೌಕರರ ಮುಷ್ಕರ ಹಿನ್ನಲೆಯಲ್ಲಿ ಇಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಇದರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಸಾರಿಗೆ ಇಲಾಖೆ ಎಸಿಎಸ್ ಅಂಜುಮ್ ಪರ್ವೇಜ್, KSRTC ಎಂಡಿ ಶಿವಯೋಗಿ ಕಳಸದ್, ಬಿಎಂಟಿಸಿ ಎಂಡಿ ಶಿಖಾ, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ ಸೇರಿ ಹಲವರು ಪಾಲ್ಗೊಂಡಿದ್ದರು.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ನೌಕರರು ಮುಷ್ಕರ ಹೂಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರ ವೇತನ ಹೆಚ್ಚಳದ ಭರವಸೆಗಳನ್ನು ನೀಡಿದರೂ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ವಿಚಾರದಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಭೆಯಲ್ಲಿ ಸೂಚಿಸಿದರೆಂಬ ಮಾಹಿತಿಯಿದೆ.

ಇದಾಗಿಯೂ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಸಾರಿಗೆ ನೌಕರರ ಜೊತೆ ಸಂಧಾನ ಸಾಧ್ಯತೆ ಇಲ್ಲವೇ ಇಲ್ಲ. ಎಸ್ಮಾ ಜಾರಿ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ಕಟ್ಟುನಿಟ್ಟಾಗಿ ವ್ಯವಹರಿಸುವಂತೆ ಮುಖ್ಯಮಂತ್ರಿ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಕರ್ತವ್ಯಕ್ಕೆ ಗೈರಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾರಿಗೆ ನೌಕರರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದ ಸಂತ್ರಸ್ತೆ

“ಸಾರಿಗೆ ನೌಕರರ ಬೇಡಿಕೆ ನಮಗೆ ಗೊತ್ತಿದೆ. ಕೊರೊನಾ ಕಾರಣದಿಂದ ಸಾರಿಗೆ ಇಲಾಖೆ ಸಂಕಷ್ಟದಲ್ಲಿದೆ. ಆದರೂ ಕೂಡ ಸಿಬ್ಬಂದಿಯ ವೇತನ ಕಡಿತ ಮಾಡದೇ ಪೂರ್ಣ ಸಂಬಳ ನೀಡಿ ಜವಾಬ್ದಾರಿ ಮೆರೆದಿದ್ದೇವೆ. ಡಿಸಿಎಂ ಲಕ್ಷ್ಮಣ ಸವದಿ ಮೇ 2ರ ನಂತರ ಸಾರಿಗೆ ನೌಕರರ ಬೇಡಿಕೆ ಈಡೇರಿಸುವುದಾಗಿ ಹೇಳಿದ್ದಾರೆ. 6ನೇ ವೇತನ ಆಯೋಗದ ಶಿಫಾರಸಿನಂತೆ ಸಂಬಳ ಹೆಚ್ಚಳ ಸಾಧ್ಯವಿಲ್ಲ. ಆದರೆ, 8% ದಷ್ಟು ಸಂಬಳ ಹೆಚ್ಚಳಕ್ಕೆ ಸರ್ಕಾರ ಸಿದ್ಧವಿದೆ. ಚುನಾವಣಾ ಆಯೋಗ ಅನುಮತಿ ನೀಡಿದರೆ ಈ ಆದೇಶ ಹೊರಡಿಸುತ್ತೇವೆ” ಎಂದು ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.

‘ಎಸ್ಮಾ’ ಎಂದರೆ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ. ಇದು ಜಾರಿಯಾದರೆ, ಜನರಿಗೆ ಅತ್ಯಗತ್ಯ ಎನಿಸುವ ಸೇವೆಗಳನ್ನ ಒದಗಿಸುವವರು ಉದ್ದೇಶಪೂರ್ವಕವಾಗಿ ಕರ್ತವ್ಯಕ್ಕೆ ಗೈರಾದಾಗ ಕಾನೂನು ರೀತಿ ಕ್ರಮ ಕೈಗೊಳ್ಳಬಹುದು. ಒಂದು ವೇಳೆ ಎಸ್ಮಾ ಜಾರಿಯಾಗಿ, ಸಾರಿಗೆ ನೌಕರರು ಮುಷ್ಕರದಲ್ಲಿ ಪಾಲ್ಗೊಂಡರೆ ಅವರನ್ನ ಸೇವೆಯಿಂದಲೇ ಅಮಾನತುಗೊಳಿಸುವ ಅವಕಾಶವನ್ನು ಈ ಕಾಯ್ದೆ ನೀಡುತ್ತದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್‌, “ಸರ್ಕಾರವೇನು ಸರ್ವಾಧಿಕಾರಿಗಳಲ್ಲ, ಎಸ್ಮಾ ಜಾರಿ ಮಾಡುವುದಾದರೆ ಮಾಡಲಿ. ನಾವು ಅದಕ್ಕೆ ಸಿದ್ದರಿದ್ದೇವೆ” ಎಂದು ಕಿಡಿ ಕಾರಿದ್ದಾರೆ. ಅಲ್ಲದೆ ಹೋರಾಟದ ಬಗ್ಗೆ ಅವರು ಭಾನುವಾರದಂದು ಸ್ಪಷ್ಟವಾಗಿ ತಿಳಿಸಿದ್ದು, ಅವರ ಹೇಳಿಕೆಯನ್ನು ಕೆಳಗೆ ನೋಡಬಹುದಾಗಿದೆ.


ಇದನ್ನೂ ಓದಿ: ಕೇರಳದಲ್ಲಿ ಹಿಂದೂಗಳ ಬೆಂಬಲದಿಂದ BJP 10ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ: ನಳಿನ್ ಕುಮಾರ್ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...