Homeಕರ್ನಾಟಕಸಾರಿಗೆ ನೌಕರರ ಮುಷ್ಕರಕ್ಕೆ ಬೆದರಿದ ಬಿಎಸ್‌ವೈ ಸರ್ಕಾರ; ಎಸ್ಮಾ ಜಾರಿ ಎಚ್ಚರಿಕೆ

ಸಾರಿಗೆ ನೌಕರರ ಮುಷ್ಕರಕ್ಕೆ ಬೆದರಿದ ಬಿಎಸ್‌ವೈ ಸರ್ಕಾರ; ಎಸ್ಮಾ ಜಾರಿ ಎಚ್ಚರಿಕೆ

- Advertisement -
- Advertisement -

ಬುಧವಾರ (ಏಪ್ರಿಲ್ 07) ಸಾರಿಗೆ ನೌಕರರು ಮುಷ್ಕರ ಹೂಡಲು ಸಜ್ಜಾಗಿದ್ದು, ರಾಜ್ಯ ಸರ್ಕಾರದ ವಿರುದ್ದ ಸಂಘರ್ಷಕ್ಕೆ ಮುಂದಾಗಿದ್ದಾರೆ. ಆದರೆ ಸರ್ಕಾರ ಮಾತ್ರ ನೌಕರರ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಇದರ ಹೊರತಾಗಿಯೂ ನೌಕರರು ಮುಷ್ಕರ ನಡೆಸಿದರೆ ಸರ್ಕಾರ ‘ಎಸ್ಮಾ’ ಜಾರಿಗೆ ಮುಂದಾಗಿದೆ ಎಂದು ಹೇಳಲಾಗಿದೆ.

ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರು ಪ್ರಮುಖವಾಗಿ, ‘ಆರನೇ ವೇತನ ಆಯೋಗದ ವರದಿ’ ಜಾರಿಯಾಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಸರ್ಕಾರವು ಆರನೇ ವೇತನ ಜಾರಿ ಬದಲು ಸಾರಿಗೆ ನೌಕರರಿಗೆ 8% ರಷ್ಟು ಸಂಬಳ ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಆದರೆ ಇದನ್ನು ನೌಕರರು ನಿರಾಕರಿಸಿದ್ದು, “ತಮಗೆ ವೇತನ ಹೆಚ್ಚಳ ಬೇಕಾಗಿಲ್ಲ. ಆರನೇ ವೇತನ ಆಯೋಗ ಜಾರಿಯೇ ಆಗಬೇಕು. ಅದಕ್ಕಾಗಿ ಬುಧವಾರ ಮುಷ್ಕರ ನಡೆಸಿಯೇ ತೀರುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿಗೆ ಕೊರೊನಾ ಎಂದ ಭೈರತಿ ಬಸವರಾಜ್, ಎಸ್‌ಐಟಿ ವಿಚಾರಣೆಗೆ ಗೈರು ಸಾಧ್ಯತೆ

ನೌಕರರ ಮುಷ್ಕರ ಹಿನ್ನಲೆಯಲ್ಲಿ ಇಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಇದರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಸಾರಿಗೆ ಇಲಾಖೆ ಎಸಿಎಸ್ ಅಂಜುಮ್ ಪರ್ವೇಜ್, KSRTC ಎಂಡಿ ಶಿವಯೋಗಿ ಕಳಸದ್, ಬಿಎಂಟಿಸಿ ಎಂಡಿ ಶಿಖಾ, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ ಸೇರಿ ಹಲವರು ಪಾಲ್ಗೊಂಡಿದ್ದರು.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ನೌಕರರು ಮುಷ್ಕರ ಹೂಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರ ವೇತನ ಹೆಚ್ಚಳದ ಭರವಸೆಗಳನ್ನು ನೀಡಿದರೂ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ವಿಚಾರದಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಭೆಯಲ್ಲಿ ಸೂಚಿಸಿದರೆಂಬ ಮಾಹಿತಿಯಿದೆ.

ಇದಾಗಿಯೂ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಸಾರಿಗೆ ನೌಕರರ ಜೊತೆ ಸಂಧಾನ ಸಾಧ್ಯತೆ ಇಲ್ಲವೇ ಇಲ್ಲ. ಎಸ್ಮಾ ಜಾರಿ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ಕಟ್ಟುನಿಟ್ಟಾಗಿ ವ್ಯವಹರಿಸುವಂತೆ ಮುಖ್ಯಮಂತ್ರಿ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಕರ್ತವ್ಯಕ್ಕೆ ಗೈರಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾರಿಗೆ ನೌಕರರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದ ಸಂತ್ರಸ್ತೆ

“ಸಾರಿಗೆ ನೌಕರರ ಬೇಡಿಕೆ ನಮಗೆ ಗೊತ್ತಿದೆ. ಕೊರೊನಾ ಕಾರಣದಿಂದ ಸಾರಿಗೆ ಇಲಾಖೆ ಸಂಕಷ್ಟದಲ್ಲಿದೆ. ಆದರೂ ಕೂಡ ಸಿಬ್ಬಂದಿಯ ವೇತನ ಕಡಿತ ಮಾಡದೇ ಪೂರ್ಣ ಸಂಬಳ ನೀಡಿ ಜವಾಬ್ದಾರಿ ಮೆರೆದಿದ್ದೇವೆ. ಡಿಸಿಎಂ ಲಕ್ಷ್ಮಣ ಸವದಿ ಮೇ 2ರ ನಂತರ ಸಾರಿಗೆ ನೌಕರರ ಬೇಡಿಕೆ ಈಡೇರಿಸುವುದಾಗಿ ಹೇಳಿದ್ದಾರೆ. 6ನೇ ವೇತನ ಆಯೋಗದ ಶಿಫಾರಸಿನಂತೆ ಸಂಬಳ ಹೆಚ್ಚಳ ಸಾಧ್ಯವಿಲ್ಲ. ಆದರೆ, 8% ದಷ್ಟು ಸಂಬಳ ಹೆಚ್ಚಳಕ್ಕೆ ಸರ್ಕಾರ ಸಿದ್ಧವಿದೆ. ಚುನಾವಣಾ ಆಯೋಗ ಅನುಮತಿ ನೀಡಿದರೆ ಈ ಆದೇಶ ಹೊರಡಿಸುತ್ತೇವೆ” ಎಂದು ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.

‘ಎಸ್ಮಾ’ ಎಂದರೆ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ. ಇದು ಜಾರಿಯಾದರೆ, ಜನರಿಗೆ ಅತ್ಯಗತ್ಯ ಎನಿಸುವ ಸೇವೆಗಳನ್ನ ಒದಗಿಸುವವರು ಉದ್ದೇಶಪೂರ್ವಕವಾಗಿ ಕರ್ತವ್ಯಕ್ಕೆ ಗೈರಾದಾಗ ಕಾನೂನು ರೀತಿ ಕ್ರಮ ಕೈಗೊಳ್ಳಬಹುದು. ಒಂದು ವೇಳೆ ಎಸ್ಮಾ ಜಾರಿಯಾಗಿ, ಸಾರಿಗೆ ನೌಕರರು ಮುಷ್ಕರದಲ್ಲಿ ಪಾಲ್ಗೊಂಡರೆ ಅವರನ್ನ ಸೇವೆಯಿಂದಲೇ ಅಮಾನತುಗೊಳಿಸುವ ಅವಕಾಶವನ್ನು ಈ ಕಾಯ್ದೆ ನೀಡುತ್ತದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್‌, “ಸರ್ಕಾರವೇನು ಸರ್ವಾಧಿಕಾರಿಗಳಲ್ಲ, ಎಸ್ಮಾ ಜಾರಿ ಮಾಡುವುದಾದರೆ ಮಾಡಲಿ. ನಾವು ಅದಕ್ಕೆ ಸಿದ್ದರಿದ್ದೇವೆ” ಎಂದು ಕಿಡಿ ಕಾರಿದ್ದಾರೆ. ಅಲ್ಲದೆ ಹೋರಾಟದ ಬಗ್ಗೆ ಅವರು ಭಾನುವಾರದಂದು ಸ್ಪಷ್ಟವಾಗಿ ತಿಳಿಸಿದ್ದು, ಅವರ ಹೇಳಿಕೆಯನ್ನು ಕೆಳಗೆ ನೋಡಬಹುದಾಗಿದೆ.


ಇದನ್ನೂ ಓದಿ: ಕೇರಳದಲ್ಲಿ ಹಿಂದೂಗಳ ಬೆಂಬಲದಿಂದ BJP 10ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ: ನಳಿನ್ ಕುಮಾರ್ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...