Homeಕರ್ನಾಟಕಸಾರಿಗೆ ನೌಕರರ ಮುಷ್ಕರಕ್ಕೆ ಬೆದರಿದ ಬಿಎಸ್‌ವೈ ಸರ್ಕಾರ; ಎಸ್ಮಾ ಜಾರಿ ಎಚ್ಚರಿಕೆ

ಸಾರಿಗೆ ನೌಕರರ ಮುಷ್ಕರಕ್ಕೆ ಬೆದರಿದ ಬಿಎಸ್‌ವೈ ಸರ್ಕಾರ; ಎಸ್ಮಾ ಜಾರಿ ಎಚ್ಚರಿಕೆ

- Advertisement -
- Advertisement -

ಬುಧವಾರ (ಏಪ್ರಿಲ್ 07) ಸಾರಿಗೆ ನೌಕರರು ಮುಷ್ಕರ ಹೂಡಲು ಸಜ್ಜಾಗಿದ್ದು, ರಾಜ್ಯ ಸರ್ಕಾರದ ವಿರುದ್ದ ಸಂಘರ್ಷಕ್ಕೆ ಮುಂದಾಗಿದ್ದಾರೆ. ಆದರೆ ಸರ್ಕಾರ ಮಾತ್ರ ನೌಕರರ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಇದರ ಹೊರತಾಗಿಯೂ ನೌಕರರು ಮುಷ್ಕರ ನಡೆಸಿದರೆ ಸರ್ಕಾರ ‘ಎಸ್ಮಾ’ ಜಾರಿಗೆ ಮುಂದಾಗಿದೆ ಎಂದು ಹೇಳಲಾಗಿದೆ.

ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರು ಪ್ರಮುಖವಾಗಿ, ‘ಆರನೇ ವೇತನ ಆಯೋಗದ ವರದಿ’ ಜಾರಿಯಾಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಸರ್ಕಾರವು ಆರನೇ ವೇತನ ಜಾರಿ ಬದಲು ಸಾರಿಗೆ ನೌಕರರಿಗೆ 8% ರಷ್ಟು ಸಂಬಳ ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಆದರೆ ಇದನ್ನು ನೌಕರರು ನಿರಾಕರಿಸಿದ್ದು, “ತಮಗೆ ವೇತನ ಹೆಚ್ಚಳ ಬೇಕಾಗಿಲ್ಲ. ಆರನೇ ವೇತನ ಆಯೋಗ ಜಾರಿಯೇ ಆಗಬೇಕು. ಅದಕ್ಕಾಗಿ ಬುಧವಾರ ಮುಷ್ಕರ ನಡೆಸಿಯೇ ತೀರುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿಗೆ ಕೊರೊನಾ ಎಂದ ಭೈರತಿ ಬಸವರಾಜ್, ಎಸ್‌ಐಟಿ ವಿಚಾರಣೆಗೆ ಗೈರು ಸಾಧ್ಯತೆ

ನೌಕರರ ಮುಷ್ಕರ ಹಿನ್ನಲೆಯಲ್ಲಿ ಇಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಇದರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಸಾರಿಗೆ ಇಲಾಖೆ ಎಸಿಎಸ್ ಅಂಜುಮ್ ಪರ್ವೇಜ್, KSRTC ಎಂಡಿ ಶಿವಯೋಗಿ ಕಳಸದ್, ಬಿಎಂಟಿಸಿ ಎಂಡಿ ಶಿಖಾ, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ ಸೇರಿ ಹಲವರು ಪಾಲ್ಗೊಂಡಿದ್ದರು.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ನೌಕರರು ಮುಷ್ಕರ ಹೂಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರ ವೇತನ ಹೆಚ್ಚಳದ ಭರವಸೆಗಳನ್ನು ನೀಡಿದರೂ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ವಿಚಾರದಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಭೆಯಲ್ಲಿ ಸೂಚಿಸಿದರೆಂಬ ಮಾಹಿತಿಯಿದೆ.

ಇದಾಗಿಯೂ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಸಾರಿಗೆ ನೌಕರರ ಜೊತೆ ಸಂಧಾನ ಸಾಧ್ಯತೆ ಇಲ್ಲವೇ ಇಲ್ಲ. ಎಸ್ಮಾ ಜಾರಿ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ಕಟ್ಟುನಿಟ್ಟಾಗಿ ವ್ಯವಹರಿಸುವಂತೆ ಮುಖ್ಯಮಂತ್ರಿ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಕರ್ತವ್ಯಕ್ಕೆ ಗೈರಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾರಿಗೆ ನೌಕರರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದ ಸಂತ್ರಸ್ತೆ

“ಸಾರಿಗೆ ನೌಕರರ ಬೇಡಿಕೆ ನಮಗೆ ಗೊತ್ತಿದೆ. ಕೊರೊನಾ ಕಾರಣದಿಂದ ಸಾರಿಗೆ ಇಲಾಖೆ ಸಂಕಷ್ಟದಲ್ಲಿದೆ. ಆದರೂ ಕೂಡ ಸಿಬ್ಬಂದಿಯ ವೇತನ ಕಡಿತ ಮಾಡದೇ ಪೂರ್ಣ ಸಂಬಳ ನೀಡಿ ಜವಾಬ್ದಾರಿ ಮೆರೆದಿದ್ದೇವೆ. ಡಿಸಿಎಂ ಲಕ್ಷ್ಮಣ ಸವದಿ ಮೇ 2ರ ನಂತರ ಸಾರಿಗೆ ನೌಕರರ ಬೇಡಿಕೆ ಈಡೇರಿಸುವುದಾಗಿ ಹೇಳಿದ್ದಾರೆ. 6ನೇ ವೇತನ ಆಯೋಗದ ಶಿಫಾರಸಿನಂತೆ ಸಂಬಳ ಹೆಚ್ಚಳ ಸಾಧ್ಯವಿಲ್ಲ. ಆದರೆ, 8% ದಷ್ಟು ಸಂಬಳ ಹೆಚ್ಚಳಕ್ಕೆ ಸರ್ಕಾರ ಸಿದ್ಧವಿದೆ. ಚುನಾವಣಾ ಆಯೋಗ ಅನುಮತಿ ನೀಡಿದರೆ ಈ ಆದೇಶ ಹೊರಡಿಸುತ್ತೇವೆ” ಎಂದು ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.

‘ಎಸ್ಮಾ’ ಎಂದರೆ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ. ಇದು ಜಾರಿಯಾದರೆ, ಜನರಿಗೆ ಅತ್ಯಗತ್ಯ ಎನಿಸುವ ಸೇವೆಗಳನ್ನ ಒದಗಿಸುವವರು ಉದ್ದೇಶಪೂರ್ವಕವಾಗಿ ಕರ್ತವ್ಯಕ್ಕೆ ಗೈರಾದಾಗ ಕಾನೂನು ರೀತಿ ಕ್ರಮ ಕೈಗೊಳ್ಳಬಹುದು. ಒಂದು ವೇಳೆ ಎಸ್ಮಾ ಜಾರಿಯಾಗಿ, ಸಾರಿಗೆ ನೌಕರರು ಮುಷ್ಕರದಲ್ಲಿ ಪಾಲ್ಗೊಂಡರೆ ಅವರನ್ನ ಸೇವೆಯಿಂದಲೇ ಅಮಾನತುಗೊಳಿಸುವ ಅವಕಾಶವನ್ನು ಈ ಕಾಯ್ದೆ ನೀಡುತ್ತದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್‌, “ಸರ್ಕಾರವೇನು ಸರ್ವಾಧಿಕಾರಿಗಳಲ್ಲ, ಎಸ್ಮಾ ಜಾರಿ ಮಾಡುವುದಾದರೆ ಮಾಡಲಿ. ನಾವು ಅದಕ್ಕೆ ಸಿದ್ದರಿದ್ದೇವೆ” ಎಂದು ಕಿಡಿ ಕಾರಿದ್ದಾರೆ. ಅಲ್ಲದೆ ಹೋರಾಟದ ಬಗ್ಗೆ ಅವರು ಭಾನುವಾರದಂದು ಸ್ಪಷ್ಟವಾಗಿ ತಿಳಿಸಿದ್ದು, ಅವರ ಹೇಳಿಕೆಯನ್ನು ಕೆಳಗೆ ನೋಡಬಹುದಾಗಿದೆ.


ಇದನ್ನೂ ಓದಿ: ಕೇರಳದಲ್ಲಿ ಹಿಂದೂಗಳ ಬೆಂಬಲದಿಂದ BJP 10ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ: ನಳಿನ್ ಕುಮಾರ್ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...