Homeಕರ್ನಾಟಕ‘ಮುಷ್ಕರ ಕೈಬಿಡದಿದ್ದರೆ ಕಠಿಣ ಕ್ರಮ’ - ಸಾರಿಗೆ ನೌಕರರಿಗೆ ಮುಖ್ಯಮಂತ್ರಿ ಎಚ್ಚರಿಕೆ

‘ಮುಷ್ಕರ ಕೈಬಿಡದಿದ್ದರೆ ಕಠಿಣ ಕ್ರಮ’ – ಸಾರಿಗೆ ನೌಕರರಿಗೆ ಮುಖ್ಯಮಂತ್ರಿ ಎಚ್ಚರಿಕೆ

- Advertisement -
- Advertisement -

ಸಾರಿಗೆ ನೌಕರರು ನಾಳೆ ರಾಜ್ಯದಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದು, ಮುಖ್ಯವಾಗಿ ಆರನೇ ಆಯೋಗದ ವರದಿ ಜಾರಿಗೆ ಸರ್ಕಾರದೊಂದಿಗೆ ಬೇಡಿಕೆ ಇಟ್ಟಿದ್ದಾರೆ. ಆದರೆ ಇದಕ್ಕೆ ಹುಬ್ಬಳ್ಳಿಯಲ್ಲಿ ಮಂಗಳವಾರ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಮುಷ್ಕರ ಕೈ ಬಿಡದಿದ್ದರೆ ಸರ್ಕಾದಿಂದ ಕಟ್ಟುನಿಟ್ಟಿನ ಕ್ರಮ ಖಚಿತ ಎಂದು ಸಾರಿಗೆ ನೌಕರರಿಗೆ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈಗಾಗಲೇ ಸಾರಿಗೆ ನೌಕರರ ಒಂಬತ್ತು ಬೇಡಿಕೆಯಲ್ಲಿ ಎಂಟು ಬೇಡಿಕೆ ಈಡೇರಿಸಿದ್ದೇವೆ. ಮುಂದೆಯೂ ಸಾರಿಗೆ ನೌಕರರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುವುದು. ಇಷ್ಟಾಗಿಯೂ ನೌಕರರು ಮುಷ್ಕರ ಮಾಡುವುದು ಸರಿಯಲ್ಲ. ಸರ್ಕಾರ ಬಿಗಿಯಾದ ಕ್ರಮ ಕೈಗೊಳ್ಳಲು ಅವಕಾಶ ಮಾಡಿಕೊಡಬಾರದು. ಮುಷ್ಕರದ ನಿರ್ಧಾರ ಕೈ ಬಿಟ್ಟು ಸರ್ಕಾರಕ್ಕೆ ಸಹಕರಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರಕ್ಕೆ ಬೆದರಿದ ಬಿಎಸ್‌ವೈ ಸರ್ಕಾರ; ಎಸ್ಮಾ ಜಾರಿ ಎಚ್ಚರಿಕೆ

ಮುಷ್ಕರ ಕರೆ ಹಿನ್ನೆಲೆಯಲ್ಲಿ ಈಗಾಗಲೇ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲೂ ತಯಾರಿ ಮಾಡಲಾಗಿದೆ. ಪರ್ಮಿಟ್ ಇರುವ ಖಾಸಗಿ ಬಸ್‌ಗಳ ಓಡಾಟಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ರೈಲು ಸಂಚಾರ ಹೆಚ್ಚಳಕ್ಕೂ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರ ಬಿಗಿಯಾದ ಕ್ರಮ ಕೈಗೊಳ್ಳುವ ಮುನ್ನವೇ ಸಾರಿಗೆ ನೌಕರರು ಮುಷ್ಕರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದಲ್ಲಿ ಮುಷ್ಕರ ನಿರತರ ಮೇಲೆ ಕಠಿಣ ಕ್ರಮ ಖಚಿತ ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಸಾರಿಗೆ ನೌಕರರು ಮುಷ್ಕರ ಹೂಡಲು ಸಜ್ಜಾಗಿದ್ದು, ರಾಜ್ಯ ಸರ್ಕಾರದ ವಿರುದ್ದ ಸಂಘರ್ಷಕ್ಕೆ ಮುಂದಾಗಿದ್ದಾರೆ. ಆದರೆ ಸರ್ಕಾರ ಮಾತ್ರ ನೌಕರರ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಇದರ ಹೊರತಾಗಿಯೂ ನೌಕರರು ಮುಷ್ಕರ ನಡೆಸಿದರೆ ಸರ್ಕಾರ ‘ಎಸ್ಮಾ’ ಜಾರಿಗೆ ಯೋಚಿಸಲಾಗುತ್ತಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಇಂದು ಮಧ್ಯಾಹ್ನ ಹೇಳಿದ್ದರು.

ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರು ಪ್ರಮುಖವಾಗಿ, ‘ಆರನೇ ವೇತನ ಆಯೋಗದ ವರದಿ’ ಜಾರಿಯಾಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಸರ್ಕಾರವು ಆರನೇ ವೇತನ ಜಾರಿ ಬದಲು ಸಾರಿಗೆ ನೌಕರರಿಗೆ 8% ರಷ್ಟು ಸಂಬಳ ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಆದರೆ ಇದನ್ನು ನೌಕರರು ನಿರಾಕರಿಸಿದ್ದು, “ತಮಗೆ ವೇತನ ಹೆಚ್ಚಳ ಬೇಕಾಗಿಲ್ಲ. ಆರನೇ ವೇತನ ಆಯೋಗ ಜಾರಿಯೇ ಆಗಬೇಕು. ಅದಕ್ಕಾಗಿ ಬುಧವಾರ ಮುಷ್ಕರ ನಡೆಸಿಯೇ ತೀರುತ್ತೇವೆ” ಎಂದು ಹೇಳಿದ್ದಾರೆ

ಇದನ್ನೂ ಓದಿ: ಅನಿಲ್ ದೇಶ್ಮುಖ್ ವಿರುದ್ಧ ಸಿಬಿಐ ತನಿಖೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...