Homeಅಂಕಣಗಳುಸಿಇಟಿ ಹೆಸರಲ್ಲಿ ಕಾನೂನು ಉಲ್ಲಂಘಿಸುತ್ತಿದೆ ರಾಜ್ಯ ಸರ್ಕಾರ

ಸಿಇಟಿ ಹೆಸರಲ್ಲಿ ಕಾನೂನು ಉಲ್ಲಂಘಿಸುತ್ತಿದೆ ರಾಜ್ಯ ಸರ್ಕಾರ

- Advertisement -
| ಹೆಚ್.ಎಸ್‍.ದೊರೆಸ್ವಾಮಿ |
ಕರ್ನಾಟಕ ಸರ್ಕಾರ ಅನೇಕ ವರ್ಷಗಳಿಂದ common entrance test ನಡೆಸುತ್ತಿದೆ. 2ನೇ ವರ್ಷದ ಪದವಿ ಪೂರ್ವ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಕೂಡಲು ಅರ್ಹರು. ಸಿಇಟಿ ಪರೀಕ್ಷೆ ಬರೆದವರಿಗೆ ಈ ಪರೀಕ್ಷೆಯಲ್ಲಿ ಬಂದ ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು. ಪಿಯುಸಿಯಲ್ಲಿ ಬಂದ ಅಂಕಗಳನ್ನೂ ಈ ಸಂದರ್ಭದಲ್ಲಿ ಪರಿಗಣಿಸಬೇಕಾದ್ದೂ ಅಗತ್ಯ. ಆದರೆ ಅದನ್ನು ಕಡೆಗಣಿಸಲಾಗಿದೆ.
ಸಿಇಟಿ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದ್ದು ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು ಸೀಟುಗಳು ಅದಕ್ಕಿಂತ ಕಡಿಮೆ ಇದ್ದ ಕಾರಣದಿಂದ. 2013ರಲ್ಲಿ ಸಲ್ಲಿಸಿದ ರಿಟ್ ಅರ್ಜಿಗೆ ಸಂಬಂಧಪಟ್ಟಂತೆ 3-04-2014ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯ ‘ಸೀಟುಗಳು ಹೆಚ್ಚಾಗಿದ್ದು ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದ್ದರೆ ಸಿಇಟಿ ಪರೀಕ್ಷೆ ನಡೆಸುವ ಅಗತ್ಯವಿಲ್ಲ. ಪರಿಸ್ಥಿತಿ ಹೀಗಿದ್ದೂ ಸಿಇಟಿ ಪರೀಕ್ಷೆ ನಡೆಸುವುದು ಅರ್ಥಹೀನ’ ಎಂದು ತೀರ್ಪಿನಲ್ಲಿ ಹೇಳಿತು.
2013ರಲ್ಲಿ ಪಿಯುನಲ್ಲಿ ಉತ್ತೀರ್ಣರಾದ ಒಂದು ಸಾವಿರ ವಿದ್ಯಾರ್ಥಿಗಳು ಡೆಂಟಲ್ ಕಾಲೇಜುಗಳಿಗೆ ನೇರವಾಗಿ ಪ್ರವೇಶ ಪಡೆದರು. ಈ ವಿದ್ಯಾರ್ಥಿಗಳಿಗೆ ‘ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ’ ನೋಟಿಸ್ ನೀಡಿತು. ಆಗ ಈ ವಿದ್ಯಾರ್ಥಿಗಳು ಕೋರ್ಟ್ ಮೊರೆ ಹೊಕ್ಕಿದ್ದು, ಸಿಇಟಿ ಪರೀಕ್ಷೆಗೆ ಹೋಗದೆ ನೇರವಾಗಿ ಡೆಂಟಲ್ ಕಾಲೇಜು ಸೇರಿದ್ದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ನ್ಯಾಯಾಲಯ ಅವಕಾಶ ಕಲ್ಪಿಸಿಕೊಟ್ಟಿತು. ಸರ್ಕಾರ ನ್ಯಾಯವಾಗಿ ಹೈಕೋರ್ಟ್‍ನ ಆಜ್ಞೆಯನ್ನು ಪಾಲನೆ ಮಾಡಬೇಕಾಗಿತ್ತು. ಸಿಇಟಿ ರದ್ದುಗೊಳಿಸಬೇಕಾಗಿತ್ತು. ಆದರೆ ಕರ್ನಾಟಕ ಸರ್ಕಾರ, ಎರಡನೇ ವರ್ಷದ ಪರೀಕ್ಷೆಯಲ್ಲಿ ಪಾಸಾದವರನ್ನು ಸಿಇಟಿಗೆ ಕೂಡಿಸುವ ಬದಲು ಎರಡನೇ ವರ್ಷದ ಪಿಯುಸಿಯಲ್ಲಿ ಓದುತ್ತಿದ್ದ, ಇನ್ನೂ ಕೊನೆ ಪರೀಕ್ಷೆ ಬರೆಯದೇ ಇದ್ದವರನ್ನು ಸಿಇಟಿ ಪರೀಕ್ಷೆಗೆ ಕೂಡಿಸುವ ಹುನ್ನಾರ ಮಾಡಿತು. ಹೀಗೆ ಸಿಇಟಿಗೆ ಕೂಡುವ ಎಲ್ಲಾ ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗೆ ತಲಾ 500ರೂನಂತೆ ವಿದ್ಯಾರ್ಥಿನಿಗೆ ತಲಾ 250ರೂ ನಂತೆ ಪರೀಕ್ಷೆ ಶುಲ್ಕ ಕಟ್ಟಿಸಿಕೊಳ್ಳಲು ತೀರ್ಮಾನಿಸಿತು. ಅಭ್ಯರ್ಥಿ ಅನುತ್ತೀರ್ಣನಾಗಲಿ ಅಥವಾ ಉತ್ತೀರ್ಣನಾಗಲಿ ಅವರು ಕಟ್ಟಿದ ಹಣವನ್ನು ಹಿಂದಿರುಗಿಸಲಾಗುವುದಿಲ್ಲ ಎಂದು ಖಚಿತಪಡಿಸಲಾಯಿತು. ಹೀಗೆ ಎರಡನೇ ಪಿಯುಸಿಯಲ್ಲಿ ಇರುವಾಗಲೇ ಸಿಇಟಿಗೆ ಕಟ್ಟಿದ ವಿದ್ಯಾರ್ಥಿಗಳ ವಿವರ ಹೀಗಿದೆ.
ವರ್ಷ ಸಿಇಟಿ ಪರೀಕ್ಷೆಗೆ ಕೂತವರು ಸೀಟಿನ ಅರ್ಹತೆ ಪಡೆದವರು ಅರ್ಹತೆ ಪಡೆಯದವರು
ಡಿಪ್ಲೊಮಾ ಕೊನೇ ವರ್ಷದಲ್ಲಿ ಓದುತ್ತಿದ್ದು ಕೊನೆಯ ಪರೀಕ್ಷೆ ಇನ್ನೂ ನಡೆಯದಿದ್ದಾಗ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವವರ ವಿವರ.
ವರ್ಷ ಸಿಇಟಿ ಪರೀಕ್ಷೆಗೆ ಹಜರಾದವರು ಅರ್ಹತೆ ಪಡೆದವರು ಅರ್ಹತೆ ಪಡೆಯದವರು
ಸರ್ಕಾರಕ್ಕೆ 2016, 17 ಮತ್ತು 18ರಲ್ಲಿ ವಿದ್ಯಾರ್ಥಿಗಳು ಕಟ್ಟಿದ ಹಣ
ಪ್ರತಿ ವರ್ಷ ಸಿಇಟಿಯಲ್ಲಿ ಪಾಸಾದವರೆಲ್ಲರಿಗೂ ಸೀಟು ಸಿಕ್ಕುತ್ತದೆ ಮಾತ್ರವಲ್ಲ, ಅನೇಕ ಕಾಲೇಜುಗಳಲ್ಲಿ ನಿಗದಿತ ಸೀಟು ಭರ್ತಿಯಾಗದೆ ಇರುವ ಪರಿಸ್ಥಿತಿ ಉದ್ಭವಿಸಿದೆ. ಅಂದರೆ ಖಾಸಗಿಯವರಿಗೆ ಕಾಲೇಜು ನಡೆಸಲು ಸರ್ಕಾರ ಉದಾರವಾಗಿ ಅವಕಾಶ ಮಾಡಿಕೊಡಲಾಗುತ್ತಿದೆ.
ವಿವಿಧ ಕಾಲೇಜುಗಳಲ್ಲಿ ಯಾವ ಯಾವ ವರ್ಷದಲ್ಲಿ ಎಷ್ಟೆಷ್ಡು ಸೀಟುಗಳು ಕೇಳುವವರಿಲ್ಲದೆ ಬಿದ್ದಿದೆ ಎಂಬುದರ ವಿವರ ಇಲ್ಲಿ ನೀಡಲಾಗಿದೆ.
ಒಟ್ಟಿನಲ್ಲಿ ಇಲ್ಲಿ ಕೋರ್ಸ್‍ಗಳಲ್ಲೂ ಖಾಲಿ ಸೀಟುಗಳಿದ್ದು ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದೆ. ಆದ್ದರಿಂದ ಸೀಟುಗಳ ಹಂಚಿಕೆಗೆ ಸಿಇಟಿ ಅಗತ್ಯವಿಲ್ಲ. ಎರಡನೇ ವರ್ಷದ ಪಿಯುಸಿ ಮತ್ತು ಕೊನೇ ವರ್ಷದ ಡಿಪ್ಲೊಮಾ ಕೋರ್ಸ್ ಮುಗಿಸಿದವರಿಗೆ ನೇರವಾಗಿ ಅವರಿಗೆ ಬಂದಿರುವ ಅಂಕಗಳ ಆಧಾರದಲ್ಲಿ ಸೀಟುಗಳನ್ನು ನೀಡಬಹುದಾಗಿದೆ. ಕಾನೂನುರೀತ್ಯಾ ಪಿಯುಸಿ ಮತ್ತು ಡಿಪ್ಲೊಮಾ ಕೋರ್ಸ್ ಮುಗಿಯುವುದಕ್ಕೆ ಮೊದಲು ಸಿಇಟಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಇದ್ದ ಕಾನೂನುಗಳನ್ನೇ ಗಾಳಿಗೆ ತೂರಿದಂತೆ. ಕೋರ್ಟ್ ಆರ್ಡರನ್ನು ಪಾಲಿಸದೆ ತಮ್ಮದೇ ಕಾನೂನುಗಳನ್ನು ಮಾಡಿಕೊಂಡು ವಿದ್ಯಾರ್ಥಿಗಳಿಂದ ಹಣ ಸುಲಿಗೆ ಮಾಡಿಕೊಳ್ಳುತ್ತಿರುವುದು ಹೇಯಕಾರ್ಯ.
2018ರಲ್ಲಿ ಪಿಯುಸಿ ಮತ್ತು ಡಿಪ್ಲೊಮಾ ಕೋರ್ಸಿನವರಿಂದ ಸರ್ಕಾರ ವಸೂಲ್ಮಾಡಿರುವುದು 15.48 ಕೋಟಿ ರೂಪಾಯಿ. ಸರ್ಕಾರದ ಈ ಹಗಲು ದರೋಡೆಗೆ ಧಿಕ್ಕಾರ.
ಈ ವರ್ಷದಿಂದಲೇ ಸಿಇಟಿ ಕೊನೆಗಾಣಿಸಿ ಕೊನೇ ವರ್ಷದ ಪಿಯುಸಿ ಮತ್ತು ಟಿಪ್ಲೊಮಾ ಕೋರ್ಸ್ ಮುಗಿಸಿರುವವರ ಅಂತಿಮ ಪರೀಕ್ಷೆಯ ಅಂಕಗಳ ಅಧಾರದ ಮೇಲೆ ನೇರವಾಗಿ ವಿವಿಧ ಕೋರ್ಸ್‍ಗಳಿಗೆ ಆಯ್ಕೆ ಮಾಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...