Homeಅಂಕಣಗಳುಸಿಇಟಿ ಹೆಸರಲ್ಲಿ ಕಾನೂನು ಉಲ್ಲಂಘಿಸುತ್ತಿದೆ ರಾಜ್ಯ ಸರ್ಕಾರ

ಸಿಇಟಿ ಹೆಸರಲ್ಲಿ ಕಾನೂನು ಉಲ್ಲಂಘಿಸುತ್ತಿದೆ ರಾಜ್ಯ ಸರ್ಕಾರ

- Advertisement -
| ಹೆಚ್.ಎಸ್‍.ದೊರೆಸ್ವಾಮಿ |
ಕರ್ನಾಟಕ ಸರ್ಕಾರ ಅನೇಕ ವರ್ಷಗಳಿಂದ common entrance test ನಡೆಸುತ್ತಿದೆ. 2ನೇ ವರ್ಷದ ಪದವಿ ಪೂರ್ವ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಕೂಡಲು ಅರ್ಹರು. ಸಿಇಟಿ ಪರೀಕ್ಷೆ ಬರೆದವರಿಗೆ ಈ ಪರೀಕ್ಷೆಯಲ್ಲಿ ಬಂದ ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು. ಪಿಯುಸಿಯಲ್ಲಿ ಬಂದ ಅಂಕಗಳನ್ನೂ ಈ ಸಂದರ್ಭದಲ್ಲಿ ಪರಿಗಣಿಸಬೇಕಾದ್ದೂ ಅಗತ್ಯ. ಆದರೆ ಅದನ್ನು ಕಡೆಗಣಿಸಲಾಗಿದೆ.
ಸಿಇಟಿ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದ್ದು ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು ಸೀಟುಗಳು ಅದಕ್ಕಿಂತ ಕಡಿಮೆ ಇದ್ದ ಕಾರಣದಿಂದ. 2013ರಲ್ಲಿ ಸಲ್ಲಿಸಿದ ರಿಟ್ ಅರ್ಜಿಗೆ ಸಂಬಂಧಪಟ್ಟಂತೆ 3-04-2014ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯ ‘ಸೀಟುಗಳು ಹೆಚ್ಚಾಗಿದ್ದು ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದ್ದರೆ ಸಿಇಟಿ ಪರೀಕ್ಷೆ ನಡೆಸುವ ಅಗತ್ಯವಿಲ್ಲ. ಪರಿಸ್ಥಿತಿ ಹೀಗಿದ್ದೂ ಸಿಇಟಿ ಪರೀಕ್ಷೆ ನಡೆಸುವುದು ಅರ್ಥಹೀನ’ ಎಂದು ತೀರ್ಪಿನಲ್ಲಿ ಹೇಳಿತು.
2013ರಲ್ಲಿ ಪಿಯುನಲ್ಲಿ ಉತ್ತೀರ್ಣರಾದ ಒಂದು ಸಾವಿರ ವಿದ್ಯಾರ್ಥಿಗಳು ಡೆಂಟಲ್ ಕಾಲೇಜುಗಳಿಗೆ ನೇರವಾಗಿ ಪ್ರವೇಶ ಪಡೆದರು. ಈ ವಿದ್ಯಾರ್ಥಿಗಳಿಗೆ ‘ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ’ ನೋಟಿಸ್ ನೀಡಿತು. ಆಗ ಈ ವಿದ್ಯಾರ್ಥಿಗಳು ಕೋರ್ಟ್ ಮೊರೆ ಹೊಕ್ಕಿದ್ದು, ಸಿಇಟಿ ಪರೀಕ್ಷೆಗೆ ಹೋಗದೆ ನೇರವಾಗಿ ಡೆಂಟಲ್ ಕಾಲೇಜು ಸೇರಿದ್ದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ನ್ಯಾಯಾಲಯ ಅವಕಾಶ ಕಲ್ಪಿಸಿಕೊಟ್ಟಿತು. ಸರ್ಕಾರ ನ್ಯಾಯವಾಗಿ ಹೈಕೋರ್ಟ್‍ನ ಆಜ್ಞೆಯನ್ನು ಪಾಲನೆ ಮಾಡಬೇಕಾಗಿತ್ತು. ಸಿಇಟಿ ರದ್ದುಗೊಳಿಸಬೇಕಾಗಿತ್ತು. ಆದರೆ ಕರ್ನಾಟಕ ಸರ್ಕಾರ, ಎರಡನೇ ವರ್ಷದ ಪರೀಕ್ಷೆಯಲ್ಲಿ ಪಾಸಾದವರನ್ನು ಸಿಇಟಿಗೆ ಕೂಡಿಸುವ ಬದಲು ಎರಡನೇ ವರ್ಷದ ಪಿಯುಸಿಯಲ್ಲಿ ಓದುತ್ತಿದ್ದ, ಇನ್ನೂ ಕೊನೆ ಪರೀಕ್ಷೆ ಬರೆಯದೇ ಇದ್ದವರನ್ನು ಸಿಇಟಿ ಪರೀಕ್ಷೆಗೆ ಕೂಡಿಸುವ ಹುನ್ನಾರ ಮಾಡಿತು. ಹೀಗೆ ಸಿಇಟಿಗೆ ಕೂಡುವ ಎಲ್ಲಾ ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗೆ ತಲಾ 500ರೂನಂತೆ ವಿದ್ಯಾರ್ಥಿನಿಗೆ ತಲಾ 250ರೂ ನಂತೆ ಪರೀಕ್ಷೆ ಶುಲ್ಕ ಕಟ್ಟಿಸಿಕೊಳ್ಳಲು ತೀರ್ಮಾನಿಸಿತು. ಅಭ್ಯರ್ಥಿ ಅನುತ್ತೀರ್ಣನಾಗಲಿ ಅಥವಾ ಉತ್ತೀರ್ಣನಾಗಲಿ ಅವರು ಕಟ್ಟಿದ ಹಣವನ್ನು ಹಿಂದಿರುಗಿಸಲಾಗುವುದಿಲ್ಲ ಎಂದು ಖಚಿತಪಡಿಸಲಾಯಿತು. ಹೀಗೆ ಎರಡನೇ ಪಿಯುಸಿಯಲ್ಲಿ ಇರುವಾಗಲೇ ಸಿಇಟಿಗೆ ಕಟ್ಟಿದ ವಿದ್ಯಾರ್ಥಿಗಳ ವಿವರ ಹೀಗಿದೆ.
ವರ್ಷ ಸಿಇಟಿ ಪರೀಕ್ಷೆಗೆ ಕೂತವರು ಸೀಟಿನ ಅರ್ಹತೆ ಪಡೆದವರು ಅರ್ಹತೆ ಪಡೆಯದವರು
ಡಿಪ್ಲೊಮಾ ಕೊನೇ ವರ್ಷದಲ್ಲಿ ಓದುತ್ತಿದ್ದು ಕೊನೆಯ ಪರೀಕ್ಷೆ ಇನ್ನೂ ನಡೆಯದಿದ್ದಾಗ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವವರ ವಿವರ.
ವರ್ಷ ಸಿಇಟಿ ಪರೀಕ್ಷೆಗೆ ಹಜರಾದವರು ಅರ್ಹತೆ ಪಡೆದವರು ಅರ್ಹತೆ ಪಡೆಯದವರು
ಸರ್ಕಾರಕ್ಕೆ 2016, 17 ಮತ್ತು 18ರಲ್ಲಿ ವಿದ್ಯಾರ್ಥಿಗಳು ಕಟ್ಟಿದ ಹಣ
ಪ್ರತಿ ವರ್ಷ ಸಿಇಟಿಯಲ್ಲಿ ಪಾಸಾದವರೆಲ್ಲರಿಗೂ ಸೀಟು ಸಿಕ್ಕುತ್ತದೆ ಮಾತ್ರವಲ್ಲ, ಅನೇಕ ಕಾಲೇಜುಗಳಲ್ಲಿ ನಿಗದಿತ ಸೀಟು ಭರ್ತಿಯಾಗದೆ ಇರುವ ಪರಿಸ್ಥಿತಿ ಉದ್ಭವಿಸಿದೆ. ಅಂದರೆ ಖಾಸಗಿಯವರಿಗೆ ಕಾಲೇಜು ನಡೆಸಲು ಸರ್ಕಾರ ಉದಾರವಾಗಿ ಅವಕಾಶ ಮಾಡಿಕೊಡಲಾಗುತ್ತಿದೆ.
ವಿವಿಧ ಕಾಲೇಜುಗಳಲ್ಲಿ ಯಾವ ಯಾವ ವರ್ಷದಲ್ಲಿ ಎಷ್ಟೆಷ್ಡು ಸೀಟುಗಳು ಕೇಳುವವರಿಲ್ಲದೆ ಬಿದ್ದಿದೆ ಎಂಬುದರ ವಿವರ ಇಲ್ಲಿ ನೀಡಲಾಗಿದೆ.
ಒಟ್ಟಿನಲ್ಲಿ ಇಲ್ಲಿ ಕೋರ್ಸ್‍ಗಳಲ್ಲೂ ಖಾಲಿ ಸೀಟುಗಳಿದ್ದು ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದೆ. ಆದ್ದರಿಂದ ಸೀಟುಗಳ ಹಂಚಿಕೆಗೆ ಸಿಇಟಿ ಅಗತ್ಯವಿಲ್ಲ. ಎರಡನೇ ವರ್ಷದ ಪಿಯುಸಿ ಮತ್ತು ಕೊನೇ ವರ್ಷದ ಡಿಪ್ಲೊಮಾ ಕೋರ್ಸ್ ಮುಗಿಸಿದವರಿಗೆ ನೇರವಾಗಿ ಅವರಿಗೆ ಬಂದಿರುವ ಅಂಕಗಳ ಆಧಾರದಲ್ಲಿ ಸೀಟುಗಳನ್ನು ನೀಡಬಹುದಾಗಿದೆ. ಕಾನೂನುರೀತ್ಯಾ ಪಿಯುಸಿ ಮತ್ತು ಡಿಪ್ಲೊಮಾ ಕೋರ್ಸ್ ಮುಗಿಯುವುದಕ್ಕೆ ಮೊದಲು ಸಿಇಟಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಇದ್ದ ಕಾನೂನುಗಳನ್ನೇ ಗಾಳಿಗೆ ತೂರಿದಂತೆ. ಕೋರ್ಟ್ ಆರ್ಡರನ್ನು ಪಾಲಿಸದೆ ತಮ್ಮದೇ ಕಾನೂನುಗಳನ್ನು ಮಾಡಿಕೊಂಡು ವಿದ್ಯಾರ್ಥಿಗಳಿಂದ ಹಣ ಸುಲಿಗೆ ಮಾಡಿಕೊಳ್ಳುತ್ತಿರುವುದು ಹೇಯಕಾರ್ಯ.
2018ರಲ್ಲಿ ಪಿಯುಸಿ ಮತ್ತು ಡಿಪ್ಲೊಮಾ ಕೋರ್ಸಿನವರಿಂದ ಸರ್ಕಾರ ವಸೂಲ್ಮಾಡಿರುವುದು 15.48 ಕೋಟಿ ರೂಪಾಯಿ. ಸರ್ಕಾರದ ಈ ಹಗಲು ದರೋಡೆಗೆ ಧಿಕ್ಕಾರ.
ಈ ವರ್ಷದಿಂದಲೇ ಸಿಇಟಿ ಕೊನೆಗಾಣಿಸಿ ಕೊನೇ ವರ್ಷದ ಪಿಯುಸಿ ಮತ್ತು ಟಿಪ್ಲೊಮಾ ಕೋರ್ಸ್ ಮುಗಿಸಿರುವವರ ಅಂತಿಮ ಪರೀಕ್ಷೆಯ ಅಂಕಗಳ ಅಧಾರದ ಮೇಲೆ ನೇರವಾಗಿ ವಿವಿಧ ಕೋರ್ಸ್‍ಗಳಿಗೆ ಆಯ್ಕೆ ಮಾಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...