Homeಅಂಕಣಗಳುಸಿಇಟಿ ಹೆಸರಲ್ಲಿ ಕಾನೂನು ಉಲ್ಲಂಘಿಸುತ್ತಿದೆ ರಾಜ್ಯ ಸರ್ಕಾರ

ಸಿಇಟಿ ಹೆಸರಲ್ಲಿ ಕಾನೂನು ಉಲ್ಲಂಘಿಸುತ್ತಿದೆ ರಾಜ್ಯ ಸರ್ಕಾರ

- Advertisement -
| ಹೆಚ್.ಎಸ್‍.ದೊರೆಸ್ವಾಮಿ |
ಕರ್ನಾಟಕ ಸರ್ಕಾರ ಅನೇಕ ವರ್ಷಗಳಿಂದ common entrance test ನಡೆಸುತ್ತಿದೆ. 2ನೇ ವರ್ಷದ ಪದವಿ ಪೂರ್ವ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಕೂಡಲು ಅರ್ಹರು. ಸಿಇಟಿ ಪರೀಕ್ಷೆ ಬರೆದವರಿಗೆ ಈ ಪರೀಕ್ಷೆಯಲ್ಲಿ ಬಂದ ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು. ಪಿಯುಸಿಯಲ್ಲಿ ಬಂದ ಅಂಕಗಳನ್ನೂ ಈ ಸಂದರ್ಭದಲ್ಲಿ ಪರಿಗಣಿಸಬೇಕಾದ್ದೂ ಅಗತ್ಯ. ಆದರೆ ಅದನ್ನು ಕಡೆಗಣಿಸಲಾಗಿದೆ.
ಸಿಇಟಿ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದ್ದು ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು ಸೀಟುಗಳು ಅದಕ್ಕಿಂತ ಕಡಿಮೆ ಇದ್ದ ಕಾರಣದಿಂದ. 2013ರಲ್ಲಿ ಸಲ್ಲಿಸಿದ ರಿಟ್ ಅರ್ಜಿಗೆ ಸಂಬಂಧಪಟ್ಟಂತೆ 3-04-2014ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯ ‘ಸೀಟುಗಳು ಹೆಚ್ಚಾಗಿದ್ದು ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದ್ದರೆ ಸಿಇಟಿ ಪರೀಕ್ಷೆ ನಡೆಸುವ ಅಗತ್ಯವಿಲ್ಲ. ಪರಿಸ್ಥಿತಿ ಹೀಗಿದ್ದೂ ಸಿಇಟಿ ಪರೀಕ್ಷೆ ನಡೆಸುವುದು ಅರ್ಥಹೀನ’ ಎಂದು ತೀರ್ಪಿನಲ್ಲಿ ಹೇಳಿತು.
2013ರಲ್ಲಿ ಪಿಯುನಲ್ಲಿ ಉತ್ತೀರ್ಣರಾದ ಒಂದು ಸಾವಿರ ವಿದ್ಯಾರ್ಥಿಗಳು ಡೆಂಟಲ್ ಕಾಲೇಜುಗಳಿಗೆ ನೇರವಾಗಿ ಪ್ರವೇಶ ಪಡೆದರು. ಈ ವಿದ್ಯಾರ್ಥಿಗಳಿಗೆ ‘ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ’ ನೋಟಿಸ್ ನೀಡಿತು. ಆಗ ಈ ವಿದ್ಯಾರ್ಥಿಗಳು ಕೋರ್ಟ್ ಮೊರೆ ಹೊಕ್ಕಿದ್ದು, ಸಿಇಟಿ ಪರೀಕ್ಷೆಗೆ ಹೋಗದೆ ನೇರವಾಗಿ ಡೆಂಟಲ್ ಕಾಲೇಜು ಸೇರಿದ್ದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ನ್ಯಾಯಾಲಯ ಅವಕಾಶ ಕಲ್ಪಿಸಿಕೊಟ್ಟಿತು. ಸರ್ಕಾರ ನ್ಯಾಯವಾಗಿ ಹೈಕೋರ್ಟ್‍ನ ಆಜ್ಞೆಯನ್ನು ಪಾಲನೆ ಮಾಡಬೇಕಾಗಿತ್ತು. ಸಿಇಟಿ ರದ್ದುಗೊಳಿಸಬೇಕಾಗಿತ್ತು. ಆದರೆ ಕರ್ನಾಟಕ ಸರ್ಕಾರ, ಎರಡನೇ ವರ್ಷದ ಪರೀಕ್ಷೆಯಲ್ಲಿ ಪಾಸಾದವರನ್ನು ಸಿಇಟಿಗೆ ಕೂಡಿಸುವ ಬದಲು ಎರಡನೇ ವರ್ಷದ ಪಿಯುಸಿಯಲ್ಲಿ ಓದುತ್ತಿದ್ದ, ಇನ್ನೂ ಕೊನೆ ಪರೀಕ್ಷೆ ಬರೆಯದೇ ಇದ್ದವರನ್ನು ಸಿಇಟಿ ಪರೀಕ್ಷೆಗೆ ಕೂಡಿಸುವ ಹುನ್ನಾರ ಮಾಡಿತು. ಹೀಗೆ ಸಿಇಟಿಗೆ ಕೂಡುವ ಎಲ್ಲಾ ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗೆ ತಲಾ 500ರೂನಂತೆ ವಿದ್ಯಾರ್ಥಿನಿಗೆ ತಲಾ 250ರೂ ನಂತೆ ಪರೀಕ್ಷೆ ಶುಲ್ಕ ಕಟ್ಟಿಸಿಕೊಳ್ಳಲು ತೀರ್ಮಾನಿಸಿತು. ಅಭ್ಯರ್ಥಿ ಅನುತ್ತೀರ್ಣನಾಗಲಿ ಅಥವಾ ಉತ್ತೀರ್ಣನಾಗಲಿ ಅವರು ಕಟ್ಟಿದ ಹಣವನ್ನು ಹಿಂದಿರುಗಿಸಲಾಗುವುದಿಲ್ಲ ಎಂದು ಖಚಿತಪಡಿಸಲಾಯಿತು. ಹೀಗೆ ಎರಡನೇ ಪಿಯುಸಿಯಲ್ಲಿ ಇರುವಾಗಲೇ ಸಿಇಟಿಗೆ ಕಟ್ಟಿದ ವಿದ್ಯಾರ್ಥಿಗಳ ವಿವರ ಹೀಗಿದೆ.
ವರ್ಷ ಸಿಇಟಿ ಪರೀಕ್ಷೆಗೆ ಕೂತವರು ಸೀಟಿನ ಅರ್ಹತೆ ಪಡೆದವರು ಅರ್ಹತೆ ಪಡೆಯದವರು
ಡಿಪ್ಲೊಮಾ ಕೊನೇ ವರ್ಷದಲ್ಲಿ ಓದುತ್ತಿದ್ದು ಕೊನೆಯ ಪರೀಕ್ಷೆ ಇನ್ನೂ ನಡೆಯದಿದ್ದಾಗ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವವರ ವಿವರ.
ವರ್ಷ ಸಿಇಟಿ ಪರೀಕ್ಷೆಗೆ ಹಜರಾದವರು ಅರ್ಹತೆ ಪಡೆದವರು ಅರ್ಹತೆ ಪಡೆಯದವರು
ಸರ್ಕಾರಕ್ಕೆ 2016, 17 ಮತ್ತು 18ರಲ್ಲಿ ವಿದ್ಯಾರ್ಥಿಗಳು ಕಟ್ಟಿದ ಹಣ
ಪ್ರತಿ ವರ್ಷ ಸಿಇಟಿಯಲ್ಲಿ ಪಾಸಾದವರೆಲ್ಲರಿಗೂ ಸೀಟು ಸಿಕ್ಕುತ್ತದೆ ಮಾತ್ರವಲ್ಲ, ಅನೇಕ ಕಾಲೇಜುಗಳಲ್ಲಿ ನಿಗದಿತ ಸೀಟು ಭರ್ತಿಯಾಗದೆ ಇರುವ ಪರಿಸ್ಥಿತಿ ಉದ್ಭವಿಸಿದೆ. ಅಂದರೆ ಖಾಸಗಿಯವರಿಗೆ ಕಾಲೇಜು ನಡೆಸಲು ಸರ್ಕಾರ ಉದಾರವಾಗಿ ಅವಕಾಶ ಮಾಡಿಕೊಡಲಾಗುತ್ತಿದೆ.
ವಿವಿಧ ಕಾಲೇಜುಗಳಲ್ಲಿ ಯಾವ ಯಾವ ವರ್ಷದಲ್ಲಿ ಎಷ್ಟೆಷ್ಡು ಸೀಟುಗಳು ಕೇಳುವವರಿಲ್ಲದೆ ಬಿದ್ದಿದೆ ಎಂಬುದರ ವಿವರ ಇಲ್ಲಿ ನೀಡಲಾಗಿದೆ.
ಒಟ್ಟಿನಲ್ಲಿ ಇಲ್ಲಿ ಕೋರ್ಸ್‍ಗಳಲ್ಲೂ ಖಾಲಿ ಸೀಟುಗಳಿದ್ದು ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದೆ. ಆದ್ದರಿಂದ ಸೀಟುಗಳ ಹಂಚಿಕೆಗೆ ಸಿಇಟಿ ಅಗತ್ಯವಿಲ್ಲ. ಎರಡನೇ ವರ್ಷದ ಪಿಯುಸಿ ಮತ್ತು ಕೊನೇ ವರ್ಷದ ಡಿಪ್ಲೊಮಾ ಕೋರ್ಸ್ ಮುಗಿಸಿದವರಿಗೆ ನೇರವಾಗಿ ಅವರಿಗೆ ಬಂದಿರುವ ಅಂಕಗಳ ಆಧಾರದಲ್ಲಿ ಸೀಟುಗಳನ್ನು ನೀಡಬಹುದಾಗಿದೆ. ಕಾನೂನುರೀತ್ಯಾ ಪಿಯುಸಿ ಮತ್ತು ಡಿಪ್ಲೊಮಾ ಕೋರ್ಸ್ ಮುಗಿಯುವುದಕ್ಕೆ ಮೊದಲು ಸಿಇಟಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಇದ್ದ ಕಾನೂನುಗಳನ್ನೇ ಗಾಳಿಗೆ ತೂರಿದಂತೆ. ಕೋರ್ಟ್ ಆರ್ಡರನ್ನು ಪಾಲಿಸದೆ ತಮ್ಮದೇ ಕಾನೂನುಗಳನ್ನು ಮಾಡಿಕೊಂಡು ವಿದ್ಯಾರ್ಥಿಗಳಿಂದ ಹಣ ಸುಲಿಗೆ ಮಾಡಿಕೊಳ್ಳುತ್ತಿರುವುದು ಹೇಯಕಾರ್ಯ.
2018ರಲ್ಲಿ ಪಿಯುಸಿ ಮತ್ತು ಡಿಪ್ಲೊಮಾ ಕೋರ್ಸಿನವರಿಂದ ಸರ್ಕಾರ ವಸೂಲ್ಮಾಡಿರುವುದು 15.48 ಕೋಟಿ ರೂಪಾಯಿ. ಸರ್ಕಾರದ ಈ ಹಗಲು ದರೋಡೆಗೆ ಧಿಕ್ಕಾರ.
ಈ ವರ್ಷದಿಂದಲೇ ಸಿಇಟಿ ಕೊನೆಗಾಣಿಸಿ ಕೊನೇ ವರ್ಷದ ಪಿಯುಸಿ ಮತ್ತು ಟಿಪ್ಲೊಮಾ ಕೋರ್ಸ್ ಮುಗಿಸಿರುವವರ ಅಂತಿಮ ಪರೀಕ್ಷೆಯ ಅಂಕಗಳ ಅಧಾರದ ಮೇಲೆ ನೇರವಾಗಿ ವಿವಿಧ ಕೋರ್ಸ್‍ಗಳಿಗೆ ಆಯ್ಕೆ ಮಾಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...