Homeಅಂಕಣಗಳುಸಿಇಟಿ ಹೆಸರಲ್ಲಿ ಕಾನೂನು ಉಲ್ಲಂಘಿಸುತ್ತಿದೆ ರಾಜ್ಯ ಸರ್ಕಾರ

ಸಿಇಟಿ ಹೆಸರಲ್ಲಿ ಕಾನೂನು ಉಲ್ಲಂಘಿಸುತ್ತಿದೆ ರಾಜ್ಯ ಸರ್ಕಾರ

- Advertisement -
| ಹೆಚ್.ಎಸ್‍.ದೊರೆಸ್ವಾಮಿ |
ಕರ್ನಾಟಕ ಸರ್ಕಾರ ಅನೇಕ ವರ್ಷಗಳಿಂದ common entrance test ನಡೆಸುತ್ತಿದೆ. 2ನೇ ವರ್ಷದ ಪದವಿ ಪೂರ್ವ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಕೂಡಲು ಅರ್ಹರು. ಸಿಇಟಿ ಪರೀಕ್ಷೆ ಬರೆದವರಿಗೆ ಈ ಪರೀಕ್ಷೆಯಲ್ಲಿ ಬಂದ ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು. ಪಿಯುಸಿಯಲ್ಲಿ ಬಂದ ಅಂಕಗಳನ್ನೂ ಈ ಸಂದರ್ಭದಲ್ಲಿ ಪರಿಗಣಿಸಬೇಕಾದ್ದೂ ಅಗತ್ಯ. ಆದರೆ ಅದನ್ನು ಕಡೆಗಣಿಸಲಾಗಿದೆ.
ಸಿಇಟಿ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದ್ದು ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು ಸೀಟುಗಳು ಅದಕ್ಕಿಂತ ಕಡಿಮೆ ಇದ್ದ ಕಾರಣದಿಂದ. 2013ರಲ್ಲಿ ಸಲ್ಲಿಸಿದ ರಿಟ್ ಅರ್ಜಿಗೆ ಸಂಬಂಧಪಟ್ಟಂತೆ 3-04-2014ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯ ‘ಸೀಟುಗಳು ಹೆಚ್ಚಾಗಿದ್ದು ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದ್ದರೆ ಸಿಇಟಿ ಪರೀಕ್ಷೆ ನಡೆಸುವ ಅಗತ್ಯವಿಲ್ಲ. ಪರಿಸ್ಥಿತಿ ಹೀಗಿದ್ದೂ ಸಿಇಟಿ ಪರೀಕ್ಷೆ ನಡೆಸುವುದು ಅರ್ಥಹೀನ’ ಎಂದು ತೀರ್ಪಿನಲ್ಲಿ ಹೇಳಿತು.
2013ರಲ್ಲಿ ಪಿಯುನಲ್ಲಿ ಉತ್ತೀರ್ಣರಾದ ಒಂದು ಸಾವಿರ ವಿದ್ಯಾರ್ಥಿಗಳು ಡೆಂಟಲ್ ಕಾಲೇಜುಗಳಿಗೆ ನೇರವಾಗಿ ಪ್ರವೇಶ ಪಡೆದರು. ಈ ವಿದ್ಯಾರ್ಥಿಗಳಿಗೆ ‘ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ’ ನೋಟಿಸ್ ನೀಡಿತು. ಆಗ ಈ ವಿದ್ಯಾರ್ಥಿಗಳು ಕೋರ್ಟ್ ಮೊರೆ ಹೊಕ್ಕಿದ್ದು, ಸಿಇಟಿ ಪರೀಕ್ಷೆಗೆ ಹೋಗದೆ ನೇರವಾಗಿ ಡೆಂಟಲ್ ಕಾಲೇಜು ಸೇರಿದ್ದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ನ್ಯಾಯಾಲಯ ಅವಕಾಶ ಕಲ್ಪಿಸಿಕೊಟ್ಟಿತು. ಸರ್ಕಾರ ನ್ಯಾಯವಾಗಿ ಹೈಕೋರ್ಟ್‍ನ ಆಜ್ಞೆಯನ್ನು ಪಾಲನೆ ಮಾಡಬೇಕಾಗಿತ್ತು. ಸಿಇಟಿ ರದ್ದುಗೊಳಿಸಬೇಕಾಗಿತ್ತು. ಆದರೆ ಕರ್ನಾಟಕ ಸರ್ಕಾರ, ಎರಡನೇ ವರ್ಷದ ಪರೀಕ್ಷೆಯಲ್ಲಿ ಪಾಸಾದವರನ್ನು ಸಿಇಟಿಗೆ ಕೂಡಿಸುವ ಬದಲು ಎರಡನೇ ವರ್ಷದ ಪಿಯುಸಿಯಲ್ಲಿ ಓದುತ್ತಿದ್ದ, ಇನ್ನೂ ಕೊನೆ ಪರೀಕ್ಷೆ ಬರೆಯದೇ ಇದ್ದವರನ್ನು ಸಿಇಟಿ ಪರೀಕ್ಷೆಗೆ ಕೂಡಿಸುವ ಹುನ್ನಾರ ಮಾಡಿತು. ಹೀಗೆ ಸಿಇಟಿಗೆ ಕೂಡುವ ಎಲ್ಲಾ ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗೆ ತಲಾ 500ರೂನಂತೆ ವಿದ್ಯಾರ್ಥಿನಿಗೆ ತಲಾ 250ರೂ ನಂತೆ ಪರೀಕ್ಷೆ ಶುಲ್ಕ ಕಟ್ಟಿಸಿಕೊಳ್ಳಲು ತೀರ್ಮಾನಿಸಿತು. ಅಭ್ಯರ್ಥಿ ಅನುತ್ತೀರ್ಣನಾಗಲಿ ಅಥವಾ ಉತ್ತೀರ್ಣನಾಗಲಿ ಅವರು ಕಟ್ಟಿದ ಹಣವನ್ನು ಹಿಂದಿರುಗಿಸಲಾಗುವುದಿಲ್ಲ ಎಂದು ಖಚಿತಪಡಿಸಲಾಯಿತು. ಹೀಗೆ ಎರಡನೇ ಪಿಯುಸಿಯಲ್ಲಿ ಇರುವಾಗಲೇ ಸಿಇಟಿಗೆ ಕಟ್ಟಿದ ವಿದ್ಯಾರ್ಥಿಗಳ ವಿವರ ಹೀಗಿದೆ.
ವರ್ಷ ಸಿಇಟಿ ಪರೀಕ್ಷೆಗೆ ಕೂತವರು ಸೀಟಿನ ಅರ್ಹತೆ ಪಡೆದವರು ಅರ್ಹತೆ ಪಡೆಯದವರು
ಡಿಪ್ಲೊಮಾ ಕೊನೇ ವರ್ಷದಲ್ಲಿ ಓದುತ್ತಿದ್ದು ಕೊನೆಯ ಪರೀಕ್ಷೆ ಇನ್ನೂ ನಡೆಯದಿದ್ದಾಗ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವವರ ವಿವರ.
ವರ್ಷ ಸಿಇಟಿ ಪರೀಕ್ಷೆಗೆ ಹಜರಾದವರು ಅರ್ಹತೆ ಪಡೆದವರು ಅರ್ಹತೆ ಪಡೆಯದವರು
ಸರ್ಕಾರಕ್ಕೆ 2016, 17 ಮತ್ತು 18ರಲ್ಲಿ ವಿದ್ಯಾರ್ಥಿಗಳು ಕಟ್ಟಿದ ಹಣ
ಪ್ರತಿ ವರ್ಷ ಸಿಇಟಿಯಲ್ಲಿ ಪಾಸಾದವರೆಲ್ಲರಿಗೂ ಸೀಟು ಸಿಕ್ಕುತ್ತದೆ ಮಾತ್ರವಲ್ಲ, ಅನೇಕ ಕಾಲೇಜುಗಳಲ್ಲಿ ನಿಗದಿತ ಸೀಟು ಭರ್ತಿಯಾಗದೆ ಇರುವ ಪರಿಸ್ಥಿತಿ ಉದ್ಭವಿಸಿದೆ. ಅಂದರೆ ಖಾಸಗಿಯವರಿಗೆ ಕಾಲೇಜು ನಡೆಸಲು ಸರ್ಕಾರ ಉದಾರವಾಗಿ ಅವಕಾಶ ಮಾಡಿಕೊಡಲಾಗುತ್ತಿದೆ.
ವಿವಿಧ ಕಾಲೇಜುಗಳಲ್ಲಿ ಯಾವ ಯಾವ ವರ್ಷದಲ್ಲಿ ಎಷ್ಟೆಷ್ಡು ಸೀಟುಗಳು ಕೇಳುವವರಿಲ್ಲದೆ ಬಿದ್ದಿದೆ ಎಂಬುದರ ವಿವರ ಇಲ್ಲಿ ನೀಡಲಾಗಿದೆ.
ಒಟ್ಟಿನಲ್ಲಿ ಇಲ್ಲಿ ಕೋರ್ಸ್‍ಗಳಲ್ಲೂ ಖಾಲಿ ಸೀಟುಗಳಿದ್ದು ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದೆ. ಆದ್ದರಿಂದ ಸೀಟುಗಳ ಹಂಚಿಕೆಗೆ ಸಿಇಟಿ ಅಗತ್ಯವಿಲ್ಲ. ಎರಡನೇ ವರ್ಷದ ಪಿಯುಸಿ ಮತ್ತು ಕೊನೇ ವರ್ಷದ ಡಿಪ್ಲೊಮಾ ಕೋರ್ಸ್ ಮುಗಿಸಿದವರಿಗೆ ನೇರವಾಗಿ ಅವರಿಗೆ ಬಂದಿರುವ ಅಂಕಗಳ ಆಧಾರದಲ್ಲಿ ಸೀಟುಗಳನ್ನು ನೀಡಬಹುದಾಗಿದೆ. ಕಾನೂನುರೀತ್ಯಾ ಪಿಯುಸಿ ಮತ್ತು ಡಿಪ್ಲೊಮಾ ಕೋರ್ಸ್ ಮುಗಿಯುವುದಕ್ಕೆ ಮೊದಲು ಸಿಇಟಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಇದ್ದ ಕಾನೂನುಗಳನ್ನೇ ಗಾಳಿಗೆ ತೂರಿದಂತೆ. ಕೋರ್ಟ್ ಆರ್ಡರನ್ನು ಪಾಲಿಸದೆ ತಮ್ಮದೇ ಕಾನೂನುಗಳನ್ನು ಮಾಡಿಕೊಂಡು ವಿದ್ಯಾರ್ಥಿಗಳಿಂದ ಹಣ ಸುಲಿಗೆ ಮಾಡಿಕೊಳ್ಳುತ್ತಿರುವುದು ಹೇಯಕಾರ್ಯ.
2018ರಲ್ಲಿ ಪಿಯುಸಿ ಮತ್ತು ಡಿಪ್ಲೊಮಾ ಕೋರ್ಸಿನವರಿಂದ ಸರ್ಕಾರ ವಸೂಲ್ಮಾಡಿರುವುದು 15.48 ಕೋಟಿ ರೂಪಾಯಿ. ಸರ್ಕಾರದ ಈ ಹಗಲು ದರೋಡೆಗೆ ಧಿಕ್ಕಾರ.
ಈ ವರ್ಷದಿಂದಲೇ ಸಿಇಟಿ ಕೊನೆಗಾಣಿಸಿ ಕೊನೇ ವರ್ಷದ ಪಿಯುಸಿ ಮತ್ತು ಟಿಪ್ಲೊಮಾ ಕೋರ್ಸ್ ಮುಗಿಸಿರುವವರ ಅಂತಿಮ ಪರೀಕ್ಷೆಯ ಅಂಕಗಳ ಅಧಾರದ ಮೇಲೆ ನೇರವಾಗಿ ವಿವಿಧ ಕೋರ್ಸ್‍ಗಳಿಗೆ ಆಯ್ಕೆ ಮಾಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...