Homeಕರ್ನಾಟಕಅಪ್ಪ-ಮಗನ ನಿಜ ಬಣ್ಣ ಬಯಲಾಗಲಿದೆ: ಸಿಎಂ ಮತ್ತು ವಿಜಯೇಂದ್ರ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್

ಅಪ್ಪ-ಮಗನ ನಿಜ ಬಣ್ಣ ಬಯಲಾಗಲಿದೆ: ಸಿಎಂ ಮತ್ತು ವಿಜಯೇಂದ್ರ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್

ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, “ಯತ್ನಾಳ್ ಅವರಷ್ಟು  ಹಗಲು ಕನಸು ಕಾಣುವ ವ್ಯಕ್ತಿ ಈ ಭೂಮಿ ಮೇಲೆ ಇಲ್ಲ” ಎಂದು ತಿರುಗೇಟು ನೀಡಿದ್ದಾರೆ

- Advertisement -
- Advertisement -

ಅಪ್ಪ- ಮಗನ ನಿಜ ಬಣ್ಣ ಬಯಲಾಗಲಿದೆ, ಮೇ 2 ರ ನಂತರ ಮುಖ್ಯಮಂತ್ರಿ ಯಡಿಯೂರಪ್ಪರ ಬದಲಾವಣೆ ಆಗುವುದು ಗ್ಯಾರಂಟಿ. ಮೇ 2ರ ನಂತರ ಯಾವ ಸಮಯದಲ್ಲಾದರೂ ಬದಲಾವಣೆ ಆಗುತ್ತಾರೆ ಎಂದು ಬಿಜಿಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಹಿಂದಿನಿಂದಲೂ ಯಡಿಯೂರಪ್ಪ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದು, ಪ್ರತಿ ಬಾರಿಯು ಸಿಎಂ ವಿರುದ್ದ ಬಹಿರಂಗವಾಗಿ ಟೀಕೆ ಮಾಡುತ್ತಾ ಬಂದಿದ್ದಾರೆ. ಅವರು ಈ ಹಿಂದೆಯೂ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿ ಯಡಿಯೂರಪ್ಪ ವಿರುದ್ದ ತನ್ನ ಅಸಮಾಧಾನ ವ್ಯಕ್ತಪಡಿಸಿದ್ದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್‌, “ಮೇ 2 ರ ನಂತರ ಯಡಿಯೂರಪ್ಪ ಬದಲಾವಣೆ ಆಗುವುದು ಗ್ಯಾರಂಟಿ. ಮೇ 2ರ ನಂತರ ಯಾವ ಸಮಯದಲ್ಲಾದರೂ ಬದಲಾವಣೆ ಆಗುತ್ತಾರೆ. ಪಕ್ಷ ಉಳಿಯಬೇಕು ಎಂದರೆ ಮೇ 2 ರ ನಂತರ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ತೆಗೆಯಲೇಬೇಕು. ಇಲ್ಲ ಅಂದರೆ ಪಕ್ಷ ಎಲ್ಲಿ ಉಳಿಯುತ್ತೆ?’’ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಸಿಎಂ ವಿರುದ್ಧ ಟೀಕೆ: ಯತ್ನಾಳ್‌ಗೆ ನೀಡಿದ್ದ ವೈಯಕ್ತಿಕ ಭದ್ರತೆ ಹಿಂಪಡೆದ ರಾಜ್ಯ ಸರ್ಕಾರ!

“ಇನ್ನೂ ಸ್ವಲ್ಪ ದಿನಗಳಲ್ಲೇ ಅಪ್ಪ-ಮಗನ ನಿಜ ಬಣ್ಣ ಬಯಲಾಗಲಿದೆ. ವಿಜಯೇಂದ್ರ ಎಷ್ಟು ಲೂಟಿ ಮಾಡಿದ್ದಾರೆ ಎಂಬುದು ಗೊತ್ತಾಗುತ್ತೆ. ಫೆಡರಲ್ ಬ್ಯಾಂಕ್ ವ್ಯವಹಾರದಲ್ಲಿ ವಿಜಯೇಂದ್ರ ಅವರನ್ನು ಜಾರಿ ನಿರ್ದೇಶನಾಲಯದವರು ಕರೆದುಕೊಂಡು ಹೋಗಿಲ್ಲ ಎಂದು ಹೇಳಲಿ. ನಾನು ಅವರಿಗೆ ಚಾಲೆಂಜ್ ಮಾಡುತ್ತೇನೆ. ಡಿಕೆಶಿಯನ್ನು ಇಡಿಯವರು ಕರೆದುಕೊಂಡು ಹೋಗಿ ವಿಚಾರಣೆ ಮಾಡಿದ್ದರಲ್ಲ. ಅಲ್ಲಿಗೆ ವಿಜಯೇಂದ್ರರನ್ನು ಕರೆದುಕೊಂಡು ಹೋಗಿ ಇಡಿಯವರು ವಿಚಾರಣೆ ಮಾಡಿದ್ದಾರೆ. ಸೂಟು- ಬೂಟು ಹಾಕೊಂಡು ಹೋಗಿದ್ರು. ಅದೆನ್ನೆಲ್ಲಾ ಬಿಚ್ಚಿಸಿ, ಡಿಕೆಶಿ ತರನೇ ವಿಜಯೇಂದ್ರರನ್ನು ವಿಚಾರಣೆ ಮಾಡಿದ್ದಾರೆ. ಇದೆಲ್ಲೆವೂ ಸ್ವಲ್ಪ ದಿನಗಳಲ್ಲೇ ಗೊತ್ತಾಗಲಿದೆ. ಅಪ್ಪ- ಮಗನ ನಿಜ ಬಣ್ಣ ಬಯಲಾಗಲಿದೆ” ಎಂದು ಯತ್ನಾಳ್ ಹೇಳಿದ್ದಾರೆ.

ಯಾರೋ ಒಬ್ಬರು ಚಿಲ್ಲರೆ ಪಲ್ಲರೆಗಳ ಕೈಯಲ್ಲಿ ಮಾತನಾಡಿಸುತ್ತಾರೆ. ತಾಕತ್ತಿದ್ದರೆ ನನ್ನ ಬಗ್ಗೆ ಅಪ್ಪ- ಮಗ ಮಾತಾಡಲಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮಗ ವಿಜಯೇಂದ್ರಗೆ ಸವಾಲು ಹಾಕಿದ್ದಾರೆ.

ಯಾರ ಯಾರ ನಾಯಕತ್ವ ಎಷ್ಟೆಷ್ಟು ಅನ್ನೋದು ಗೊತ್ತಾಗುತ್ತೆ. ಈಶ್ವರಪ್ಪ ಈಲ್ಡ್ ಆಗಿಲ್ಲ ಅನಿಸ್ತದೆ. ಈಶ್ವರಪ್ಪ ರಾಜ್ಯಪಾಲರ ಭೇಟಿ ಮಾಡಿದ್ದು ನನಗೇನೂ ಗೊತ್ತಿರಲಿಲ್ಲ ಎಂದರು. ಪಕ್ಷದ ಒಳಗೆ ಮಾತನಾಡುವಂತೆ ಯತ್ನಾಳ್ ಗೆ ಈಶ್ವರಪ್ಪ ಬುದ್ದಿ ಮಾತು ಹೇಳಿದ ವಿಚಾರವಾಗಿ ಪ್ರತಿಕ್ರಿಯಿಸಿದ ಯತ್ನಾಳ್, ಪಕ್ಷದ ವೇದಿಕೆ ಅನ್ನೋದು ಏನು ರಾಜ್ಯಪಾಲರ ಕಚೇರಿಯಾ? ಎನ್ನುವ ಮೂಲಕ ಪರೋಕ್ಷವಾಗಿ ನೀವು ಪಕ್ಷ ವಿರೋಧಿಯಾಗಿ ನಡೆದುಕೊಂಡಿಲ್ವಾ ಎಂದು ಈಶ್ವರಪ್ಪಗೆ ತಿರುಗೇಟು ನೀಡಿದರು.

ಇದನ್ನೂ ಓದಿ: ಯತ್ನಾಳ್ ಕಾಂಗ್ರೆಸ್‌ನ ‘ಬಿ’ ಟೀಂ ಆಗಿ ಕೆಲಸ ಮಾಡುತ್ತಿದ್ದಾರೆ – ಸಚಿವ ಮುರುಗೇಶ ನಿರಾಣಿ ಆರೋಪ

ಇನ್ನೂ ಬಹಳ ಮಂದಿ ರೊಚ್ಚಿಗೇಳುವವರಿದ್ದಾರೆ. ಏಪ್ರಿಲ್ 17 ರ ನಂತರಶಾಸಕರು ಸಚಿವರು ಬಹಳ ಮಂದಿ ರೊಚ್ಚಿಗೇಳುವವರಿದ್ದಾರೆ. ಸೂರ್ಯ ಚಂದ್ರ ಇರುವವರೆಗೆ ಯಡಿಯೂರಪ್ಪನವರೇ ಸಿಎಂ ಅಂದ್ರೆ ಏನರ್ಥ?. ಯಡಿಯೂರಪ್ಪ ಫ್ಯಾಮಿಲಿಗೇನಾದರೂ ರಾಜ್ಯವನ್ನು ಬರೆದುಕೊಟ್ಟಿದ್ದಾರಾ..? ಪಕ್ಷದ ಸಿದ್ದಾಂತದ ಹಿನ್ನೆಲೆಯಲ್ಲಿ ಎರಡು ವರ್ಷ ಅವಕಾಶ ಕೊಟ್ಟಿದ್ದೇ ದೊಡ್ಡದ್ದು ಎಂದು ಹೇಳಿದರು.

ಯತ್ನಾಳ್ ಹೇಳಿಕೆಗೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಪ್ರತಿಕ್ರಿಯಿಸಿದ್ದು, “ಯತ್ನಾಳ್ ಅವರಷ್ಟು  ಹಗಲು ಕನಸು ಕಾಣುವ ವ್ಯಕ್ತಿ ಈ ಭೂಮಿ ಮೇಲೆ ಇಲ್ಲ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ನನ್ನನ್ನು ಬಂಧಿಸಲು ಲಿಂಗಾಯತ IPS ಅಧಿಕಾರಿಗಳನ್ನು ಕಳುಹಿಸಿದ್ದರು: ಯತ್ನಾಳ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...