Homeಮುಖಪುಟ‘ಮುಸ್ಲಿಂ ಮತದಾರರಿಗೆ ಮನವಿ’; ನೀತಿ ಸಂಹಿಂತೆ ಉಲ್ಲಂಘನೆ ಎಂದ ಚುನಾವಣಾ ಆಯೋಗ!

‘ಮುಸ್ಲಿಂ ಮತದಾರರಿಗೆ ಮನವಿ’; ನೀತಿ ಸಂಹಿಂತೆ ಉಲ್ಲಂಘನೆ ಎಂದ ಚುನಾವಣಾ ಆಯೋಗ!

ಮುಂದಿನ 48 ಗಂಟೆಗಳಲ್ಲಿ ನೋಟಿಸ್‌ಗೆ ಪ್ರತಿಕ್ರಿಯಿಸಬೇಕು ಎಂದು ಮಮತಾ ಬ್ಯಾನರ್ಜಿಗೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

- Advertisement -
- Advertisement -

ಹೂಗ್ಲಿಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿರಬೇಕಾದರೆ ಮುಸ್ಲಿಂ ಮತಗಳು ವಿವಿಧ ರಾಜಕೀಯ ಪಕ್ಷಗಳ ನಡುವೆ ವಿಭಜನೆ ಆಗಲು ಬಿಡದಂತೆ ಮುಸ್ಲಿಂ ಮತದಾರರಿಗೆ ಮನವಿ ಮಾಡಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿಗೆ ಚುನಾವಣಾ ಆಯೋಗ ಬುಧವಾರ ನೋಟಿಸ್ ನೀಡಿದೆ.

ಮುಂದಿನ 48 ಗಂಟೆಗಳಲ್ಲಿ ನೋಟಿಸ್‌ಗೆ ಪ್ರತಿಕ್ರಿಯಿಸಬೇಕು ಎಂದು ಅವರಿಗೆ ತಿಳಿಸಲಾಗಿದೆ.

ಏಪ್ರಿಲ್ 3 ರಂದು ಹೂಗ್ಲಿಯ ತಾರಕೇಶ್ವರದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಮತಾ ಬ್ಯಾನರ್ಜಿ ಅವರು, ಮುಸ್ಲಿಂ ಮತದಾರರ ಮತಗಳು ವಿವಿಧ ರಾಜಕೀಯ ಪಕ್ಷಗಳ ನಡುವೆ ವಿಭಜನೆ ಆಗಲು ಬಿಡದಂತೆ ಮನವಿ ಮಾಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ಬಂದಿದೆ ಎಂದು ನೋಟಿಸ್ ತಿಳಿಸಿದೆ.

ಇದನ್ನೂ ಓದಿ: ರಾಜಕೀಯ ಪ್ರತಿಸ್ಪರ್ಧಿಗಳನ್ನು ಗುರಿಯಾಗಿಸಲು ಕೇಂದ್ರದ ಏಜೆನ್ಸಿಗಳ ದುರುಪಯೋಗ – ಶಿವಸೇನೆ

“ವಿಶ್ವವಿದ್ಯಾಲಯದವರೆಗೆ ಕನ್ಯಾಶ್ರೀ ಎಂಬ ವಿದ್ಯಾರ್ಥಿ ವೇತನವಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಶಿಶಶ್ರೀ ಇದೆ. ಸಾಮಾನ್ಯ ವರ್ಗಕ್ಕೆ ಸ್ವಾಮಿ ವಿವೇಕಾನಂದ ವಿದ್ಯಾರ್ಥಿ ವೇತನವಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನನ್ನ ಸಹೋದರ ಸಹೋದರಿಯರಿಗೆ ಐಕ್ಯಶ್ರೀ ವಿದ್ಯಾರ್ಥಿ ವೇತನವಿದೆ. ನಾನು 35 ಲಕ್ಷ ಫಲಾನುಭವಿಗಳಿಗೆ 2 ಕೋಟಿ ರೂಗಳನ್ನು ನೀಡಿದ್ದೇನೆ”

“ನನ್ನ ಅಲ್ಪಸಂಖ್ಯಾತ ಸಹೋದರ ಸಹೋದರಿಯರನ್ನು ಕೈಮುಗಿದು ವಿನಂತಿಸುತ್ತಿದ್ದೇನೆ, ಬಿಜೆಪಿಯಿಂದ ಹಣವನ್ನು ಪಡೆದುಕೊಂಡ ಶೈತಾನ ವ್ಯಕ್ತಿಯ ಮಾತುಗಳನ್ನು ಕೇಳಿ ಅಲ್ಪಸಂಖ್ಯಾತ ಮತಗಳನ್ನು ವಿಭಜಿಸಬೇಡಿ.”

“ಅವರು ಅನೇಕ ಕೋಮುವಾದಿ ಹೇಳಿಕೆಗಳನ್ನು ನೀಡಿ ಹಿಂದೂ ಮುಸ್ಲಿಮರ ನಡುವೆ ಘರ್ಷಣೆಯನ್ನು ಪ್ರಾರಂಭಿಸುತ್ತಾರೆ. ಅವರು ಬಿಜೆಪಿಯ ಪ್ರಚಾರಕರಾಗಿದ್ದು, ಅವರ ಒಡನಾಡಿಯಾಗಿದ್ದಾರೆ. ಸಿಪಿಐ-ಎಂನ ಕಾಮ್ರೇಡರು ಮತ್ತು ಬಿಜೆಪಿಗರು ಅಲ್ಪಸಂಖ್ಯಾತ ಮತಗಳನ್ನು ವಿಭಜಿಸಲು ಬಿಜೆಪಿ ನೀಡಿದ ಹಣದೊಂದಿಗೆ ಸುತ್ತಾಡುತ್ತಿದ್ದಾರೆ”

ಇದನ್ನೂ ಓದಿ: ವಾಹನಗಳಲ್ಲಿ ಏಕಾಂಗಿಯಾಗಿ ಓಡಾಡುವವರೂ ಮಾಸ್ಕ್‌ ಧರಿಸಬೇಕು – ದೆಹಲಿ ಹೈಕೋರ್ಟ್

“ದಯವಿಟ್ಟು ಅವರನ್ನು ಹಾಗೆ ಮಾಡಲು ಅನುಮತಿಸಬೇಡಿ. ಬಿಜೆಪಿ ಅಧಿಕಾರಕ್ಕೆ ಬಂದರೆ ನಿಮಗೆ ತೀವ್ರ ಅಪಾಯವಿದೆ ಎಂಬುದನ್ನು ನೆನಪಿನಲ್ಲಿಡಿ.”

“ಬಿಜೆಪಿಯ ಮಾತು ಕೇಳಿ ಹಿಂದೂ ಮುಸ್ಲಿಂ ಎಂದು ನಿಮ್ಮ ನಡುವೆ ವಿಭಜನೆ ಮಾಡದಂತೆ ನಾನು ನನ್ನ ಹಿಂದೂ ಸಹೋದರ ಸಹೋದರಿಯರಿಗೆ ಹೇಳುತ್ತಿದ್ದೇನೆ” ಎಂದು ಮಮತಾ ಹೇಳಿದ್ದಾರೆ ಎಂದು ನೋಟಿಸ್‌ ಉಲ್ಲೇಖಿಸಿದೆ.

ಅವರ ಭಾಷಣವು ‘ಜನರ ಪ್ರಾತಿನಿಧ್ಯ ಕಾಯ್ದೆ’ ಮತ್ತು ‘ಮಾದರಿ ಸಂಹಿತೆಯ ನಿಯಮ’ಗಳನ್ನು ಉಲ್ಲಂಘಿಸಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಇದನ್ನೂ ಓದಿ: ಅಪ್ಪ-ಮಗನ ನಿಜ ಬಣ್ಣ ಬಯಲಾಗಲಿದೆ: ಸಿಎಂ ಮತ್ತು ವಿಜಯೇಂದ್ರ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...