Homeಕರೋನಾ ತಲ್ಲಣಮಾರ್ಚ್‌‌‌‌ನಲ್ಲಿ ಎರಡು ಪಟ್ಟು ರಫ್ತು; ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ

ಮಾರ್ಚ್‌‌‌‌ನಲ್ಲಿ ಎರಡು ಪಟ್ಟು ರಫ್ತು; ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ

- Advertisement -
- Advertisement -

ಭಾರತದಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಮಹಾರಾಷ್ಟ್ರದಂತಹ ಅತ್ಯಂತ ಹೆಚ್ಚು ಪೀಡಿತ ರಾಜ್ಯಗಳ ಹಲವಾರು ಜಿಲ್ಲೆಗಳಲ್ಲಿ ಲಸಿಕೆ ಕೊರತೆ ಇರುವ ಬಗ್ಗೆ ವರದಿಯಾಗಿದೆ. ಆದರೆ ಮಾರ್ಚ್ ತಿಂಗಳ ಮಧ್ಯದ ವೇಳೆಗೆ ಭಾರತದಲ್ಲಿ ನೀಡುತ್ತಿದ್ದ ಲಸಿಕೆ ಪ್ರಮಾಣಕ್ಕಿಂತ ಎರಡು ಪಟ್ಟು ರಫ್ತು ಮಾಡಿದೆ ಎಂಬ ಅಘಾತಕಾರಿ ವರದಿಯೂ ಬೆಳಕಿಗೆ ಬಂದಿದೆ.

ಪ್ರಸ್ತುತ ಲಸಿಕೆಯ ರಫ್ತು ಸ್ಥಗಿತಗೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ. ದೇಶದ ಐದು ರಾಜ್ಯಗಳಲ್ಲಿ ಲಸಿಕೆ ಕೊರತೆ ಅನುಭವಿಸುತ್ತಿದೆ ಎಂದು ವರದಿಗಳು ತಿಳಿಸಿವೆ.

ಮಹಾರಾಷ್ಟ್ರ

ಮಹಾರಾಷ್ಟ್ರದ ಲಸಿಕೆ ದಾಸ್ತಾನು ಕೇವಲ ಮೂರು ದಿನಗಳು ಮಾತ್ರ ಇರುತ್ತದೆ ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಬುಧವಾರ ಹೇಳಿದ್ದರು. ಕೇಂದ್ರವು ಸಾಕಷ್ಟು ಲಸಿಕೆಗಳನ್ನು ನೀಡದಿದ್ದರೆ, ವ್ಯಾಕ್ಸಿನೇಷನ್ ಕೇಂದ್ರಗಳನ್ನು ಮುಚ್ಚುವಂತಹ ಪರಿಸ್ಥಿಗೆ ಸರ್ಕಾರ ತಲುಪಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಅಸಮರ್ಥ ನಾಯಕ: ಸಿದ್ದರಾಮಯ್ಯ

“ರಾಜ್ಯವು 50,000 ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡುತ್ತಿದೆ. ಹೆಚ್ಚಿನ ಯುವಕರು ಸೋಂಕಿಗೆ ಒಳಗಾಗುತ್ತಿರುವುದರಿಂದ, ನಾವು ಚುಚ್ಚುಮದ್ದಿನೊಂದಿಗೆ ಧಾವಿಸಬೇಕು. ನಾವು ಕೇಂದ್ರ ಸರ್ಕಾರಕ್ಕೆ ಲಿಖಿತವಾಗಿ ಬರೆದು ನೆನಪಿಸಿದ್ದೇವೆ, ಆದರೆ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ” ಎಂದು ಟೋಪೆ ಹೇಳಿದ್ದಾರೆ.

ಜಾರ್ಖಂಡ್‌

ಜಾರ್ಖಂಡ್‌ನಲ್ಲಿ ಕೇವಲ 3.5 ಲಕ್ಷ ಡಜನ್ ಲಸಿಕೆ ಮಾತ್ರ ಲಭ್ಯವಿರುವುದರಿಂದ ಲಸಿಕೆ ಕೊರತೆಯತ್ತ ರಾಜ್ಯವು ಸಾಗುತ್ತಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಆರೋಗ್ಯ ಕಾರ್ಯದರ್ಶಿ ಕೆ.ಕೆ. ಸೋನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರವು ಮಾರ್ಚ್ 23 ಮತ್ತು ಏಪ್ರಿಲ್ 2 ರಂದು ಹೆಚ್ಚಿನ ಲಸಿಕೆಗಳನ್ನು ನೀಡುವಂತೆ ಕೇಂದ್ರಕ್ಕೆ ಎರಡು ಬಾರಿ ಮನವಿಗಳನ್ನು ಕಳುಹಿಸಿದೆ, ಆದರೆ ಇದುವರೆಗೂ ಲಸಿಕೆ ಬಂದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮುಸ್ಲಿಂ ಮತದಾರರಿಗೆ ಮನವಿ’; ನೀತಿ ಸಂಹಿಂತೆ ಉಲ್ಲಂಘನೆ ಎಂದ ಚುನಾವಣಾ ಆಯೋಗ!

“ರಾಜ್ಯದಲ್ಲಿ ಈವರೆಗೆ 18 ಲಕ್ಷಕ್ಕೂ ಹೆಚ್ಚು ವ್ಯಕ್ತಿಗಳಿಗೆ ಲಸಿಕೆ ನೀಡಲಾಗಿದ್ದು, ಶೀಘ್ರವಾಗಿ ಕನಿಷ್ಠ 5 ಲಕ್ಷ ಲಸಿಕೆಯ ಡೋಸೇಜ್ ಬೇಕಾಗುತ್ತವೆ” ಎಂದು ಸೋನ್ ಹೇಳಿದ್ದಾರೆ.

“ವಿಶೇಷ ಲಸಿಕಾ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ, ಇದರ ಅಡಿಯಲ್ಲಿ ನಾವು ಪ್ರತಿದಿನ 1 ಲಕ್ಷಕ್ಕೂ ಹೆಚ್ಚು ಜನರಿಗೆ ವ್ಯಾಕ್ಸಿನೇಷನ್ ಗುರಿಯನ್ನು ನಿಗದಿಪಡಿಸಿದ್ದೇವೆ. ಈ ತಿಂಗಳ ಎರಡನೇ ವಾರದಲ್ಲಿ ರಾಜ್ಯಕ್ಕೆ ಲಸಿಕೆ ಬರಬಹುದು” ಎಂದು ಸೋನ್ ಹೇಳಿದ್ದಾರೆ.

ಮಧ್ಯಪ್ರದೇಶ

ರಾಜ್ಯದಲ್ಲಿ ಯಾವುದೇ ಲಸಿಕೆ ಕೊರತೆ ಇಲ್ಲ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾನ್ ಮಂಗಳವಾರ ಹೇಳಿದ್ದಾರೆ. ಆದರೆ ಮೂಲಗಳ ಪ್ರಕಾರ ಪಶ್ಚಿಮ ಮಧ್ಯಪ್ರದೇಶದ ಜಬುವಾ, ಅಲಿರಾಜ್‌ಪುರ, ಗ್ವಾಲಿಯರ್ ಚಂಬಲ್ ಪ್ರದೇಶದ ಶಿವಪುರಿ ಮತ್ತು ವಿಂಧ್ಯ ಪ್ರದೇಶದ ಸತ್ನಾಗಳಲ್ಲಿ ಲಸಿಕೆಯ ಕೊರತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಪ್ರದೇಶಗಳಲ್ಲಿ ಕೇವಲ ಮೂರು ದಿನಗಳಿಗೆ ಬೇಕಾದ ಲಸಿಕೆ ಅಷ್ಟೇ ದಾಸ್ತಾನು ಇದೆ ಎಂದು ಹೇಳಲಾಗಿದೆ.

ಬಿಹಾರ

ಲಸಿಕೆ ಕೊರತೆಯ ಬಗ್ಗೆ ಮಾತನಾಡಲು ಯಾವುದೇ ಅಧಿಕಾರಿಗಳು ಅಧೀಕೃತವಾಗಿ ಮುಂದೆ ಬಂದಿಲ್ಲವಾದರೂ, ಆರೋಗ್ಯ ಇಲಾಖೆಯ ಮೂಲಗಳ ಪ್ರಕಾರ, ಕಳೆದ ಕೆಲವು ದಿನಗಳಲ್ಲಿ ಲಸಿಕೆಯ ಕೊರತೆಯ ಪರಿಣಾಮದಿದಂದಾಗಿ ಒಂದು 12 ಜಿಲ್ಲೆಗಳಲ್ಲಿ ವ್ಯಾಕ್ಸಿನೇಷನ್ ಪ್ರಕ್ರಿಯೆ ಕಡಿಮೆಯಾಗಿದೆ.

ಇದನ್ನೂ ಓದಿ: ರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

ರಾಜ್ಯದ 4.5 ಲಕ್ಷ ಆರೋಗ್ಯ ಕಾರ್ಯಕರ್ತರು ಸೇರಿದಂತೆ 40 ಲಕ್ಷ ಜನರಿಗೆ ಲಸಿಕೆಯನ್ನು ಈಗಾಗಲೇ ನೀಡಲಾಗಿದೆ. ಕೊರೊನಾ ಎರಡನೇ ಅಲೆಯ ನಂತರ, ವಿಶೇಷವಾಗಿ ಹೋಳಿಯ ನಂತರ ಹೆಚ್ಚಿನ ಜನರು ವ್ಯಾಕ್ಸಿನೇಷನ್‌ಗಾಗಿ ಹೊರಟಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಪ್ರತಿದಿನ ಲಸಿಕೆಗಳನ್ನು ಕನಿಷ್ಠ 4 ಲಕ್ಷ ಜನರಿಗೆ ನೀಡಲು ರಾಜ್ಯವು ಪ್ರಯತ್ನಿಸುತ್ತಿದೆ ಎಂದು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರತ್ಯಯ ಅಮೃತ್ ತಿಳಿಸಿದ್ದಾರೆ.

ಒಡಿಶಾ

ಆರೋಗ್ಯ ಸಚಿವ ನಾಬಾ ಕಿಶೋರ್ ದಾಸ್ 25 ಲಕ್ಷ ಡೋಸ್ ಲಸಿಕೆ ಕೋರಿ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಲಸಿಕೆ ಕೊರತೆಯಿಂದಾಗಿ 600 ಕ್ಕೂ ಹೆಚ್ಚು ಲಸಿಕೆ ಕೇಂದ್ರಗಳನ್ನು ಬುಧವಾರ ಮುಚ್ಚಲಾಗಿದೆ.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...