Homeಕರೋನಾ ತಲ್ಲಣಮಾರ್ಚ್‌‌‌‌ನಲ್ಲಿ ಎರಡು ಪಟ್ಟು ರಫ್ತು; ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ

ಮಾರ್ಚ್‌‌‌‌ನಲ್ಲಿ ಎರಡು ಪಟ್ಟು ರಫ್ತು; ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ

- Advertisement -
- Advertisement -

ಭಾರತದಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಮಹಾರಾಷ್ಟ್ರದಂತಹ ಅತ್ಯಂತ ಹೆಚ್ಚು ಪೀಡಿತ ರಾಜ್ಯಗಳ ಹಲವಾರು ಜಿಲ್ಲೆಗಳಲ್ಲಿ ಲಸಿಕೆ ಕೊರತೆ ಇರುವ ಬಗ್ಗೆ ವರದಿಯಾಗಿದೆ. ಆದರೆ ಮಾರ್ಚ್ ತಿಂಗಳ ಮಧ್ಯದ ವೇಳೆಗೆ ಭಾರತದಲ್ಲಿ ನೀಡುತ್ತಿದ್ದ ಲಸಿಕೆ ಪ್ರಮಾಣಕ್ಕಿಂತ ಎರಡು ಪಟ್ಟು ರಫ್ತು ಮಾಡಿದೆ ಎಂಬ ಅಘಾತಕಾರಿ ವರದಿಯೂ ಬೆಳಕಿಗೆ ಬಂದಿದೆ.

ಪ್ರಸ್ತುತ ಲಸಿಕೆಯ ರಫ್ತು ಸ್ಥಗಿತಗೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ. ದೇಶದ ಐದು ರಾಜ್ಯಗಳಲ್ಲಿ ಲಸಿಕೆ ಕೊರತೆ ಅನುಭವಿಸುತ್ತಿದೆ ಎಂದು ವರದಿಗಳು ತಿಳಿಸಿವೆ.

ಮಹಾರಾಷ್ಟ್ರ

ಮಹಾರಾಷ್ಟ್ರದ ಲಸಿಕೆ ದಾಸ್ತಾನು ಕೇವಲ ಮೂರು ದಿನಗಳು ಮಾತ್ರ ಇರುತ್ತದೆ ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಬುಧವಾರ ಹೇಳಿದ್ದರು. ಕೇಂದ್ರವು ಸಾಕಷ್ಟು ಲಸಿಕೆಗಳನ್ನು ನೀಡದಿದ್ದರೆ, ವ್ಯಾಕ್ಸಿನೇಷನ್ ಕೇಂದ್ರಗಳನ್ನು ಮುಚ್ಚುವಂತಹ ಪರಿಸ್ಥಿಗೆ ಸರ್ಕಾರ ತಲುಪಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಅಸಮರ್ಥ ನಾಯಕ: ಸಿದ್ದರಾಮಯ್ಯ

“ರಾಜ್ಯವು 50,000 ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡುತ್ತಿದೆ. ಹೆಚ್ಚಿನ ಯುವಕರು ಸೋಂಕಿಗೆ ಒಳಗಾಗುತ್ತಿರುವುದರಿಂದ, ನಾವು ಚುಚ್ಚುಮದ್ದಿನೊಂದಿಗೆ ಧಾವಿಸಬೇಕು. ನಾವು ಕೇಂದ್ರ ಸರ್ಕಾರಕ್ಕೆ ಲಿಖಿತವಾಗಿ ಬರೆದು ನೆನಪಿಸಿದ್ದೇವೆ, ಆದರೆ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ” ಎಂದು ಟೋಪೆ ಹೇಳಿದ್ದಾರೆ.

ಜಾರ್ಖಂಡ್‌

ಜಾರ್ಖಂಡ್‌ನಲ್ಲಿ ಕೇವಲ 3.5 ಲಕ್ಷ ಡಜನ್ ಲಸಿಕೆ ಮಾತ್ರ ಲಭ್ಯವಿರುವುದರಿಂದ ಲಸಿಕೆ ಕೊರತೆಯತ್ತ ರಾಜ್ಯವು ಸಾಗುತ್ತಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಆರೋಗ್ಯ ಕಾರ್ಯದರ್ಶಿ ಕೆ.ಕೆ. ಸೋನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರವು ಮಾರ್ಚ್ 23 ಮತ್ತು ಏಪ್ರಿಲ್ 2 ರಂದು ಹೆಚ್ಚಿನ ಲಸಿಕೆಗಳನ್ನು ನೀಡುವಂತೆ ಕೇಂದ್ರಕ್ಕೆ ಎರಡು ಬಾರಿ ಮನವಿಗಳನ್ನು ಕಳುಹಿಸಿದೆ, ಆದರೆ ಇದುವರೆಗೂ ಲಸಿಕೆ ಬಂದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮುಸ್ಲಿಂ ಮತದಾರರಿಗೆ ಮನವಿ’; ನೀತಿ ಸಂಹಿಂತೆ ಉಲ್ಲಂಘನೆ ಎಂದ ಚುನಾವಣಾ ಆಯೋಗ!

“ರಾಜ್ಯದಲ್ಲಿ ಈವರೆಗೆ 18 ಲಕ್ಷಕ್ಕೂ ಹೆಚ್ಚು ವ್ಯಕ್ತಿಗಳಿಗೆ ಲಸಿಕೆ ನೀಡಲಾಗಿದ್ದು, ಶೀಘ್ರವಾಗಿ ಕನಿಷ್ಠ 5 ಲಕ್ಷ ಲಸಿಕೆಯ ಡೋಸೇಜ್ ಬೇಕಾಗುತ್ತವೆ” ಎಂದು ಸೋನ್ ಹೇಳಿದ್ದಾರೆ.

“ವಿಶೇಷ ಲಸಿಕಾ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ, ಇದರ ಅಡಿಯಲ್ಲಿ ನಾವು ಪ್ರತಿದಿನ 1 ಲಕ್ಷಕ್ಕೂ ಹೆಚ್ಚು ಜನರಿಗೆ ವ್ಯಾಕ್ಸಿನೇಷನ್ ಗುರಿಯನ್ನು ನಿಗದಿಪಡಿಸಿದ್ದೇವೆ. ಈ ತಿಂಗಳ ಎರಡನೇ ವಾರದಲ್ಲಿ ರಾಜ್ಯಕ್ಕೆ ಲಸಿಕೆ ಬರಬಹುದು” ಎಂದು ಸೋನ್ ಹೇಳಿದ್ದಾರೆ.

ಮಧ್ಯಪ್ರದೇಶ

ರಾಜ್ಯದಲ್ಲಿ ಯಾವುದೇ ಲಸಿಕೆ ಕೊರತೆ ಇಲ್ಲ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾನ್ ಮಂಗಳವಾರ ಹೇಳಿದ್ದಾರೆ. ಆದರೆ ಮೂಲಗಳ ಪ್ರಕಾರ ಪಶ್ಚಿಮ ಮಧ್ಯಪ್ರದೇಶದ ಜಬುವಾ, ಅಲಿರಾಜ್‌ಪುರ, ಗ್ವಾಲಿಯರ್ ಚಂಬಲ್ ಪ್ರದೇಶದ ಶಿವಪುರಿ ಮತ್ತು ವಿಂಧ್ಯ ಪ್ರದೇಶದ ಸತ್ನಾಗಳಲ್ಲಿ ಲಸಿಕೆಯ ಕೊರತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಪ್ರದೇಶಗಳಲ್ಲಿ ಕೇವಲ ಮೂರು ದಿನಗಳಿಗೆ ಬೇಕಾದ ಲಸಿಕೆ ಅಷ್ಟೇ ದಾಸ್ತಾನು ಇದೆ ಎಂದು ಹೇಳಲಾಗಿದೆ.

ಬಿಹಾರ

ಲಸಿಕೆ ಕೊರತೆಯ ಬಗ್ಗೆ ಮಾತನಾಡಲು ಯಾವುದೇ ಅಧಿಕಾರಿಗಳು ಅಧೀಕೃತವಾಗಿ ಮುಂದೆ ಬಂದಿಲ್ಲವಾದರೂ, ಆರೋಗ್ಯ ಇಲಾಖೆಯ ಮೂಲಗಳ ಪ್ರಕಾರ, ಕಳೆದ ಕೆಲವು ದಿನಗಳಲ್ಲಿ ಲಸಿಕೆಯ ಕೊರತೆಯ ಪರಿಣಾಮದಿದಂದಾಗಿ ಒಂದು 12 ಜಿಲ್ಲೆಗಳಲ್ಲಿ ವ್ಯಾಕ್ಸಿನೇಷನ್ ಪ್ರಕ್ರಿಯೆ ಕಡಿಮೆಯಾಗಿದೆ.

ಇದನ್ನೂ ಓದಿ: ರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

ರಾಜ್ಯದ 4.5 ಲಕ್ಷ ಆರೋಗ್ಯ ಕಾರ್ಯಕರ್ತರು ಸೇರಿದಂತೆ 40 ಲಕ್ಷ ಜನರಿಗೆ ಲಸಿಕೆಯನ್ನು ಈಗಾಗಲೇ ನೀಡಲಾಗಿದೆ. ಕೊರೊನಾ ಎರಡನೇ ಅಲೆಯ ನಂತರ, ವಿಶೇಷವಾಗಿ ಹೋಳಿಯ ನಂತರ ಹೆಚ್ಚಿನ ಜನರು ವ್ಯಾಕ್ಸಿನೇಷನ್‌ಗಾಗಿ ಹೊರಟಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಪ್ರತಿದಿನ ಲಸಿಕೆಗಳನ್ನು ಕನಿಷ್ಠ 4 ಲಕ್ಷ ಜನರಿಗೆ ನೀಡಲು ರಾಜ್ಯವು ಪ್ರಯತ್ನಿಸುತ್ತಿದೆ ಎಂದು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರತ್ಯಯ ಅಮೃತ್ ತಿಳಿಸಿದ್ದಾರೆ.

ಒಡಿಶಾ

ಆರೋಗ್ಯ ಸಚಿವ ನಾಬಾ ಕಿಶೋರ್ ದಾಸ್ 25 ಲಕ್ಷ ಡೋಸ್ ಲಸಿಕೆ ಕೋರಿ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಲಸಿಕೆ ಕೊರತೆಯಿಂದಾಗಿ 600 ಕ್ಕೂ ಹೆಚ್ಚು ಲಸಿಕೆ ಕೇಂದ್ರಗಳನ್ನು ಬುಧವಾರ ಮುಚ್ಚಲಾಗಿದೆ.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...