Homeಕರ್ನಾಟಕಮಸ್ಕಿ: ಒಂದು ಕಡೆ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್, ಇನ್ನೊಂದು ಕಡೆ ಅದೇ ಪಾರ್ಟಿ MLA...

ಮಸ್ಕಿ: ಒಂದು ಕಡೆ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್, ಇನ್ನೊಂದು ಕಡೆ ಅದೇ ಪಾರ್ಟಿ MLA ನಾಡಗೌಡ: ಮಧ್ಯದಲ್ಲಿ ಜೆಡಿಎಸ್ ಕ್ಯಾಂಡಿಡೇಟೇ ಇಲ್ಲ!

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಂಧನೂರು ಐಬಿಯಲ್ಲಿ ವಿಶೇಷವಾಗಿ ಭೇಟಿ ಮಾಡಿದ ಸಿಂಧನೂರು ಶಾಸಕ ನಾಡಗೌಡರು ಮರುದಿನವೇ, ಮಸ್ಕಿಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಎಂದಿದ್ದರು.

- Advertisement -
- Advertisement -

ಸಂಪನ್ಮೂಲದ ಅಭಾವ ಎನ್ನುತ್ತಿರುವ ಜೆಡಿಎಸ್ ಪಕ್ಷ ಬಸವಕಲ್ಯಾಣದಲ್ಲಿ ಮುಸ್ಲಿಂ ಕ್ಯಾಂಡಿಡೇಟ್ ಹಾಕಿದೆ. ಆದರೆ ಅಕ್ಕ ಪಕ್ಕದಲ್ಲೇ ಇಬ್ಬರು ಎಂಎಲ್‌ಎ ಇದ್ದರೂ ಮಸ್ಕಿ ಉಪಚುನಾವಣೆಗೆ ಅಭ್ಯರ್ಥಿ ಹಾಕಿಲ್ಲ.

ಈಗ ರಾಯಚೂರು ಜಿಲ್ಲೆಯ ಮಸ್ಕಿಗೆ ಉಪ ಚುನಾವಣೆ ನಡೀತಾ ಇದೆ. ವಿಶೇಷ ಅಂದರೆ ಇಲ್ಲಿ ಕಳೆದ ಸಲದ ಕಾಂಗ್ರೆಸ್ ಅಭ್ಯರ್ಥಿ ಈಗ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ, ಕಳೆದ ಸಲದ ಬಿಜೆಪಿಯ ಕ್ಯಾಂಡಿಡೇಟ್ ಈ ಸಲ ಕಾಂಗ್ರೆಸ್ ಕ್ಯಾಂಡಿಡೇಟ್. ಇವುಗಳ ನಡುವೆ ಜೆಡಿಎಸ್ ಇಲ್ಲಿ ಬೆಳೆಯುವ ಅಪೂರ್ವ ಅವಕಾಶವನ್ನು ಕೈ ಚೆಲ್ಲಿತೆ..?

ಉಪ ಚುನಾವಣೆಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಅಂತ ದೇವೇಗೌಡರು ಹೇಳಿದರು. ಕುಮಾರಸ್ವಾಮಿ ಕೂಡ ಅದನ್ನೆ ಹೇಳಿದ್ದರು. ಆದರೆ, ಭೂಕಾಯ್ದೆ ಪರ ಮತ್ತು ಸ್ಪೀಕರ್ ವಿಷಯದಲ್ಲಿ ಜೆಡಿಎಸ್ ನಿಲುವನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡು, ಜೆಡಿಎಸ್ ಬಿಜೆಪಿ ಪರ ನಿಲ್ತಾ ಇದೆ ಎಂದ ಕೂಡಲೇ ಎಚ್ಚೆತ್ತುಕೊಂಡ ಕುಮಾರಸ್ವಾಮಿ, ಉಪ ಚಹುನಾವಣೆಗಳಲ್ಲಿ ಎಲ್ಲ ಕಡೆ ಕ್ಯಾಂಡಿಡೇಟ್ ಹಾಕುವುದಾಗಿ ಹೇಳಿದ್ದರು.

ಆದರೆ ಈಗ ಸಂಪನ್ಮೂಲದ ಕೊರತೆಯ ಕಾರಣದಿಂದ ಅವರು ಎಲ್ಲ ಕಡೆ ಅಭ್ಯರ್ಥಿ ಹಾಕಿಲ್ಲ! 3 ಉಪ ಚುನಾವಣೆ ಪೈಕಿ ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕಲು ಅವರಿಗೆ ಸಂಪನ್ಮೂಲದ ಕೊರತೆ ಕಾಣಲಿಲ್ಲವೇ ಎಂಬ ಪ್ರಶ್ನೆ ಎದುರಾಗಿದೆ.

ಇದನ್ನೂ ಓದಿ: ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ಆದರೆ ಒಳ್ಳೇ ಫೈಟ್ ಕೊಡುವ ಸಾಧ್ಯತೆಯಿದ್ದ ಮಸ್ಕಿಯಲ್ಲಿ ಜೆಡಿಎಸ್ ಕ್ಯಾಂಡಿಡೇಟ್ ಹಾಕಿಲ್ಲ. ಸಂಪನ್ಮೂಲದ ಕೊರತೆಯೇ? ಸಂಪನ್ಮೂಲ ಅಂದರೆ ಏನು? ಅದು ನೂರಾರು ಕೋಟಿ ರೊಕ್ಕವೇ? ಅಥವಾ ಅಲ್ಲಿರುವ ಮತದಾರರರೇ? ಈ ನಿಟ್ಟಿನಲ್ಲಿ ಯೋಚಿಸಿದಾಗ ಒಕ್ಕಲಿಗರ ಪಾರ್ಟಿ ಎಂಬ ಹಣೆಪಟ್ಟಿ ಅಚಿಟಿಸಿಕೊಂಡಿರುವ ಜೆಡಿಎಸ್‌ಗೆ ಹೈದರಾಬಾದ್ ಕರ್ನಾಟಕದಲ್ಲಿ ನೆಲೆ ವಿಸ್ತರಿಸುವ ಸಾಕಷ್ಟು ಸಾಧ್ಯತೆ ಇವೆ. ಇಲ್ಲಿ ಇನ್ನೂ ಜನತಾ ಪರಿವಾರದ ಬೇರುಗಳಿವೆ.

ಇನ್ನು ಮಸ್ಕಿಗೇ ಬರೋಣ. ಮಸ್ಕಿಗೆ ಅಂಟಿಕೊಂಡ ಸಿಂಧನೂರಲ್ಲಿ ಜೆಡಿಎಸ್‌ನಿಂದ ವೆಂಕಟರಾವ್ ನಾಡಗೌಡ ಶಾಸಕರು, ಇನ್ನೊಂದು ಕಡೆ ಮಸ್ಕಿಗೆ ಅಂಟಿಕೊಂಡ ರಾಯಚೂರು ಜಿಲ್ಲೆಯ ಮಾನ್ವಿ ಕ್ಷೇತ್ರದಲ್ಲಿ ರಾಜಾ ವೆಂಕಟಪ್ಪ ನಾಯಕ್ ಜೆಡಿಎಸ್‌ನ ಶಾಸಕರು. ಜೆಡಿಎಸ್‌ಗೆ ಇದಕ್ಕಿಂತ ಸಂಪನ್ಮೂಲ ಬೇಕಿತ್ತೆ..? ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾದ ಮಸ್ಕಿಯಲ್ಲಿ ನಾಯಕರು ಮತ್ತು ಲಿಂಗಾಯತರ ಮತಗಳು ನಿರ್ಣಾಯಕ. ಸಿಂಧನೂರಿನ ಎಂಎಲ್‌ಎ ಲಿಂಗಾಯತ, ಮಾನ್ವಿಯ ಎಂಎಲ್‌ಎ ನಾಯಕ ಜನಾಂಗದವರು. ಇದು ಸಂಪನ್ಮೂಲ ಅಲ್ಲವೇ..? ಎಂಬ ಪ್ರಶ್ನೆಗಳು ಮೂಡಿವೆ.

ಮಸ್ಕಿಗೆ ಅಂಟಿಕೊಂಡ ಲಿಂಗಸೂಗುರು ಕ್ಷೇತ್ರದಲ್ಲೂ ಜೆಡಿಎಸ್ ಪ್ರಭಾವ ಇದೆ. 2013 ರಲ್ಲಿ ಮಾನಪ್ಪ ವಜ್ಜಲ ಇಲ್ಲಿಂದ ಜೆಡಿಎಸ್‌ನಿಂದ ಗೆದ್ದಿದ್ದರು. 2018 ರಲ್ಲಿ ಜೆಡಿಎಸ್ ಕೆಲವೇ ಸಾವಿರ ಮತಗಳಲ್ಲಿ ಸೋತು ಎರಡೆನೇ ಸ್ಥಾನದಲ್ಲಿ ಇತ್ತು.

ಅಂದರೆ ಅಂಟಿಕೊಂಡ ಮೂರು ಕ್ಷೇತ್ರಗಳಲ್ಲಿ ಪ್ರಭಾವ ಇದ್ದರೂ ಸಂಪನ್ಮೂಲದ ಕೊರತೆಯಿಂದ ಜೆಡಿಎಸ್ ಇಲ್ಲಿ ಕ್ಯಾಂಡಿಡೇಟ್ ಹಾಕಿಲ್ಲ! ಆದರೆ ಬಸವಕಲ್ಯಾಣದಲ್ಲಿ ಅದು ಮುಸ್ಲಿಂ ಅಭ್ಯರ್ಥಿಯನ್ನು ಹಾಕಿದೆ. ಇತ್ತ ಬೆಳಗಾವಿಯಲ್ಲಿ ಅಪಾರ ಸಂಪನ್ಮೂಲದ ಜಾರಕಿಹೊಳಿ ಎದುರೂ ಕ್ಯಾಂಡಿಡೇಟ್ ಹಾಕಿಲ್ಲ.

ಇದನ್ನೂ ಓದಿ: ಬಸವ ಕಲ್ಯಾಣ ಉಪಚುನಾವಣೆ: ವಿಜಯೇಂದ್ರಗೆ ಟಿಕೆಟ್ ಇಲ್ಲ, ಈಗ್ಲೂ ‘ಹೊರಗಿನವರಿಗೇ’ ಟಿಕೆಟ್: ನಾರಾಯಣರಾವ್ ನೆನಪೇ ಕಾಂಗ್ರೆಸ್ ಶಕ್ತಿ!

ಸಂಪನ್ಮೂಲ ಹುಡುಕುತ್ತ ಬೈ ಎಲೆಕ್ಷನ ಬಂಧನದಲ್ಲಿ ಅನ್ನಬಹುದು. ಸಂಪನ್ಮೂಲದ ಕೊರತೆ ಬೈ ಎಲೆಕ್ಷನ್ ಮೂಲಕ ನೀಗಿದೆಯೇ ಎಂಬ ಪ್ರಶ್ನೆ ಮಾತ್ರ ಹಾಗೇ ಉಳಿದಿದೆ.

ನಿನ್ನೆ ಮಸ್ಕಿಯ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡರು ಸಿಂಧನೂರಿನ ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡರ ಮನೆಗೆ ಹೋಗಿ ಬೆಂಬಲ ಕೇಳಿದರೆಂದು ಇಲ್ಲಿನ ಎಲ್ಲ ದಿನಪತ್ರಿಕೆಗಳಲ್ಲಿ ಬಂದಿದೆ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ.

ಇತ್ತ, ಸುಮಾರು 12 ದಿನದ ಹಿಂದೆ ಮಸ್ಕಿ ಚುನಾವಣೆ ನಿಮಿತ್ತ ಸಿಂಧನೂರಿಗೆ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಂಧನೂರು ಐಬಿಯಲ್ಲಿ ವಿಶೇಷವಾಗಿ ಭೇಟಿ ಮಾಡಿದ ಸಿಂಧನೂರು ಶಾಸಕ ನಾಡಗೌಡರು ಮರುದಿನವೇ, ಮಸ್ಕಿಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಎಂದಿದ್ದರು. ಅಷ್ಟೊತ್ತಿಗೆ ವಿಜಯೇಂದ್ರ ಮತ್ತು ಕುಮಾರಸ್ವಾಮಿ ಡಿಸ್ಕಸ್ ಮಾಡಿರಬಹುದು ಎಂದು ಇಲ್ಲಿನ ರೈತ ಹೋರಾಟಗಾರರು ಹೇಳುತ್ತಾರೆ. ಜೊತೆಗೆ ಒಳ ಒಪ್ಪಂದ ಆಗಿರಬಹುದು ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.

‘ನಾನು ಒಬ್ಬ ಶಾಸಕನಾಗಿ ಸಿಎಂ ಭೇಟಿ ಮಾಡಿದ್ದೇನೆ ಅಷ್ಟೇ… ನಮ್ಮ ಕಾರ್ಯಕರ್ತರು ಬೇಡ ಅಂದಿದ್ದಕ್ಕೆ ಕ್ಯಾಂಡಿಡೇಟ್ ಹಾಕಿಲ್ಲ. ನೀರಾವರಿ ಹೋರಾಟ ಫಲಿತಾಂಶದ ಮ್ಯಾಲ ಪ್ರಭಾವ ಬೀರುತ್ತದೆ ‘ವೆಂಕಟ ರಾವ್ ನಾಡಗೌಡ, ಸಿಂಧನೂರು ಶಾಸಕ


ಇದನ್ನೂ ಓದಿ: ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....