Homeಕರೋನಾ ತಲ್ಲಣಗುಜರಾತ್‌ನ ಐಐಟಿಯಲ್ಲಿ 900 ಕ್ಕೂ ಹೆಚ್ಚು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಲಸಿಕೆ

ಗುಜರಾತ್‌ನ ಐಐಟಿಯಲ್ಲಿ 900 ಕ್ಕೂ ಹೆಚ್ಚು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಲಸಿಕೆ

ದೇಶದ ಸಂಪನ್ಮೂಲಗಳಿಂದ ಹಿಡಿದು ಕೊರೊನಾ ಲಸಿಕೆಯವರೆಗೆ ಎಲ್ಲವನ್ನೂ ಗುಜರಾತ್‌‌‌ನ ಶ್ರೀಮಂತರಿಗೆ ಆದ್ಯತೆಯ ಮೇರೆಗೆ ನೀಡುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ಗುಜರಾತ್‌ನ ಗಾಂಧಿನಗರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಳೆದ ವಾರ ಕೊರೊನಾ ಲಸಿಕೆ ಪಡೆದಿದ್ದಾರೆ ಎಂದು ಸ್ಕ್ರೋಲ್.ಇನ್ ವರದಿ ಮಾಡಿದೆ. ಪ್ರಸ್ತುತ 45 ವರ್ಷಕ್ಕಿಂತ ಮೇಲಿನವರಿಗೆ ಮಾತ್ರ ಲಸಿಕೆ ನೀಡಬೇಕು ಎಂಬ ಭಾರತ ಸರ್ಕಾರದ ನಿಯಮವನ್ನು ಮೀರಿ ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ದೇಶದಾದ್ಯಂತ ಈಗ 45 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಭಾರತದ ಸುಮಾರು ಅರ್ಧದಷ್ಟು ಕೊರೊನಾ ಪ್ರಕರಣಗಳಿರುವ ಮಹಾರಾಷ್ಟ್ರವು 25 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಲಸಿಕೆ ನೀಡಲು ಅನುಮತಿ ನೀಡುವಂತೆ ಸೋಮವಾರ ಕೇಂದ್ರವನ್ನು ಕೇಳಿತ್ತು. ಆದರೆ ಕೇಂದ್ರ ಸರ್ಕಾರವು ಈ ಮನವಿಯನ್ನು ನಿರಾಕರಿಸಿದೆ.

ಇದನ್ನೂ ಓದಿ: ‘ಮುಸ್ಲಿಂ ಮತದಾರರಿಗೆ ಮನವಿ’; ನೀತಿ ಸಂಹಿಂತೆ ಉಲ್ಲಂಘನೆ ಎಂದ ಚುನಾವಣಾ ಆಯೋಗ!

ಐಐಟಿ ಗಾಂಧಿನಗರದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಮೀರಿ ಕೊರೊನಾ ಲಸಿಕೆ ಹಾಕಲು ಹೇಗೆ ಸಾಧ್ಯವಾಯಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಸ್ಕ್ರೋಲ್.ಇನ್ ತನ್ನ ವರದಿಯಲ್ಲಿ ಹೇಳಿದೆ. ಲಸಿಕೆ ಪಡೆದವರಲ್ಲಿ ಹೆಚ್ಚಿನವರಿಗೆ ಇನ್ನೂ 25 ವರ್ಷ ಆಗಿಲ್ಲ ಎನ್ನಲಾಗಿದೆ.

ಮಾರ್ಚ್ 30 ಮತ್ತು ಏಪ್ರಿಲ್ 2 ರ ನಡುವೆ ಕ್ಯಾಂಪಸ್‌ನ ಆರೋಗ್ಯ ಕೇಂದ್ರವೊಂದರಲ್ಲಿ ಈ ವ್ಯಾಕ್ಸಿನೇಷನ್ ಪ್ರಕ್ರಿಯೆ ನಡೆದಿದೆ ಎಂದು ಸ್ಕ್ರೋಲ್.ಇನ್ ಹೇಳಿದ್ದು, ವಿದ್ಯಾರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗಿದೆ ಎಂದು ಅದು ಬರೆದಿದೆ.

ಲಸಿಕೆಯನ್ನು ಬೋಧಕವರ್ಗದ ಸದಸ್ಯರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಕ್ಯಾಂಪಸ್‌ನ ಹೊರಗೆ ವಾಸಿಸುವವರಿಗೆ ಸಹ ನೀಡಲಾಯಿತು ಎಂದು ಐಐಟಿಯ ಅಧೀಕೃತ ವ್ಯಕ್ತಿಯೊಬ್ಬರು ಹೇಳಿದ್ದಾರೆಂದು ವರದಿಯು ಉಲ್ಲೇಖಿಸಿದೆ. ಕನಿಷ್ಠ 940 ವಿದ್ಯಾರ್ಥಿಗಳು, ಸುಮಾರು 250 ಅಧ್ಯಾಪಕ ಸದಸ್ಯರು ಮತ್ತು ಇತರ ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಶಾಹಿನ್‌ಬಾಗ್‌‌ ಅನ್ನು ನಡೆಸಿಕೊಂಡಂತೆ ರೈತ ಹೋರಾಟಗಾರರನ್ನು ನಡೆಸದಿರಿ: ಕೇಂದ್ರಕ್ಕೆ ಟಿಕಾಯತ್‌

“ಪ್ರಕರಣದಲ್ಲಿ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್‌ ಭಾಗಿಯಾಗಿದ್ದು, ನಮಗೆ ಲಸಿಕೆಗಳನ್ನು ವ್ಯವಸ್ಥೆಗೊಳಿಸಿದೆ” ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಐಐಟಿಯ ಪ್ರತ್ರಿಕ್ರಿಯೆ ಸ್ಕ್ರೋಲ್.ಇನ್ ಕೇಳಿದ್ದು, ಯಾವುದೆ ಪ್ರತಿಕ್ರಿಯೆ ದೊರೆತಿಲ್ಲ.

ಪ್ರಕರಣದ ಬಗ್ಗೆ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್‌ ಆಯುಕ್ತ ರತಂಕನ್ವರ್ ಎಚ್ ಗಧ್ವಿಚರಣ್‌ ಪ್ರತಿಕ್ರಿಯಿಸಿದ್ದು, “ಇದನ್ನು ನಾನು ಪರಿಶೀಲಿಸುತ್ತೇನೆ. ಸರ್ಕಾರದ ಸೂಚನೆಗಳ ಪ್ರಕಾರ, 45 ಕ್ಕಿಂತ ಹೆಚ್ಚು ಮತ್ತು ಕೊರೊನಾ ವಿರುದ್ದ ಹೋರಾಟದಲ್ಲಿ ಇರುವ ವಾರಿಯರ್ಸ್‌ಗೆ ಮಾತ್ರ ಲಸಿಕೆ ನೀಡಬೇಕು” ಎಂದು ಹೇಳಿದ್ದಾರೆ.

ಗಾಂಧಿನಗರ ಐಐಟಿಯ ಕನಿಷ್ಠ 25 ವಿದ್ಯಾರ್ಥಿಗಳು ಕಳೆದ ತಿಂಗಳು ಕೊರೊನಾ ಸೋಂಕಿತರಾಗಿದ್ದಾರೆ ಎಂದು ಪಿಟಿಐ ಮಾರ್ಚ್ 27 ರಂದು ವರದಿ ಮಾಡಿತ್ತು.

ಇದನ್ನೂ ಓದಿ: ಮಾರ್ಚ್‌‌‌‌ನಲ್ಲಿ ಎರಡು ಪಟ್ಟು ರಫ್ತು; ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ

ಪ್ರಕರಣವು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟು ಹಾಕಿದೆ. ದೇಶದ ಹಲವು ರಾಜ್ಯಗಳು ತಮ್ಮಲ್ಲಿ ಲಸಿಕೆ ದಾಸ್ತಾನು ಮುಗಿಯುತ್ತಿದೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿಸಿದರೂ ಅವರಿಗೆ ಲಸಿಕೆ ಲಭ್ಯವಾಗುತ್ತಿಲ್ಲ. ಕೇಂದ್ರದ ಮೋದಿ ಸರ್ಕಾರವು ದೇಶದ ಸಂಪನ್ಮೂಲಗಳಿಂದ ಹಿಡಿದು ಕೊರೊನಾ ಲಸಿಕೆಯವರೆಗೆ ಎಲ್ಲವನ್ನೂ ಗುಜರಾತ್‌‌‌ನ ಶ್ರೀಮಂತರಿಗೆ ಆದ್ಯತೆಯ ಮೇರೆಗೆ ನೀಡುತ್ತಿದೆ ಎಂದು ಹಲವಾರು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ.

ಭಾರತದ ಸುಮಾರು ಅರ್ಧದಷ್ಟು ಕೊರೊನಾ ಪ್ರಕರಣಗಳಿರುವ ಮಹಾರಾಷ್ಟ್ರವು 25 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಲಸಿಕೆ ನೀಡಲು ಅನುಮತಿ ನೀಡುವಂತೆ ಸೋಮವಾರ ಕೇಂದ್ರವನ್ನು ಕೇಳಿತ್ತು. ಆದರೆ ಕೇಂದ್ರ ಸರ್ಕಾರವು ಈ ಮನವಿಯನ್ನು ನಿರಾಕರಿಸಿದೆ.

ಇದನ್ನೂ ಓದಿ: ಕೊರೊನಾ ಅಲ್ಲ ಅದಕ್ಕಿಂತ ದೊಡ್ಡದು ಬಂದರೂ ರೈತ ಹೋರಾಟ ನಿಲ್ಲದು- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...