Homeಕರೋನಾ ತಲ್ಲಣಗುಜರಾತ್‌ನ ಐಐಟಿಯಲ್ಲಿ 900 ಕ್ಕೂ ಹೆಚ್ಚು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಲಸಿಕೆ

ಗುಜರಾತ್‌ನ ಐಐಟಿಯಲ್ಲಿ 900 ಕ್ಕೂ ಹೆಚ್ಚು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಲಸಿಕೆ

ದೇಶದ ಸಂಪನ್ಮೂಲಗಳಿಂದ ಹಿಡಿದು ಕೊರೊನಾ ಲಸಿಕೆಯವರೆಗೆ ಎಲ್ಲವನ್ನೂ ಗುಜರಾತ್‌‌‌ನ ಶ್ರೀಮಂತರಿಗೆ ಆದ್ಯತೆಯ ಮೇರೆಗೆ ನೀಡುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ಗುಜರಾತ್‌ನ ಗಾಂಧಿನಗರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಳೆದ ವಾರ ಕೊರೊನಾ ಲಸಿಕೆ ಪಡೆದಿದ್ದಾರೆ ಎಂದು ಸ್ಕ್ರೋಲ್.ಇನ್ ವರದಿ ಮಾಡಿದೆ. ಪ್ರಸ್ತುತ 45 ವರ್ಷಕ್ಕಿಂತ ಮೇಲಿನವರಿಗೆ ಮಾತ್ರ ಲಸಿಕೆ ನೀಡಬೇಕು ಎಂಬ ಭಾರತ ಸರ್ಕಾರದ ನಿಯಮವನ್ನು ಮೀರಿ ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ದೇಶದಾದ್ಯಂತ ಈಗ 45 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಭಾರತದ ಸುಮಾರು ಅರ್ಧದಷ್ಟು ಕೊರೊನಾ ಪ್ರಕರಣಗಳಿರುವ ಮಹಾರಾಷ್ಟ್ರವು 25 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಲಸಿಕೆ ನೀಡಲು ಅನುಮತಿ ನೀಡುವಂತೆ ಸೋಮವಾರ ಕೇಂದ್ರವನ್ನು ಕೇಳಿತ್ತು. ಆದರೆ ಕೇಂದ್ರ ಸರ್ಕಾರವು ಈ ಮನವಿಯನ್ನು ನಿರಾಕರಿಸಿದೆ.

ಇದನ್ನೂ ಓದಿ: ‘ಮುಸ್ಲಿಂ ಮತದಾರರಿಗೆ ಮನವಿ’; ನೀತಿ ಸಂಹಿಂತೆ ಉಲ್ಲಂಘನೆ ಎಂದ ಚುನಾವಣಾ ಆಯೋಗ!

ಐಐಟಿ ಗಾಂಧಿನಗರದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಮೀರಿ ಕೊರೊನಾ ಲಸಿಕೆ ಹಾಕಲು ಹೇಗೆ ಸಾಧ್ಯವಾಯಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಸ್ಕ್ರೋಲ್.ಇನ್ ತನ್ನ ವರದಿಯಲ್ಲಿ ಹೇಳಿದೆ. ಲಸಿಕೆ ಪಡೆದವರಲ್ಲಿ ಹೆಚ್ಚಿನವರಿಗೆ ಇನ್ನೂ 25 ವರ್ಷ ಆಗಿಲ್ಲ ಎನ್ನಲಾಗಿದೆ.

ಮಾರ್ಚ್ 30 ಮತ್ತು ಏಪ್ರಿಲ್ 2 ರ ನಡುವೆ ಕ್ಯಾಂಪಸ್‌ನ ಆರೋಗ್ಯ ಕೇಂದ್ರವೊಂದರಲ್ಲಿ ಈ ವ್ಯಾಕ್ಸಿನೇಷನ್ ಪ್ರಕ್ರಿಯೆ ನಡೆದಿದೆ ಎಂದು ಸ್ಕ್ರೋಲ್.ಇನ್ ಹೇಳಿದ್ದು, ವಿದ್ಯಾರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗಿದೆ ಎಂದು ಅದು ಬರೆದಿದೆ.

ಲಸಿಕೆಯನ್ನು ಬೋಧಕವರ್ಗದ ಸದಸ್ಯರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಕ್ಯಾಂಪಸ್‌ನ ಹೊರಗೆ ವಾಸಿಸುವವರಿಗೆ ಸಹ ನೀಡಲಾಯಿತು ಎಂದು ಐಐಟಿಯ ಅಧೀಕೃತ ವ್ಯಕ್ತಿಯೊಬ್ಬರು ಹೇಳಿದ್ದಾರೆಂದು ವರದಿಯು ಉಲ್ಲೇಖಿಸಿದೆ. ಕನಿಷ್ಠ 940 ವಿದ್ಯಾರ್ಥಿಗಳು, ಸುಮಾರು 250 ಅಧ್ಯಾಪಕ ಸದಸ್ಯರು ಮತ್ತು ಇತರ ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಶಾಹಿನ್‌ಬಾಗ್‌‌ ಅನ್ನು ನಡೆಸಿಕೊಂಡಂತೆ ರೈತ ಹೋರಾಟಗಾರರನ್ನು ನಡೆಸದಿರಿ: ಕೇಂದ್ರಕ್ಕೆ ಟಿಕಾಯತ್‌

“ಪ್ರಕರಣದಲ್ಲಿ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್‌ ಭಾಗಿಯಾಗಿದ್ದು, ನಮಗೆ ಲಸಿಕೆಗಳನ್ನು ವ್ಯವಸ್ಥೆಗೊಳಿಸಿದೆ” ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಐಐಟಿಯ ಪ್ರತ್ರಿಕ್ರಿಯೆ ಸ್ಕ್ರೋಲ್.ಇನ್ ಕೇಳಿದ್ದು, ಯಾವುದೆ ಪ್ರತಿಕ್ರಿಯೆ ದೊರೆತಿಲ್ಲ.

ಪ್ರಕರಣದ ಬಗ್ಗೆ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್‌ ಆಯುಕ್ತ ರತಂಕನ್ವರ್ ಎಚ್ ಗಧ್ವಿಚರಣ್‌ ಪ್ರತಿಕ್ರಿಯಿಸಿದ್ದು, “ಇದನ್ನು ನಾನು ಪರಿಶೀಲಿಸುತ್ತೇನೆ. ಸರ್ಕಾರದ ಸೂಚನೆಗಳ ಪ್ರಕಾರ, 45 ಕ್ಕಿಂತ ಹೆಚ್ಚು ಮತ್ತು ಕೊರೊನಾ ವಿರುದ್ದ ಹೋರಾಟದಲ್ಲಿ ಇರುವ ವಾರಿಯರ್ಸ್‌ಗೆ ಮಾತ್ರ ಲಸಿಕೆ ನೀಡಬೇಕು” ಎಂದು ಹೇಳಿದ್ದಾರೆ.

ಗಾಂಧಿನಗರ ಐಐಟಿಯ ಕನಿಷ್ಠ 25 ವಿದ್ಯಾರ್ಥಿಗಳು ಕಳೆದ ತಿಂಗಳು ಕೊರೊನಾ ಸೋಂಕಿತರಾಗಿದ್ದಾರೆ ಎಂದು ಪಿಟಿಐ ಮಾರ್ಚ್ 27 ರಂದು ವರದಿ ಮಾಡಿತ್ತು.

ಇದನ್ನೂ ಓದಿ: ಮಾರ್ಚ್‌‌‌‌ನಲ್ಲಿ ಎರಡು ಪಟ್ಟು ರಫ್ತು; ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ

ಪ್ರಕರಣವು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟು ಹಾಕಿದೆ. ದೇಶದ ಹಲವು ರಾಜ್ಯಗಳು ತಮ್ಮಲ್ಲಿ ಲಸಿಕೆ ದಾಸ್ತಾನು ಮುಗಿಯುತ್ತಿದೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿಸಿದರೂ ಅವರಿಗೆ ಲಸಿಕೆ ಲಭ್ಯವಾಗುತ್ತಿಲ್ಲ. ಕೇಂದ್ರದ ಮೋದಿ ಸರ್ಕಾರವು ದೇಶದ ಸಂಪನ್ಮೂಲಗಳಿಂದ ಹಿಡಿದು ಕೊರೊನಾ ಲಸಿಕೆಯವರೆಗೆ ಎಲ್ಲವನ್ನೂ ಗುಜರಾತ್‌‌‌ನ ಶ್ರೀಮಂತರಿಗೆ ಆದ್ಯತೆಯ ಮೇರೆಗೆ ನೀಡುತ್ತಿದೆ ಎಂದು ಹಲವಾರು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ.

ಭಾರತದ ಸುಮಾರು ಅರ್ಧದಷ್ಟು ಕೊರೊನಾ ಪ್ರಕರಣಗಳಿರುವ ಮಹಾರಾಷ್ಟ್ರವು 25 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಲಸಿಕೆ ನೀಡಲು ಅನುಮತಿ ನೀಡುವಂತೆ ಸೋಮವಾರ ಕೇಂದ್ರವನ್ನು ಕೇಳಿತ್ತು. ಆದರೆ ಕೇಂದ್ರ ಸರ್ಕಾರವು ಈ ಮನವಿಯನ್ನು ನಿರಾಕರಿಸಿದೆ.

ಇದನ್ನೂ ಓದಿ: ಕೊರೊನಾ ಅಲ್ಲ ಅದಕ್ಕಿಂತ ದೊಡ್ಡದು ಬಂದರೂ ರೈತ ಹೋರಾಟ ನಿಲ್ಲದು- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...