Homeಕರೋನಾ ತಲ್ಲಣಗುಜರಾತ್‌ನ ಐಐಟಿಯಲ್ಲಿ 900 ಕ್ಕೂ ಹೆಚ್ಚು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಲಸಿಕೆ

ಗುಜರಾತ್‌ನ ಐಐಟಿಯಲ್ಲಿ 900 ಕ್ಕೂ ಹೆಚ್ಚು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಲಸಿಕೆ

ದೇಶದ ಸಂಪನ್ಮೂಲಗಳಿಂದ ಹಿಡಿದು ಕೊರೊನಾ ಲಸಿಕೆಯವರೆಗೆ ಎಲ್ಲವನ್ನೂ ಗುಜರಾತ್‌‌‌ನ ಶ್ರೀಮಂತರಿಗೆ ಆದ್ಯತೆಯ ಮೇರೆಗೆ ನೀಡುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ಗುಜರಾತ್‌ನ ಗಾಂಧಿನಗರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಳೆದ ವಾರ ಕೊರೊನಾ ಲಸಿಕೆ ಪಡೆದಿದ್ದಾರೆ ಎಂದು ಸ್ಕ್ರೋಲ್.ಇನ್ ವರದಿ ಮಾಡಿದೆ. ಪ್ರಸ್ತುತ 45 ವರ್ಷಕ್ಕಿಂತ ಮೇಲಿನವರಿಗೆ ಮಾತ್ರ ಲಸಿಕೆ ನೀಡಬೇಕು ಎಂಬ ಭಾರತ ಸರ್ಕಾರದ ನಿಯಮವನ್ನು ಮೀರಿ ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ದೇಶದಾದ್ಯಂತ ಈಗ 45 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಭಾರತದ ಸುಮಾರು ಅರ್ಧದಷ್ಟು ಕೊರೊನಾ ಪ್ರಕರಣಗಳಿರುವ ಮಹಾರಾಷ್ಟ್ರವು 25 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಲಸಿಕೆ ನೀಡಲು ಅನುಮತಿ ನೀಡುವಂತೆ ಸೋಮವಾರ ಕೇಂದ್ರವನ್ನು ಕೇಳಿತ್ತು. ಆದರೆ ಕೇಂದ್ರ ಸರ್ಕಾರವು ಈ ಮನವಿಯನ್ನು ನಿರಾಕರಿಸಿದೆ.

ಇದನ್ನೂ ಓದಿ: ‘ಮುಸ್ಲಿಂ ಮತದಾರರಿಗೆ ಮನವಿ’; ನೀತಿ ಸಂಹಿಂತೆ ಉಲ್ಲಂಘನೆ ಎಂದ ಚುನಾವಣಾ ಆಯೋಗ!

ಐಐಟಿ ಗಾಂಧಿನಗರದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಮೀರಿ ಕೊರೊನಾ ಲಸಿಕೆ ಹಾಕಲು ಹೇಗೆ ಸಾಧ್ಯವಾಯಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಸ್ಕ್ರೋಲ್.ಇನ್ ತನ್ನ ವರದಿಯಲ್ಲಿ ಹೇಳಿದೆ. ಲಸಿಕೆ ಪಡೆದವರಲ್ಲಿ ಹೆಚ್ಚಿನವರಿಗೆ ಇನ್ನೂ 25 ವರ್ಷ ಆಗಿಲ್ಲ ಎನ್ನಲಾಗಿದೆ.

ಮಾರ್ಚ್ 30 ಮತ್ತು ಏಪ್ರಿಲ್ 2 ರ ನಡುವೆ ಕ್ಯಾಂಪಸ್‌ನ ಆರೋಗ್ಯ ಕೇಂದ್ರವೊಂದರಲ್ಲಿ ಈ ವ್ಯಾಕ್ಸಿನೇಷನ್ ಪ್ರಕ್ರಿಯೆ ನಡೆದಿದೆ ಎಂದು ಸ್ಕ್ರೋಲ್.ಇನ್ ಹೇಳಿದ್ದು, ವಿದ್ಯಾರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗಿದೆ ಎಂದು ಅದು ಬರೆದಿದೆ.

ಲಸಿಕೆಯನ್ನು ಬೋಧಕವರ್ಗದ ಸದಸ್ಯರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಕ್ಯಾಂಪಸ್‌ನ ಹೊರಗೆ ವಾಸಿಸುವವರಿಗೆ ಸಹ ನೀಡಲಾಯಿತು ಎಂದು ಐಐಟಿಯ ಅಧೀಕೃತ ವ್ಯಕ್ತಿಯೊಬ್ಬರು ಹೇಳಿದ್ದಾರೆಂದು ವರದಿಯು ಉಲ್ಲೇಖಿಸಿದೆ. ಕನಿಷ್ಠ 940 ವಿದ್ಯಾರ್ಥಿಗಳು, ಸುಮಾರು 250 ಅಧ್ಯಾಪಕ ಸದಸ್ಯರು ಮತ್ತು ಇತರ ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಶಾಹಿನ್‌ಬಾಗ್‌‌ ಅನ್ನು ನಡೆಸಿಕೊಂಡಂತೆ ರೈತ ಹೋರಾಟಗಾರರನ್ನು ನಡೆಸದಿರಿ: ಕೇಂದ್ರಕ್ಕೆ ಟಿಕಾಯತ್‌

“ಪ್ರಕರಣದಲ್ಲಿ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್‌ ಭಾಗಿಯಾಗಿದ್ದು, ನಮಗೆ ಲಸಿಕೆಗಳನ್ನು ವ್ಯವಸ್ಥೆಗೊಳಿಸಿದೆ” ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಐಐಟಿಯ ಪ್ರತ್ರಿಕ್ರಿಯೆ ಸ್ಕ್ರೋಲ್.ಇನ್ ಕೇಳಿದ್ದು, ಯಾವುದೆ ಪ್ರತಿಕ್ರಿಯೆ ದೊರೆತಿಲ್ಲ.

ಪ್ರಕರಣದ ಬಗ್ಗೆ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್‌ ಆಯುಕ್ತ ರತಂಕನ್ವರ್ ಎಚ್ ಗಧ್ವಿಚರಣ್‌ ಪ್ರತಿಕ್ರಿಯಿಸಿದ್ದು, “ಇದನ್ನು ನಾನು ಪರಿಶೀಲಿಸುತ್ತೇನೆ. ಸರ್ಕಾರದ ಸೂಚನೆಗಳ ಪ್ರಕಾರ, 45 ಕ್ಕಿಂತ ಹೆಚ್ಚು ಮತ್ತು ಕೊರೊನಾ ವಿರುದ್ದ ಹೋರಾಟದಲ್ಲಿ ಇರುವ ವಾರಿಯರ್ಸ್‌ಗೆ ಮಾತ್ರ ಲಸಿಕೆ ನೀಡಬೇಕು” ಎಂದು ಹೇಳಿದ್ದಾರೆ.

ಗಾಂಧಿನಗರ ಐಐಟಿಯ ಕನಿಷ್ಠ 25 ವಿದ್ಯಾರ್ಥಿಗಳು ಕಳೆದ ತಿಂಗಳು ಕೊರೊನಾ ಸೋಂಕಿತರಾಗಿದ್ದಾರೆ ಎಂದು ಪಿಟಿಐ ಮಾರ್ಚ್ 27 ರಂದು ವರದಿ ಮಾಡಿತ್ತು.

ಇದನ್ನೂ ಓದಿ: ಮಾರ್ಚ್‌‌‌‌ನಲ್ಲಿ ಎರಡು ಪಟ್ಟು ರಫ್ತು; ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ

ಪ್ರಕರಣವು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟು ಹಾಕಿದೆ. ದೇಶದ ಹಲವು ರಾಜ್ಯಗಳು ತಮ್ಮಲ್ಲಿ ಲಸಿಕೆ ದಾಸ್ತಾನು ಮುಗಿಯುತ್ತಿದೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿಸಿದರೂ ಅವರಿಗೆ ಲಸಿಕೆ ಲಭ್ಯವಾಗುತ್ತಿಲ್ಲ. ಕೇಂದ್ರದ ಮೋದಿ ಸರ್ಕಾರವು ದೇಶದ ಸಂಪನ್ಮೂಲಗಳಿಂದ ಹಿಡಿದು ಕೊರೊನಾ ಲಸಿಕೆಯವರೆಗೆ ಎಲ್ಲವನ್ನೂ ಗುಜರಾತ್‌‌‌ನ ಶ್ರೀಮಂತರಿಗೆ ಆದ್ಯತೆಯ ಮೇರೆಗೆ ನೀಡುತ್ತಿದೆ ಎಂದು ಹಲವಾರು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ.

ಭಾರತದ ಸುಮಾರು ಅರ್ಧದಷ್ಟು ಕೊರೊನಾ ಪ್ರಕರಣಗಳಿರುವ ಮಹಾರಾಷ್ಟ್ರವು 25 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಲಸಿಕೆ ನೀಡಲು ಅನುಮತಿ ನೀಡುವಂತೆ ಸೋಮವಾರ ಕೇಂದ್ರವನ್ನು ಕೇಳಿತ್ತು. ಆದರೆ ಕೇಂದ್ರ ಸರ್ಕಾರವು ಈ ಮನವಿಯನ್ನು ನಿರಾಕರಿಸಿದೆ.

ಇದನ್ನೂ ಓದಿ: ಕೊರೊನಾ ಅಲ್ಲ ಅದಕ್ಕಿಂತ ದೊಡ್ಡದು ಬಂದರೂ ರೈತ ಹೋರಾಟ ನಿಲ್ಲದು- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...