Homeಕರೋನಾ ತಲ್ಲಣಗುಜರಾತ್‌ನ ಐಐಟಿಯಲ್ಲಿ 900 ಕ್ಕೂ ಹೆಚ್ಚು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಲಸಿಕೆ

ಗುಜರಾತ್‌ನ ಐಐಟಿಯಲ್ಲಿ 900 ಕ್ಕೂ ಹೆಚ್ಚು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಲಸಿಕೆ

ದೇಶದ ಸಂಪನ್ಮೂಲಗಳಿಂದ ಹಿಡಿದು ಕೊರೊನಾ ಲಸಿಕೆಯವರೆಗೆ ಎಲ್ಲವನ್ನೂ ಗುಜರಾತ್‌‌‌ನ ಶ್ರೀಮಂತರಿಗೆ ಆದ್ಯತೆಯ ಮೇರೆಗೆ ನೀಡುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ಗುಜರಾತ್‌ನ ಗಾಂಧಿನಗರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಳೆದ ವಾರ ಕೊರೊನಾ ಲಸಿಕೆ ಪಡೆದಿದ್ದಾರೆ ಎಂದು ಸ್ಕ್ರೋಲ್.ಇನ್ ವರದಿ ಮಾಡಿದೆ. ಪ್ರಸ್ತುತ 45 ವರ್ಷಕ್ಕಿಂತ ಮೇಲಿನವರಿಗೆ ಮಾತ್ರ ಲಸಿಕೆ ನೀಡಬೇಕು ಎಂಬ ಭಾರತ ಸರ್ಕಾರದ ನಿಯಮವನ್ನು ಮೀರಿ ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ದೇಶದಾದ್ಯಂತ ಈಗ 45 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಭಾರತದ ಸುಮಾರು ಅರ್ಧದಷ್ಟು ಕೊರೊನಾ ಪ್ರಕರಣಗಳಿರುವ ಮಹಾರಾಷ್ಟ್ರವು 25 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಲಸಿಕೆ ನೀಡಲು ಅನುಮತಿ ನೀಡುವಂತೆ ಸೋಮವಾರ ಕೇಂದ್ರವನ್ನು ಕೇಳಿತ್ತು. ಆದರೆ ಕೇಂದ್ರ ಸರ್ಕಾರವು ಈ ಮನವಿಯನ್ನು ನಿರಾಕರಿಸಿದೆ.

ಇದನ್ನೂ ಓದಿ: ‘ಮುಸ್ಲಿಂ ಮತದಾರರಿಗೆ ಮನವಿ’; ನೀತಿ ಸಂಹಿಂತೆ ಉಲ್ಲಂಘನೆ ಎಂದ ಚುನಾವಣಾ ಆಯೋಗ!

ಐಐಟಿ ಗಾಂಧಿನಗರದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಮೀರಿ ಕೊರೊನಾ ಲಸಿಕೆ ಹಾಕಲು ಹೇಗೆ ಸಾಧ್ಯವಾಯಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಸ್ಕ್ರೋಲ್.ಇನ್ ತನ್ನ ವರದಿಯಲ್ಲಿ ಹೇಳಿದೆ. ಲಸಿಕೆ ಪಡೆದವರಲ್ಲಿ ಹೆಚ್ಚಿನವರಿಗೆ ಇನ್ನೂ 25 ವರ್ಷ ಆಗಿಲ್ಲ ಎನ್ನಲಾಗಿದೆ.

ಮಾರ್ಚ್ 30 ಮತ್ತು ಏಪ್ರಿಲ್ 2 ರ ನಡುವೆ ಕ್ಯಾಂಪಸ್‌ನ ಆರೋಗ್ಯ ಕೇಂದ್ರವೊಂದರಲ್ಲಿ ಈ ವ್ಯಾಕ್ಸಿನೇಷನ್ ಪ್ರಕ್ರಿಯೆ ನಡೆದಿದೆ ಎಂದು ಸ್ಕ್ರೋಲ್.ಇನ್ ಹೇಳಿದ್ದು, ವಿದ್ಯಾರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗಿದೆ ಎಂದು ಅದು ಬರೆದಿದೆ.

ಲಸಿಕೆಯನ್ನು ಬೋಧಕವರ್ಗದ ಸದಸ್ಯರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಕ್ಯಾಂಪಸ್‌ನ ಹೊರಗೆ ವಾಸಿಸುವವರಿಗೆ ಸಹ ನೀಡಲಾಯಿತು ಎಂದು ಐಐಟಿಯ ಅಧೀಕೃತ ವ್ಯಕ್ತಿಯೊಬ್ಬರು ಹೇಳಿದ್ದಾರೆಂದು ವರದಿಯು ಉಲ್ಲೇಖಿಸಿದೆ. ಕನಿಷ್ಠ 940 ವಿದ್ಯಾರ್ಥಿಗಳು, ಸುಮಾರು 250 ಅಧ್ಯಾಪಕ ಸದಸ್ಯರು ಮತ್ತು ಇತರ ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಶಾಹಿನ್‌ಬಾಗ್‌‌ ಅನ್ನು ನಡೆಸಿಕೊಂಡಂತೆ ರೈತ ಹೋರಾಟಗಾರರನ್ನು ನಡೆಸದಿರಿ: ಕೇಂದ್ರಕ್ಕೆ ಟಿಕಾಯತ್‌

“ಪ್ರಕರಣದಲ್ಲಿ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್‌ ಭಾಗಿಯಾಗಿದ್ದು, ನಮಗೆ ಲಸಿಕೆಗಳನ್ನು ವ್ಯವಸ್ಥೆಗೊಳಿಸಿದೆ” ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಐಐಟಿಯ ಪ್ರತ್ರಿಕ್ರಿಯೆ ಸ್ಕ್ರೋಲ್.ಇನ್ ಕೇಳಿದ್ದು, ಯಾವುದೆ ಪ್ರತಿಕ್ರಿಯೆ ದೊರೆತಿಲ್ಲ.

ಪ್ರಕರಣದ ಬಗ್ಗೆ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್‌ ಆಯುಕ್ತ ರತಂಕನ್ವರ್ ಎಚ್ ಗಧ್ವಿಚರಣ್‌ ಪ್ರತಿಕ್ರಿಯಿಸಿದ್ದು, “ಇದನ್ನು ನಾನು ಪರಿಶೀಲಿಸುತ್ತೇನೆ. ಸರ್ಕಾರದ ಸೂಚನೆಗಳ ಪ್ರಕಾರ, 45 ಕ್ಕಿಂತ ಹೆಚ್ಚು ಮತ್ತು ಕೊರೊನಾ ವಿರುದ್ದ ಹೋರಾಟದಲ್ಲಿ ಇರುವ ವಾರಿಯರ್ಸ್‌ಗೆ ಮಾತ್ರ ಲಸಿಕೆ ನೀಡಬೇಕು” ಎಂದು ಹೇಳಿದ್ದಾರೆ.

ಗಾಂಧಿನಗರ ಐಐಟಿಯ ಕನಿಷ್ಠ 25 ವಿದ್ಯಾರ್ಥಿಗಳು ಕಳೆದ ತಿಂಗಳು ಕೊರೊನಾ ಸೋಂಕಿತರಾಗಿದ್ದಾರೆ ಎಂದು ಪಿಟಿಐ ಮಾರ್ಚ್ 27 ರಂದು ವರದಿ ಮಾಡಿತ್ತು.

ಇದನ್ನೂ ಓದಿ: ಮಾರ್ಚ್‌‌‌‌ನಲ್ಲಿ ಎರಡು ಪಟ್ಟು ರಫ್ತು; ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ

ಪ್ರಕರಣವು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟು ಹಾಕಿದೆ. ದೇಶದ ಹಲವು ರಾಜ್ಯಗಳು ತಮ್ಮಲ್ಲಿ ಲಸಿಕೆ ದಾಸ್ತಾನು ಮುಗಿಯುತ್ತಿದೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿಸಿದರೂ ಅವರಿಗೆ ಲಸಿಕೆ ಲಭ್ಯವಾಗುತ್ತಿಲ್ಲ. ಕೇಂದ್ರದ ಮೋದಿ ಸರ್ಕಾರವು ದೇಶದ ಸಂಪನ್ಮೂಲಗಳಿಂದ ಹಿಡಿದು ಕೊರೊನಾ ಲಸಿಕೆಯವರೆಗೆ ಎಲ್ಲವನ್ನೂ ಗುಜರಾತ್‌‌‌ನ ಶ್ರೀಮಂತರಿಗೆ ಆದ್ಯತೆಯ ಮೇರೆಗೆ ನೀಡುತ್ತಿದೆ ಎಂದು ಹಲವಾರು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ.

ಭಾರತದ ಸುಮಾರು ಅರ್ಧದಷ್ಟು ಕೊರೊನಾ ಪ್ರಕರಣಗಳಿರುವ ಮಹಾರಾಷ್ಟ್ರವು 25 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಲಸಿಕೆ ನೀಡಲು ಅನುಮತಿ ನೀಡುವಂತೆ ಸೋಮವಾರ ಕೇಂದ್ರವನ್ನು ಕೇಳಿತ್ತು. ಆದರೆ ಕೇಂದ್ರ ಸರ್ಕಾರವು ಈ ಮನವಿಯನ್ನು ನಿರಾಕರಿಸಿದೆ.

ಇದನ್ನೂ ಓದಿ: ಕೊರೊನಾ ಅಲ್ಲ ಅದಕ್ಕಿಂತ ದೊಡ್ಡದು ಬಂದರೂ ರೈತ ಹೋರಾಟ ನಿಲ್ಲದು- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...