Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣ: ಕೇಂದ್ರದ ಜಾಣ ಕುರುಡು, ನೂರಾರು ಲಸಿಕಾ ಕೇಂದ್ರಗಳಿಗೆ ಬೀಗ

ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣ: ಕೇಂದ್ರದ ಜಾಣ ಕುರುಡು, ನೂರಾರು ಲಸಿಕಾ ಕೇಂದ್ರಗಳಿಗೆ ಬೀಗ

ಕೇಂದ್ರವು ಮಹಾರಾಷ್ಟ್ರದ ವಿರುದ್ಧ ಏಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಪ್ರಶ್ನಿಸಿದ್ದಾರೆ.

- Advertisement -
- Advertisement -

ಮಹಾರಾಷ್ಟ್ರ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವಿನ ಮುಸುಕಿನ ಗುದ್ದಾಟದಿಂದಾಗಿ ಮಹಾರಾಷ್ಟ್ರದಲ್ಲಿ ನೂರಕ್ಕೂ ಹೆಚ್ಚು ಕೊರೊನಾ ಲಸಿಕಾ ಕೇಂದ್ರಗಳಿಗೆ ಬೀಗ ಬಿದ್ದಿದೆ. ಲಸಿಕೆಯ ಅಗತ್ಯತೆ ಹೆಚ್ಚಿದೆ ಎಂದು ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ನಮಗಾಗುತ್ತಿರುವ ತಾರತಮ್ಯದ ಬಗ್ಗೆಯೂ ತಿಳಿಸಿದ್ದೇನೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ತಿಳಿಸಿದ್ದಾರೆ.

ದೇಶದಲ್ಲೇ ಅತ್ಯಂತ ಹೆಚ್ಚು ಕೊರೊನಾ ಸಕ್ರಿಯ ಪ್ರಕರಣಗಳಿರುವ ಮಹಾರಾಷ್ಟ್ರದ ಹಲವಾರು ವ್ಯಾಕ್ಸಿನೇಷನ್ ಕೇಂದ್ರಗಳು ಲಸಿಕೆಗಳ ಕೊರತೆಯನ್ನು ಅನುಭವಿಸುತ್ತಿವೆ. ಲಸಿಕೆ ಕೊರತೆಯಿಂದಾಗಿ ಜನರಿಗೆ ಲಸಿಕೆ ನೀಡದೆ ಹಿಂತಿರುಗುವಂತೆ ಹೇಳಲಾಗುತ್ತಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ  ನಿನ್ನೆ (ಬುಧವಾರ) ಕೂಡ  ಹೇಳಿದ್ದಾರೆ.

ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಲಸಿಕಾ ಕೇಂದ್ರಗಳಲ್ಲಿ ನೋ ಸ್ಟಾಕ್ ಬೋರ್ಡ್ಗಳಿದ್ದರೇ ಮತ್ತೆ ನೂರಾರು ಲಸಿಕಾ ಕೇಂದ್ರಗಳಿಗೆ ಬೀಗ ಬಿದ್ದಿದೆ. ಮುಂಬೈನಲ್ಲಿ 26 ಲಸಿಕೆ ಕೇಂದ್ರಗಳನ್ನು ಮುಚ್ಚಲಾಗಿದೆ. ಇವುಗಲ್ಲಿ 23 ಲಸಿಕಾ ಕೇಂದ್ರಗಳು ನವಿ ಮುಂಬೈನಲ್ಲಿವೆ. ಲಸಿಕೆ ಕೊರತೆಯಿಂದಾಗಿ ಪುಣೆ 100 ವ್ಯಾಕ್ಸಿನೇಷನ್ ಕೇಂದ್ರಗಳನ್ನು ಮುಚ್ಚಲಾಗಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಸಂಸದೆ ಸುಪ್ರಿಯಾ ಸುಲೇ ಟ್ವೀಟ್ ಮಾಡಿದ್ದಾರೆ. ಸತಾರಾ, ಸಾಂಗ್ಲಿ, ಪನ್ವೆಲಾದಲ್ಲಿನ ಕೇಂದ್ರಗಳನ್ನು ಮುಚ್ಚಲಾಗಿದೆ.

ಇದನ್ನೂ ಓದಿ: ವ್ಯಾಕ್ಸಿನೇಷನ್‌ ಕೇಂದ್ರಗಳಲ್ಲಿ ಜನ ಲಸಿಕೆಯಿಲ್ಲದೆ ಹಿಂತಿರುಗುತ್ತಿದ್ದಾರೆ : ಮಹಾರಾಷ್ಟ್ರ ಆರೋಗ್ಯ ಸಚಿವ

ಲಸಿಕೆ ನೀಡುವಂತೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಅವರೊಂದಿಗೆ ಮಾತನಾಡಿದ್ದಾರೆ. ಕೇಂದ್ರದಿಂದ ಹೆಚ್ಚಿನ ಲಸಿಕೆ ಪ್ರಮಾಣಕ್ಕಾಗಿ ನಾವು ಕಾಯುತ್ತಿದ್ದೇವೆ ಎಂದು ರೋಗ್ಯ ಸಚಿವ ರಾಜೇಶ್ ಟೋಪೆ ತಿಳಿಸಿದ್ದಾರೆ.

ಕೇಂದ್ರವು ಮಹಾರಾಷ್ಟ್ರದ ವಿರುದ್ಧ ಏಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಗ್ಯ ಸಚಿವ ರಾಜೇಶ್ ತೋಪೆ ಪ್ರಶ್ನಿಸಿದ್ದಾರೆ. ಜನಸಂಖ್ಯೆಯ ಪ್ರಕಾರ ರಾಜ್ಯಕ್ಕೆ ವಾರಕ್ಕೆ 40 ಲಕ್ಷ ಡೋಸ್ ಮತ್ತು ತಿಂಗಳಿಗೆ 1.6 ಕೋಟಿ ಲಸಿಕೆಗಳು ಬೇಕಾಗುತ್ತವೆ. ಇನ್ನು “ಮಹಾರಾಷ್ಟ್ರವು ಗುಜರಾತ್ ಜನಸಂಖ್ಯೆಗಿಂತ ದುಪ್ಪಟ್ಟು ಜನಸಂಖ್ಯೆಯನ್ನು ಹೊಂದಿದೆ. ಆದರೂ ಗುಜರಾತ್ ಮತ್ತು ನಮ್ಮ ರಾಜ್ಯಕ್ಕೆ ಸರಿ ಸಮಾನವಾಗಿ ಒಂದು ಕೋಟಿ ಡೋಸ್ ಸಿಕ್ಕಿದೆ” ಎಂದಿದ್ದಾರೆ.

ಲಸಿಕೆ ಕೊರತೆಯ ಬಗ್ಗೆ ಮಹಾರಾಷ್ಟ್ರದ ಆರೋಪಗಳು ಕೇಂದ್ರದ ಜೊತೆಗೆ ಘರ್ಷಣೆಗೆ ಕಾರಣವಾಗಿದೆ. ಮಹಾರಾಷ್ಟ್ರ ಸರ್ಕಾರವು ಜವಾಬ್ದಾರಿಯುತವಾಗಿದೆ. ಲಸಿಕೆಯನ್ನು ಸರಿಯಾಗಿ ಹಂಚಿಕೆ ಮಾಡದೆ ಲಸಿಕೆ ಇಲ್ಲ ಎನ್ನುತ್ತಿದೆ. ಅದು ಕಾರ್ಯನಿರ್ವಹಿಸಲು ಅಸಮರ್ಥವಾಗಿದೆ. ಕೊರೊನಾ ನಿಯಂತ್ರಿಸದೆ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಡಾ.ಹರ್ಷ್ ವರ್ಧನ್ ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ರಾಜೇಶ್ ತೋಪೆ, “ಇದು ಕೇಂದ್ರ ಮತ್ತು ರಾಜ್ಯವು ಕಿತ್ತಾಡುವ ವಿಷಯವಲ್ಲ. ಇದನ್ನು ರಾಜಕೀಯಗೊಳಿಸಲು ನಾವು ಬಯಸುವುದಿಲ್ಲ. ನಾವು ಯಾರನ್ನೂ ದೂಷಿಸಲು ಬಯಸುವುದಿಲ್ಲ” ಎಂದಿದ್ದಾರೆ.

ಇತ್ತ, ಗುಜರಾತ್‌ನ ಗಾಂಧಿನಗರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ 25 ವರ್ಷ ತುಂಬದ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಳೆದ ವಾರ ಕೊರೊನಾ ಲಸಿಕೆ ಪಡೆದಿದ್ದಾರೆ ಎಂದು ಸ್ಕ್ರೋಲ್.ಇನ್ ವರದಿ ಮಾಡಿದೆ.


ಇದನ್ನೂ ಓದಿ: ಮಾರ್ಚ್‌‌‌‌ನಲ್ಲಿ ಎರಡು ಪಟ್ಟು ರಫ್ತು; ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...