Homeಮುಖಪುಟಇಂಡಿಯಾ ಟುಡೇಗೆ ಮೋದಿ ಸಂದರ್ಶನ: ರವೀಶ್ ಕುಮಾರ್‍ರವರಿಗೆ ಯಾಕಿಲ್ಲ?

ಇಂಡಿಯಾ ಟುಡೇಗೆ ಮೋದಿ ಸಂದರ್ಶನ: ರವೀಶ್ ಕುಮಾರ್‍ರವರಿಗೆ ಯಾಕಿಲ್ಲ?

- Advertisement -
- Advertisement -

| ಪಿ.ಕೆ. ಮಲ್ಲನಗೌಡರ್ |

ಈಗ ಮೂರು ಹಂತದ ಚುನಾವಣೆ ಮುಗಿದಿದೆ. ಸದ್ಯ ಇಂಟರವಲ್ ಎನ್ನುವುದಾದರೆ, ಫಸ್ಟ್ ಹಾಫ್‍ನಲ್ಲಿ ದೇಶದ ಸಮಸ್ಯೆಗಳ ಕುರಿತು ಚಕಾರ ಎತ್ತದ, ತಾವು ಕೊಟ್ಟ ಭರವಸೆ ಕುರಿತು ಮಾತೇ ಆಡದ ಪ್ರಧಾನಿ ನರೇಂದ್ರ ಮೋದಿ ಬಾಲಾಕೋಟ್ ದಾಳಿ, ಪಾಕ್ ದ್ವೇಷ, ರಾಷ್ಟ್ರದ ಸುರಕ್ಷತೆ ಎಂದೆಲ್ಲ ಭಾಷಣ ಬಿಗಿದರಷ್ಟೆ. ಸೆಕೆಂಡ್ ಹಾಫ್‍ನಲ್ಲಿ ಹಿಂದೆಲ್ಲ ಅಡಿಯಾಳಿಗಿದ್ದ ಮಾಧ್ಯಮಗಳನ್ನೆಲ್ಲಾ ಸಾರಾಸಗಟಾಗಿ ಖರೀದಿಸಿದಂತೆ ಕಾಣುತ್ತಿದೆ.

ಮೂರು ಹಂತದ ಚುನಾವಣೆ ಮುಗಿದ ನಂತರ ಭಯ ಬಿದ್ದಂತಿರುವ ಬಿಜೆಪಿಯವರು ಬೇರೆ ಹಾದಿ ಹಿಡಿದಿದ್ದಾರೆ. ಅಲ್ಲಿ ಭಾವನಾತ್ಮಕ ಸಂಗತಿಗಳನ್ನು ಮುನ್ನೆಲೆಗೆ ತರಲು ಒದ್ದಾಡಿದ್ದಾರೆ. ಅಕ್ಷಯಕುಮಾರ್ ಸಂದರ್ಶನ ಅದರ ಭಾಗ. ಅದು ಯಾವಾಗ ಲೇವಡಿಗೆ ಒಳಗಾಯಿತೋ, ಆಗ ಅವರು ಕಾಶಿ ವಿಶ್ವನಾಥನ ಹೆಸರಲ್ಲಿ ಧಾರ್ಮಿಕವಾಗಿ ಹಿಂದೂಗಳ ಒಲವು ಪಡೆಯಲು ಎರಡು ದಿನ ‘ಹರ’ಸಾಹಸ ಮಾಡಿದ್ದಾರೆ!
ಇದೇ ವೇಳೆ, ತಾವು ಈವರೆಗೂ ಪತ್ರಿಕಾಗೋಷ್ಠಿ ನಡೆಸಿಲ್ಲ ಎಂಬ ಅಪವಾದವನ್ನು ತೊಡೆದು ಹಾಕಲು ಇಂಡಿಯಾ ಟುಡೇಯೊಂದಿಗೆ ಗಂಗಾ ನದಿಯ ತಟದಲ್ಲಿ ಒಂದೂವರೆ ತಾಸುಗಳ ಸಂದರ್ಶನ ನೀಡಿದ್ದಾರೆ. ಪ್ರಧಾನಿಯ ನಾಮಿನೇಶನ್ ನಂತರ ಅದನ್ನು ಪ್ರಮೋಟ್ ಮಾಡುತ್ತಲೇ ಇರುವ ಇಂಡಿಯಾ ಟುದೇ ಚಾನೆಲ್,‘unforgettable interview for Modi’ ಎಂದೆಲ್ಲ ಪೋಸು ಕೊಡುತ್ತಿದೆ. ಇವತ್ತು ಸಂಜೆ 7ಕ್ಕೆ ಆ ಸಂದರ್ಶನ ಪ್ರಸಾರವಾಗಲಿದ್ದು, ಅದರ ತುಣುಕುಗಳನ್ನು ಈಗ ಪ್ರದರ್ಶಿಸಲಾಗಿತ್ತಿದೆ.

‘ಇಂಡಿಯಾ ಟುಡೇ’ದ ಸಂಪಾದಕನೇ ಆಗಿರುವ ರಾಹುಲ ಕನ್ವಾಲ್ ತನ್ನ ಸಹಚರರೊಂದಿಗೆ ಈ ಸಂದರ್ಶನ ಮಾಡಿದ್ದು, ‘ಮೋದಿ ಪ್ರಶ್ನೆಗೆ ಉತ್ತರಿಸಲ್ಲ, ಪ್ರೆಸ್ ಅನ್ನು ಅವಾಯ್ಡ್ ಮಾಡ್ತಾರೆ ಎಂಬುದೆಲ್ಲ ಸುಳ್ಳು, ಅವರು ನಮ್ಮ ಪ್ರಶ್ನೆ ಮತ್ತು ಕೌಂಟರ್ ಪ್ರಶ್ನೆಗೆಲ್ಲ ಉತ್ತರಿಸಿದರು’ ಎಂದೆಲ್ಲ ಹೇಳುತ್ತಾರೆ. ನ್ಯೂಸ್ ಆ್ಯಂಕರ್ ಅಂಜನಾ ಕಶ್ಯಪ್ ಸ್ಟುಡಿಯೋದಲ್ಲಿ ಪ್ರಸಾರವಾಗಲಿರುವ ಈ ಸಂದರ್ಶನದ ಬಗ್ಗೆ ಬಿಲ್ಡ್‍ಅಪ್ ಕೊಡುತ್ತಲೇ, ಗಂಗಾ ತಟದಲ್ಲಿರುವ ರಾಹುಲ್ ಕನ್ವಲ್‍ರನ್ನು ಮಾತಾಡಸಿ, ಮೋದಿ ಮನಬಿಚ್ಚಿ ಮಾತಾಡಿದರೇ ಎಂದು ನಾಟಕೀಯ ಶೈಲಿಯಲ್ಲಿ ಪ್ರಶ್ನೆ ಮಾಡುತ್ತಾರೆ! ಅದಕ್ಕೆ ಗಂಗಾ ತಟದಿಂದ ಉತ್ತರಿಸುವ ರಾಹುಲ್ ಕನ್ವಲ್, ಮೋದಿ ಬಗ್ಗೆ ತಪ್ಪು ಅಭಿಪ್ರಾಯ ಇವೆಯಲ್ಲ, ಈ ಸಂದರ್ಶನದಿಂದ ಅವೆಲ್ಲ ದೂರವಾಗಲಿವೆ, ಮೋದಿ ಪ್ರಬುದ್ಧ ನಾಯಕ ಎಂಬಂತೆ ಹೊಗಳತೊಡಗುತ್ತಾರೆ!

7ಕ್ಕೆ ಸಂದರ್ಶನ ನೋಡೋಣ!

ಅರ್ನಾಬ್ ಕೂಗಾಡಿದ್ದು ಆಯ್ತು ಕೆಲಸ ಆಗಲಿಲ್ಲ… ಅಕ್ಷಯ್ ಬಂದ, ವರ್ಕ್‍ಔಟ್ ಆಗಲಿಲ್ಲ… ಈಗ ಇದ್ದುದರಲ್ಲಿ ವಿಶ್ವಾಸಾರ್ಹತೆ ಉಳಿಸಿಕೊಂಡಿದ್ದ ‘ಇಂಡಿಯಾ ಟುಡೆ’ ಯನ್ನು ಕೂಡ ಬಲೆಗೆ ಹಾಕಲಾಗಿದೆ! ಈ ಸಂದರ್ಶನವನ್ನೂ ಎಲ್ಲ ಭಾಷೆಗಳ ಪೇಯ್ಡ್ ಚಾನೆಲ್‍ಗಳೂ ಅನುವಾದಿಸಿ (ಸಬ್ ಟೈಟಲ್ ಹಾಕಿ) ಪ್ರಸಾರ ಮಾಡುವುದಂತೂ ಗ್ಯಾರಂಟಿ! ಈಗಾಗಲೇ ಅವಕ್ಕೆ ಸಂದರ್ಶನದ ಸ್ಕ್ರಿಪ್ಟ್ ಸಿಕ್ಕಿರಬಹುದು ಅಲ್ಲವೇ?

ಮೋದಿಯವರು ಅಕ್ಷಯ್ ಕುಮಾರ್‍ಗೆ ಸಂದರ್ಶನ ಕೊಟ್ಟ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ರವೀಶ್‍ಕುಮಾರ್‍ಗೂ ಸಂದರ್ಶನ ಕೊಡುತ್ತೀರಾ ಎಂಬ ಪ್ರಶ್ನೆ ವೈರಲ್ ಆಗಿದೆ. ಚೇಂಜ್.ಆರ್ಗ್‍ನಲ್ಲಿ ಸಾವಿರಾರು ಜನ ಪಿಟಿಷನ್‍ಗೆ ಸಹಿ ಮಾಡಿ ಮೋದಿಗೆ ಒತ್ತಡ ಹೇರುತ್ತಿದ್ದಾರೆ. ಆದರೆ ಅದಕ್ಕೆ ಪ್ರತಿಕ್ರಿಯಿಸದ ಮೋದಿ ಇಂಡಿಯಾ ಟುಡೇಗೆ ಸಂದರ್ಶನ ನೀಡಿ ಪಲಾಯನ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈಗಷ್ಟೇ ಸೆಕೆಂಡ್ ಹಾಫ್ ಶುರು. ಈ ಭಾಗದ ನಾಟಕದಲ್ಲಿ ಮಾಧ್ಯಮಗಳೇ ದೊಡ್ಡ ಪೇಯ್ಡ್ ಅಭಿನಯಕಾರರು ಎಂಬುದು ನಾಚಿಕೆಗೇಡಿನ ವಿಷಯ! ಆದರೂ ಪೂರ್ತಿ ಸಂದರ್ಶನ ಪ್ರಸಾರವಾಗುವವರೆಗೂ ಕಾಯೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...