Homeಕರ್ನಾಟಕಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ಜಗದೀಶ್ ಗುಡಗುಂಟಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಮಖಂಡಿಯಿಂದ ಬಿಜೆಪಿ ಟಿಕೆಟ್‌ಗೆ ಪ್ರಯತ್ನ ಪಟ್ಟಿದ್ದರು. ಹೀಗಾಗಿ ಆಡಳಿತ ಪಕ್ಷದ ನಾಯಕರೊಬ್ಬರಿಗೆ ಪ್ರಶಸ್ತಿ ನೀಡಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ.

- Advertisement -
- Advertisement -

ಹಂಪಿ ಕನ್ನಡ ವಿಶ್ವವಿದ್ಯಾಲಯ ನೀಡುವ ‘ನಾಡೋಜ’ ಪ್ರಶಸ್ತಿ ಈ ಬಾರಿ ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಸಕ್ಕರೆ ಕಾರ್ಖಾನೆಯ ಮಾಲೀಕ ಜಗದೀಶ್ ಗುಡಗುಂಟಿ ಅವರನ್ನು ಆಯ್ಕೆ ಮಾಡುವ ಮೂಲಕ ವಿವಾದಕ್ಕೆ ಈಡಾಗಿದೆ. ಇವರ ಜೊತೆಗೆ ಕಣ್ಣಿನ ವೈದ್ಯ ಡಾ.ಕೆ.ಕೃಷ್ಣಪ್ರಸಾದ್ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಬಾರಿ ಉದ್ಯಮಿ ಒಬ್ಬರಿಗೆ ಪ್ರತಿಷ್ಠಿತ ನಾಡೋಜ ಗೌರವ ನೀಡುವ ಮೂಲಕ ಎಲ್ಲ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ವಿವಿಯ ಹಲವು ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಕೂಡ ನಾಡೋಜ ಗೌರವ ಹಲವು ವಿವಾದಗಳಿಗೆ ಎಡೆಮಾಡಿಕೊಟ್ಟಿತ್ತು.

’ನಾಡೋಜ’ ವಿವಾದದ ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಹಂಪಿ ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ ಟಿ. ಆರ್ ಚಂದ್ರಶೇಖರ್, “ಪ್ರಶಸ್ತಿ ಅಂದರೆ ಲಾಬಿ ಅನ್ನೋದು ಕಾಮನ್ ಆಗಿದೆ. ಆದರೆ ಈ ಸಲ ಅಕ್ಷರ ಲೋಕಕ್ಕೆ ಸಂಬಂಧಿಸದ ಬಂಡವಾಳಶಾಹಿ ಒಬ್ಬರಿಗೆ ನಾಡೋಜ ನೀಡುರುವುದು ಹಂಪಿ ಕನ್ನಡ ವಿವಿಯಲ್ಲಿ ಮೌಲ್ಯಗಳ ಕುಸಿತ ಯಾವ ಮಟ್ಟಕ್ಕೆ ತಲುಪಿದೆ ಎಂಬುದಕ್ಕೆ ಸಾಕ್ಷಿಯಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಹಿರಿಯ ಸಾಹಿತಿ, ನಾಡೋಜ ಹಂಪನಾರನ್ನು ಠಾಣೆಗೆ ಕರೆಸಿ ಪೊಲೀಸ್ ವಿಚಾರಣೆ: ವ್ಯಾಪಕ ಖಂಡನೆ

“ದೂರದರ್ಶನ ನಿರ್ದೇಶಕರಾಗಿದ್ದ ಮಹೇಶ್ ಜೋಶಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್ ಅವರಿಗೆ ಕೂಡ ನಾಡೋಜ ನೀಡಲಾಗಿದೆ. ಕೊನೆ ಪಕ್ಷ ಈ ಇಬ್ಬರಿಗೆ ಸಾಹಿತ್ಯ-ಸಂಸ್ಕೃತಿ ಜೊತೆಗೆ ಒಂದು ಮಟ್ಟದ ನಂಟಿತ್ತು. ಅವರು ಸರ್ಕಾರಿ ಮಟ್ಟದಲ್ಲಿ ಪ್ರಭಾವ ಬಳಸಿ ನಾಡೋಜ ಪಡೆದಿದ್ದರು. ಆದರೆ ಈ ಸಲ ಮೊಟ್ಟಮೊದಲ ಬಾರಿಗೆ ಬಂಡವಾಳಶಾಹಿ ಒಬ್ಬರಿಗೆ ನಾಡೋಜ ನೀಡುವ ಮೂಲಕ ಹಂಪಿ ವಿವಿ ದೊಡ್ಡ ತಪ್ಪು ಮಾಡಿದೆ” ಎಂದು ಆರೋಪಿಸಿದ್ದಾರೆ.

“ನಾಡೋಜ ಇರಲಿ, ಯಾವ ಪ್ರಶಸ್ತಿಯೂ ಇಂದು ಹಣ, ಲಾಬಿ ಮತ್ತು ಅಧಿಕಾರಗಳಿಂದ ಮುಕ್ತವಾಗಿಲ್ಲ. ನಾಡೋಜ ಉದ್ಯಮಿಯೊಬ್ಬರ ಕಿಸೆಗೆ ಹೋದರೆ ನಕ್ಕು ಸುಮ್ಮನಾಗಬೇಕು ಅಷ್ಟೇ.” -ಡಾ.ಚಂದ್ರ ಪೂಜಾರಿ, ವಿಶ್ರಾಂತ ಅಧ್ಯಾಪಕ, ಹಂಪಿ ವಿವಿ

ಈಗ ನಾಡೋಜ ಪ್ರಶಸ್ತಿಗೆ ಆಯ್ಕೆಯಾಗಿರುವ ಸಕ್ಕರೆ ಕಾರ್ಖಾನೆ ಮಾಲೀಕ ಜಗದೀಶ್ ಗುಡಗುಂಟಿ, ಕೇವಲ ಉದ್ಯಮಿಯಲ್ಲ. ಅವರು ಜಮಖಂಡಿಯಿಂದ ಕಳೆದ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್‌ಗೆ ಪ್ರಯತ್ನ ಪಟ್ಟಿದ್ದರು. ಹೀಗಾಗಿ ಆಡಳಿತ ಪಕ್ಷದ ನಾಯಕರೊಬ್ಬರಿಗೆ ಪ್ರಶಸ್ತಿ ನೀಡಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಇದನ್ನೂ ಓದಿ: ಸೂಪರ್‌ ಸ್ಟಾರ್ ರಜನಿಕಾಂತ್‌ಗೆ ಒಲಿದ 2019ರ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ವಿಜಯಪುರ, ಬಾಗಲಕೋಟೆಗಳಲ್ಲಿ ಇಂಡಸ್ಟ್ರಿ ಹೊಂದಿರುವ ಇವರನ್ನು ಬಳ್ಳಾರಿ ಜಿಲ್ಲೆಯಲ್ಲಿರುವ ಇರುವ ಕನ್ನಡ ವಿಶ್ವವಿದ್ಯಾಲು ಹುಡುಕಿದೆ ಎಂದು ಹಲವು ವಿದ್ಯಾರ್ಥಿಗಳು ವ್ಯಂಗ್ಯವಾಡಿದ್ದಾರೆ.

 “ಅಯ್ಯೋ, ಪ್ರಶಸ್ತಿ ಅಂದರೆ ಲಾಬಿ ಅನ್ನುವಂತಹ ವಾತಾವರಣದ ಮಧ್ಯೆ ಕನ್ನಡದ ಪ್ರಾತಿನಿಧಿಕ ವಿವಿಯ ನಾಡೋಜ ಪ್ರಶಸ್ತಿ ಉದ್ಯಮಿಯೊಬ್ಬರಿಗೆ ಸಿಕ್ಕಿದ್ದು ಇವತ್ತು ವಿವಿಗಳು ತಲುಪುತ್ತಿರುವ ನೈತಿಕ ಅಧಿಪತನಕ್ಕೆ ಸಾಕ್ಷಿ.”ಸಿ.ಎನ್ ರಾಮಚಂದ್ರನ್, ವಿಮರ್ಶಕರು


ಇದನ್ನೂ ಓದಿ: ‘ಬಿರಿಯಾನಿ’ ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...