Homeಕರ್ನಾಟಕಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ಜಗದೀಶ್ ಗುಡಗುಂಟಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಮಖಂಡಿಯಿಂದ ಬಿಜೆಪಿ ಟಿಕೆಟ್‌ಗೆ ಪ್ರಯತ್ನ ಪಟ್ಟಿದ್ದರು. ಹೀಗಾಗಿ ಆಡಳಿತ ಪಕ್ಷದ ನಾಯಕರೊಬ್ಬರಿಗೆ ಪ್ರಶಸ್ತಿ ನೀಡಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ.

- Advertisement -
- Advertisement -

ಹಂಪಿ ಕನ್ನಡ ವಿಶ್ವವಿದ್ಯಾಲಯ ನೀಡುವ ‘ನಾಡೋಜ’ ಪ್ರಶಸ್ತಿ ಈ ಬಾರಿ ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಸಕ್ಕರೆ ಕಾರ್ಖಾನೆಯ ಮಾಲೀಕ ಜಗದೀಶ್ ಗುಡಗುಂಟಿ ಅವರನ್ನು ಆಯ್ಕೆ ಮಾಡುವ ಮೂಲಕ ವಿವಾದಕ್ಕೆ ಈಡಾಗಿದೆ. ಇವರ ಜೊತೆಗೆ ಕಣ್ಣಿನ ವೈದ್ಯ ಡಾ.ಕೆ.ಕೃಷ್ಣಪ್ರಸಾದ್ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಬಾರಿ ಉದ್ಯಮಿ ಒಬ್ಬರಿಗೆ ಪ್ರತಿಷ್ಠಿತ ನಾಡೋಜ ಗೌರವ ನೀಡುವ ಮೂಲಕ ಎಲ್ಲ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ವಿವಿಯ ಹಲವು ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಕೂಡ ನಾಡೋಜ ಗೌರವ ಹಲವು ವಿವಾದಗಳಿಗೆ ಎಡೆಮಾಡಿಕೊಟ್ಟಿತ್ತು.

’ನಾಡೋಜ’ ವಿವಾದದ ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಹಂಪಿ ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ ಟಿ. ಆರ್ ಚಂದ್ರಶೇಖರ್, “ಪ್ರಶಸ್ತಿ ಅಂದರೆ ಲಾಬಿ ಅನ್ನೋದು ಕಾಮನ್ ಆಗಿದೆ. ಆದರೆ ಈ ಸಲ ಅಕ್ಷರ ಲೋಕಕ್ಕೆ ಸಂಬಂಧಿಸದ ಬಂಡವಾಳಶಾಹಿ ಒಬ್ಬರಿಗೆ ನಾಡೋಜ ನೀಡುರುವುದು ಹಂಪಿ ಕನ್ನಡ ವಿವಿಯಲ್ಲಿ ಮೌಲ್ಯಗಳ ಕುಸಿತ ಯಾವ ಮಟ್ಟಕ್ಕೆ ತಲುಪಿದೆ ಎಂಬುದಕ್ಕೆ ಸಾಕ್ಷಿಯಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಹಿರಿಯ ಸಾಹಿತಿ, ನಾಡೋಜ ಹಂಪನಾರನ್ನು ಠಾಣೆಗೆ ಕರೆಸಿ ಪೊಲೀಸ್ ವಿಚಾರಣೆ: ವ್ಯಾಪಕ ಖಂಡನೆ

“ದೂರದರ್ಶನ ನಿರ್ದೇಶಕರಾಗಿದ್ದ ಮಹೇಶ್ ಜೋಶಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್ ಅವರಿಗೆ ಕೂಡ ನಾಡೋಜ ನೀಡಲಾಗಿದೆ. ಕೊನೆ ಪಕ್ಷ ಈ ಇಬ್ಬರಿಗೆ ಸಾಹಿತ್ಯ-ಸಂಸ್ಕೃತಿ ಜೊತೆಗೆ ಒಂದು ಮಟ್ಟದ ನಂಟಿತ್ತು. ಅವರು ಸರ್ಕಾರಿ ಮಟ್ಟದಲ್ಲಿ ಪ್ರಭಾವ ಬಳಸಿ ನಾಡೋಜ ಪಡೆದಿದ್ದರು. ಆದರೆ ಈ ಸಲ ಮೊಟ್ಟಮೊದಲ ಬಾರಿಗೆ ಬಂಡವಾಳಶಾಹಿ ಒಬ್ಬರಿಗೆ ನಾಡೋಜ ನೀಡುವ ಮೂಲಕ ಹಂಪಿ ವಿವಿ ದೊಡ್ಡ ತಪ್ಪು ಮಾಡಿದೆ” ಎಂದು ಆರೋಪಿಸಿದ್ದಾರೆ.

“ನಾಡೋಜ ಇರಲಿ, ಯಾವ ಪ್ರಶಸ್ತಿಯೂ ಇಂದು ಹಣ, ಲಾಬಿ ಮತ್ತು ಅಧಿಕಾರಗಳಿಂದ ಮುಕ್ತವಾಗಿಲ್ಲ. ನಾಡೋಜ ಉದ್ಯಮಿಯೊಬ್ಬರ ಕಿಸೆಗೆ ಹೋದರೆ ನಕ್ಕು ಸುಮ್ಮನಾಗಬೇಕು ಅಷ್ಟೇ.” -ಡಾ.ಚಂದ್ರ ಪೂಜಾರಿ, ವಿಶ್ರಾಂತ ಅಧ್ಯಾಪಕ, ಹಂಪಿ ವಿವಿ

ಈಗ ನಾಡೋಜ ಪ್ರಶಸ್ತಿಗೆ ಆಯ್ಕೆಯಾಗಿರುವ ಸಕ್ಕರೆ ಕಾರ್ಖಾನೆ ಮಾಲೀಕ ಜಗದೀಶ್ ಗುಡಗುಂಟಿ, ಕೇವಲ ಉದ್ಯಮಿಯಲ್ಲ. ಅವರು ಜಮಖಂಡಿಯಿಂದ ಕಳೆದ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್‌ಗೆ ಪ್ರಯತ್ನ ಪಟ್ಟಿದ್ದರು. ಹೀಗಾಗಿ ಆಡಳಿತ ಪಕ್ಷದ ನಾಯಕರೊಬ್ಬರಿಗೆ ಪ್ರಶಸ್ತಿ ನೀಡಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಇದನ್ನೂ ಓದಿ: ಸೂಪರ್‌ ಸ್ಟಾರ್ ರಜನಿಕಾಂತ್‌ಗೆ ಒಲಿದ 2019ರ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ವಿಜಯಪುರ, ಬಾಗಲಕೋಟೆಗಳಲ್ಲಿ ಇಂಡಸ್ಟ್ರಿ ಹೊಂದಿರುವ ಇವರನ್ನು ಬಳ್ಳಾರಿ ಜಿಲ್ಲೆಯಲ್ಲಿರುವ ಇರುವ ಕನ್ನಡ ವಿಶ್ವವಿದ್ಯಾಲು ಹುಡುಕಿದೆ ಎಂದು ಹಲವು ವಿದ್ಯಾರ್ಥಿಗಳು ವ್ಯಂಗ್ಯವಾಡಿದ್ದಾರೆ.

 “ಅಯ್ಯೋ, ಪ್ರಶಸ್ತಿ ಅಂದರೆ ಲಾಬಿ ಅನ್ನುವಂತಹ ವಾತಾವರಣದ ಮಧ್ಯೆ ಕನ್ನಡದ ಪ್ರಾತಿನಿಧಿಕ ವಿವಿಯ ನಾಡೋಜ ಪ್ರಶಸ್ತಿ ಉದ್ಯಮಿಯೊಬ್ಬರಿಗೆ ಸಿಕ್ಕಿದ್ದು ಇವತ್ತು ವಿವಿಗಳು ತಲುಪುತ್ತಿರುವ ನೈತಿಕ ಅಧಿಪತನಕ್ಕೆ ಸಾಕ್ಷಿ.”ಸಿ.ಎನ್ ರಾಮಚಂದ್ರನ್, ವಿಮರ್ಶಕರು


ಇದನ್ನೂ ಓದಿ: ‘ಬಿರಿಯಾನಿ’ ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...