Homeಕರ್ನಾಟಕಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ಜಗದೀಶ್ ಗುಡಗುಂಟಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಮಖಂಡಿಯಿಂದ ಬಿಜೆಪಿ ಟಿಕೆಟ್‌ಗೆ ಪ್ರಯತ್ನ ಪಟ್ಟಿದ್ದರು. ಹೀಗಾಗಿ ಆಡಳಿತ ಪಕ್ಷದ ನಾಯಕರೊಬ್ಬರಿಗೆ ಪ್ರಶಸ್ತಿ ನೀಡಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ.

- Advertisement -
- Advertisement -

ಹಂಪಿ ಕನ್ನಡ ವಿಶ್ವವಿದ್ಯಾಲಯ ನೀಡುವ ‘ನಾಡೋಜ’ ಪ್ರಶಸ್ತಿ ಈ ಬಾರಿ ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಸಕ್ಕರೆ ಕಾರ್ಖಾನೆಯ ಮಾಲೀಕ ಜಗದೀಶ್ ಗುಡಗುಂಟಿ ಅವರನ್ನು ಆಯ್ಕೆ ಮಾಡುವ ಮೂಲಕ ವಿವಾದಕ್ಕೆ ಈಡಾಗಿದೆ. ಇವರ ಜೊತೆಗೆ ಕಣ್ಣಿನ ವೈದ್ಯ ಡಾ.ಕೆ.ಕೃಷ್ಣಪ್ರಸಾದ್ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಬಾರಿ ಉದ್ಯಮಿ ಒಬ್ಬರಿಗೆ ಪ್ರತಿಷ್ಠಿತ ನಾಡೋಜ ಗೌರವ ನೀಡುವ ಮೂಲಕ ಎಲ್ಲ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ವಿವಿಯ ಹಲವು ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಕೂಡ ನಾಡೋಜ ಗೌರವ ಹಲವು ವಿವಾದಗಳಿಗೆ ಎಡೆಮಾಡಿಕೊಟ್ಟಿತ್ತು.

’ನಾಡೋಜ’ ವಿವಾದದ ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಹಂಪಿ ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ ಟಿ. ಆರ್ ಚಂದ್ರಶೇಖರ್, “ಪ್ರಶಸ್ತಿ ಅಂದರೆ ಲಾಬಿ ಅನ್ನೋದು ಕಾಮನ್ ಆಗಿದೆ. ಆದರೆ ಈ ಸಲ ಅಕ್ಷರ ಲೋಕಕ್ಕೆ ಸಂಬಂಧಿಸದ ಬಂಡವಾಳಶಾಹಿ ಒಬ್ಬರಿಗೆ ನಾಡೋಜ ನೀಡುರುವುದು ಹಂಪಿ ಕನ್ನಡ ವಿವಿಯಲ್ಲಿ ಮೌಲ್ಯಗಳ ಕುಸಿತ ಯಾವ ಮಟ್ಟಕ್ಕೆ ತಲುಪಿದೆ ಎಂಬುದಕ್ಕೆ ಸಾಕ್ಷಿಯಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಹಿರಿಯ ಸಾಹಿತಿ, ನಾಡೋಜ ಹಂಪನಾರನ್ನು ಠಾಣೆಗೆ ಕರೆಸಿ ಪೊಲೀಸ್ ವಿಚಾರಣೆ: ವ್ಯಾಪಕ ಖಂಡನೆ

“ದೂರದರ್ಶನ ನಿರ್ದೇಶಕರಾಗಿದ್ದ ಮಹೇಶ್ ಜೋಶಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್ ಅವರಿಗೆ ಕೂಡ ನಾಡೋಜ ನೀಡಲಾಗಿದೆ. ಕೊನೆ ಪಕ್ಷ ಈ ಇಬ್ಬರಿಗೆ ಸಾಹಿತ್ಯ-ಸಂಸ್ಕೃತಿ ಜೊತೆಗೆ ಒಂದು ಮಟ್ಟದ ನಂಟಿತ್ತು. ಅವರು ಸರ್ಕಾರಿ ಮಟ್ಟದಲ್ಲಿ ಪ್ರಭಾವ ಬಳಸಿ ನಾಡೋಜ ಪಡೆದಿದ್ದರು. ಆದರೆ ಈ ಸಲ ಮೊಟ್ಟಮೊದಲ ಬಾರಿಗೆ ಬಂಡವಾಳಶಾಹಿ ಒಬ್ಬರಿಗೆ ನಾಡೋಜ ನೀಡುವ ಮೂಲಕ ಹಂಪಿ ವಿವಿ ದೊಡ್ಡ ತಪ್ಪು ಮಾಡಿದೆ” ಎಂದು ಆರೋಪಿಸಿದ್ದಾರೆ.

“ನಾಡೋಜ ಇರಲಿ, ಯಾವ ಪ್ರಶಸ್ತಿಯೂ ಇಂದು ಹಣ, ಲಾಬಿ ಮತ್ತು ಅಧಿಕಾರಗಳಿಂದ ಮುಕ್ತವಾಗಿಲ್ಲ. ನಾಡೋಜ ಉದ್ಯಮಿಯೊಬ್ಬರ ಕಿಸೆಗೆ ಹೋದರೆ ನಕ್ಕು ಸುಮ್ಮನಾಗಬೇಕು ಅಷ್ಟೇ.” -ಡಾ.ಚಂದ್ರ ಪೂಜಾರಿ, ವಿಶ್ರಾಂತ ಅಧ್ಯಾಪಕ, ಹಂಪಿ ವಿವಿ

ಈಗ ನಾಡೋಜ ಪ್ರಶಸ್ತಿಗೆ ಆಯ್ಕೆಯಾಗಿರುವ ಸಕ್ಕರೆ ಕಾರ್ಖಾನೆ ಮಾಲೀಕ ಜಗದೀಶ್ ಗುಡಗುಂಟಿ, ಕೇವಲ ಉದ್ಯಮಿಯಲ್ಲ. ಅವರು ಜಮಖಂಡಿಯಿಂದ ಕಳೆದ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್‌ಗೆ ಪ್ರಯತ್ನ ಪಟ್ಟಿದ್ದರು. ಹೀಗಾಗಿ ಆಡಳಿತ ಪಕ್ಷದ ನಾಯಕರೊಬ್ಬರಿಗೆ ಪ್ರಶಸ್ತಿ ನೀಡಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಇದನ್ನೂ ಓದಿ: ಸೂಪರ್‌ ಸ್ಟಾರ್ ರಜನಿಕಾಂತ್‌ಗೆ ಒಲಿದ 2019ರ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ವಿಜಯಪುರ, ಬಾಗಲಕೋಟೆಗಳಲ್ಲಿ ಇಂಡಸ್ಟ್ರಿ ಹೊಂದಿರುವ ಇವರನ್ನು ಬಳ್ಳಾರಿ ಜಿಲ್ಲೆಯಲ್ಲಿರುವ ಇರುವ ಕನ್ನಡ ವಿಶ್ವವಿದ್ಯಾಲು ಹುಡುಕಿದೆ ಎಂದು ಹಲವು ವಿದ್ಯಾರ್ಥಿಗಳು ವ್ಯಂಗ್ಯವಾಡಿದ್ದಾರೆ.

 “ಅಯ್ಯೋ, ಪ್ರಶಸ್ತಿ ಅಂದರೆ ಲಾಬಿ ಅನ್ನುವಂತಹ ವಾತಾವರಣದ ಮಧ್ಯೆ ಕನ್ನಡದ ಪ್ರಾತಿನಿಧಿಕ ವಿವಿಯ ನಾಡೋಜ ಪ್ರಶಸ್ತಿ ಉದ್ಯಮಿಯೊಬ್ಬರಿಗೆ ಸಿಕ್ಕಿದ್ದು ಇವತ್ತು ವಿವಿಗಳು ತಲುಪುತ್ತಿರುವ ನೈತಿಕ ಅಧಿಪತನಕ್ಕೆ ಸಾಕ್ಷಿ.”ಸಿ.ಎನ್ ರಾಮಚಂದ್ರನ್, ವಿಮರ್ಶಕರು


ಇದನ್ನೂ ಓದಿ: ‘ಬಿರಿಯಾನಿ’ ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...