Homeಮುಖಪುಟಸರ್ಕಾರ ರಚಿಸಲು ಸೀಟುಗಳು ಕೊರತೆಯಾದರೆ ಬಿಜೆಪಿ ಮತ್ತು ಟಿಎಂಸಿ ಕೈಜೋಡಿಸುತ್ತದೆ: ಸಿಪಿಐ(ಎಂ)

ಸರ್ಕಾರ ರಚಿಸಲು ಸೀಟುಗಳು ಕೊರತೆಯಾದರೆ ಬಿಜೆಪಿ ಮತ್ತು ಟಿಎಂಸಿ ಕೈಜೋಡಿಸುತ್ತದೆ: ಸಿಪಿಐ(ಎಂ)

- Advertisement -
- Advertisement -

ರಾಜ್ಯದಲ್ಲಿ ಸರ್ಕಾರ ರಚಿಸಲು ಬೇಕಾಗುವ ಅಗತ್ಯ ಸಂಖ್ಯೆಯಲ್ಲಿ ಕೊರತೆಯಾದತೆ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಕೈಜೋಡಿಸಬಹುದು ಎಂದು ಸಿಪಿಐ(ಎಂ) ಪಶ್ಚಿಮ ಬಂಗಾಳದ ಕಾರ್ಯದರ್ಶಿ ಸೂರ್ಯ ಕಾಂತ ಮಿಶ್ರಾ ಹೇಳಿದ್ದು, ಚುನಾವಣಾ ಆಯೋಗದ ನಿಷ್ಪಕ್ಷಪಾತತೆಯನ್ನು ಕೂಡಾ ಅವರು ಪ್ರಶ್ನಿಸಿದ್ದಾರೆ.

ಎಡಪಕ್ಷಗಳು, ಕಾಂಗ್ರೆಸ್ ಮತ್ತು ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಚುನಾವಣಾ ದುಷ್ಕೃತ್ಯದ ಬಗ್ಗೆ ಚುನಾವಣಾ ಆಯೋಗಕ್ಕೆ ಹಲವಾರು ದೂರುಗಳನ್ನು ನೀಡಿದ್ದರೂ, “ಅವುಗಳಲ್ಲಿ ಯಾವುದನ್ನೂ ಪರಿಹರಿಸಲಾಗಿಲ್ಲ, ಆಯೋಗವು ಟಿಎಂಸಿ ಮತ್ತು ಬಿಜೆಪಿ ಪಕ್ಷಗಳನ್ನು ಸಂತೋಷಪಡಿಸುವಲ್ಲಿ ಮಾತ್ರ ಆಸಕ್ತಿ ಹೊಂದಿದೆ” ಎಂದು ಸೂರ್ಯ ಕಾಂತ ಮಿಶ್ರಾ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಬಹುಮತ ಇಲ್ಲದಿದ್ದ ಸಂದರ್ಭದಲ್ಲಿ ಎಡಪಕ್ಷಗಳ ಮೈತ್ರಿಕೂಟವು ಟಿಎಂಸಿಯೊಂದಿಗೆ ಕೈಜೋಡಿಸುವ ಸಾಧ್ಯತೆ ಇದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ‘‘ಅದೊಂದು ಕಾಲ್ಪನಿಕ ಪ್ರಶ್ನೆ” ಎಂದರು.

ಇದನ್ನೂ ಓದಿ: ಛತ್ತೀಸ್‌ಗಢ: ಅಪಹರಿಸಿದ್ದ ಯೋಧನನ್ನು ಬಿಡುಗಡೆ ಮಾಡಿದ ಮಾವೋವಾದಿಗಳು

“ಎಡಪಕ್ಷಗಳ ಮೈತ್ರಿಯು ರಾಜ್ಯದಲ್ಲಿ ಸರ್ಕಾರ ರಚಿಸಲು ಹೋರಾಡುತ್ತಿದೆ. ಬಹುಮತ ಇಲ್ಲದ ಫಲಿತಾಂಶ ಬಂದರೆ, ಟಿಎಂಸಿ ಮತ್ತು ಬಿಜೆಪಿ ಕೈಜೋಡಿಸಿ ಸರ್ಕಾರ ರಚನೆ ಮಾಡುವುದನ್ನು ನೀವು ಕಾಣಬಹುದು” ಎಂದು ಮಿಶ್ರಾ ಹೇಳಿದ್ದಾರೆ.

“ಅದಕ್ಕಾಗಿಯೇ ಎರಡು ಪಕ್ಷಗಳು ಕೈಜೋಡಿಸಿದರೂ ಸರ್ಕಾರ ರಚಿಸಲು ಸಾಧ್ಯವಾಗಬಾರದು ಎಂದು ನಾವು ಜನರಿಗೆ ಮನವಿ ಮಾಡುತ್ತಿದ್ದೇವೆ” ಎಂದು ಮಿಶ್ರಾ ಹೇಳಿದ್ದಾರೆ.

ಈ ಬಾರಿ ಚುನಾವಣಾ ಆಯೋಗದ ತಟಸ್ಥತೆಯ ಬಗ್ಗೆ ಗಂಭೀರ ಪ್ರಶ್ನೆಗಳೆದ್ದಿವೆ ಎಂದು ಅವರು ಆರೋಪಿಸಿದ್ದಾರೆ.

“ನಾವು ಹಲವಾರು ದೂರುಗಳನ್ನು ದಾಖಲಿಸಿದ್ದೇವೆ, ಆದರೆ ಅವುಗಳಲ್ಲಿ ಯಾವುದನ್ನೂ ಪರಿಹರಿಸಲಾಗಿಲ್ಲ. ಹಲವಾರು ಘಟನೆಗಳು ನಡೆದಿವೆ, ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಆಯೋಗವು ಟಿಎಂಸಿ ಮತ್ತು ಬಿಜೆಪಿಯನ್ನು ಸಂತೋಷಪಡಿಸುವ ನಿಟ್ಟಿನಲ್ಲಿ ಮಾತ್ರ ಕೆಲಸ ಮಾಡುತ್ತಿದ್ದಾರೆ ಎಂದು ತೋರುತ್ತದೆ” ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿಯು ಟಿಎಂಸಿಯನ್ನು ಅಧಿಕಾರದಿಂದ ಇಳಿಸಲು ಪ್ರಯತ್ನಿಸುತ್ತಿದ್ದರೆ, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಲು ಪ್ರಯತ್ನಿಸುತ್ತಿದೆ. ಎಂಟು ಹಂತಗಳಲ್ಲಿ ನಡೆಯಲಿರುವ ಮತದಾನ ಪ್ರಕ್ರಿಯೆಯಲ್ಲಿ ಈಗಾಗಲೆ ಮೂರು ಹಂತಗಳು ಪೂರ್ಣಗೊಂಡಿವೆ.

ಇದನ್ನೂ ಓದಿ: ‘ವಿಮೆ, ಪರ್ಮಿಟ್ ಇಲ್ಲದೆ ಖಾಸಗಿ ಬಸ್‌ಗಳ ಓಡಾಟ’ – ಪತ್ರಕರ್ತರ ಪ್ರಶ್ನೆ ಸಿಟ್ಟಾದ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...