Homeಮುಖಪುಟಸರ್ಕಾರ ರಚಿಸಲು ಸೀಟುಗಳು ಕೊರತೆಯಾದರೆ ಬಿಜೆಪಿ ಮತ್ತು ಟಿಎಂಸಿ ಕೈಜೋಡಿಸುತ್ತದೆ: ಸಿಪಿಐ(ಎಂ)

ಸರ್ಕಾರ ರಚಿಸಲು ಸೀಟುಗಳು ಕೊರತೆಯಾದರೆ ಬಿಜೆಪಿ ಮತ್ತು ಟಿಎಂಸಿ ಕೈಜೋಡಿಸುತ್ತದೆ: ಸಿಪಿಐ(ಎಂ)

- Advertisement -
- Advertisement -

ರಾಜ್ಯದಲ್ಲಿ ಸರ್ಕಾರ ರಚಿಸಲು ಬೇಕಾಗುವ ಅಗತ್ಯ ಸಂಖ್ಯೆಯಲ್ಲಿ ಕೊರತೆಯಾದತೆ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಕೈಜೋಡಿಸಬಹುದು ಎಂದು ಸಿಪಿಐ(ಎಂ) ಪಶ್ಚಿಮ ಬಂಗಾಳದ ಕಾರ್ಯದರ್ಶಿ ಸೂರ್ಯ ಕಾಂತ ಮಿಶ್ರಾ ಹೇಳಿದ್ದು, ಚುನಾವಣಾ ಆಯೋಗದ ನಿಷ್ಪಕ್ಷಪಾತತೆಯನ್ನು ಕೂಡಾ ಅವರು ಪ್ರಶ್ನಿಸಿದ್ದಾರೆ.

ಎಡಪಕ್ಷಗಳು, ಕಾಂಗ್ರೆಸ್ ಮತ್ತು ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಚುನಾವಣಾ ದುಷ್ಕೃತ್ಯದ ಬಗ್ಗೆ ಚುನಾವಣಾ ಆಯೋಗಕ್ಕೆ ಹಲವಾರು ದೂರುಗಳನ್ನು ನೀಡಿದ್ದರೂ, “ಅವುಗಳಲ್ಲಿ ಯಾವುದನ್ನೂ ಪರಿಹರಿಸಲಾಗಿಲ್ಲ, ಆಯೋಗವು ಟಿಎಂಸಿ ಮತ್ತು ಬಿಜೆಪಿ ಪಕ್ಷಗಳನ್ನು ಸಂತೋಷಪಡಿಸುವಲ್ಲಿ ಮಾತ್ರ ಆಸಕ್ತಿ ಹೊಂದಿದೆ” ಎಂದು ಸೂರ್ಯ ಕಾಂತ ಮಿಶ್ರಾ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಬಹುಮತ ಇಲ್ಲದಿದ್ದ ಸಂದರ್ಭದಲ್ಲಿ ಎಡಪಕ್ಷಗಳ ಮೈತ್ರಿಕೂಟವು ಟಿಎಂಸಿಯೊಂದಿಗೆ ಕೈಜೋಡಿಸುವ ಸಾಧ್ಯತೆ ಇದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ‘‘ಅದೊಂದು ಕಾಲ್ಪನಿಕ ಪ್ರಶ್ನೆ” ಎಂದರು.

ಇದನ್ನೂ ಓದಿ: ಛತ್ತೀಸ್‌ಗಢ: ಅಪಹರಿಸಿದ್ದ ಯೋಧನನ್ನು ಬಿಡುಗಡೆ ಮಾಡಿದ ಮಾವೋವಾದಿಗಳು

“ಎಡಪಕ್ಷಗಳ ಮೈತ್ರಿಯು ರಾಜ್ಯದಲ್ಲಿ ಸರ್ಕಾರ ರಚಿಸಲು ಹೋರಾಡುತ್ತಿದೆ. ಬಹುಮತ ಇಲ್ಲದ ಫಲಿತಾಂಶ ಬಂದರೆ, ಟಿಎಂಸಿ ಮತ್ತು ಬಿಜೆಪಿ ಕೈಜೋಡಿಸಿ ಸರ್ಕಾರ ರಚನೆ ಮಾಡುವುದನ್ನು ನೀವು ಕಾಣಬಹುದು” ಎಂದು ಮಿಶ್ರಾ ಹೇಳಿದ್ದಾರೆ.

“ಅದಕ್ಕಾಗಿಯೇ ಎರಡು ಪಕ್ಷಗಳು ಕೈಜೋಡಿಸಿದರೂ ಸರ್ಕಾರ ರಚಿಸಲು ಸಾಧ್ಯವಾಗಬಾರದು ಎಂದು ನಾವು ಜನರಿಗೆ ಮನವಿ ಮಾಡುತ್ತಿದ್ದೇವೆ” ಎಂದು ಮಿಶ್ರಾ ಹೇಳಿದ್ದಾರೆ.

ಈ ಬಾರಿ ಚುನಾವಣಾ ಆಯೋಗದ ತಟಸ್ಥತೆಯ ಬಗ್ಗೆ ಗಂಭೀರ ಪ್ರಶ್ನೆಗಳೆದ್ದಿವೆ ಎಂದು ಅವರು ಆರೋಪಿಸಿದ್ದಾರೆ.

“ನಾವು ಹಲವಾರು ದೂರುಗಳನ್ನು ದಾಖಲಿಸಿದ್ದೇವೆ, ಆದರೆ ಅವುಗಳಲ್ಲಿ ಯಾವುದನ್ನೂ ಪರಿಹರಿಸಲಾಗಿಲ್ಲ. ಹಲವಾರು ಘಟನೆಗಳು ನಡೆದಿವೆ, ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಆಯೋಗವು ಟಿಎಂಸಿ ಮತ್ತು ಬಿಜೆಪಿಯನ್ನು ಸಂತೋಷಪಡಿಸುವ ನಿಟ್ಟಿನಲ್ಲಿ ಮಾತ್ರ ಕೆಲಸ ಮಾಡುತ್ತಿದ್ದಾರೆ ಎಂದು ತೋರುತ್ತದೆ” ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿಯು ಟಿಎಂಸಿಯನ್ನು ಅಧಿಕಾರದಿಂದ ಇಳಿಸಲು ಪ್ರಯತ್ನಿಸುತ್ತಿದ್ದರೆ, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಲು ಪ್ರಯತ್ನಿಸುತ್ತಿದೆ. ಎಂಟು ಹಂತಗಳಲ್ಲಿ ನಡೆಯಲಿರುವ ಮತದಾನ ಪ್ರಕ್ರಿಯೆಯಲ್ಲಿ ಈಗಾಗಲೆ ಮೂರು ಹಂತಗಳು ಪೂರ್ಣಗೊಂಡಿವೆ.

ಇದನ್ನೂ ಓದಿ: ‘ವಿಮೆ, ಪರ್ಮಿಟ್ ಇಲ್ಲದೆ ಖಾಸಗಿ ಬಸ್‌ಗಳ ಓಡಾಟ’ – ಪತ್ರಕರ್ತರ ಪ್ರಶ್ನೆ ಸಿಟ್ಟಾದ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...