Homeಕರೋನಾ ತಲ್ಲಣಲಸಿಕೆ ಉತ್ಸವಕ್ಕೆ ಪ್ರಧಾನಿ ಕರೆ: ಲಸಿಕೆ ಕೊರತೆ ಗಂಭೀರ ವಿಚಾರ, ಉತ್ಸವ ಅಲ್ಲ ಎಂದ ರಾಹುಲ್...

ಲಸಿಕೆ ಉತ್ಸವಕ್ಕೆ ಪ್ರಧಾನಿ ಕರೆ: ಲಸಿಕೆ ಕೊರತೆ ಗಂಭೀರ ವಿಚಾರ, ಉತ್ಸವ ಅಲ್ಲ ಎಂದ ರಾಹುಲ್ ಗಾಂಧಿ

- Advertisement -
- Advertisement -

ದೇಶದಲ್ಲಿ ಕೊರೊನಾ ವೈರಸ್ ಎರಡನೇ ಅಲೆ ನಡುವೆ ಲಸಿಕೆ ಅಭಿಯಾನವು ನಡೆಯುತ್ತಿದೆ. ಲಸಿಕೆ ಕೊರತೆ ಬಗ್ಗೆ ರಾಜ್ಯಗಳು ಪದೇ ಪದೇ ಹೇಳುತ್ತಿದ್ದರೂ ಲಸಿಕೆ ಕೊರತೆ ಆಗಿಲ್ಲ ಎಂದು ಕೇಂದ್ರ ಸರ್ಕಾರ ವಾದಿಸುತ್ತಿದೆ. ಈ ನಡುವೆ ಲಸಿಕೆ ಅಭಿಯಾನದ ಭಾಗವಾಗಿ ಏಪ್ರಿಲ್ 11 ರಿಂದ 14 ರ ವರೆಗೆ ಲಸಿಕೆ ಉತ್ಸವ ನಡೆಸಲು ಪ್ರಧಾನಿ ಮೋದಿ ಕರೆಕೊಟ್ಟಿದ್ದಾರೆ.

ಲಸಿಕೆ ಉತ್ಸವಕ್ಕೆ ಕರೆ ನೀಡಿರುವ ಪ್ರಧಾನಿ ಹೇಳಿಕೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. “ಕೊರೊನಾ ವಿರುದ್ಧ ಲಸಿಕೆ ಪ್ರಮಾಣಗಳ ಕೊರತೆಯು ಗಂಭೀರ ವಿಷಯವಾಗಿದೆ. ಇದು ಉತ್ಸವ ಅಲ್ಲ” ಎಂದು ಪ್ರಧಾನಿ ಮೋದಿ ಕರೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನಡೆಸಿದ ಸಭೆಯಲ್ಲಿ ಉತ್ಸವ ನಡೆಸಲು ಕರೆ ನೀಡಲಾಗಿತ್ತು. ಲಸಿಕೆ ಕೊರತೆ ಹಿನ್ನೆಲೆ ದೇಶದಲ್ಲೇ ಅತಿಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಲಸಿಕಾ ಕೇಂದ್ರಗಳಿಗೆ ಬೀಗ ಹಾಕಲಾಗಿದೆ. ಜೊತೆಗೆ ಕೇಂದ್ರ ಸರ್ಕಾರ ಮಹಾರಾಷ್ಟ್ರ ವಿಚಾರದಲ್ಲಿ ತಾರತಮ್ಯ ನಡೆಸುತ್ತಿದೆ ಎಂದು ಮಹಾರಾಷ್ಟ್ರ ಆರೋಪಿಸಿದೆ. ಇಂತಹ ಸಮಯದಲ್ಲಿ ಪ್ರಧಾನಿಗಳು ಉತ್ಸವದ ಮಾತನಾಡಿದ್ದಾರೆ.

ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣ: ಕೇಂದ್ರದ ಜಾಣ ಕುರುಡು, ನೂರಾರು ಲಸಿಕಾ ಕೇಂದ್ರಗಳಿಗೆ ಬೀಗ

ಇಂದು ಬೆಳಗ್ಗೆ ಟ್ವಿಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಕೊರೊನಾ ಸಾಂಕ್ರಾಮಿಕ ಹೆಚ್ಚುತ್ತಿರುವ ಈ ಬಿಕ್ಕಟ್ಟಿನಲ್ಲಿ ಲಸಿಕೆ ಕೊರತೆಯು ಬಹಳ ಗಂಭೀರ ಸಮಸ್ಯೆಯಾಗಿದೆ, ‘ಉತ್ಸವ’ ಅಲ್ಲ” ಎಂದಿದ್ದಾರೆ. ದೇಶದ ಜನರ ಪ್ರಾಣವನ್ನು ಅಪಾಯಕ್ಕೆ ತಳ್ಳುವ ಮೂಲಕ ಲಸಿಕೆಗಳನ್ನು ರಫ್ತು ಮಾಡುವುದು ಸರಿಯೇ? ಎಂದು ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದ ವಿಚಾರದಲ್ಲಿ ಕೇಂದ್ರ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂಬ ಆರೋಪಗಳಿಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, “ಕೇಂದ್ರ ಸರ್ಕಾರ ಪಕ್ಷಪಾತವಿಲ್ಲದೆ ಎಲ್ಲ ರಾಜ್ಯಗಳಿಗೆ ಸಹಾಯ ಮಾಡಬೇಕು. ನಾವೆಲ್ಲರೂ ಒಟ್ಟಾಗಿ ಈ ಸಾಂಕ್ರಾಮಿಕವನ್ನು ಸೋಲಿಸಬೇಕು” ಎಂದಿದ್ದಾರೆ.

ಕೇಂದ್ರವು ಮಹಾರಾಷ್ಟ್ರದ ವಿರುದ್ಧ ಏಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಗ್ಯ ಸಚಿವ ರಾಜೇಶ್ ತೋಪೆ ಪ್ರಶ್ನಿಸಿದ್ದರು. ಜನಸಂಖ್ಯೆಯ ಪ್ರಕಾರ ರಾಜ್ಯಕ್ಕೆ ವಾರಕ್ಕೆ 40 ಲಕ್ಷ ಡೋಸ್ ಮತ್ತು ತಿಂಗಳಿಗೆ 1.6 ಕೋಟಿ ಲಸಿಕೆಗಳು ಬೇಕಾಗುತ್ತವೆ. ಇನ್ನು “ಮಹಾರಾಷ್ಟ್ರವು ಗುಜರಾತ್ ಜನಸಂಖ್ಯೆಗಿಂತ ದುಪ್ಪಟ್ಟು ಜನಸಂಖ್ಯೆಯನ್ನು ಹೊಂದಿದೆ. ಆದರೂ ಗುಜರಾತ್ ಮತ್ತು ನಮ್ಮ ರಾಜ್ಯಕ್ಕೆ ಸರಿ ಸಮಾನವಾಗಿ ಒಂದು ಕೋಟಿ ಡೋಸ್ ಸಿಕ್ಕಿದೆ” ಎಂದಿದ್ದರು.

ಹೆಚ್ಚು ಸಕ್ರಿಯ ಪ್ರಕರಣಗಳಿರುವ ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳಲ್ಲಿನ ಲಸಿಕೆ ಕೇಂದ್ರಗಳು  ಸ್ಥಗಿತಗೊಳ್ಳುತ್ತಿವೆ ಮತ್ತು ಸರಬರಾಜು ಮುಗಿಯುತ್ತಿದ್ದಂತೆ ಜನರನ್ನು ವಾಪಸ್ ಕಳಿಸಲಾಗುತ್ತಿದೆ ಇಂತಹ ಸಮಯದಲ್ಲಿಯೂ ಲಸಿಕೆಗಳ ರಫ್ತು ಕುರಿತು ಕಾಂಗ್ರೆಸ್ ಸಂಸದರು ಸರ್ಕಾರವನ್ನು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ವ್ಯಾಕ್ಸಿನೇಷನ್‌ ಕೇಂದ್ರಗಳಲ್ಲಿ ಜನ ಲಸಿಕೆಯಿಲ್ಲದೆ ಹಿಂತಿರುಗುತ್ತಿದ್ದಾರೆ : ಮಹಾರಾಷ್ಟ್ರ ಆರೋಗ್ಯ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...