Homeಕರೋನಾ ತಲ್ಲಣಲಸಿಕೆ ಉತ್ಸವಕ್ಕೆ ಪ್ರಧಾನಿ ಕರೆ: ಲಸಿಕೆ ಕೊರತೆ ಗಂಭೀರ ವಿಚಾರ, ಉತ್ಸವ ಅಲ್ಲ ಎಂದ ರಾಹುಲ್...

ಲಸಿಕೆ ಉತ್ಸವಕ್ಕೆ ಪ್ರಧಾನಿ ಕರೆ: ಲಸಿಕೆ ಕೊರತೆ ಗಂಭೀರ ವಿಚಾರ, ಉತ್ಸವ ಅಲ್ಲ ಎಂದ ರಾಹುಲ್ ಗಾಂಧಿ

- Advertisement -
- Advertisement -

ದೇಶದಲ್ಲಿ ಕೊರೊನಾ ವೈರಸ್ ಎರಡನೇ ಅಲೆ ನಡುವೆ ಲಸಿಕೆ ಅಭಿಯಾನವು ನಡೆಯುತ್ತಿದೆ. ಲಸಿಕೆ ಕೊರತೆ ಬಗ್ಗೆ ರಾಜ್ಯಗಳು ಪದೇ ಪದೇ ಹೇಳುತ್ತಿದ್ದರೂ ಲಸಿಕೆ ಕೊರತೆ ಆಗಿಲ್ಲ ಎಂದು ಕೇಂದ್ರ ಸರ್ಕಾರ ವಾದಿಸುತ್ತಿದೆ. ಈ ನಡುವೆ ಲಸಿಕೆ ಅಭಿಯಾನದ ಭಾಗವಾಗಿ ಏಪ್ರಿಲ್ 11 ರಿಂದ 14 ರ ವರೆಗೆ ಲಸಿಕೆ ಉತ್ಸವ ನಡೆಸಲು ಪ್ರಧಾನಿ ಮೋದಿ ಕರೆಕೊಟ್ಟಿದ್ದಾರೆ.

ಲಸಿಕೆ ಉತ್ಸವಕ್ಕೆ ಕರೆ ನೀಡಿರುವ ಪ್ರಧಾನಿ ಹೇಳಿಕೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. “ಕೊರೊನಾ ವಿರುದ್ಧ ಲಸಿಕೆ ಪ್ರಮಾಣಗಳ ಕೊರತೆಯು ಗಂಭೀರ ವಿಷಯವಾಗಿದೆ. ಇದು ಉತ್ಸವ ಅಲ್ಲ” ಎಂದು ಪ್ರಧಾನಿ ಮೋದಿ ಕರೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನಡೆಸಿದ ಸಭೆಯಲ್ಲಿ ಉತ್ಸವ ನಡೆಸಲು ಕರೆ ನೀಡಲಾಗಿತ್ತು. ಲಸಿಕೆ ಕೊರತೆ ಹಿನ್ನೆಲೆ ದೇಶದಲ್ಲೇ ಅತಿಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಲಸಿಕಾ ಕೇಂದ್ರಗಳಿಗೆ ಬೀಗ ಹಾಕಲಾಗಿದೆ. ಜೊತೆಗೆ ಕೇಂದ್ರ ಸರ್ಕಾರ ಮಹಾರಾಷ್ಟ್ರ ವಿಚಾರದಲ್ಲಿ ತಾರತಮ್ಯ ನಡೆಸುತ್ತಿದೆ ಎಂದು ಮಹಾರಾಷ್ಟ್ರ ಆರೋಪಿಸಿದೆ. ಇಂತಹ ಸಮಯದಲ್ಲಿ ಪ್ರಧಾನಿಗಳು ಉತ್ಸವದ ಮಾತನಾಡಿದ್ದಾರೆ.

ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣ: ಕೇಂದ್ರದ ಜಾಣ ಕುರುಡು, ನೂರಾರು ಲಸಿಕಾ ಕೇಂದ್ರಗಳಿಗೆ ಬೀಗ

ಇಂದು ಬೆಳಗ್ಗೆ ಟ್ವಿಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಕೊರೊನಾ ಸಾಂಕ್ರಾಮಿಕ ಹೆಚ್ಚುತ್ತಿರುವ ಈ ಬಿಕ್ಕಟ್ಟಿನಲ್ಲಿ ಲಸಿಕೆ ಕೊರತೆಯು ಬಹಳ ಗಂಭೀರ ಸಮಸ್ಯೆಯಾಗಿದೆ, ‘ಉತ್ಸವ’ ಅಲ್ಲ” ಎಂದಿದ್ದಾರೆ. ದೇಶದ ಜನರ ಪ್ರಾಣವನ್ನು ಅಪಾಯಕ್ಕೆ ತಳ್ಳುವ ಮೂಲಕ ಲಸಿಕೆಗಳನ್ನು ರಫ್ತು ಮಾಡುವುದು ಸರಿಯೇ? ಎಂದು ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದ ವಿಚಾರದಲ್ಲಿ ಕೇಂದ್ರ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂಬ ಆರೋಪಗಳಿಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, “ಕೇಂದ್ರ ಸರ್ಕಾರ ಪಕ್ಷಪಾತವಿಲ್ಲದೆ ಎಲ್ಲ ರಾಜ್ಯಗಳಿಗೆ ಸಹಾಯ ಮಾಡಬೇಕು. ನಾವೆಲ್ಲರೂ ಒಟ್ಟಾಗಿ ಈ ಸಾಂಕ್ರಾಮಿಕವನ್ನು ಸೋಲಿಸಬೇಕು” ಎಂದಿದ್ದಾರೆ.

ಕೇಂದ್ರವು ಮಹಾರಾಷ್ಟ್ರದ ವಿರುದ್ಧ ಏಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಗ್ಯ ಸಚಿವ ರಾಜೇಶ್ ತೋಪೆ ಪ್ರಶ್ನಿಸಿದ್ದರು. ಜನಸಂಖ್ಯೆಯ ಪ್ರಕಾರ ರಾಜ್ಯಕ್ಕೆ ವಾರಕ್ಕೆ 40 ಲಕ್ಷ ಡೋಸ್ ಮತ್ತು ತಿಂಗಳಿಗೆ 1.6 ಕೋಟಿ ಲಸಿಕೆಗಳು ಬೇಕಾಗುತ್ತವೆ. ಇನ್ನು “ಮಹಾರಾಷ್ಟ್ರವು ಗುಜರಾತ್ ಜನಸಂಖ್ಯೆಗಿಂತ ದುಪ್ಪಟ್ಟು ಜನಸಂಖ್ಯೆಯನ್ನು ಹೊಂದಿದೆ. ಆದರೂ ಗುಜರಾತ್ ಮತ್ತು ನಮ್ಮ ರಾಜ್ಯಕ್ಕೆ ಸರಿ ಸಮಾನವಾಗಿ ಒಂದು ಕೋಟಿ ಡೋಸ್ ಸಿಕ್ಕಿದೆ” ಎಂದಿದ್ದರು.

ಹೆಚ್ಚು ಸಕ್ರಿಯ ಪ್ರಕರಣಗಳಿರುವ ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳಲ್ಲಿನ ಲಸಿಕೆ ಕೇಂದ್ರಗಳು  ಸ್ಥಗಿತಗೊಳ್ಳುತ್ತಿವೆ ಮತ್ತು ಸರಬರಾಜು ಮುಗಿಯುತ್ತಿದ್ದಂತೆ ಜನರನ್ನು ವಾಪಸ್ ಕಳಿಸಲಾಗುತ್ತಿದೆ ಇಂತಹ ಸಮಯದಲ್ಲಿಯೂ ಲಸಿಕೆಗಳ ರಫ್ತು ಕುರಿತು ಕಾಂಗ್ರೆಸ್ ಸಂಸದರು ಸರ್ಕಾರವನ್ನು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ವ್ಯಾಕ್ಸಿನೇಷನ್‌ ಕೇಂದ್ರಗಳಲ್ಲಿ ಜನ ಲಸಿಕೆಯಿಲ್ಲದೆ ಹಿಂತಿರುಗುತ್ತಿದ್ದಾರೆ : ಮಹಾರಾಷ್ಟ್ರ ಆರೋಗ್ಯ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...