Homeಕರ್ನಾಟಕರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

ರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

'ದೇಶದ ಸರ್ಕಾರಿ ಖಜಾನೆ ಖಾಲಿಯಾಗುತ್ತಿದೆ. ಆದರೆ ಅದಾನಿ, ಅಂಬಾನಿ ಮುಂತಾದವರ ಖಜಾನೆಗಳು ತುಂಬಿ ತುಳುಕುತ್ತಿವೆ. ಕೊರೊನಾ ಬಿಕ್ಕಟ್ಟಿನಲ್ಲೂ ಅವರಿಗೆ 12 ಲಕ್ಷ ಕೋಟಿಗೂ ಹೆಚ್ಚು ಸಂಪತ್ತು ವೃದ್ಧಿಯಾಗಿದೆ'

- Advertisement -
- Advertisement -

ರಸಗೊಬ್ಬರಗಳ ಬೆಲೆ ಏರಿಕೆ ಖಂಡಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಲೆ ಏರಿಕೆಯನ್ನು ಪ್ರಶ್ನಿಸದ ಬಿಜೆಪಿ ಸಂಸದರು ಮತ್ತು ರಾಜ್ಯ ಸರ್ಕಾರವನ್ನು ಹೇಡಿಗಳು, ಗುಲಾಮಿ ಮನಸ್ಥಿತಿಯವರು ಎಂದು ಜರಿದಿದ್ದಾರೆ.

ಮಾಧ್ಯಮ ಪ್ರಕಟಣೆ ಹೊರಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ’ಕೇಂದ್ರದದಲ್ಲಿರುವ ಮೋದಿಯವರ ನೇತೃತ್ವದ ಸರ್ಕಾರವು ಯಾವ ದೃಷ್ಟಿಯಿಂದ ನೋಡಿದರೂ ಬಡವರ, ರೈತರ, ಹಿಂದುಳಿದವರ, ದಲಿತರ, ಮಹಿಳೆಯರ, ಮಕ್ಕಳ ಪರವಾಗಿಲ್ಲ ಎಂಬುದು ಪದೇ ಪದೇ ನಿಜವಾಗುತ್ತಿದೆ’ ಎಂದಿದ್ದಾರೆ.

ಮೋದಿಯವರ ಭಾಷಣಗಳು ಹೂರಣ ಇಲ್ಲದ ಹೋಳಿಗೆಯಂತೆ, ಕಡುಬಿನಂತೆ. ಅವರು ಬರೀ ಸುಳ್ಳು ಹೇಳುತ್ತಿದ್ದಾರೆ. ಅಲಂಕಾರಕ್ಕೆ ಬಳಸುವ ಪ್ಲಾಸ್ಟಿಕ್ ಹೂವನ್ನೇ ನಿಜವಾದ ಹೂವು ಅನ್ನುತ್ತಾರೆ. ಮುಗ್ಧ ಜನರೂ ಕೆಲವೊಮ್ಮೆ ನಂಬಿಬಿಡುತ್ತಾರೆ. ಇಂತಹ ಜನದ್ರೋಹಿ ಸರ್ಕಾರಗಳನ್ನು ನನ್ನ ಜೀವಮಾನದಲ್ಲಿ ನೋಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರಿ ಕುಲದೀಪ್ ಸೆಂಗಾರ್‌ ಪತ್ನಿಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿದ ಬಿಜೆಪಿ

’ದೇಶ ಬಿಕ್ಕಟ್ಟಿನ ಸ್ಥಿತಿಯಲ್ಲಿರುವಾಗ ರೈತರು ಕಷ್ಟ ಪಟ್ಟು ದುಡಿದು ಈ ವರ್ಷ ದೇಶವನ್ನು ಉಳಿಸಿದ್ದಾರೆ. ಕೃಷಿಯು ರಾಜ್ಯದಲ್ಲಿ ಶೇ.6.4 ರಷ್ಟು ಪ್ರಗತಿ ಕಂಡಿದೆ. ದೇಶದಲ್ಲಿ ಶೇ. 3.4 ಕ್ಕೂ ಹೆಚ್ಚು ಬೆಳವಣಿಗೆ ಕಂಡಿದೆ. ದೇಶದ ಜಿಡಿಪಿ ಗೆ ಈ ವರ್ಷ ಶೇ. 20 ರಷ್ಟು ಕೊಡುಗೆಯನ್ನು ಕೃಷಿ ಕೊಟ್ಟಿದೆ. ಇಂಥ ಸಂದರ್ಭದಲ್ಲಿ ಈ ಮನೆಹಾಳೂ ಮೋದಿ ಸರ್ಕಾರ ರಸಗೊಬ್ಬರದ ಬೆಲೆಗಳನ್ನು ಶೇ. 60 ರಷ್ಟು ಹೆಚ್ಚಿಸಿದೆ’ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

“ಡಿಎಪಿ ಗೊಬ್ಬರ ಏಪ್ರಿಲ್ 1 ರಿಂದ ಒಂದು ಕ್ವಿಂಟಾಲಿಗೆ 1400 ಗಳಷ್ಟು ಬೆಲೆ ಜಾಸ್ತಿಯಾಗಿದೆ. ಇದುವರೆಗೆ 2400 ರೂಪಾಯಿಗಳಿದ್ದ ಬೆಲೆ ಈಗ 3800 ರೂ.ಗಳಾಗುತ್ತಿದೆ.  ಎನ್‌ಪಿಕೆ [ಸಾರಜನಕ, ರಂಜಕ ಮತ್ತು ಪೊಟ್ಯಾಷ್]ಗಳ ಮೇಲಿನ ಬೆಲೆ ಒಂದು ಕ್ವಿಂಟಾಲ್ ಗೆ 1250 ರೂಪಾಯಿಗಳಷ್ಟು ಹೆಚ್ಚಿಸಿದ್ದಾರೆ. ಇದುವರೆಗೆ 2350 ರೂಗಳಿಗೆ ಸಿಗುತ್ತಿದ್ದ ಗೊಬ್ಬರ ಈಗ 3600 ಆಗಲಿದೆ. ಕೇಂದ್ರ ಸರ್ಕಾರ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಜಾಸ್ತಿಯಾಗಿದೆ. ಅದಕ್ಕೆ ಬೆಲೆ ಜಾಸ್ತಿ ಮಾಡಿದ್ದೇವೆ ಎನ್ನುತ್ತಿದ್ದಾರೆ ಇದು ಶುದ್ಧ ಸುಳ್ಳು” ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

’ಸರ್ಕಾರ ರಸಗೊಬ್ಬರಕ್ಕೆ ಈ ಬಾರಿ ಬಜೆಟ್ಟಿನಲ್ಲಿ 54,417 ಕೋಟಿ ರೂಪಾಯಿಗಳಷ್ಟು ಸಬ್ಸಿಡಿಯನ್ನು ಕಡಿಮೆ ಮಾಡಿದೆ. ಕಳೆದ ವರ್ಷ 1,33,947 ಕೋಟಿ ರೂಪಾಯಿಗಳನ್ನು ರಸಗೊಬ್ಬರಕ್ಕಾಗಿ ಸಬ್ಸಿಡಿ ನೀಡಲಾಗಿತ್ತು. ಈಗ ಅದು 79,530 ಕೋಟಿ ರೂಪಾಯಿಗಳಿಗೆ ಇಳಿಸಿದ್ದಾರೆ. ಶೇ 40.62 ರಷ್ಟು ಕಡಿಮೆ ಮಾಡಿದ್ದಾರೆ. ಆದ್ದರಿಂದಲೇ ರಸಗೊಬ್ಬರದ ಬೆಲೆ ಹೆಚ್ಚಾಗಿದೆ’ ಎಂದಿದ್ದಾರೆ.

“ರೈತರ ಮೇಲೆ ಹೊರೆಯಾಗಿರುವ ಇದನ್ನು ಪ್ರಶ್ನಿಸದ ರಾಜ್ಯ ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಬಿಜೆಪಿ ಸಂಸದರು ಹೇಡಿಗಳು, ಗುಲಾಮೀ ಮನಸ್ಥಿತಿಯವರು. ಇವರು ರಾಜ್ಯಕ್ಕೆ ಅಷ್ಟೆ ಅಲ್ಲ. ಭೂಮಿಗೇ ಭಾರ. ಈ ದುಷ್ಟ ಬಿಜೆಪಿ ಸರ್ಕಾರಗಳನ್ನು ಮೊದಲು ಕಿತ್ತೆಸೆಯದಿದ್ದರೆ ದೇಶ ಜಗತ್ತಿನಲ್ಲಿ ತಲೆ ಎತ್ತಿ ನಡೆಯಲಾಗದ ಸ್ಥಿತಿಗೆ ತಲುಪುತ್ತದೆ. ದೇಶದ ಜನ ಎರಡು ಹೊತ್ತಿನ ಅನ್ನಕ್ಕೆ ಪರದಾಡಬೇಕಾದ ಸ್ಥಿತಿಗೆ ಬರುತ್ತಾರೆ” ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

’ಗ್ಯಾಸ್, ಪೆಟ್ರೋಲ್ ,ಡೀಸೆಲ್ ಎಲ್ಲದರ ಬೆಲೆ ಗಗನಕ್ಕೆ ಮುಟ್ಟಿದೆ. ಇಂಥ ಸಂದರ್ಭದಲ್ಲಿ ರಸಗೊಬ್ಬರಗಳ ಬೆಲೆ ಹೆಚ್ಚಿಸಲಾಗಿದೆ. ಇದು ರೈತನ ಹೊಟ್ಟೆಯ ಮೇಲೆ ಹಾಕಿದ ಭೀಕರ ಬರೆ. ರಸಗೊಬ್ಬರಗಳ ಬೆಲೆಯೇರಿಕೆಯಂಥ ಜನದ್ರೋಹಿ ನಿರ್ಧಾರವನ್ನು ಈ ಕೂಡಲೇ ವಾಪಸ್ಸು ಹಿಂತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

’ದೇಶ ಭೀಕರ ಹತಾಶೆಯಲ್ಲಿದೆ. ದೇಶದ ಎಲ್ಲ ರಂಗಗಳೂ ಮಕಾಡೆ ಮಲಗಿವೆ. ದೇಶದ ಸರ್ಕಾರಿ ಖಜಾನೆ ಖಾಲಿಯಾಗುತ್ತಿದೆ. ಆದರೆ ಅದಾನಿ, ಅಂಬಾನಿ ಮುಂತಾದವರ ಖಜಾನೆಗಳು ತುಂಬಿ ತುಳುಕುತ್ತಿವೆ. ಕೊರೊನಾ ಬಿಕ್ಕಟ್ಟಿನಲ್ಲೂ ಅವರಿಗೆ 12 ಲಕ್ಷ ಕೋಟಿಗೂ ಹೆಚ್ಚು ಸಂಪತ್ತು ವೃದ್ಧಿಯಾಗಿದೆ. ಅವರ ಮೇಲೆ ತೆರಿಗೆ ಹಾಕುವ ಬದಲು ಬಡವರ ಅನ್ನದ ತಟ್ಟೆಯ ಮೇಲೆ ಮೋದಿಯವರು ಕಣ್ಣು ಹಾಕಿದ್ದಾರೆ’ ಎಂದಿದ್ದಾರೆ.


ಇದನ್ನೂ ಓದಿ: ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...