Homeಕರ್ನಾಟಕರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

ರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

'ದೇಶದ ಸರ್ಕಾರಿ ಖಜಾನೆ ಖಾಲಿಯಾಗುತ್ತಿದೆ. ಆದರೆ ಅದಾನಿ, ಅಂಬಾನಿ ಮುಂತಾದವರ ಖಜಾನೆಗಳು ತುಂಬಿ ತುಳುಕುತ್ತಿವೆ. ಕೊರೊನಾ ಬಿಕ್ಕಟ್ಟಿನಲ್ಲೂ ಅವರಿಗೆ 12 ಲಕ್ಷ ಕೋಟಿಗೂ ಹೆಚ್ಚು ಸಂಪತ್ತು ವೃದ್ಧಿಯಾಗಿದೆ'

- Advertisement -
- Advertisement -

ರಸಗೊಬ್ಬರಗಳ ಬೆಲೆ ಏರಿಕೆ ಖಂಡಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಲೆ ಏರಿಕೆಯನ್ನು ಪ್ರಶ್ನಿಸದ ಬಿಜೆಪಿ ಸಂಸದರು ಮತ್ತು ರಾಜ್ಯ ಸರ್ಕಾರವನ್ನು ಹೇಡಿಗಳು, ಗುಲಾಮಿ ಮನಸ್ಥಿತಿಯವರು ಎಂದು ಜರಿದಿದ್ದಾರೆ.

ಮಾಧ್ಯಮ ಪ್ರಕಟಣೆ ಹೊರಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ’ಕೇಂದ್ರದದಲ್ಲಿರುವ ಮೋದಿಯವರ ನೇತೃತ್ವದ ಸರ್ಕಾರವು ಯಾವ ದೃಷ್ಟಿಯಿಂದ ನೋಡಿದರೂ ಬಡವರ, ರೈತರ, ಹಿಂದುಳಿದವರ, ದಲಿತರ, ಮಹಿಳೆಯರ, ಮಕ್ಕಳ ಪರವಾಗಿಲ್ಲ ಎಂಬುದು ಪದೇ ಪದೇ ನಿಜವಾಗುತ್ತಿದೆ’ ಎಂದಿದ್ದಾರೆ.

ಮೋದಿಯವರ ಭಾಷಣಗಳು ಹೂರಣ ಇಲ್ಲದ ಹೋಳಿಗೆಯಂತೆ, ಕಡುಬಿನಂತೆ. ಅವರು ಬರೀ ಸುಳ್ಳು ಹೇಳುತ್ತಿದ್ದಾರೆ. ಅಲಂಕಾರಕ್ಕೆ ಬಳಸುವ ಪ್ಲಾಸ್ಟಿಕ್ ಹೂವನ್ನೇ ನಿಜವಾದ ಹೂವು ಅನ್ನುತ್ತಾರೆ. ಮುಗ್ಧ ಜನರೂ ಕೆಲವೊಮ್ಮೆ ನಂಬಿಬಿಡುತ್ತಾರೆ. ಇಂತಹ ಜನದ್ರೋಹಿ ಸರ್ಕಾರಗಳನ್ನು ನನ್ನ ಜೀವಮಾನದಲ್ಲಿ ನೋಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರಿ ಕುಲದೀಪ್ ಸೆಂಗಾರ್‌ ಪತ್ನಿಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿದ ಬಿಜೆಪಿ

’ದೇಶ ಬಿಕ್ಕಟ್ಟಿನ ಸ್ಥಿತಿಯಲ್ಲಿರುವಾಗ ರೈತರು ಕಷ್ಟ ಪಟ್ಟು ದುಡಿದು ಈ ವರ್ಷ ದೇಶವನ್ನು ಉಳಿಸಿದ್ದಾರೆ. ಕೃಷಿಯು ರಾಜ್ಯದಲ್ಲಿ ಶೇ.6.4 ರಷ್ಟು ಪ್ರಗತಿ ಕಂಡಿದೆ. ದೇಶದಲ್ಲಿ ಶೇ. 3.4 ಕ್ಕೂ ಹೆಚ್ಚು ಬೆಳವಣಿಗೆ ಕಂಡಿದೆ. ದೇಶದ ಜಿಡಿಪಿ ಗೆ ಈ ವರ್ಷ ಶೇ. 20 ರಷ್ಟು ಕೊಡುಗೆಯನ್ನು ಕೃಷಿ ಕೊಟ್ಟಿದೆ. ಇಂಥ ಸಂದರ್ಭದಲ್ಲಿ ಈ ಮನೆಹಾಳೂ ಮೋದಿ ಸರ್ಕಾರ ರಸಗೊಬ್ಬರದ ಬೆಲೆಗಳನ್ನು ಶೇ. 60 ರಷ್ಟು ಹೆಚ್ಚಿಸಿದೆ’ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

“ಡಿಎಪಿ ಗೊಬ್ಬರ ಏಪ್ರಿಲ್ 1 ರಿಂದ ಒಂದು ಕ್ವಿಂಟಾಲಿಗೆ 1400 ಗಳಷ್ಟು ಬೆಲೆ ಜಾಸ್ತಿಯಾಗಿದೆ. ಇದುವರೆಗೆ 2400 ರೂಪಾಯಿಗಳಿದ್ದ ಬೆಲೆ ಈಗ 3800 ರೂ.ಗಳಾಗುತ್ತಿದೆ.  ಎನ್‌ಪಿಕೆ [ಸಾರಜನಕ, ರಂಜಕ ಮತ್ತು ಪೊಟ್ಯಾಷ್]ಗಳ ಮೇಲಿನ ಬೆಲೆ ಒಂದು ಕ್ವಿಂಟಾಲ್ ಗೆ 1250 ರೂಪಾಯಿಗಳಷ್ಟು ಹೆಚ್ಚಿಸಿದ್ದಾರೆ. ಇದುವರೆಗೆ 2350 ರೂಗಳಿಗೆ ಸಿಗುತ್ತಿದ್ದ ಗೊಬ್ಬರ ಈಗ 3600 ಆಗಲಿದೆ. ಕೇಂದ್ರ ಸರ್ಕಾರ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಜಾಸ್ತಿಯಾಗಿದೆ. ಅದಕ್ಕೆ ಬೆಲೆ ಜಾಸ್ತಿ ಮಾಡಿದ್ದೇವೆ ಎನ್ನುತ್ತಿದ್ದಾರೆ ಇದು ಶುದ್ಧ ಸುಳ್ಳು” ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

’ಸರ್ಕಾರ ರಸಗೊಬ್ಬರಕ್ಕೆ ಈ ಬಾರಿ ಬಜೆಟ್ಟಿನಲ್ಲಿ 54,417 ಕೋಟಿ ರೂಪಾಯಿಗಳಷ್ಟು ಸಬ್ಸಿಡಿಯನ್ನು ಕಡಿಮೆ ಮಾಡಿದೆ. ಕಳೆದ ವರ್ಷ 1,33,947 ಕೋಟಿ ರೂಪಾಯಿಗಳನ್ನು ರಸಗೊಬ್ಬರಕ್ಕಾಗಿ ಸಬ್ಸಿಡಿ ನೀಡಲಾಗಿತ್ತು. ಈಗ ಅದು 79,530 ಕೋಟಿ ರೂಪಾಯಿಗಳಿಗೆ ಇಳಿಸಿದ್ದಾರೆ. ಶೇ 40.62 ರಷ್ಟು ಕಡಿಮೆ ಮಾಡಿದ್ದಾರೆ. ಆದ್ದರಿಂದಲೇ ರಸಗೊಬ್ಬರದ ಬೆಲೆ ಹೆಚ್ಚಾಗಿದೆ’ ಎಂದಿದ್ದಾರೆ.

“ರೈತರ ಮೇಲೆ ಹೊರೆಯಾಗಿರುವ ಇದನ್ನು ಪ್ರಶ್ನಿಸದ ರಾಜ್ಯ ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಬಿಜೆಪಿ ಸಂಸದರು ಹೇಡಿಗಳು, ಗುಲಾಮೀ ಮನಸ್ಥಿತಿಯವರು. ಇವರು ರಾಜ್ಯಕ್ಕೆ ಅಷ್ಟೆ ಅಲ್ಲ. ಭೂಮಿಗೇ ಭಾರ. ಈ ದುಷ್ಟ ಬಿಜೆಪಿ ಸರ್ಕಾರಗಳನ್ನು ಮೊದಲು ಕಿತ್ತೆಸೆಯದಿದ್ದರೆ ದೇಶ ಜಗತ್ತಿನಲ್ಲಿ ತಲೆ ಎತ್ತಿ ನಡೆಯಲಾಗದ ಸ್ಥಿತಿಗೆ ತಲುಪುತ್ತದೆ. ದೇಶದ ಜನ ಎರಡು ಹೊತ್ತಿನ ಅನ್ನಕ್ಕೆ ಪರದಾಡಬೇಕಾದ ಸ್ಥಿತಿಗೆ ಬರುತ್ತಾರೆ” ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

’ಗ್ಯಾಸ್, ಪೆಟ್ರೋಲ್ ,ಡೀಸೆಲ್ ಎಲ್ಲದರ ಬೆಲೆ ಗಗನಕ್ಕೆ ಮುಟ್ಟಿದೆ. ಇಂಥ ಸಂದರ್ಭದಲ್ಲಿ ರಸಗೊಬ್ಬರಗಳ ಬೆಲೆ ಹೆಚ್ಚಿಸಲಾಗಿದೆ. ಇದು ರೈತನ ಹೊಟ್ಟೆಯ ಮೇಲೆ ಹಾಕಿದ ಭೀಕರ ಬರೆ. ರಸಗೊಬ್ಬರಗಳ ಬೆಲೆಯೇರಿಕೆಯಂಥ ಜನದ್ರೋಹಿ ನಿರ್ಧಾರವನ್ನು ಈ ಕೂಡಲೇ ವಾಪಸ್ಸು ಹಿಂತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

’ದೇಶ ಭೀಕರ ಹತಾಶೆಯಲ್ಲಿದೆ. ದೇಶದ ಎಲ್ಲ ರಂಗಗಳೂ ಮಕಾಡೆ ಮಲಗಿವೆ. ದೇಶದ ಸರ್ಕಾರಿ ಖಜಾನೆ ಖಾಲಿಯಾಗುತ್ತಿದೆ. ಆದರೆ ಅದಾನಿ, ಅಂಬಾನಿ ಮುಂತಾದವರ ಖಜಾನೆಗಳು ತುಂಬಿ ತುಳುಕುತ್ತಿವೆ. ಕೊರೊನಾ ಬಿಕ್ಕಟ್ಟಿನಲ್ಲೂ ಅವರಿಗೆ 12 ಲಕ್ಷ ಕೋಟಿಗೂ ಹೆಚ್ಚು ಸಂಪತ್ತು ವೃದ್ಧಿಯಾಗಿದೆ. ಅವರ ಮೇಲೆ ತೆರಿಗೆ ಹಾಕುವ ಬದಲು ಬಡವರ ಅನ್ನದ ತಟ್ಟೆಯ ಮೇಲೆ ಮೋದಿಯವರು ಕಣ್ಣು ಹಾಕಿದ್ದಾರೆ’ ಎಂದಿದ್ದಾರೆ.


ಇದನ್ನೂ ಓದಿ: ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...