Homeಅಂತರಾಷ್ಟ್ರೀಯಅಮೆರಿಕದಲ್ಲಿ ಶವವಾಗಿ ಪತ್ತೆಯಾದ ಮಹಾರಾಷ್ಟ್ರ ಮೂಲದ ದಂಪತಿ

ಅಮೆರಿಕದಲ್ಲಿ ಶವವಾಗಿ ಪತ್ತೆಯಾದ ಮಹಾರಾಷ್ಟ್ರ ಮೂಲದ ದಂಪತಿ

- Advertisement -
- Advertisement -

ಭಾರತೀಯ ದಂಪತಿ ಅಮೆರಿಕದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ನ್ಯೂಜೆರ್ಸಿಯಲ್ಲಿ ನಡೆದಿದೆ. ಮೃತರ ನಾಲ್ಕು ವರ್ಷದ ಮಗಳು ತಮ್ಮ ಮನೆಯ ಬಾಲ್ಕನಿಯಲ್ಲಿ ಏಕಾಂಗಿಯಾಗಿ ಅಳುತ್ತಿರುವುದನ್ನು ನೋಡಿದ ನೆರೆಹೊರೆಯವರು ಪೊಲೀಸರಿಗೆ ವಿಷಯ ತಿಳಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಅಮೆರಿಕದ ಮಾಧ್ಯಮಗಳು ಉತ್ತರ ಆರ್ಲಿಂಗ್ಟನ್ ಅಪಾರ್ಟ್ಮೆಂಟ್‌ನಲ್ಲಿ ಇರಿತದಿಂದ ದಂಪತಿ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿವೆ. ಕೌಟುಂಬಿಕ ಕಲಹದಲ್ಲಿ ಗಂಡ ತನ್ನ ಹೆಂಡತಿಯ ಹೊಟ್ಟೆಗೆ ಚಾಕು ಇರಿದು, ನಂತರ ತಾನು ಇರಿದುಕೊಂಡಿದ್ದಾರೆ ಎಂದು ಯುಎಸ್ ಮಾಧ್ಯಮಗಳು ವರದಿಯಲ್ಲಿ ತಿಳಿಸಿದೆ.

ನ್ಯೂಜೆರ್ಸಿಯ ನಾರ್ತ್ ಆರ್ಲಿಂಗ್ಟನ್ ಪ್ರಾಂತ್ಯದ ರಿವರ್ ವ್ಯೂ ಗಾರ್ಡನ್ಸ್ ಅಪಾರ್ಟ್ಮೆಂಟ್‌ನ 21 ಗಾರ್ಡನ್ ಟೆರೇಸ್ ಅಪಾರ್ಟ್ಮೆಂಟ್‌ನಲ್ಲಿ ವಾಸವಿದ್ದ ಭಾರತ ಮೂಲದ ಬಾಲಾಜಿ ಭಾರತ್ ರುದ್ರಾವರ್ (32) ಮತ್ತು ಅವರ ಪತ್ನಿ ಆರತಿ ಬಾಲಾಜಿ ರುದ್ರಾವರ್ (30) ಮೃತರು. ಈ ಅಪಾರ್ಟ್ಮೆಂಟ್‌ನಲ್ಲಿ 15,000 ಕ್ಕೂ ಹೆಚ್ಚು ಜನರು ವಾಸವಿದ್ದಾರೆ.

ಇದನ್ನೂ ಓದಿ: ಅಂಧ ಭಕ್ತರೆ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಯಾರು ಕಾರಣ? ಮೋದಿ ವಿರುದ್ಧ ಸಿಡಿದ ಸುಬ್ರಮಣಿಯನ್ ಸ್ವಾಮಿ

“ನನ್ನ ಮೊಮ್ಮಗಳು ಬಾಲ್ಕನಿಯಲ್ಲಿ ಅಳುತ್ತಿರುವುದನ್ನು ನೆರೆಹೊರೆಯವರು ನೋಡಿ, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಯೊಳಗೆ ಪ್ರವೇಶಿಸಿದ ನಂತರ ಬುಧವಾರ ಶವಗಳು ಪತ್ತೆಯಾಗಿವೆ” ಎಂದು ಬಾಲಾಜಿ ತಂದೆ ಭಾರತ್ ರುದ್ರಾವರ್ ಪಿಟಿಐಗೆ ತಿಳಿಸಿದ್ದಾರೆ.

“ಅಲ್ಲಿನ ಸ್ಥಳೀಯ ಪೊಲೀಸರು ಗುರುವಾರ ದುರಂತದ ಬಗ್ಗೆ ನನಗೆ ಮಾಹಿತಿ ನೀಡಿದರು. ಸಾವಿಗೆ ಏನು ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿಯ ವಿಚಾರಗಳನ್ನು ಹಂಚಿಕೊಳ್ಳುವುದಾಗಿ ಯುಎಸ್ ಪೊಲೀಸರು ಹೇಳಿದ್ದಾರೆ” ಎಂದು ರುದ್ರಾವರ್ ಹೇಳಿದ್ದಾರೆ.

“ನನ್ನ ಸೊಸೆ ಏಳು ತಿಂಗಳ ಗರ್ಭಿಣಿಯಾಗಿದ್ದಳು. ತುಂಬಾ ಸಂತೋಷದಿಂದ ಅವರು ಜೀವನ ನಡೆಸುತ್ತಿದ್ದರು. ನೆರೆಹೊರೆಯವರು ಕೂಡ ಒಳ್ಳೆಯವರಾಗಿದ್ದರು. ಯಾರ ಮೇಲೂ ನನಗೆ ಅನುಮಾನಗಳಿಲ್ಲ. ಸದ್ಯ ನನ್ನ ಮೊಮ್ಮಗಳು ನನ್ನ ಮಗನ ಸ್ನೇಹಿತನೊಂದಿಗೆ ಇದ್ದಾರೆ. ಮೃತದೇಹಗಳು ಇಲ್ಲಿಗೆ ತಲುಪಲು 8 ರಿಂದ 10 ದಿನಗಳು ಬೇಕಾಗುತ್ತದೆ ಎಂದು ನನಗೆ ಯುಎಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ” ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಅಂಬಜೋಗೈ ಮೂಲದ ಐಟಿ ಉದ್ಯಮಿ ಬಾಲಾಜಿ ರುದ್ರಾವರ್ ಅವರು 2014 ರ ಡಿಸೆಂಬರ್‌ನಲ್ಲಿ ಆರತಿ ಅವರನ್ನು ವಿವಾಹವಾಗಿ, 2015 ರ ಆಗಸ್ಟ್‌ನಲ್ಲಿ ತಮ್ಮ ಹೆಂಡತಿಯೊಂದಿಗೆ ಯುಎಸ್‌ಗೆ ತೆರಳಿದ್ದರು. ಬಾಲಾಜಿ ಅವರು ಭಾರತದ ಪ್ರಮುಖ ಇನ್ಫೋಟೆಕ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆತನ ಪತ್ನಿ ಗೃಹಿಣಿಯಾಗಿದ್ದರು ಎಂದು ಮೃತ ಬಾಲಾಜಿ ಅವರ ತಂದೆ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಮೇ ತಿಂಗಳಲ್ಲೇ ಅಮರಿಂದರ್‌ ಪರವಾಗಿ ಕೆಲಸ ಪ್ರಾರಂಭಿಸಲಿರುವ ಚುನಾವಣಾ ತಂತ್ರಜ್ಞ ಪ್ರಶಾಂತ್‌‌ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...