Homeಅಂತರಾಷ್ಟ್ರೀಯಅಮೆರಿಕದಲ್ಲಿ ಶವವಾಗಿ ಪತ್ತೆಯಾದ ಮಹಾರಾಷ್ಟ್ರ ಮೂಲದ ದಂಪತಿ

ಅಮೆರಿಕದಲ್ಲಿ ಶವವಾಗಿ ಪತ್ತೆಯಾದ ಮಹಾರಾಷ್ಟ್ರ ಮೂಲದ ದಂಪತಿ

- Advertisement -
- Advertisement -

ಭಾರತೀಯ ದಂಪತಿ ಅಮೆರಿಕದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ನ್ಯೂಜೆರ್ಸಿಯಲ್ಲಿ ನಡೆದಿದೆ. ಮೃತರ ನಾಲ್ಕು ವರ್ಷದ ಮಗಳು ತಮ್ಮ ಮನೆಯ ಬಾಲ್ಕನಿಯಲ್ಲಿ ಏಕಾಂಗಿಯಾಗಿ ಅಳುತ್ತಿರುವುದನ್ನು ನೋಡಿದ ನೆರೆಹೊರೆಯವರು ಪೊಲೀಸರಿಗೆ ವಿಷಯ ತಿಳಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಅಮೆರಿಕದ ಮಾಧ್ಯಮಗಳು ಉತ್ತರ ಆರ್ಲಿಂಗ್ಟನ್ ಅಪಾರ್ಟ್ಮೆಂಟ್‌ನಲ್ಲಿ ಇರಿತದಿಂದ ದಂಪತಿ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿವೆ. ಕೌಟುಂಬಿಕ ಕಲಹದಲ್ಲಿ ಗಂಡ ತನ್ನ ಹೆಂಡತಿಯ ಹೊಟ್ಟೆಗೆ ಚಾಕು ಇರಿದು, ನಂತರ ತಾನು ಇರಿದುಕೊಂಡಿದ್ದಾರೆ ಎಂದು ಯುಎಸ್ ಮಾಧ್ಯಮಗಳು ವರದಿಯಲ್ಲಿ ತಿಳಿಸಿದೆ.

ನ್ಯೂಜೆರ್ಸಿಯ ನಾರ್ತ್ ಆರ್ಲಿಂಗ್ಟನ್ ಪ್ರಾಂತ್ಯದ ರಿವರ್ ವ್ಯೂ ಗಾರ್ಡನ್ಸ್ ಅಪಾರ್ಟ್ಮೆಂಟ್‌ನ 21 ಗಾರ್ಡನ್ ಟೆರೇಸ್ ಅಪಾರ್ಟ್ಮೆಂಟ್‌ನಲ್ಲಿ ವಾಸವಿದ್ದ ಭಾರತ ಮೂಲದ ಬಾಲಾಜಿ ಭಾರತ್ ರುದ್ರಾವರ್ (32) ಮತ್ತು ಅವರ ಪತ್ನಿ ಆರತಿ ಬಾಲಾಜಿ ರುದ್ರಾವರ್ (30) ಮೃತರು. ಈ ಅಪಾರ್ಟ್ಮೆಂಟ್‌ನಲ್ಲಿ 15,000 ಕ್ಕೂ ಹೆಚ್ಚು ಜನರು ವಾಸವಿದ್ದಾರೆ.

ಇದನ್ನೂ ಓದಿ: ಅಂಧ ಭಕ್ತರೆ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಯಾರು ಕಾರಣ? ಮೋದಿ ವಿರುದ್ಧ ಸಿಡಿದ ಸುಬ್ರಮಣಿಯನ್ ಸ್ವಾಮಿ

“ನನ್ನ ಮೊಮ್ಮಗಳು ಬಾಲ್ಕನಿಯಲ್ಲಿ ಅಳುತ್ತಿರುವುದನ್ನು ನೆರೆಹೊರೆಯವರು ನೋಡಿ, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಯೊಳಗೆ ಪ್ರವೇಶಿಸಿದ ನಂತರ ಬುಧವಾರ ಶವಗಳು ಪತ್ತೆಯಾಗಿವೆ” ಎಂದು ಬಾಲಾಜಿ ತಂದೆ ಭಾರತ್ ರುದ್ರಾವರ್ ಪಿಟಿಐಗೆ ತಿಳಿಸಿದ್ದಾರೆ.

“ಅಲ್ಲಿನ ಸ್ಥಳೀಯ ಪೊಲೀಸರು ಗುರುವಾರ ದುರಂತದ ಬಗ್ಗೆ ನನಗೆ ಮಾಹಿತಿ ನೀಡಿದರು. ಸಾವಿಗೆ ಏನು ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿಯ ವಿಚಾರಗಳನ್ನು ಹಂಚಿಕೊಳ್ಳುವುದಾಗಿ ಯುಎಸ್ ಪೊಲೀಸರು ಹೇಳಿದ್ದಾರೆ” ಎಂದು ರುದ್ರಾವರ್ ಹೇಳಿದ್ದಾರೆ.

“ನನ್ನ ಸೊಸೆ ಏಳು ತಿಂಗಳ ಗರ್ಭಿಣಿಯಾಗಿದ್ದಳು. ತುಂಬಾ ಸಂತೋಷದಿಂದ ಅವರು ಜೀವನ ನಡೆಸುತ್ತಿದ್ದರು. ನೆರೆಹೊರೆಯವರು ಕೂಡ ಒಳ್ಳೆಯವರಾಗಿದ್ದರು. ಯಾರ ಮೇಲೂ ನನಗೆ ಅನುಮಾನಗಳಿಲ್ಲ. ಸದ್ಯ ನನ್ನ ಮೊಮ್ಮಗಳು ನನ್ನ ಮಗನ ಸ್ನೇಹಿತನೊಂದಿಗೆ ಇದ್ದಾರೆ. ಮೃತದೇಹಗಳು ಇಲ್ಲಿಗೆ ತಲುಪಲು 8 ರಿಂದ 10 ದಿನಗಳು ಬೇಕಾಗುತ್ತದೆ ಎಂದು ನನಗೆ ಯುಎಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ” ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಅಂಬಜೋಗೈ ಮೂಲದ ಐಟಿ ಉದ್ಯಮಿ ಬಾಲಾಜಿ ರುದ್ರಾವರ್ ಅವರು 2014 ರ ಡಿಸೆಂಬರ್‌ನಲ್ಲಿ ಆರತಿ ಅವರನ್ನು ವಿವಾಹವಾಗಿ, 2015 ರ ಆಗಸ್ಟ್‌ನಲ್ಲಿ ತಮ್ಮ ಹೆಂಡತಿಯೊಂದಿಗೆ ಯುಎಸ್‌ಗೆ ತೆರಳಿದ್ದರು. ಬಾಲಾಜಿ ಅವರು ಭಾರತದ ಪ್ರಮುಖ ಇನ್ಫೋಟೆಕ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆತನ ಪತ್ನಿ ಗೃಹಿಣಿಯಾಗಿದ್ದರು ಎಂದು ಮೃತ ಬಾಲಾಜಿ ಅವರ ತಂದೆ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಮೇ ತಿಂಗಳಲ್ಲೇ ಅಮರಿಂದರ್‌ ಪರವಾಗಿ ಕೆಲಸ ಪ್ರಾರಂಭಿಸಲಿರುವ ಚುನಾವಣಾ ತಂತ್ರಜ್ಞ ಪ್ರಶಾಂತ್‌‌ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...