Homeಮುಖಪುಟಠಕ್ಕರ್: ಎದುರಾಬದುರಾ! 'ಬಾಹರ್ ಕೆ ಕಪಡೆ ಚೋಡೋ, ಜರಾ ಅಂದರ್ ದೇಖೋ ಭಾಯ್'

ಠಕ್ಕರ್: ಎದುರಾಬದುರಾ! ‘ಬಾಹರ್ ಕೆ ಕಪಡೆ ಚೋಡೋ, ಜರಾ ಅಂದರ್ ದೇಖೋ ಭಾಯ್’

- Advertisement -

| ವಿಡಂಬನೆ: ಮಲ್ಲಿ |

- Advertisement -

ನೀವು ಸಂದರ್ಶಿಸಬೇಕಿದ್ದ ವ್ಯಕ್ತಿ ನಿಮಗೆ ಸುಲಭದಲ್ಲಿ ಸಿಗುತ್ತಾರೆ. ಆದರೆ, ಅವರ ಬಾಯಿಂದ ಸತ್ಯಗಳು ಸುಲಭದಲ್ಲಿ ಸಿಗುವುದಿಲ್ಲ. ಹಾಗಾಗಿ ಮನೋಲೋಕದಲ್ಲೇ ಇಬ್ಬರನ್ನೂ ಕೂರಿಸಿಕೊಂಡು ಸತ್ಯ ಹೊರತೆಗೆಯೋಣ ಎಂದು ಠಕ್ಕರ್ ನಿರ್ಧರಿಸಿದ್ದಾರೆ. ವಾರಕ್ಕೆರಡು ಸಂದರ್ಶನ ಗ್ಯಾರಂಟಿ.

ಮೋದಿಯೊಂದಿಗೆ ಒಂದು SUM-ದರ್ಶನ

ಅಕ್ಷಿ ಮತ್ತು ಇಂಡಿಯಾ ‘ಕಡೆ’ಯವರ ಸಂದರ್ಶನದ ನಂತರ ನಮ್ಮ ಠಕ್ಕ(ರ್) ಸ್ನೇಹಿತ ಒಂದು ಚಿಟ್‍ಚಾಟ್ ಮಾಡಿದ್ದಾನೆ….

ಠಕ್ಕರ್: ಅಕ್ಷಯ್ ನಿಮ್ಮ ಡ್ರೆಸ್ ಬಗ್ಗೆ ಕೇಳಿದಾಗ, ತಾವು ಒಳ್ಳೆ ಬಟ್ಟೆ ತೊಡುವ ತಮ್ಮ ಹಂಬಲ ಈಗ ಈಡೇರಿದೆ ಅಂದಿರಿ. ಮೂರ್ಖ ಅಕ್ಷಿ ಹಿಹಿಹಿ ಅಂದು ಬಿಟ್ಟ…

ಗುರೇಂದ್ರ ಕೌದಿ: ಅಚ್ಚಾ, ಅಕ್ಷಿ ಒಬ್ಬ ಸಿನಿಮಾ ನಟ ಅಷ್ಟೇ.. ಅವಂಗೆ ಎಲ್ಲ ಗೊತ್ತಾಗಲ್ಲ. ಬಟ್, ಇಂದಿಯಾ ‘ಕಡೆ’ ಸಂದರ್ಶನದಲ್ಲಿ ಪ್ರಶ್ನೆ ಕೇಳ್ತಾ ಇದ್ದ ಆ ಇಬ್ಬರು ಯುವತಿಯರಿಗೆ ದಿರಿಸುಗಳ ಬಗ್ಗೆ ಅದ್ಭುತ ಹೊಳವು ಇದ್ದವು. ಆದರೆ ಅಕ್ಷಿಯಂತೆ ಅವರೂ ನನ್ನ ದುಬಾರಿ ಡ್ರೆಸ್ ಬಗ್ಗೆ ಕೇಳಿಬಿಟ್ಟರು.

ಮೈ ನೆ ಇಸ್‍ಕೋ ಬೋಲಾ, ಬಾಹರ್ ಕೆ ಕಪಡೆ ಚೋಡೋ, ಅಂದರ್ ಕಿ ಬಾತ್ ಕರೋ…

ಠಕ್ಕರ್: ಸರ್ ಅವರಿಗೇನು ಗೊತ್ತು ಅಂತರಾಳದ ಮರ್ಮ, ಒಳಗಿನ ಬೇಗುದಿ… ಆದರೂ ಒಂದ್ ಪರ್ಸನಲ್ ಪ್ರಶ್ನೆ, ‘ಅಂದರ್ ಕಿ ಬಾತ್ ವೊ ಕ್ಯಾ ಹೌ ಡ್ರೆಸ್ ಕೆ ಬಾರೆ ಮೆಂ’

ಗುರೇಂದ್ರ ಕೌದಿ: ಅಂದರ್ ಕಿ ಬಾತ್ ಅಂದರ್ ಹಿ ಹೋನಾ ಭಯ್ಯಾ… ಭಯ್ಯಾ ಸಚ್‍ಮುಚ್ ಬೋಲ್ತಾ ಹೂ ಅಂದರ್ ಕುಚ್ ನಹಿ! (ಒಳಗಿನ ವಿಷ್ಯ ಒಳಗ ಇರ್ಬೇಕು ಮಾರಾಯ…ಖರೆ ಹೇಳ್ತೀನಿ, ಒಳಗ ಏನ್ ಅಂದ್ರ ಏನೂ ಇಲ್ಲ..|)

ಠಕ್ಕರ್: ಕ್ಯಾ ಸಚ್ ಬತಾಯಾ ಆಪನೆ ಸರ್! ಮಗರ್ ಏಕ್ ಬಾತ್ ಪರ್ಸನಲ್ ಸರ್, ಮೇರಾ ಅಂದರ್ ಕುಚ್ ಹೈ, ಬನಿಯನ್ ಔರ್ ಅಂಡರ್‍ವೇರ್….ಆಪ್ ಕೆ ಪಾಸ್ ವೊ ಭಿ ನಹಿಂ ಹೈ! ಸೊ ಸಿಂಪಲ್ ಸರ್ ಯು ಆರ್…( ಎಂತಹ ಸತ್ಯ ಹೇಳಿದ್ರಿ ನೀವು! ಆದ್ರ ಒಂದ್ ಪರ್ಸನಲ್ ಮಾತ್ ಐತ್ರಿ, ನಂಗ ಒಳಗ ಸಂಥಿಂಗ್ ಐತ್ರಿ, ಅಂಡರ್‍ವೇರು, ಬನಿಯನ್ನು….ನಿಮ್ಮತ್ರ ಅವೂ ಇಲ್ಲ ಅಂದ್ರ, ನೀವೆಷ್ಟು ಸಿಂಪಲ್ ಸರ್?)

ಗುರೇಂದ್ರ ಕೌದಿ: ಅಕ್ಷಿ, ಕುನ್ವಾಲ್ ಟೀಮ್‍ಗೆ ಅರ್ಥವಾಗದ್ದನ್ನು ನೀ ಕಂಡು ಹಿಡಿದೆ… ಒಳಗಿನ ಮಾತಲ್ಲವಾ? ಇಸಿ ಲಿಯೆ ಮೈ ಆಮ್ ಆದ್ಮಿಯೊ ಕಾ ಬಾತ್ ಕೊ ರಿಸ್ಪೆಕ್ಟ್ ಕರತಾ ಹೂಂ…

ಠಕ್ಕರ್: ಅಲ್ಲ ಸರ್, ಬ್ಯಾಗ್ ಚಿಕ್ಕದು ಅಂತಾ ನೀವು ಫುಲ್ ತೋಳಿನ ಶರ್ಟನ್ನೇ ಅರ್ಧ ತೋಳಿನ ಶರ್ಟಾಗಿ ಕಟ್ ಮಾಡತಾ ಇದ್ದಿರಂತೆ… ಎಂತಹ ಐಡಿಯಾ ಸರ್?

ಗುರೇಂದ್ರ ಮೋದಿ: ಹಾ ಹಾ….ಅಹಹಾ.. ಅದಕ್ಕೂ ತಲೆ ಬೇಕಲ್ವಾ?

ಠಕ್ಕರ್: ಬ್ಯಾಗ್ ಚಿಕ್ಕದು ಅನ್ನೋ ಫಾರ್ಮುಲಾ ಇಟ್‍ಕೊಂಡು ಕ್ಷಮಿತ್ ಶಾ ಅವರು, ದೇಶ ಚಿಕ್ಕದು, ಇಷ್ಟೆಲ್ಲ ಜನರಿಗೆ ಸಾಲಲ್ಲ ಅಂತ ಎನ್‍ಆರ್‍ಸಿ ಅನ್ನೋ ಕತ್ತರಿ ಬಳಸಿ ಜನರನ್ನೇ ಕಟ್ ಮಾಡೋಕೆ ಹೊಂಟಂಗಿದೆ?

ಗುರೇಂದ್ರ ಮೋದಿ: ಭಯ ಬೇಡ…ಅದೆಲ್ಲ ಆಗುತ್ತ? ಆಫ್ ದಿ ರೆಕಾರ್ಡ್ ಹೇಳ್ತೀನಿ: ರಾಮ ಮಂದಿರ ಮಾಡಿದ್ವಾ? 370 ಆರ್ಟಿಕಲ್? ಕಪ್ಪು ಹಣ? ಕಾಂಗ್ರೆಸ್ ಜೈಲು? ಇವೆಲ್ಲ ಸುಮ್ಮನೇ ಮಾರಾಯ….ಇಲೆಕ್ಷನ್‍ವರೆಗೆ ಇದೆಲ್ಲ ಆಫ್ ದಿ ರೆಕಾರ್ಡ್ ಆಗಿರಲಿ..

ಠಕ್ಕರ್: ಸರ್, ಮಾವಿನ ಹಣ್ಣಿನ ಜೊತೆ ಹಲಸಿನ ಹಣ್ಣು ಸಿಕ್ಕಿದ್ದರೆ ಏನ್ ಮಾಡ್ತಿದ್ರಿ? ಸುಮ್ಮನೆ ಕುತೂಹಲ ಅಷ್ಟೇ…

ಗುರೇಂದ್ರ ಕೌದಿ: ಯಾಕೆ ಭಯ? ಒಳ್ಳೆ ಪ್ರಶ್ನೆ. ಅಕ್ಷಯ್ ಕೂಡ ಹಿಂಗೇ ಫೇಮಸ್ ಆಗಲಿಲ್ವಾ? ಕರಡಿ ಅಂದ್ರ ಜಾಂಬುವಂತ ಅಲ್ವಾ? ಕರಡಿ ತರಹ ತಿನ್ನೋ ಶಕ್ತಿಯನ್ನ ಆ ಜಾಂಬುವಂತ ಕೊಡ್ತಿದ್ದ. ಬಟ್, ಆಗ ನೆಹರು ಕಾರಣದಿಂದಾಗಿ, ಕರಡಿ ದ್ವೇಷದಿಂದಾಗಿ ಹಲಸಿನ ಹಣ್ಣುಗಳನ್ನು ಬೆಳೆಯೋದನ್ನೇ ನಿಷೇಧಿಸಿಲಾಗಿತ್ತು.

ಠಕ್ಕರ್: ಕೊನೆ ಪ್ರಶ್ನೆ. ಅಕ್ಕೋರನ್ನ ನೀವ್ ಬಿಟ್ ಬರಬಾರದಿತ್ತು ಅಲ್ಲವಾ?

ಗುರೇಂದ್ರ ಕೌದಿ: ಅಕ್ಷಯ್, ಕುನ್ವಲ್, ಅರ್ನಾಬ್ ಈ ಪ್ರಶ್ನೆ ಕೇಳಲಿಲ್ಲ. ಅವರಿಗೆ ಸಂಘದ ‘ಸ್ವಯಂಸೇವಕ’ ಅಂದರೆ ಏನು ಅಂತಾ ಗೊತ್ತು. ನನಗೆ ಮದುವೆಯಾದ ಮೇಲೂ ಸ್ವಯಂಸೇವಕ ಆಗಿರುವುದೇ ತೃಪ್ತಿ ಕೊಡ್ತಾ ಇತ್ತು. ಮನೆಯಲ್ಲೇ ಇದ್ದುಕೊಂಡು ಸ್ವಯಂಸೇವೆಯ ಕಡೆ ಒತ್ತು ಕೊಡೋದು ತಪ್ಪಲ್ವಾ? ಅದಕ್ಕೇ ದೇಶಾಂತರ ಹೊರಟು ಬಿಟ್ಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...